Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೆರೆಮೀಯ 44:23 - ಕನ್ನಡ ಸತ್ಯವೇದವು J.V. (BSI)

23 ನೀವು ಯೆಹೋವನ ಮಾತನ್ನು ಕೇಳದೆ ಆತನ ಧರ್ಮಶಾಸ್ತ್ರವನ್ನೂ ನಿಬಂಧನೆಗಳನ್ನೂ ಕಟ್ಟಳೆಗಳನ್ನೂ ಅನುಸರಿಸದೆ ಆತನಿಗೆ ಪಾಪಮಾಡಿ [ಅನ್ಯದೇವತೆಗಳಿಗೆ] ಧೂಪ ಹಾಕಿದ್ದರಿಂದಲೇ ಇಂಥಾ ಕೇಡು ನಿಮಗೆ ಸಂಭವಿಸಿದೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

23 ನೀವು ಯೆಹೋವನ ಮಾತನ್ನು ಕೇಳದೆ ಆತನ ಧರ್ಮಶಾಸ್ತ್ರವನ್ನೂ, ನಿಬಂಧನೆಗಳನ್ನೂ, ಕಟ್ಟಳೆಗಳನ್ನೂ ಅನುಸರಿಸದೆ ಆತನಿಗೆ ಪಾಪ ಮಾಡಿ ಅನ್ಯದೇವತೆಗಳಿಗೆ ಧೂಪಹಾಕಿದ್ದರಿಂದಲೇ ಇಂಥಾ ಕೇಡು ನಿಮಗೆ ಸಂಭವಿಸಿದೆ” ಎಂದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

23 ನೀವು ಸರ್ವೇಶ್ವರ ಸ್ವಾಮಿಯ ಮಾತನ್ನು ಕೇಳದೆ, ಅವರ ಧರ್ಮಶಾಸ್ತ್ರವನ್ನೂ ನಿಬಂಧನೆಗಳನ್ನೂ ಕಟ್ಟಳೆಗಳನ್ನೂ ಅನುಸರಿಸದೆ, ಪಾಪಮಾಡಿ ಅನ್ಯದೇವತೆಗಳಿಗೆ ಧೂಪಾರತಿ ಎತ್ತಿದ್ದರಿಂದಲೇ ಇಂಥಾ ವಿಪತ್ತು ನಿಮಗೆ ಸಂಭವಿಸಿದೆ.”

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

23 ನೀವು ಬೇರೆ ದೇವರುಗಳಿಗೆ ನೈವೇದ್ಯವನ್ನು ಅರ್ಪಿಸಿದ್ದಕ್ಕಾಗಿ ಆ ಕೇಡುಗಳೆಲ್ಲಾ ಸಂಭವಿಸಿದವು. ನೀವು ಯೆಹೋವನ ವಿರುದ್ಧ ಪಾಪಮಾಡಿದಿರಿ. ನೀವು ಯೆಹೋವನ ಆಜ್ಞಾಪಾಲನೆ ಮಾಡಲಿಲ್ಲ. ನೀವು ಆತನ ಉಪದೇಶಗಳನ್ನಾಗಲಿ ಅಥವಾ ಆತನು ಬೋಧಿಸಿದ ಧರ್ಮೋಪದೇಶಗಳನ್ನಾಗಲಿ ಅನುಸರಿಸಲಿಲ್ಲ. ನೀವು ಮಾಡಿಕೊಂಡ ಒಡಂಬಡಿಕೆಯಂತೆ ನಡೆಯಲಿಲ್ಲ.”

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

23 ನೀವು ಧೂಪ ಸುಟ್ಟು, ಯೆಹೋವ ದೇವರಿಗೆ ವಿರೋಧವಾಗಿ ಪಾಪಮಾಡಿ, ಯೆಹೋವ ದೇವರ ಮಾತನ್ನು ಕೇಳದೆ, ದೈವನಿಯಮವನ್ನೂ, ದೈವತೀರ್ಪುಗಳನ್ನೂ, ದೈವಷರತ್ತುಗಳನ್ನೂ ಅನುಸರಿಸದೆ, ದೇವರಿಗೆ ವಿಧೇಯರಾಗದೆ ಇದ್ದುದರಿಂದಲೇ, ಈ ಕೇಡು ಈ ದಿನ ನಿಮಗೆ ಸಂಭವಿಸಿದೆ,” ಎಂದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೆರೆಮೀಯ 44:23
24 ತಿಳಿವುಗಳ ಹೋಲಿಕೆ  

ಆಗ ಅವರಿಗೆ - ಈ ದೇಶದವರು ತಮ್ಮ ಪಿತೃಗಳನ್ನು ಐಗುಪ್ತದಿಂದ ಬರಮಾಡಿದ ದೇವರಾದ ಯೆಹೋವನನ್ನು ಬಿಟ್ಟು ಅನ್ಯದೇವತೆಗಳನ್ನು ಅವಲಂಬಿಸಿ ಅವುಗಳಿಗೆ ಅಡ್ಡಬಿದ್ದು ಸೇವಿಸಿದದರಿಂದಲೇ ಯೆಹೋವನು ಈ ಎಲ್ಲಾ ಆಪತ್ತನ್ನು ಬರಮಾಡಿದ್ದಾನೆ ಎಂಬ ಉತ್ತರವು ಸಿಕ್ಕುವದು ಅಂದನು.


ನಿನ್ನ ಧರ್ಮಶಾಸ್ತ್ರವನ್ನು ಬಿಟ್ಟು ಕೆಟ್ಟದ್ದನ್ನು ಅನುಸರಿಸುವವರು ನನ್ನ ಸಮೀಪಕ್ಕೆ ಬಂದಿದ್ದಾರೆ.


ನಿಮ್ಮ ಪೂರ್ವಿಕರು ಹೀಗೆ ಮಾಡಿದ್ದರಿಂದ ನಮ್ಮ ದೇವರು ಈ ಎಲ್ಲಾ ಕೇಡನ್ನು ನಮ್ಮ ಮೇಲೆಯೂ ನಮ್ಮ ಪಟ್ಟಣದ ಮೇಲೆಯೂ ಬರಮಾಡಿದನಲ್ಲವೇ. ಹೀಗಿರಲಾಗಿ ನೀವೂ ಸಬ್ಬತ್ ದಿನವನ್ನು ಅಶುದ್ಧಮಾಡಿ ಇಸ್ರಾಯೇಲ್ಯರ ಮೇಲಿದ್ದ ದೇವಕೋಪವನ್ನು ಹೆಚ್ಚಿಸುತ್ತೀರೇನು ಎಂದು ಹೇಳಿ ಅವರನ್ನು ಗದರಿಸಿದೆನು.


ದೇವರ ಮಂದಿರಕ್ಕೂ ವಿಗ್ರಹಗಳಿಗೂ ಒಪ್ಪಿಗೆ ಏನು? ನಾವು ಜೀವಸ್ವರೂಪನಾದ ದೇವರ ಮಂದಿರವಾಗಿದ್ದೇವಲ್ಲಾ. ಇದರ ಸಂಬಂಧವಾಗಿ ದೇವರು ನಾನು ಅವರಲ್ಲಿ ವಾಸಿಸುತ್ತಾ ತಿರುಗಾಡುವೆನು, ನಾನು ಅವರಿಗೆ ದೇವರಾಗಿರುವೆನು, ಅವರು ನನಗೆ ಪ್ರಜೆಯಾಗಿರುವರು ಎಂದು ಹೇಳಿದ್ದಾನೆ.


ಆದರೆ ಅನ್ಯಜನರು ತಾವು ಅರ್ಪಿಸುವ ಬಲಿಗಳನ್ನು ದೇವರಿಗಲ್ಲ ದೆವ್ವಗಳಿಗೆ ಅರ್ಪಿಸುತ್ತಾರೆಂದು ನನ್ನ ಅಭಿಪ್ರಾಯವು. ನೀವು ದೆವ್ವಗಳೊಡನೆ ಭಾಗಿಗಳಾಗಿರಬೇಕೆಂಬದು ನನ್ನ ಇಷ್ಟವಲ್ಲ.


ಆಕೆಯು ಪಾಪಮಾಡಿ ಮಾಡಿ ಅಶುದ್ಧಳಾಗಿದ್ದಾಳೆ; ಮೊದಲು ಆಕೆಯನ್ನು ಸನ್ಮಾನಿಸುತ್ತಿದ್ದವರು ಈಗ ಆಕೆಯ ಮಾನಭಂಗವನ್ನು ಕಂಡು ಹೀನೈಸುತ್ತಾರೆ; ಆಕೆಯು ಬೆನ್ನಮರೆಯಲ್ಲಿ ನರಳಾಡುತ್ತಾಳೆ.


ನೀವು, ನಿಮ್ಮ ಪಿತೃಗಳು, ನಿಮ್ಮ ಅರಸರು, ನಿಮ್ಮ ಪ್ರಧಾನರು, ಸಾಮಾನ್ಯ ಜನರು, ನೀವೆಲ್ಲರೂ ಯೆಹೂದದ ಊರುಗಳಲ್ಲಿ ಮತ್ತು ಯೆರೂಸಲೇವಿುನ ಬೀದಿಗಳಲ್ಲಿ ಹಾಕಿದ ಧೂಪವು ಯೆಹೋವನ ನೆನಪಿನಲ್ಲಿ ಇಲ್ಲವೋ, ಅದು ಆತನ ಜ್ಞಾಪಕಕ್ಕೆ ಬರಲಿಲ್ಲವೋ?


ಆದರೆ ನಾವು ಗಗನದ ಒಡತಿಗೆ ಧೂಪಹಾಕುವದನ್ನೂ ಪಾನವನ್ನು ನೈವೇದ್ಯವಾಗಿ ಸುರಿಯುವದನ್ನೂ ನಿಲ್ಲಿಸಿಬಿಟ್ಟಂದಿನಿಂದ ಎಲ್ಲಾ ಕೊರತೆಗೂ ಗುರಿಯಾಗಿ ಖಡ್ಗಕ್ಷಾಮಗಳಿಂದ ನಾಶವಾಗುತ್ತಿದ್ದೇವೆ.


ಪ್ರವಾಸಿಗಳಾಗಿ ನೀವು ಬಂದಿರುವ ಐಗುಪ್ತದಲ್ಲಿ ಅನ್ಯದೇವತೆಗಳಿಗೆ ಧೂಪಹಾಕುವ ದುಷ್ಕೃತ್ಯವನ್ನು ನಡಿಸುತ್ತಾ ನನ್ನನ್ನು ಕೆಣಕುವದರಿಂದ ನೀವು ನಿರ್ಮೂಲರಾಗಿ ಸಕಲ ಭೂರಾಜ್ಯಗಳ ಶಾಪದೂಷಣೆಗಳಿಗೆ ಗುರಿಯಾಗುವಿರಿ.


ಆತನು ಅದನ್ನೇ ಬರಮಾಡಿ ತನ್ನ ಮಾತನ್ನು ನೆರವೇರಿಸಿದ್ದಾನೆ; ನೀವು ಯೆಹೋವನ ಧ್ವನಿಗೆ ಕಿವಿಗೊಡದೆ ಆತನಿಗೆ ಪಾಪಮಾಡಿದ್ದರಿಂದಲೇ ಇದು ನಿಮಗೆ ಸಂಭವಿಸಿದೆ.


ನಿನ್ನ ನಿಬಂಧನೆಗಳನ್ನು ಅಲಕ್ಷ್ಯಮಾಡುವ ದುಷ್ಟರಿಗೆ ರಕ್ಷಣೆಯೇ ಇಲ್ಲ.


ಆದರೂ ಅವರು ಪರಾತ್ಪರನಾದ ದೇವರನ್ನು ಪರೀಕ್ಷಿಸಿ ಅವಿಧೇಯರಾದರು. ಆತನ ವಿಧಿಗಳನ್ನು ಕೈಕೊಳ್ಳದೆ


ಅವರು ದೇವಪ್ರೇಷಿತರನ್ನು ಗೇಲಿಮಾಡಿ ಆತನ ಮಾತುಗಳನ್ನು ತುಚ್ಫೀಕರಿಸಿ ಆತನ ಪ್ರವಾದಿಗಳನ್ನು ಹೀಯಾಳಿಸಿದ್ದರಿಂದ ಆತನ ಕೋಪಾಗ್ನಿಯು ಆತನ ಪ್ರಜೆಯ ಮೇಲೆ ಉರಿಯಹತ್ತಿತು, ಅದರ ತಾಪವು ಆರಿಹೋಗಲೇ ಇಲ್ಲ.


ಅವರು ದೇವರ ನಿಬಂಧನೆಯನ್ನು ಪಾಲಿಸದೆ ಆತನ ಧರ್ಮಶಾಸ್ತ್ರವನ್ನು ಅನುಸರಿಸಲೊಲ್ಲದೆ


ನಿನ್ನ ಧರ್ಮಶಾಸ್ತ್ರವನ್ನು ಅನುಸರಿಸದವರ ನಿವಿುತ್ತ ನನಗೆ ಕಣ್ಣೀರು ಪ್ರವಾಹವಾಗಿ ಹರಿಯುತ್ತದೆ.


ನೀನು ಅವರಿಗೆ ಹೀಗೆ ಹೇಳು - ಯೆಹೋವನು ಇಂತೆನ್ನುತ್ತಾನೆ - ನೀವು ನನ್ನ ಕಡೆಗೆ ಕಿವಿಗೊಡದೆ ನಾನು ನಿಮ್ಮ ಮುಂದೆ ಇಟ್ಟಿರುವ ಧರ್ಮಶಾಸ್ತ್ರಕ್ಕೆ ಅನುಸಾರವಾಗಿ ನಡೆಯದೆ


ಇಸ್ರಾಯೇಲಿನ ದೇವರೂ ಸೇನಾಧೀಶ್ವರನೂ ಆದ ಯೆಹೋವನು ಇಂತೆನ್ನುತ್ತಾನೆ - ನಾನು ಯೆರೂಸಲೇವಿುಗೂ ಯೆಹೂದದ ಎಲ್ಲಾ ಊರುಗಳಿಗೂ ಬರಮಾಡಿದ ಕೇಡನ್ನು ನೀವು ನೋಡಿದ್ದೀರಷ್ಟೆ;


ಆಹಾ, ಅಲ್ಲಿನವರು ತಮಗೂ ನಿಮಗೂ ನಿಮ್ಮ ಪಿತೃಗಳಿಗೂ ತಿಳಿಯದ ಅನ್ಯದೇವತೆಗಳಿಗೆ ಧೂಪಹಾಕಿ ಸೇವೆಮಾಡುವದಕ್ಕೆ ಆತುರಪಟ್ಟು ನನ್ನನ್ನು ಕೆಣಕಬೇಕೆಂದೇ ಈ ದುರಾಚಾರವನ್ನು ನಡಿಸಿದ್ದರಿಂದ ಆ ಸ್ಥಳಗಳು ಹಾಳಾದವು. ಅಲ್ಲಿ ಯಾರೂ ವಾಸಿಸರು.


ಅವರು ಇಂದಿನವರೆಗೂ ತಗ್ಗಲಿಲ್ಲ, ನನಗೆ ಭಯಪಡಲಿಲ್ಲ; ನಾನು ನಿಮಗೂ ನಿಮ್ಮ ಪಿತೃಗಳಿಗೂ ನೇವಿುಸಿದ ನಿಯಮನಿಷ್ಠೆಗಳನ್ನು ಅನುಸರಿಸಿ ನಡೆಯಲೂ ಇಲ್ಲ.


ಆತನು ತಮ್ಮ ಪಿತೃಗಳಿಗೆ ಕೊಟ್ಟ ವಿಧಿನಿಬಂಧನೆಗಳನ್ನೂ ತಮಗೆ ಹೇಳಿಸಿದ ಬುದ್ಧಿ ವಾಕ್ಯಗಳನ್ನೂ ತಿರಸ್ಕರಿಸಿ ವಿುಥ್ಯಾದೇವತೆಗಳನ್ನು ಸೇವಿಸಿ ನಿಷ್ಪ್ರಯೋಜಕರಾದರು; ಸುತ್ತಣ ಜನಾಂಗಗಳನ್ನು ಅನುಸರಿಸಬಾರದೆಂದು ಯೆಹೋವನು ಆಜ್ಞಾಪಿಸಿದರೂ ಅವರು ಕೇಳದೆ ಅವರನ್ನು ಅನುಸರಿಸಿದರು;


ಮೋಶೆಯ ಧರ್ಮಶಾಸ್ತ್ರದಲ್ಲಿ ಬರೆದಂತೆಯೇ ಈ ವಿಪತ್ತೆಲ್ಲಾ ನಮ್ಮ ಮೇಲೆ ಬಂದಿದೆ; ಆದರೂ ನಾವು ನಮ್ಮ ದುರ್ಮಾರ್ಗಗಳನ್ನು ತೊರೆದುಬಿಟ್ಟು ನಿನ್ನ ಸತ್ಯೋಪದೇಶವನ್ನು ಗ್ರಹಿಸಿ ನಡೆಯುವಂತೆ ನಮ್ಮ ದೇವರಾದ ಯೆಹೋವನೆಂಬ ನಿನ್ನ ದಯೆಯನ್ನು ಬೇಡಿಕೊಳ್ಳಲಿಲ್ಲ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು