Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೆರೆಮೀಯ 45:5 - ಕನ್ನಡ ಸತ್ಯವೇದವು J.V. (BSI)

5 ಮಹಾಪದವಿಯನ್ನು ನಿರೀಕ್ಷಿಸಿಕೊಳ್ಳುತ್ತೀಯೋ? ನಿರೀಕ್ಷಿಸಬೇಡ; ಆಹಾ, ನಾನು ನರಜನ್ಮದವರೆಲ್ಲರಿಗೂ ಕೇಡನ್ನುಂಟುಮಾಡುವೆನು; ಆದರೆ ನೀನು ಎಲ್ಲಿಗೆ ಹೋದರೂ ಪ್ರಾಣವೊಂದನ್ನೇ ಬಾಚಿಕೊಂಡುಹೋಗುವದಕ್ಕೆ ನಿನಗೆ ಅವಕಾಶಕೊಡುವೆನು. ಇದು ಯೆಹೋವನಾದ ನನ್ನ ನುಡಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

5 ಮಹಾಪದವಿಯನ್ನು ನಿರೀಕ್ಷಿಸಿಕೊಳ್ಳುತ್ತೀಯೋ? ನಿರೀಕ್ಷಿಸ ಬೇಡ; ಆಹಾ, ನಾನು ನರಜನ್ಮದವರೆಲ್ಲರಿಗೂ ಕೇಡನ್ನು ಉಂಟುಮಾಡುವೆನು; ಆದರೆ ನೀನು ಎಲ್ಲಿಗೆ ಹೋದರೂ ಪ್ರಾಣವೊಂದನ್ನೇ ಉಳಿಸಿಕೊಳ್ಳುವುದಕ್ಕೆ ನಿನಗೆ ಅವಕಾಶ ಕೊಡುವೆನು. ಇದು ಯೆಹೋವನಾದ ನನ್ನ ನುಡಿ.”

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

5 ನಿನಗೆ ಮಾತ್ರ ಪ್ರತ್ಯೇಕ ಸ್ಥಾನಮಾನಗಳನ್ನು ನಿರೀಕ್ಷಿಸುತ್ತಿಯೋ? ನಿರೀಕ್ಷಿಸಬೇಡ. ಹೌದು, ಮಾನವ ಜನಾಂಗವನ್ನೇ ನಾನು ದಂಡಿಸಲಿದ್ದೇನೆ. ಆದರೆ ನೀನು ಎಲ್ಲಿಗೆ ಹೋದರೂ ನಿನ್ನ ಪ್ರಾಣವೊಂದನ್ನು ಕೊಳ್ಳೆಯಂತೆ ಉಳಿಸಿಕೊಳ್ಳಲಿಕ್ಕೆ ಅವಕಾಶ ನೀಡುತ್ತೇನೆ. ಇದು ಸರ್ವೇಶ್ವರನಾದ ನನ್ನ ನುಡಿ.”

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

5 ಬಾರೂಕನೇ, ನೀನು ದೊಡ್ಡ ಪದವಿಯನ್ನು ನಿರೀಕ್ಷಿಸುತ್ತಿರುವೆ. ಆದರೆ ನೀನು ಅದನ್ನು ನಿರೀಕ್ಷಿಸಬೇಡ. ಏಕೆಂದರೆ ನಾನು ಎಲ್ಲರಿಗೆ ಭಯಂಕರವಾದ ಸಂಗತಿಗಳನ್ನು ಬರಮಾಡುವೆನು.”’ ಯೆಹೋವನು ಹೀಗೆ ಹೇಳಿದನು, ‘ನೀನು ಅನೇಕ ಸ್ಥಳಗಳಿಗೆ ಹೋಗಬೇಕಾಗಬಹುದು. ಅದರೆ ನೀನು ಎಲ್ಲಿ ಹೋದರೂ ಪ್ರಾಣ ಉಳಿಸಿಕೊಂಡು ಪಾರಾಗುವಂತೆ ನಾನು ಮಾಡುತ್ತೇನೆ.’”

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

5 ಹಾಗಾದರೆ ನೀನು ನಿನಗೋಸ್ಕರ ದೊಡ್ಡವುಗಳನ್ನು ಹುಡುಕುತ್ತೀಯೋ? ಹುಡುಕಬೇಡ. ನಾನು ಎಲ್ಲಾ ಶರೀರದ ಮೇಲೆ ಕೇಡನ್ನು ತರುತ್ತೇನೆಂದು ಯೆಹೋವ ದೇವರು ಹೇಳುತ್ತಾರೆ. ಆದರೂ ನೀನು ಹೋಗುವ ಎಲ್ಲಾ ಸ್ಥಳಗಳಲ್ಲಿ ನಿನ್ನ ಪ್ರಾಣವನ್ನು ನೀನು ಉಳಿಸಿಕೊಳ್ಳುವಂತೆ ಮಾಡುವೆನು, ಎಂದು ನಿನಗೆ ಹೇಳಿದ್ದಾರೆ,’ ಎಂದನು.”

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೆರೆಮೀಯ 45:5
19 ತಿಳಿವುಗಳ ಹೋಲಿಕೆ  

ನೀನು ನನ್ನಲ್ಲಿ ಭರವಸವಿಟ್ಟ ಕಾರಣ ನಿನ್ನನ್ನು ರಕ್ಷಿಸೇ ರಕ್ಷಿಸುವೆನು; ನೀನು ಖಡ್ಗಕ್ಕೆ ತುತ್ತಾಗದೆ ಅದರ ಬಾಯೊಳಗಿಂದ ನಿನ್ನ ಪ್ರಾಣವನ್ನು ಸೆಳಕೊಂಡು ಹೋಗುವಿ; ಇದು ಯೆಹೋವನ ನುಡಿ.


ದ್ರವ್ಯಾಶೆಯಿಲ್ಲದವರಾಗಿರಿ; ನಿಮಗಿರುವವುಗಳಲ್ಲಿ ತೃಪ್ತರಾಗಿರಿ; ನಾನು ನಿನ್ನನ್ನು ಎಂದಿಗೂ ಕೈಬಿಡುವದಿಲ್ಲ, ಎಂದಿಗೂ ತೊರೆಯುವದಿಲ್ಲವೆಂದು ದೇವರು ತಾನೇ ಹೇಳಿದ್ದಾನೆ.


ಪಟ್ಟಣದಲ್ಲಿ ನಿಲ್ಲುವವನು ಖಡ್ಗಕ್ಷಾಮವ್ಯಾಧಿಗಳಿಂದ ಸಾಯುವನು; ನಿಮ್ಮನ್ನು ಮುತ್ತುವ ಕಸ್ದೀಯರನ್ನು ಮರೆಹೊಗಲು ಪಟ್ಟಣವನ್ನು ಬಿಡುವವನು ಬದುಕುವನು, ತನ್ನ ಪ್ರಾಣವೊಂದನ್ನೇ ಬಾಚಿಕೊಂಡು ಹೋಗುವನು.


ನಿಮ್ಮ ನಿಮ್ಮೊಳಗೆ ಏಕಮನಸ್ಸುಳ್ಳವರಾಗಿರ್ರಿ, ದೊಡ್ಡಸ್ತಿಕೆಯ ಮೇಲೆ ಮನಸ್ಸಿಡದೆ ದೀನರ ಸಂಗಡ ಬಳಿಕೆಯಾಗಿರ್ರಿ. ನಿಮ್ಮನ್ನು ನೀವೇ ಬುದ್ಧಿವಂತರೆಂದು ಎಣಿಸಿಕೊಳ್ಳಬೇಡಿರಿ.


ಮೇದ್ಯರ ಎಲ್ಲಾ ಅರಸರು, ದೂರವೇನು ಸಮೀಪವೇನು ಅಂತು ಉತ್ತರದೇಶದ ಎಲ್ಲಾ ಅರಸರು, ಭೂಲೋಕದಲ್ಲಿರುವ ಸಕಲರಾಜ್ಯಗಳವರು, ಇವರೆಲ್ಲರಿಗೂ ಕುಡಿಸು; ಇವರು ಕುಡಿದ ಮೇಲೆ ಶೇಷಕಿನ ಅರಸನೂ ಕುಡಿಯಲಿ [ಎಂಬದೇ ನನಗಾದ ಅಪ್ಪಣೆ].


ಯೆಹೋವನು ಇಂತೆನ್ನುತ್ತಾನೆ - ಹೀಗಿರಲು ನನ್ನನ್ನು ಕಾದುಕೊಂಡಿರ್ರಿ, ನಾನು ಬೇಟೆಹಿಡಿಯಲಿಕ್ಕೆ ಏಳುವ ದಿನವನ್ನು ಎದುರುನೋಡಿರಿ; ಜನಾಂಗರಾಜ್ಯಗಳ ಮೇಲೆ ನನ್ನ ರೌದ್ರವನ್ನು, ಹೌದು, ನನ್ನ ಉಗ್ರಕೋಪವನ್ನೆಲ್ಲಾ ಹೊಯ್ದುಬಿಡುವದಕ್ಕಾಗಿ ಆ ಜನಾಂಗಗಳನ್ನು ಸೇರಿಸಿ ಆ ರಾಜ್ಯಗಳನ್ನು ಕೂಡಿಸಬೇಕೆಂದು ತೀರ್ಮಾನಿಸಿಕೊಂಡಿದ್ದೇನೆ; ಲೋಕವೆಲ್ಲಾ ನನ್ನ ರೋಷಾಗ್ನಿಗೆ ತುತ್ತಾಗುವದಷ್ಟೆ.


ಬಾಬೆಲಿನ ಅರಸನು ಈ ಪಟ್ಟಣವನ್ನು ಆಕ್ರವಿುಸುವನು; ಅದು ಅವನ ಸೈನ್ಯದ ವಶವಾಗುವದು ಖಂಡಿತ ಎಂದು ಸಾರುತ್ತಿರುವಾಗ


ಆಗ ಎಲೀಷನು ಅವನಿಗೆ - ಒಬ್ಬನು ರಥದಿಂದಿಳಿದು ಬಂದು ನಿನ್ನನ್ನು ಎದುರುಗೊಂಡದು ನನ್ನ ಜ್ಞಾನ ದೃಷ್ಟಿಗೆ ಕಾಣಿಸಲಿಲ್ಲವೆಂದು ನೆನಸುತ್ತೀಯೋ? ದ್ರವ್ಯ, ಬಟ್ಟೆಗಳು, ಎಣ್ಣೇ ಮರದ ತೋಪುಗಳು, ದ್ರಾಕ್ಷೇತೋಟಗಳು, ಕುರಿದನಗಳು, ದಾಸದಾಸೀ ಜನವು ಇವುಗಳನ್ನು ಸಂಪಾದಿಸುವದಕ್ಕೆ ಇದು ಸಮಯವೋ?


ದೇವರು ಲೋಕವನ್ನು ನೋಡಿದಾಗ ಅದು ಕೆಟ್ಟುಹೋಗಿತ್ತು; ಭೂನಿವಾಸಿಗಳೆಲ್ಲರೂ ತಮ್ಮ ನಡವಳಿಕೆಯನ್ನು ಕೆಡಿಸಿಕೊಂಡಿದ್ದರು.


ಯೆಹೋವನು ಅಗ್ನಿಯಿಂದಲೂ ತನ್ನ ಖಡ್ಗದಿಂದಲೂ ಎಲ್ಲಾ ನರಜನ್ಮದವರಿಗೂ ನ್ಯಾಯತೀರಿಸುವನು; ಆಗ ಆತನಿಂದ ಹತರಾಗುವವರು ಬಹುಜನ.


ಆದದರಿಂದ ಅದನ್ನು ಆಳುವದಕ್ಕೂ ನ್ಯಾಯಾನ್ಯಾಯಗಳನ್ನು ಕಂಡುಹಿಡಿಯುವದಕ್ಕೂ ನನಗೆ ವಿವೇಕವನ್ನು ದಯಪಾಲಿಸು. ಈ ಮಹಾ ಜನಾಂಗವನ್ನು ಆಳಲು ಸಮರ್ಥರು ಯಾರು ಎಂದು ಬೇಡಿಕೊಂಡನು.


ಆತನು ಅವನಿಗೆ - ನೀನು ನಿನಗೋಸ್ಕರ ದೀರ್ಘಾಯುಷ್ಯವನ್ನಾಗಲಿ, ಐಶ್ವರ್ಯವನ್ನಾಗಲಿ, ವೈರಿಗಳ ಪ್ರಾಣವನ್ನಾಗಲಿ ಕೇಳಿಕೊಳ್ಳದೆ ನ್ಯಾಯ ನಿರ್ಣಯಿಸುವದಕ್ಕೋಸ್ಕರ


ಯೆಹೋವನೇ, ನನ್ನ ಎದೆಯಲ್ಲಿ ಹವ್ಮಿುಲ್ಲ; ನನಗೆ ಸೊಕ್ಕಿನ ಕಣ್ಣಿಲ್ಲ; ಅಸಾಧ್ಯಕಾರ್ಯಗಳಲ್ಲಿ ಕೈಹಾಕುವದಿಲ್ಲ.


ಶಬ್ದವು ಭೂವಿುಯ ಕಟ್ಟ ಕಡೆಯವರೆಗೆ ವ್ಯಾಪಿಸುವದು; ಯೆಹೋವನಿಗೂ ಜನಾಂಗಗಳಿಗೂ ವ್ಯಾಜ್ಯವುಂಟಷ್ಟೆ; ನರಜನ್ಮದವರೆಲ್ಲರ ಸಂಗಡ ನ್ಯಾಯಕ್ಕೆ ನಿಲ್ಲುವನು; ದುಷ್ಟರನ್ನು ಖಡ್ಗಕ್ಕೆ ಗುರಿಮಾಡುವನು. ಇದು ಯೆಹೋವನ ನುಡಿ.


ಇಸ್ರಾಯೇಲ್ಯರ ದೇವರಾದ ಯೆಹೋವನು ನನಗೆ - ರೋಷರೂಪಮದ್ಯದ ಈ ಪಾತ್ರೆಯನ್ನು ನೀನು ನನ್ನ ಕೈಯಿಂದ ತೆಗೆದುಕೊಂಡು ಯಾವ ಜನಾಂಗಗಳ ಬಳಿಗೆ ನಿನ್ನನ್ನು ಕಳುಹಿಸುತ್ತೇನೋ ಆ ಸಕಲ ಜನಾಂಗಗಳು ಇದರಲ್ಲಿ ಕುಡಿಯುವಂತೆ ಮಾಡು.


ನಾನು ಅವರಲ್ಲಿಗೆ ಖಡ್ಗವನ್ನು ಕಳುಹಿಸುವೆನು; [ಆ ನನ್ನ ರೋಷವನ್ನು] ಅವರು ಕುಡಿದು ಓಲಾಡುವರು, ಹುಚ್ಚುಚ್ಚಾಗುವರು, ಎಂದು ಅಪ್ಪಣೆಕೊಟ್ಟನು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು