Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೆರೆಮೀಯ 46:11 - ಕನ್ನಡ ಸತ್ಯವೇದವು J.V. (BSI)

11 ಐಗುಪ್ತಕುಮಾರಿಯೇ, ಯುವತಿಯೇ, ಗಿಲ್ಯಾದಿಗೆ ಹೋಗಿ ಔಷಧವನ್ನು ಸಂಪಾದಿಸು; ನೀನು ಬಗೆಬಗೆಯ ಮದ್ದನ್ನು ಉಪಯೋಗಿಸುವದು ಪ್ರಯೋಜನವಿಲ್ಲ; ನಿನಗೆ ಗುಣವಾಗದು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

11 ಐಗುಪ್ತದ ಕುಮಾರಿಯೇ, ಯುವತಿಯೇ, ಗಿಲ್ಯಾದಿಗೆ ಹೋಗಿ ಔಷಧವನ್ನು ಸಂಪಾದಿಸು; ನೀನು ಬಗೆಬಗೆಯ ಔಷಧವನ್ನು ಉಪಯೋಗಿಸುವುದು ಪ್ರಯೋಜನವಿಲ್ಲ; ನಿನಗೆ ಗುಣವಾಗದು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

11 ಈಜಿಪ್ಟಿನ ಕನ್ಯೆಯೇ, ಯುವತಿಯೇ, ಗಿಲ್ಯಾದಿಗೆ ಹೋಗಿ ಔಷಧವನ್ನು ಕೊಂಡು ಬಾ ನಿನ್ನ ಬಗೆಬಗೆಯ ಮದ್ದುಗಳಿಂದ ಪ್ರಯೋಜನವಿಲ್ಲ ಅವುಗಳಿಂದ ನಿನಗೆ ಗುಣವಾಗುವಂತಿಲ್ಲ !

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

11 “ಈಜಿಪ್ಟೇ, ಗಿಲ್ಯಾದಿಗೆ ಹೋಗಿ ಔಷಧಿಯನ್ನು ತೆಗೆದುಕೊಂಡು ಬಾ. ನೀನು ಬಗೆಬಗೆಯ ಔಷಧಿಗಳನ್ನು ಉಪಯೋಗಿಸಬಹುದು. ಆದರೆ ಅದರಿಂದ ಪ್ರಯೋಜನವಿಲ್ಲ. ನೀನು ಗುಣಹೊಂದುವುದಿಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

11 “ಈಜಿಪ್ಟಿನ ಮಗಳಾದ ಕನ್ನಿಕೆಯೇ, ಗಿಲ್ಯಾದಿಗೆ ಹೋಗಿ ತೈಲವನ್ನು ತೆಗೆದುಕೋ. ನೀನು ಬಹಳ ಔಷಧವನ್ನು ತೆಗೆದುಕೊಳ್ಳುವುದು ವ್ಯರ್ಥವಾಗಿದೆ. ಏಕೆಂದರೆ ನಿನಗೆ ಗುಣವಾಗುವುದಿಲ್ಲ!

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೆರೆಮೀಯ 46:11
15 ತಿಳಿವುಗಳ ಹೋಲಿಕೆ  

ಗಿಲ್ಯಾದಿನಲ್ಲಿ ಔಷಧವಿಲ್ಲವೋ? ಅಲ್ಲಿ ವೈದ್ಯನು ಸಿಕ್ಕನೋ? ನನ್ನ ಪ್ರಜೆಯೆಂಬಾಕೆಗೆ ಏಕೆ ಗುಣವಾಗಲಿಲ್ಲ?


ಸಮಾರ್ಯಕ್ಕೆ ಬಿದ್ದ ಪೆಟ್ಟು ಗಡಸು; ಅದು ಯೆಹೂದಕ್ಕೂ ತಾಕಿದೆ; ನನ್ನ ಜನರ ಆಲೋಚನಾಸ್ಥಾನವಾದ ಯೆರೂಸಲೇವಿುಗೆ ಮುಟ್ಟಿದೆ.


ಯುವತಿಯೇ, ಬಾಬೆಲ್‍ಪುರಿಯೇ, ಕೆಳಕ್ಕಿಳಿದು ಧೂಳಿನಲ್ಲಿ ಕೂತುಕೋ, ಕಸ್ದೀಯರ ನಗರಿಯೇ, ಸಿಂಹಾಸನರಹಿತಳಾಗಿ ನೆಲದ ಮೇಲೆ ಕುಕ್ಕರಿಸು! ನೀನು ಇನ್ನು ಕೋಮಲೆ, ಸುಕುಮಾರಿ, ಎಂದು ಎನಿಸಿಕೊಳ್ಳೆ.


ನಿನ್ನ ಗಾಯವು ಗುಣಹೊಂದದು, ನಿನ್ನ ಪೆಟ್ಟು ಗಡಸು; ನಿನ್ನ ಸುದ್ದಿಯನ್ನು ಕೇಳಿದವರೆಲ್ಲರೂ ನಿನಗೆ ಚಪ್ಪಾಳೆಹಾಕುತ್ತಾರೆ; ನಿನ್ನ ಕೆಡುಕಿಗೆ ನಿತ್ಯವೂ ಗುರಿಯಾಗದವರು ಎಲ್ಲಿದ್ದಾರೆ?


ನೀನು ಈ ಮಾತನ್ನು ಅವರಿಗೆ ಹೇಳು - ನನ್ನ ಕಣ್ಣೀರು ರಾತ್ರೀಹಗಲು ನಿರಂತರ ಸುರಿಯಲಿ; ಏಕಂದರೆ ನನ್ನ ಜನವೆಂಬ ಯುವತಿಗೆ ದೊಡ್ಡ ಗಾಯವಾಯಿತು, ಹೌದು ಗಡುಸಾದ ಪೆಟ್ಟುಬಿತ್ತು.


ನೀನು ಒಂದು ಕಾಸನ್ನಾದರೂ ನಿಲ್ಲಿಸಿಕೊಳ್ಳದೆ ಎಲ್ಲಾ ಸಲ್ಲಿಸುವ ತನಕ ಅಲ್ಲಿಂದ ಬರುವದೇ ಇಲ್ಲ ಎಂದು ನಿನಗೆ ಸತ್ಯವಾಗಿ ಹೇಳುತ್ತೇನೆ.


ಯೆಹೂದ್ಯರೂ ಇಸ್ರಾಯೇಲ್ ದೇಶದವರೂ ನಿನ್ನ ಕಡೆಯ ವರ್ತಕರಾಗಿ ವಿುನ್ನೀಥಿನ ಗೋದಿ ಕಂಡಸಕ್ಕರೆ ಜೇನು ಎಣ್ಣೆ ಸುಗಂಧತೈಲ ಈ ಸಾಮಗ್ರಿಗಳನ್ನು ನಿನಗೆ ಸೇರಿಸಿದರು.


ಬಾಬೆಲ್ ತಟ್ಟನೆ ಬಿದ್ದು ಹಾಳಾಯಿತು! ಅದಕ್ಕಾಗಿ ಅರಿಚಿರಿ; ಅದರ ನೋವನ್ನು ನೀಗಿಸುವದಕ್ಕೆ ಔಷಧವನ್ನು ಸಂಪಾದಿಸಿರಿ, ಗುಣವಾದೀತು.


ಅದಕ್ಕೆ ಅವರ ತಂದೆಯಾದ ಇಸ್ರಾಯೇಲನು ಅವರಿಗೆ - ನೀವು ಹೋಗಲೇಬೇಕಾಗಿದ್ದರೆ ಒಂದು ಕೆಲಸ ಮಾಡಿರಿ; ಈ ದೇಶದಲ್ಲಿ ದೊರಕುವ ಶ್ರೇಷ್ಠವಾದ ವಸ್ತುಗಳಲ್ಲಿ ಕೆಲವನ್ನು ನಿಮ್ಮ ಸಾಮಾನಿನಲ್ಲಿಟ್ಟು, ಆ ಮನುಷ್ಯನಿಗೆ ಕಾಣಿಕೆಯಾಗಿ ತೆಗೆದುಕೊಂಡು ಹೋಗಿರಿ; ಸ್ವಲ್ಪ ತೈಲ, ಸ್ವಲ್ಪ ದ್ರಾಕ್ಷಾರಸದ ಕಾಕಂಬಿ, ಹಾಲುಮಡ್ಡಿ, ರಕ್ತಬೋಳ, ಆಕ್ರೋಡು, ಬಾದಾವಿು ಇವುಗಳನ್ನು ತೆಗೆದುಕೊಂಡುಹೋಗಿ ಕೊಡಿರಿ.


ಆಮೇಲೆ ಅವರು ಊಟಕ್ಕೆ ಕೂತುಕೊಂಡರು. ಅಷ್ಟರಲ್ಲಿ ಅವರು ಕಣ್ಣೆತ್ತಿ ನೋಡಿ ಇಷ್ಮಾಯೇಲ್ಯರ ಗುಂಪು ಒಂಟೆಗಳ ಮೇಲೆ ಹಾಲುಮಡ್ಡಿ, ಸುಗಂಧತೈಲ, ರಕ್ತಬೋಳ ಇವುಗಳನ್ನು ಹೇರಿಕೊಂಡು ಗಿಲ್ಯಾದಿನಿಂದ ಐಗುಪ್ತದೇಶಕ್ಕೆ ಪ್ರಯಾಣಮಾಡುತ್ತಾ ಬರುವದನ್ನು ಕಂಡರು.


ಇಸ್ರಾಯೇಲೆಂಬ ಯುವತಿಯೇ, ನಾನು ನಿನ್ನ ಹಾಳುಪ್ರದೇಶಗಳನ್ನು ಪುನಃ ಕಟ್ಟುವೆನು; ಅವು ಕಟ್ಟಡಗಳಾಗುವವು. ನೀನು ಮತ್ತೆ ದಮ್ಮಡಿಗಳಿಂದ ವೈಭವಗೊಂಡು ವಿನೋದಪಡುವವರ ನಾಟ್ಯಗಳಲ್ಲಿ ಸೇರಿಕೊಳ್ಳುವಿ.


ದಾರಿದೋರುವ ಕಂಬಗಳನ್ನೂ ಕೈಮರಗಳನ್ನೂ ನಿಲ್ಲಿಸಿಕೋ; ನೀನು ಯಾವ ಮಾರ್ಗದಲ್ಲಿ ಹೋಗಿಬಿಟ್ಟಿಯೋ ಅದಕ್ಕೆ ನಿನ್ನ ಮನಸ್ಸನ್ನು ತಿರುಗಿಸಿಕೋ; ಇಸ್ರಾಯೇಲೆಂಬ ಯುವತಿಯೇ, ತಿರುಗಿಕೋ, ಈ ನಿನ್ನ ಪಟ್ಟಣಗಳಿಗೆ ಹಿಂದಿರುಗು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು