Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೆರೆಮೀಯ 44:28 - ಕನ್ನಡ ಸತ್ಯವೇದವು J.V. (BSI)

28 ಖಡ್ಗಕ್ಕೆ ತಪ್ಪಿಸಿಕೊಂಡವರು ಕೊಂಚ ಜನ ಮಾತ್ರವೇ ಆಗಿ ಐಗುಪ್ತದಿಂದ ಯೆಹೂದಕ್ಕೆ ಹಿಂದಿರುಗುವರು; ಆಗ ಐಗುಪ್ತಕ್ಕೆ ಹೋಗಿ ಪ್ರವಾಸಿಸುತ್ತಿರುವ ಯೆಹೂದ ಜನಶೇಷದವರೆಲ್ಲರೂ ನನ್ನ ಮಾತು ಸಾಗತಕ್ಕದ್ದೋ ತಮ್ಮ ಮಾತು ಸಾಗತಕ್ಕದ್ದೋ ಎಂದು ತಿಳಿದುಕೊಳ್ಳುವರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

28 ಖಡ್ಗಕ್ಕೆ ತಪ್ಪಿಸಿಕೊಂಡವರು ಸ್ವಲ್ಪ ಜನ ಮಾತ್ರವೇ ಆಗಿ ಐಗುಪ್ತದಿಂದ ಯೆಹೂದಕ್ಕೆ ಹಿಂದಿರುಗುವರು; ಆಗ ಐಗುಪ್ತಕ್ಕೆ ಹೋಗಿ ಪ್ರವಾಸಿಸುತ್ತಿರುವ ಯೆಹೂದದ ಉಳಿದ ಜನರೆಲ್ಲರೂ ನನ್ನ ಮಾತು ನಡೆಯುವುದೋ ಅಥವಾ ತಮ್ಮ ಮಾತು ನಡೆಯುವುದೋ ಎಂದು ತಿಳಿದುಕೊಳ್ಳುವರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

28 ಖಡ್ಗಕ್ಕೆ ತಪ್ಪಿಸಿಕೊಂಡ ಕೊಂಚ ಜನರು ಮಾತ್ರ ಈಜಿಪ್ಟಿನಿಂದ ಜುದೇಯಕ್ಕೆ ಹಿಂದಿರುಗುವರು. ಈಜಿಪ್ಟಿಗೆ ಹೋಗಿ ಪ್ರವಾಸಿಸುತ್ತಿರುವ ಅಳಿದು ಉಳಿದ ಯೆಹೂದ್ಯರೆಲ್ಲರು, ನನ್ನ ಮಾತು ದಿಟವಾಯಿತೋ ಅಥವಾ ಅವರ ಮಾತು ದಿಟವಾಯಿತೋ ಎಂದು ಆಗ ತಿಳಿದುಕೊಳ್ಳುವರು.’

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

28 ಕೆಲವು ಯೆಹೂದಿಯರು ಖಡ್ಗದಿಂದ ತಪ್ಪಿಸಿಕೊಳ್ಳುವರು. ಅವರು ಈಜಿಪ್ಟಿನಿಂದ ಯೆಹೂದಕ್ಕೆ ಹಿಂದಿರುಗಿ ಬರುವರು. ಆದರೆ ಹಾಗೆ ತಪ್ಪಿಸಿಕೊಳ್ಳುವ ಯೆಹೂದಿಯರು ಬಹು ಕಡಿಮೆ. ಆಗ ಈಜಿಪ್ಟಿಗೆ ವಲಸೆ ಬಂದ ಆ ಅಳಿದುಳಿದ ಯೆಹೂದಿಯರಿಗೆ ಯಾರ ಮಾತು ನಿಜವೆಂಬುದು ತಿಳಿದು ಬರುತ್ತದೆ. ನನ್ನ ಮಾತು ನಿಜವಾಯಿತೋ ಅಥವಾ ಅವರ ಮಾತು ನಿಜವಾಯಿತೋ ಎಂಬುದು ಅವರಿಗೆ ಗೊತ್ತಾಗುತ್ತದೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

28 ಆದರೆ ಖಡ್ಗಕ್ಕೆ ತಪ್ಪಿಸಿಕೊಂಡ ಸ್ವಲ್ಪ ಜನರು ಈಜಿಪ್ಟ್ ದೇಶದೊಳಗಿಂದ ಯೆಹೂದ ದೇಶಕ್ಕೆ ಹಿಂದಿರುಗಿ ಹೋಗುವರು. ಆಗ ಈಜಿಪ್ಟ್ ದೇಶದಲ್ಲಿ ತಂಗುವುದಕ್ಕೆ ಬಂದಿರುವ ಯೆಹೂದದ ಉಳಿದವರೆಲ್ಲಾ ನನ್ನ ಮಾತು ನಿಲ್ಲುವುದೋ, ಅವರ ಮಾತು ನಿಲ್ಲುವುದೋ ಎಂಬುದನ್ನು ತಿಳಿದುಕೊಳ್ಳುವರು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೆರೆಮೀಯ 44:28
20 ತಿಳಿವುಗಳ ಹೋಲಿಕೆ  

ಐಗುಪ್ತಕ್ಕೆ ಹೋಗಿ ಪ್ರವಾಸಿಸುತ್ತಿರುವ ಯೆಹೂದಜನಶೇಷದವರು ಸ್ವದೇಶಕ್ಕೆ ಹಿಂದಿರುಗಬೇಕೆಂದು ಎಷ್ಟು ಆಶಿಸಿದರೂ ಅವರಲ್ಲಿ ಯಾರೂ ಉಳಿದು ಅಲ್ಲಿಂದ ತಪ್ಪಿಸಿಕೊಂಡು ಯೆಹೂದಕ್ಕೆ ಹಿಂದಿರುಗುವದಿಲ್ಲ; ಓಡಿಬರುವ ಕೊಂಚ ಜನವೇ ಹೊರತು ಯಾವನೂ ಹಿಂದಿರುಗನು.


ಅದರ ವನವೃಕ್ಷಗಳ ಸಂಖ್ಯೆಯು ಮಗು ಬರೆದು ಎಣಿಸುವಷ್ಟು ಕಡಿಮೆಯಾಗುವದು.


ಆದರೆ ನನ್ನ ಸೇವಕರಾದ ಪ್ರವಾದಿಗಳಿಗೆ ಆಜ್ಞಾಪಿಸಿದ ನನ್ನ ವಾಕ್ಯಗಳೂ ವಿಧಿಗಳೂ ನಿಮ್ಮ ಪಿತೃಗಳನ್ನು ಹಿಂದಟ್ಟಿ ಹಿಡಿದು ನಿತ್ಯವಾಗಿವೆಯಷ್ಟೆ; ಅವರು ತಿರುಗಿಕೊಂಡು - ಸೇನಾಧೀಶ್ವರ ಯೆಹೋವನು ನಮ್ಮ ದುರ್ಮಾರ್ಗ ದುಷ್ಕೃತ್ಯಗಳಿಗೆ ತಕ್ಕ ಹಾಗೆ ನಮಗೆ ಏನು ಮಾಡಬೇಕೆಂದು ಸಂಕಲ್ಪಿಸಿದನೋ ಅದನ್ನು ನಮಗೆ ಮಾಡಿದ್ದಾನಲ್ಲಾ ಅಂದುಕೊಂಡರು.


ನಾನು ನಿಮ್ಮನ್ನು ಈ ಸ್ಥಳದಲ್ಲಿ ದಂಡಿಸುವೆನೆಂಬದಕ್ಕೆ ಒಂದು ಗುರುತು ಕಾಣುವದು; ನನ್ನ ಮಾತುಗಳು ಈಡೇರಿ ನಿಮಗೆ ಕೇಡನ್ನುಂಟುಮಾಡುವವು ಎಂಬದಾಗಿ ಅದರಿಂದಲೇ ನಿಮಗೆ ತಿಳಿದುಬರುವದು;


ಯೆಹೋವನ ಆಲೋಚನೆಯೋ ಶಾಶ್ವತವಾಗಿಯೇ ನಿಲ್ಲುವದು; ಆತನ ಸಂಕಲ್ಪವು ಎಂದಿಗೂ ಕದಲುವದಿಲ್ಲ.


ಭೂಮ್ಯಾಕಾಶಗಳು ಅಳಿದುಹೋಗುವವು, ಆದರೆ ನನ್ನ ಮಾತುಗಳು ಅಳಿದು ಹೋಗುವದೇ ಇಲ್ಲ.


ಆದರೆ ಮೋಶೆ ಅವರಿಗೆ - ನೀವು ಯಾಕೆ ಹೀಗೆ ಮಾಡಿ ಯೆಹೋವನ ಆಜ್ಞೆಯನ್ನು ಮೀರುತ್ತೀರಿ; ಇದು ಕೈಗೂಡುವದಿಲ್ಲ;


ಇಸ್ರಾಯೇಲೇ, ನಿನ್ನ ಜನರು ಸಮುದ್ರದ ಉಸುಬಿನಂತೆ ಅಸಂಖ್ಯವಾಗಿದ್ದರೂ ಅವರಲ್ಲಿ ಉಳಿದ ಒಂದು ಶೇಷ ಮಾತ್ರ ತಿರುಗಿಕೊಳ್ಳುವದು; ತುಂಬಿತುಳುಕುವ ನ್ಯಾಯಪ್ರವಾಹದ ಪ್ರಲಯ ನಿಶ್ಚಿತವಾಗಿದೆ.


ಐಗುಪ್ತಕ್ಕೆ ಹೋಗಿ ಅಲ್ಲಿ ವಾಸಿಸಲು ಹಟಹಿಡಿಯುವ ಎಲ್ಲಾ ಜನರಿಗೂ ಇದೇ ಗತಿಯಾಗುವದು; ಖಡ್ಗಕ್ಷಾಮವ್ಯಾಧಿಗಳಿಂದ ಸಾಯುವರು; ನಾನು ಅವರಿಗೆ ಬರಮಾಡುವ ವಿಪತ್ತಿನಿಂದ ಯಾರೂ ತಪ್ಪಿಸಿಕೊಳ್ಳರು, ಯಾರೂ ಉಳಿಯರು.


ನಾನು ಯೆರೂಸಲೇವಿುನವರನ್ನು ಖಡ್ಗಕ್ಷಾಮವ್ಯಾಧಿಗಳಿಂದ ದಂಡಿಸಿದಂತೆ ಐಗುಪ್ತದಲ್ಲಿ ವಾಸಿಸುವವರನ್ನೂ ದಂಡಿಸುವೆನು;


ಖಡ್ಗಕ್ಕೆ ತಪ್ಪಿಸಿಕೊಂಡವರೇ, ಸುಮ್ಮನೆ ನಿಂತುಕೊಳ್ಳದೆ ನಡೆಯಿರಿ; ದೂರದಲ್ಲಿಯೂ ಯೆಹೋವನನ್ನು ಸ್ಮರಿಸಿರಿ, ಯೆರೂಸಲೇವಿುನ ಹಂಬಲು ನಿಮ್ಮ ಮನಸ್ಸಿನಲ್ಲಿ ಹುಟ್ಟಲಿ.


ಆದರೂ ನಾನು ಜನಶೇಷವನ್ನು ಉಳಿಸುವೆನು; ಹೇಗಂದರೆ ನೀವು ಅನ್ಯದೇಶಗಳಿಗೆ ಚದರಿಹೋಗುವಾಗ ನಿಮ್ಮಲ್ಲಿ ಕೆಲವರು ಆ ಜನಾಂಗಗಳ ಮಧ್ಯೆ ಕತ್ತಿಗೆ ತಪ್ಪಿಸಿಕೊಳ್ಳುವರು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು