Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೆರೆಮೀಯ 47:4 - ಕನ್ನಡ ಸತ್ಯವೇದವು J.V. (BSI)

4 ಏಕಂದರೆ ಆ ದಿನದಲ್ಲಿ ಫಿಲಿಷ್ಟಿಯರೆಲ್ಲರೂ ಸೂರೆಯಾಗುವರು, ತೂರಿನ ಮತ್ತು ಚೀದೋನಿನ ಸಹಾಯಕರಲ್ಲಿ ಕಳೆದುಳಿದವರೆಲ್ಲಾ ನಿರ್ಮೂಲವಾಗುವರು; ಕಫ್ತೋರ್ ದ್ವೀಪದವರಿಂದ ಉತ್ಪನ್ನರಾದ ಫಿಲಿಷ್ಟಿಯರನ್ನು ಯೆಹೋವನೇ ಸೂರೆಮಾಡುವನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

4 ಏಕೆಂದರೆ ಆ ದಿನದಲ್ಲಿ ಫಿಲಿಷ್ಟಿಯರೆಲ್ಲರೂ ಸೂರೆಯಾಗುವರು, ತೂರಿನ ಮತ್ತು ಚೀದೋನಿನ ಸಹಾಯಕರಲ್ಲಿ ಉಳಿದವರೆಲ್ಲಾ ನಿರ್ಮೂಲವಾಗುವರು; ಕಫ್ತೋರ್ ದ್ವೀಪದವರಿಂದ ಉತ್ಪನ್ನರಾದ ಫಿಲಿಷ್ಟಿಯರನ್ನು ಯೆಹೋವನೇ ಸೂರೆಮಾಡುವನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

4 ಆ ದಿನದಲ್ಲಿ ಸೂರೆಯಾಗುವರು ಫಿಲಿಷ್ಟಿಯರೆಲ್ಲರು ನಿರ್ಮೂಲವಾಗುವರು ಟೈರ್-ಸಿಡೋನಿನ ಸಹಾಯಕರಲ್ಲಿ ಅಳಿದುಳಿದವರು. ಸರ್ವೇಶ್ವರನೆ ನಾಶಮಾಡುವನು ಕ್ರೇಟ್ ದ್ವೀಪದಿಂದ ಉತ್ಪನ್ನರಾದ ಫಿಲಿಷ್ಟಿಯರನ್ನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

4 ಎಲ್ಲಾ ಫಿಲಿಷ್ಟಿಯರ ವಿನಾಶನದ ಕಾಲ ಬಂದಿದೆ. ತೂರಿನ ಮತ್ತು ಚೀದೋನಿನ ಸಹಾಯಕರಲ್ಲಿ ಅಳಿದುಳಿದವರನ್ನೆಲ್ಲ ನಾಶಮಾಡುವ ಕಾಲ ಬಂದಿದೆ. ಯೆಹೋವನು ಬಹುಬೇಗ ಫಿಲಿಷ್ಟಿಯರನ್ನು ನಾಶಮಾಡುವನು. ಕಪ್ತೋರ್ ದಿಬಪದ ಅಳಿದುಳಿದ ಜನರನ್ನು ಆತನು ನಾಶಮಾಡುವನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

4 ಏಕೆಂದರೆ ಫಿಲಿಷ್ಟಿಯರೆಲ್ಲರನ್ನು ಸೂರೆ ಮಾಡುವುದಕ್ಕೂ ಟೈರಿನಿಂದಲೂ ಸೀದೋನಿನಿಂದಲೂ ಉಳಿದವರನ್ನು ಕಡಿದುಬಿಡುವುದಕ್ಕೂ ಆ ದಿವಸ ಬಂತು. ಏಕೆಂದರೆ ಯೆಹೋವ ದೇವರು ಫಿಲಿಷ್ಟಿಯರನ್ನು ಕಫ್ತೋರಿನ ದೇಶದ ಉಳಿದವರನ್ನೂ ಸೂರೆಮಾಡುವನು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೆರೆಮೀಯ 47:4
27 ತಿಳಿವುಗಳ ಹೋಲಿಕೆ  

ಯೆಹೋವನು ಇಂತೆನ್ನುತ್ತಾನೆ - ಇಸ್ರಾಯೇಲ್ಯರೇ, ನೀವು ನನ್ನ ಗಣನೆಯಲ್ಲಿ ಕೂಷ್ಯರ ಹಾಗಿದ್ದೀರಲ್ಲವೋ; ನಾನು ಇಸ್ರಾಯೇಲ್ಯರನ್ನು ಐಗುಪ್ತದೇಶದಿಂದ, ಫಿಲಿಷ್ಟಿಯರನ್ನು ಕಫ್ತೋರಿನಿಂದ, ಅರಾಮ್ಯರನ್ನು ಕೀರಿನಿಂದ [ಏಕ ರೀತಿಯಾಗಿ] ಬರಮಾಡಲಿಲ್ಲವೇ?


ಆ ದಿನದಲ್ಲಿ ಈ ಕರಾವಳಿಯಲ್ಲಿ ವಾಸಿಸುವವರು - ಹಾ, ಅಶ್ಶೂರದ ಅರಸನಿಂದ ಬಿಡುಗಡೆಯಾಗಬೇಕೆಂದು ನಾವು ಯಾರನ್ನು ಶರಣಾಗತರಾಗಿ ಆಶ್ರಯಿಸಿ ನಿರೀಕ್ಷಿಸಿದ್ದೆವೋ ಅವರಿಗೇ ಈ ಗತಿ ಬಂತಲ್ಲಾ; ನಮ್ಮಂಥವರಿಗೆ ಹೇಗೆ ರಕ್ಷಣೆಯಾದೀತು ಎಂದು ಅಂದುಕೊಳ್ಳುವರು.


ಮತ್ತು ಹೇಗೆ ಕಫ್ತೋರಿಂದ ಬಂದ ಕಫ್ತೋರ್ಯರು ಗಾಜಾ ಪಟ್ಟಣದವರೆಗೂ ಹಳ್ಳಿಗಳಲ್ಲಿದ್ದ ಅವ್ವಿಯರನ್ನು ನಾಶಮಾಡಿ ಅವರ ಸ್ಥಳದಲ್ಲಿ ವಾಸಮಾಡಿದರೋ ಹಾಗೆಯೇ ಯೆಹೋವನು ರೆಫಾಯರನ್ನು ಅಮ್ಮೋನಿಯರ ಎದುರಿನಿಂದ ಹೊರಡಿಸಿದನು; ಅಮ್ಮೋನಿಯರು ಆ ದೇಶವನ್ನು ಸ್ವಾಧೀನಮಾಡಿಕೊಂಡು ಅದರಲ್ಲಿ ವಾಸಿಸಿದರು.)


ದಂಡನೆಯ ದಿನಗಳು ಹತ್ತರಿಸಿವೆ, ಮುಯ್ಯಿತೀರಿಸುವ ದಿವಸಗಳು ಸಮೀಪಿಸಿವೆ; ಇಸ್ರಾಯೇಲಿನ ಅನುಭವಕ್ಕೆ ಬಂದೇ ಬರುವವು; [ಇಸ್ರಾಯೇಲೇ,] ನಿನ್ನ ಅಧರ್ಮವು ಬಹಳವಾಗಿರುವದರಿಂದಲೂ ವಿರೋಧವು ಹೆಚ್ಚಾಗಿರುವದರಿಂದಲೂ ಪ್ರವಾದಿಯು ಮೂರ್ಖನು, ದೇವರಾತ್ಮಾವಿಷ್ಟನು ಹುಚ್ಚನು [ಅಂದುಕೊಳ್ಳುತ್ತಿ].


[ಅಮ್ಮೋನೇ,] ನಿನ್ನ ಜೋಯಿಸರು ವಿುಥ್ಯೆಯನ್ನು ಸಾಕ್ಷಾತ್ಕರಿಸಿ ಸುಳ್ಳುಸುಳ್ಳಾಗಿ ಕಣಿ ಹೇಳುತ್ತಿದ್ದಾರೆ. ಸಮಯವು ಹತ್ತರಿಸಿ ಅಪರಾಧದ ಕಡೆಗಾಲವು ಸಂಭವಿಸಿ ಹತರಾಗಿ ಬಿದ್ದಿರುವ ದುಷ್ಟರ ಗತಿಯನ್ನು ನೋಡು! ಜೋಯಿಸರನ್ನು ನಂಬಿದ ನೀನೂ ಆ ದುಷ್ಟರ ಕತ್ತುಗಳ ಮೇಲೆ ಒರಗಿಹೋಗುವಿ.


ಇಸ್ರಾಯೇಲಿನ ದೊರೆಯೇ, ದುಷ್ಟನೇ, ಭ್ರಷ್ಟನೇ! ನಿನಗೆ ಸಮಯವು ಹತ್ತರಿಸಿದೆ; ಇದೇ ನಿನ್ನ ಅಪರಾಧದ ಕಡೆಗಾಲ.


ಸಮಯ ಬಂತು, ದಿನ ಹತ್ತರಿಸಿತು; ಕೊಂಡುಕೊಳ್ಳುವವನು ಹರ್ಷಿಸದಿರಲಿ, ಮಾರುವವನು ದುಃಖಿಸದಿರಲಿ; ರೋಷಾಗ್ನಿಯು ಆ ಸಮೂಹದವರೆಲ್ಲರ ಮೇಲೆ ಹತ್ತಿದೆ.


ಆದರೆ ಆ ಯುದ್ಧದಿನವು ಸೇನಾಧೀಶ್ವರನಾದ ಯೆಹೋವನೆಂಬ ಕರ್ತನು ತನ್ನ ಶತ್ರುಗಳಿಗೆ ಮುಯ್ಯಿತೀರಿಸುವ ದಿನವಾಗಿದೆ; ಅದು ದಂಡನೆಯ ದಿವಸ; ಆಗ ಖಡ್ಗವು ನುಂಗಿ ನುಂಗಿ ತಣಿಯುವದು, ಅವರ ರಕ್ತವನ್ನು ತುಂಬಾ ಹೀರುವದು; ಸೇನಾಧೀಶ್ವರನಾದ ಯೆಹೋವನೆಂಬ ಕರ್ತನು ಬಡಗಲಲ್ಲಿ ಯೂಫ್ರೇಟೀಸ್ ನದಿಯ ಹತ್ತಿರ ಬಲಿಮಾಡಬೇಕೆಂದಿದ್ದಾನಲ್ಲಾ.


ಆದರೆ ಕರ್ತನು ಅವನಿಗೆ ಶಿಕ್ಷಾಕಾಲ ಬರುತ್ತದೆಂದು ನಗುತ್ತಾನೆ.


ಯಾಕಂದರೆ ಬರೆದಿರುವದೆಲ್ಲಾ ನೆರವೇರುವದಕ್ಕಾಗಿ ಅವು ದಂಡನೆಯ ದಿವಸಗಳಾಗಿವೆ.


ನಾನು ಐಗುಪ್ತಕ್ಕೆ ಬೆಂಕಿಹಚ್ಚಿ ಅದರ ಸಹಾಯಕರನ್ನೆಲ್ಲಾ ನಾಶಮಾಡಿದ ಮೇಲೆ ನಾನೇ ಯೆಹೋವನು ಎಂದು ಅವರಿಗೆ ಗೊತ್ತಾಗುವದು.


ಹೀಗಿರಲು ಕರ್ತನಾದ ಯೆಹೋವನು ಇಂತೆನ್ನುತ್ತಾನೆ - ಇಗೋ, ನಾನು ಫಿಲಿಷ್ಟಿಯರ ಮೇಲೆ ಕೈಯೆತ್ತುವೆನು; ಕೆರೇತಿಯರನ್ನು ಕತ್ತರಿಸಿಬಿಟ್ಟು ಸಮುದ್ರತೀರದಲ್ಲಿನ ಜನಶೇಷವನ್ನು ನಿಶ್ಶೇಷಮಾಡುವೆನು;


ಆಗ ಅಶ್ಶೂರ್ಯರು ಕತ್ತಿಯಿಂದ ಬೀಳುವರು, ಅದು ಮನುಷ್ಯರ ಕತ್ತಿಯಲ್ಲ; ಖಡ್ಗವು ಅವರನ್ನು ನುಂಗುವದು, ಅದು ಮಾನವಖಡ್ಗವಲ್ಲ; ಅವರು ಕತ್ತಿಯ ಕಡೆಯಿಂದ ಓಡುವರು, ಅವರ ಯೌವನಸ್ಥರು ಬಿಟ್ಟಿಹಿಡಿಯಲ್ಪಡುವರು.


ದಂಡನೆಯ ದಿನದಲ್ಲಿಯೂ ದೂರದಿಂದ ಬರುವ ನಾಶನದಲ್ಲಿಯೂ ಏನು ಮಾಡುವಿರಿ? ಸಹಾಯಕ್ಕಾಗಿ ಯಾರ ಬಳಿಗೆ ಓಡುವಿರಿ? ನಿಮ್ಮ ಐಶ್ವರ್ಯವನ್ನು ಯಾರ ವಶಮಾಡುವಿರಿ?


ದೇವರು ತನ್ನ ಸಿಟ್ಟನ್ನು ತೊಲಗಿಸಿಬಿಡುವದಿಲ್ಲ; ಘಟಸರ್ಪದ ಸಹಾಯಕರು ಆತನಿಗೆ ಪಾದಾಕ್ರಾಂತರಾದರಲ್ಲಾ.


ಕಸ್ಲುಹ್ಯರೂ ಕಫ್ತೋರ್ಯರೂ ಹುಟ್ಟಿದರು. ಕಸ್ಲುಹ್ಯರ ಬಳಿಯಿಂದ ಫಿಲಿಷ್ಟಿಯರು ಹೊರಟು ಬಂದರು.


ಯಾಜಕನಾದ ಫೀನೆಹಾಸನೂ ಅವನ ಜೊತೆಯಲ್ಲಿ ಬಂದ ಕುಲಾಧಿಪತಿಗಳಾಗಿರುವ ಇಸ್ರಾಯೇಲ್ ಪ್ರಭುಗಳೂ ರೂಬೇನ್ ಗಾದ್ ಮನಸ್ಸೆಕುಲಗಳವರ ಮಾತುಗಳನ್ನು ಕೇಳಿ ಸಂತೋಷಪಟ್ಟರು.


ಕಾನಾನ್ ವಂಶದಲ್ಲಿ ಮೊದಲು ಹುಟ್ಟಿದವನು ಸೀದೋನ್; ಆಮೇಲೆ ಹೇತ್ ಹುಟ್ಟಿದನು.


ಪುರದ್ವಾರವೇ, ಗೋಳಾಡು! ಪಟ್ಟಣವೇ, ಕೂಗು! ಎಲ್ಲಾ ಫಿಲಿಷ್ಟಿಯರೇ, ಕುಂದಿಹೋಗಿರಿ! ಬಡಗಲಿಂದ ಹೊಗೆಯು ಬರುತ್ತಿದೆ. ಆ ವ್ಯೂಹದಲ್ಲಿ ಹಿಂದು ಬೀಳುವವರಿಲ್ಲ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು