Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೆರೆಮೀಯ 48:13 - ಕನ್ನಡ ಸತ್ಯವೇದವು J.V. (BSI)

13 ಆಗ ಇಸ್ರಾಯೇಲ್ ವಂಶದವರು ತಮಗೆ ಭರವಸವಾದ ಬೇತೇಲಿನಿಂದ ಆಶಾಭಂಗಪಟ್ಟಂತೆ ಮೋವಾಬ್ಯರು ಕೆಮೋಷಿನಿಂದ ಆಶಾಭಂಗಪಡುವರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

13 ಆಗ ಇಸ್ರಾಯೇಲ್ ವಂಶದವರು ತಮಗೆ ಭರವಸವಾದ ಬೇತೇಲಿನಿಂದ ಆಶಾಭಂಗಪಟ್ಟಂತೆ ಮೋವಾಬ್ಯರು ಕೆಮೋಷಿನಿಂದ ಆಶಾಭಂಗಪಡುವರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

13 ಇಸ್ರಯೇಲ್ ವಂಶದವರು ನಂಬಿಕೆ ಇಟ್ಟಿದ್ದ ಬೇತೇಲ್ ಕ್ಷೇತ್ರವನ್ನು ಕುರಿತು ಆಶಾಭಂಗಪಟ್ಟಂತೆ ಆಗ ಮೋವಾಬ್ಯರು ತಮ್ಮ ಕೆಮೋಷ್ ದೇವತೆಯನ್ನು ಕುರಿತು ಆಶಾಭಂಗಪಡುವರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

13 ಆಗ ಮೋವಾಬಿನ ಜನರು ತಮ್ಮ ಸುಳ್ಳುದೇವರಾದ ಕೆಮೋಷಿಗಾಗಿ ನಾಚಿಕೆಪಡುವರು. ಇಸ್ರೇಲಿನ ಜನರು ಬೇತೇಲಿನಲ್ಲಿ ಆ ಸುಳ್ಳುದೇವರನ್ನು ನಂಬಿಕೊಂಡಿದ್ದರು. ಆದರೆ ಆ ಸುಳ್ಳುದೇವರು ಅವರ ಸಹಾಯಕ್ಕೆ ಬಾರದೆ ಇದ್ದಾಗ ಆ ಇಸ್ರೇಲರು ನಾಚಿಕೆಗೆ ಈಡಾದರು. ಮೋವಾಬ್ ಸಹ ಅದೇ ಸ್ಥಿತಿಯಲ್ಲಿರುವುದು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

13 ಆಗ ಇಸ್ರಾಯೇಲಿನ ಮನೆಯವರು ತಾವು ನಂಬಿಕೊಂಡಿದ್ದ ಬೇತೇಲಿನ ವಿಷಯ ಹೇಗೆ ನಾಚಿಕೆಪಟ್ಟರೋ, ಹಾಗೆಯೇ ಮೋವಾಬು ಕೆಮೋಷನ ವಿಷಯ ನಾಚಿಕೆಪಡುವುದು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೆರೆಮೀಯ 48:13
21 ತಿಳಿವುಗಳ ಹೋಲಿಕೆ  

ಆಹಾ, ಭಂಗವಾಯಿತು! ಕಿರಿಚಿಕೊಳ್ಳುತ್ತಾರಲ್ಲಾ! ಓಹೋ, ಮೋವಾಬು ನಾಚಿಕೆಯಿಂದ ಬೆನ್ನು ತೋರಿಸಿದೆ! ಅದರ ನೆರೆಹೊರೆಯವರು ಅಣಕಿಸುವದಕ್ಕೂ ಬೆಚ್ಚಿಬೀಳುವದಕ್ಕೂ ಆಸ್ಪದವಾಗಿದೆ.


ಮೂರ್ತಿಗಳನ್ನುಂಟುಮಾಡುವವರೆಲ್ಲರೂ ನಾಚಿಕೆಗೀಡಾಗಿ ಮಾನಭಂಗಪಡುವರು, ಹೌದು, ಒಟ್ಟಿಗೆ ಅವಮಾನದಲ್ಲಿ ಮುಣುಗುವರು.


ನಿನ್ನ ದೇವನಾದ ಕೆಮೋಷನು ನಿನಗೆ ಕೊಡುವ ದೇಶಗಳನ್ನು ನೀನು ಸ್ವತಂತ್ರಿಸಿಕೊಳ್ಳುವದಿಲ್ಲವೋ? ಹಾಗೆಯೇ ನಮ್ಮ ದೇವರಾದ ಯೆಹೋವನು ನಮಗೆ ಒಪ್ಪಿಸಿಕೊಡುವದನ್ನು ನಾವು ಸ್ವತಂತ್ರಿಸಿಕೊಳ್ಳುವದು ನ್ಯಾಯವಾಗಿದೆ.


ಮೋವಾಬ್ಯರೇ, ನಿಮ್ಮ ಗತಿಯೇನೆಂದು ಹೇಳಲಿ! ಕೆಮೋಷಿನ ಭಕ್ತರು ನಾಶವಾದರು; ನಿನ್ನ ಗಂಡುಹೆಣ್ಣುಮಕ್ಕಳು ಗಡೀಪಾರಾಗಿ ಸೆರೆಯಾದರು.


ನೀನು ನಿನ್ನ ಕೆಲಸಗಳಲ್ಲಿಯೂ ಧನರಾಶಿಗಳಲ್ಲಿಯೂ ಭರವಸವಿಟ್ಟದ್ದರಿಂದ ನೀನೂ ಶತ್ರುವಿನ ಕೈವಶವಾಗುವಿ; ಕೆಮೋಷ್ ದೇವತೆಯೂ ಅದರ ಭಕ್ತರಾದ ಯಾಜಕರೂ ಪ್ರಧಾನರೂ ಒಟ್ಟಾಗಿ ಸೆರೆಗೆ ಹೋಗುವರು.


ತಪ್ಪಿಸಿಕೊಂಡ ಅನ್ಯಜನರೇ, ನೆರೆದು ಬನ್ನಿರಿ, ಒಟ್ಟಿಗೆ ಸಮೀಪಿಸಿರಿ! ತಮ್ಮ ಮರದ ಬೊಂಬೆಯನ್ನು ಹೊತ್ತುಕೊಂಡು ರಕ್ಷಿಸಲಾರದ ಆ ದೇವರಿಗೆ ಬಿನ್ನಯಿಸುವವರು ಏನೂ ತಿಳಿಯದವರಾಗಿದ್ದಾರೆ.


ಮೋವಾಬ್ಯರು ಸನ್ನಿಧಿಗೆ ಸೇರಿ ದಿಣ್ಣೆಯಲ್ಲಿನ ಪೂಜೆಯಿಂದ ಬಹು ಆಯಾಸಗೊಂಡು ಪ್ರಾರ್ಥನೆಗಾಗಿ ತಮ್ಮ ದೇವಾಲಯಕ್ಕೆ ಬಂದರೂ ಪ್ರಾರ್ಥನೆಯು ಸಫಲವಾಗದು.


ಆ ದಿನದಲ್ಲಿ ಮನುಷ್ಯರು ತಮ್ಮ ಪೂಜೆಗೋಸ್ಕರ ಮಾಡಿಸಿಕೊಂಡ ಬೆಳ್ಳಿಯ ಬೊಂಬೆಗಳನ್ನೂ ಬಂಗಾರದ ವಿಗ್ರಹಗಳನ್ನೂ ಇಲಿಕಣ್ಣು ಕಪಟಗಳಿಗಾಗಿ ಬಿಸಾಟುಬಿಟ್ಟು


ಆಗ ಎಲೀಯನು ಅವರಿಗೆ - ಬಾಳನ ಪ್ರವಾದಿಗಳೆಲ್ಲರನ್ನೂ ಹಿಡಿಯಿರಿ; ಅವರಲ್ಲಿ ಒಬ್ಬನೂ ತಪ್ಪಿಸಿಕೊಳ್ಳಬಾರದು ಎಂದು ಆಜ್ಞಾಪಿಸಲು ಅವರು ಹಿಡಿದರು. ಅವನು ಅವರನ್ನು ಕೀಷೋನ್‍ಹಳ್ಳಕ್ಕೆ ಒಯ್ದು ಅಲ್ಲಿ ಕೊಲ್ಲಿಸಿದನು.


ಅವನು ಯೆರೂಸಲೇವಿುನ ಮೂಡಲಲ್ಲಿರುವ ಗುಡ್ಡದಲ್ಲಿ ಮೋವಾಬ್ಯರ ಕೆಮೋಷ್ ಎಂಬ ಅಸಹ್ಯ ವಿಗ್ರಹಕ್ಕೂ ಅಮ್ಮೋನಿಯರ ಮೋಲೆಕ್ ಎಂಬ ಅಸಹ್ಯ ವಿಗ್ರಹಕ್ಕೂ ಪೂಜಾಸ್ಥಳಗಳನ್ನು ಏರ್ಪಡಿಸಿದನು.


ಇದಲ್ಲದೆ ಆತನು ನಿನಗೆ - ಸೊಲೊಮೋನನೂ ಅವನ ಮನೆಯವರೂ ನನ್ನನ್ನು ಬಿಟ್ಟು ಚೀದೋನ್ಯರ ದೇವತೆಯಾದ ಅಷ್ಟೋರೆತ್, ಮೋವಾಬ್ಯರ ದೇವತೆಯಾದ ಕೆಮೋಷ್, ಅಮ್ಮೋನಿಯರ ದೇವತೆಯಾದ ವಿುಲ್ಕೋಮ್ ಇವುಗಳನ್ನು ಆರಾಧಿಸಿದ್ದೂ ಅವರ ತಂದೆಯಾದ ದಾವೀದನು ನನ್ನ ನೇಮವಿಧಿಗಳನ್ನು ಕೈಕೊಂಡು ನನ್ನನ್ನು ಮೆಚ್ಚಿಸಿ ನಡೆದಂತೆ ಅವರು ನಡಿಯದೆ ಹೋದದ್ದೂ ಇದಕ್ಕೆ ಕಾರಣ.


ಹೀಗಿರಲು ಯೆಹೋವನು ಇಂತೆನ್ನುತ್ತಾನೆ - ಇಗೋ, ಮುಂದಿನ ಕಾಲದಲ್ಲಿ ನಾನು ಅವರ ಬಳಿಗೆ ಹೊಯ್ಯತಕ್ಕವರನ್ನು ಕಳುಹಿಸುವೆನು, ಅವರು ಅದನ್ನು ಹೊಯ್ದುಬಿಡುವರು, ಪಾತ್ರೆಗಳನ್ನು ಬರಿದು ಮಾಡುವರು, ಗಡಿಗೆಗಳನ್ನು ಒಡೆದುಬಿಡುವರು.


ಆಗ ಯೆಹೋವನು ಅಮಚ್ಯನ ಮೇಲೆ ಬಹಳವಾಗಿ ಕೋಪಗೊಂಡು ಅವನ ಬಳಿಗೆ ಪ್ರವಾದಿಯನ್ನು ಕಳುಹಿಸಿ ಅವನಿಗೆ - ನಿನ್ನ ಕೈಯಿಂದ ತಮ್ಮ ಜನರನ್ನು ತಪ್ಪಿಸಲಾರದೆಹೋದ ಅನ್ಯದೇವತೆಗಳಲ್ಲಿ ಭಕ್ತಿಯನ್ನೇಕೆ ಇಟ್ಟಿದ್ದೀ ಎಂದು ಹೇಳಿಸಿದನು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು