Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೆರೆಮೀಯ 5:21 - ಕನ್ನಡ ಸತ್ಯವೇದವು J.V. (BSI)

21 ಕಣ್ಣಿದ್ದರೂ ಕಾಣದ, ಕಿವಿ ಇದ್ದರೂ ಕೇಳದ, ಬುದ್ಧಿಯಿಲ್ಲದ ಮೂಢಜನರೇ, ಯೆಹೋವನ ಈ ಮಾತನ್ನು ಕೇಳಿರಿ -

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

21 ಕಣ್ಣಿದ್ದರೂ ಕಾಣದ, ಕಿವಿ ಇದ್ದರೂ ಕೇಳದ, ಬುದ್ಧಿಯಿಲ್ಲದ ಮೂಢ ಜನರೇ, ಯೆಹೋವನ ಈ ಮಾತನ್ನು ಕೇಳಿರಿ,

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

21 ಕಣ್ಣಿದ್ದರೂ ಕಾಣದ, ಕಿವಿಯಿದ್ದರೂ ಕೇಳದ, ಬುದ್ಧಿಯಿಲ್ಲದ ಜನರೇ, ಸರ್ವೇಶ್ವರನ ಈ ಮಾತನ್ನು ಕೇಳಿರಿ;

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

21 ಬುದ್ಧಿ ಇಲ್ಲದ ಮೂರ್ಖಜನರೇ, ಈ ಸಂದೇಶವನ್ನು ಕೇಳಿರಿ. ನಿಮಗೆ ಕಣ್ಣುಗಳಿವೆ ಆದರೆ ನೀವು ನೋಡುವದಿಲ್ಲ, ನಿಮಗೆ ಕಿವಿಗಳಿವೆ ಆದರೆ ನೀವು ಕೇಳುವದಿಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

21 ಏನೆಂದರೆ, ಓ ಮೂಢ ಬುದ್ಧಿಹೀನ ಜನರೇ, ಕಣ್ಣುಗಳಿದ್ದು ಕಾಣದವರೇ, ಕಿವಿಗಳಿದ್ದು ಕೇಳದವರೇ, ಇದನ್ನು ಕೇಳಿರಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೆರೆಮೀಯ 5:21
26 ತಿಳಿವುಗಳ ಹೋಲಿಕೆ  

ನರಪುತ್ರನೇ, ನೀನು ದ್ರೋಹಿವಂಶದ ಮಧ್ಯದಲ್ಲಿ ವಾಸಿಸುತ್ತೀ, ಆ ವಂಶದವರು ದ್ರೋಹಿಗಳಾಗಿರುವದರಿಂದ ಕಣ್ಣಿದ್ದರೂ ಕಾಣರು, ಕಿವಿಯಿದ್ದರೂ ಕೇಳರು.


ನಿಮ್ಮ ಪಿತೃಗಳಿಗೆ ವಿಹಿತವಾಗಿ ಹೇಳಿದ್ದೇನಂದರೆ - ನೀನು ಈ ಜನರ ಬಳಿಗೆ ಹೋಗಿ ಅವರಿಗೆ - ನೀವು ಕಿವಿಯಿದ್ದು ಕೇಳಿದರೂ ತಿಳುಕೊಳ್ಳುವದೇ ಇಲ್ಲ; ಕಣ್ಣಿದ್ದು ನೋಡಿದರೂ ಕಾಣುವದೇ ಇಲ್ಲ ಎಂಬದಾಗಿ ಹೇಳು.


ದೇವರು ಅವರಿಗೆ ಜಡಭಾವವನ್ನು ಅಂದರೆ ಕಾಣದ ಕಣ್ಣುಗಳನ್ನೂ ಕೇಳದ ಕಿವಿಗಳನ್ನೂ ಕೊಟ್ಟನು; ಈ ಭಾವವು ಈ ಹೊತ್ತಿನವರೆಗೂ ಹಾಗೆಯೇ ಅದೆ ಎಂದು ಬರೆದ ಪ್ರಕಾರ ಅವರಿಗೆ ಆಯಿತು.


ಅವರು ಕಣ್ಣಿನಿಂದ ಕಾಣದೆ ಹೃದಯದಿಂದ ಗ್ರಹಿಸದೆ ತಿರುಗಿಕೊಳ್ಳದೆ ತನ್ನಿಂದ ಸ್ವಸ್ಥತೆಯನ್ನು ಹೊಂದದೆ ಇರುವಂತೆ ಆತನು ಅವರ ಕಣ್ಣುಗಳನ್ನು ಕುರುಡುಮಾಡಿ ಅವರ ಹೃದಯವನ್ನು ಕಠಿನಮಾಡಿದನು ಎಂಬದೇ.


ನನ್ನ ಜನರು ಮೂರ್ಖರು, ನನ್ನನ್ನು ತಿಳಿಯರು; ಮೂಢಸಂತತಿಯವರು, ಅವಿವೇಕಿಗಳು; ದುಷ್ಕಾರ್ಯದಲ್ಲಿ ನಿಪುಣರು, ಸತ್ಕಾರ್ಯವನ್ನು ಮಾಡಲರಿಯರು.


ನಿಮ್ಮ ಮನಸ್ಸು ಕಲ್ಲಾಗಿದೆಯೋ? ಕಣ್ಣಿದ್ದೂ ಕಾಣುವದಿಲ್ಲವೋ? ಕಿವಿಯಿದ್ದೂ ಕೇಳುವದಿಲ್ಲವೋ? ನಿಮಗೆ ನೆನಪಿಲ್ಲವೋ?


ಆಕಾಶದಲ್ಲಿ ಹಾರುವ ಬಕವೂ ತನ್ನ ನಿಯವಿುತ ಕಾಲಗಳನ್ನು ತಿಳಿದುಕೊಂಡಿದೆ, ಬೆಳವಕ್ಕಿಯೂ ಬಾನಕ್ಕಿಯೂ ಕೊಕ್ಕರೆಯೂ ತಮ್ಮ ಗಮನಾಗಮನ ಸಮಯಗಳನ್ನು ಗಮನಿಸುತ್ತವೆ; ನನ್ನ ಜನರಾದರೋ ಯೆಹೋವನ ನಿಯಮವನ್ನು ತಿಳಿಯರು.


ಹೀಗಿರುವಲ್ಲಿ ನಾನು - ಇವರು ಬಡವರು, ಮೂಢರು, ಯೆಹೋವನ ಮಾರ್ಗವನ್ನೂ ತಮ್ಮ ದೇವರ ನ್ಯಾಯವಿಧಿಗಳನ್ನೂ ತಿಳಿಯದವರು;


ಇಂಥವರು ಏನೂ ತಿಳಿಯದವರು, ಏನೂ ಗ್ರಹಿಸಲಾರದವರು; ಅವರ ಕಣ್ಣು ಕಾಣದಂತೆಯೂ ಹೃದಯ ಗ್ರಹಿಸದಂತೆಯೂ ಯೆಹೋವನು ಅಂಟು ಬಳಿದಿದ್ದಾನಲ್ಲಾ.


ಪಶುಪ್ರಾಯರಾದ ಪ್ರಜೆಗಳಿರಾ, ಲಕ್ಷಿಸಿರಿ; ಹುಚ್ಚರೇ, ನಿಮಗೆ ಬುದ್ಧಿಬರುವದು ಯಾವಾಗ?


ಅಲ್ಲಿನ ರೆಂಬೆಗಳು ಒಣಗಿ ಮುರಿದುಹೋಗುವವು, ಹೆಂಗಸರು ಬಂದು ಬೆಂಕಿ ಹಚ್ಚಿ ಉರಿಸುವರು; ಆ ಪ್ರಜೆಯು ಬುದ್ಧಿಹೀನವಾದದ್ದೇ ಸರಿ; ಆದಕಾರಣ ಸೃಷ್ಟಿಸಿದಾತನು ಅದನ್ನು ಕರುಣಿಸನು, ನಿರ್ಮಿಸಿದಾತನು ಅದಕ್ಕೆ ದಯೆತೋರಿಸನು.


ಜ್ಞಾನವನ್ನು ಕೊಳ್ಳಲು ಮೂಢನ ಕೈಯಲ್ಲಿ ಹಣವೇಕೆ? ಅವನಿಗೆ ಬುದ್ಧಿಯೇ ಇಲ್ಲವಲ್ಲಾ.


ದುರಾಚಾರಿಗಳಿರಾ, ಅವಿವೇಕಿಗಳಿರಾ, ಯೆಹೋವನ ವಿಷಯದಲ್ಲಿ ಈ ರೀತಿಯಾಗಿ ನಡೆಯಬಹುದೇ? ಆತನು ನಿಮ್ಮನ್ನು ಸೃಷ್ಟಿಸಿದ ತಂದೆಯಲ್ಲವೇ; ನಿಮ್ಮನ್ನು [ಜನಾಂಗವನ್ನಾಗಿ] ಮಾಡಿ ಸ್ಥಾಪಿಸಿದನಲ್ಲವೇ.


ಆದರೂ ಗ್ರಹಿಸುವ ಬುದ್ಧಿ, ನೋಡುವ ಕಣ್ಣು, ಕೇಳುವ ಕಿವಿ ಇವುಗಳನ್ನು ಯೆಹೋವನು ಇಂದಿನವರೆಗೂ ನಿಮಗೆ ಅನುಗ್ರಹಿಸಲಿಲ್ಲ ಅಯ್ಯೋ.


ಎಫ್ರಾಯೀಮು ಬುದ್ಧಿವಿವೇಕಗಳಿಲ್ಲದ ಪಾರಿವಾಳದಂತಿದೆ; ಅದರ ಜನರು ಐಗುಪ್ತವನ್ನು ಕೂಗುತ್ತಾರೆ, ಅಶ್ಶೂರಕ್ಕೆ ಹೊರಡುತ್ತಾರೆ;


ಅವರೆಲ್ಲರೂ ಪಶುಪ್ರಾಯರು, ಮಂದರು; ಬೊಂಬೆಗಳಿಂದಾಗುವ ಶಿಕ್ಷಣವು ಮರದಂತೆ ಮೊದ್ದು.


ಅವರು ಕಣ್ಣಿದ್ದು ನೋಡಿದರೂ ಕಾಣಬಾರದು, ಕಿವಿಯಿದ್ದು ಕೇಳಿದರೂ ತಿಳುಕೊಳ್ಳಬಾರದು, ಹಾಗೆ ಕಂಡು ತಿಳುಕೊಂಡರೆ ಅವರು ದೇವರ ಕಡೆಗೆ ತಿರುಗಿಕೊಂಡು ಪಾಪಕ್ಷಮೆಯನ್ನು ಹೊಂದಾರು ಎಂದೇ ಮರೆಮಾಡಲಾಗಿದೆ.


ಹೇಗಂದರೆ ಕಣ್ಣಿಗೆ ಕಾಣದಿರುವ ಆತನ ಗುಣಲಕ್ಷಣಗಳು ಅಂದರೆ ಆತನ ನಿತ್ಯಶಕ್ತಿಯೂ ದೇವತ್ವವೂ ಜಗದುತ್ಪತ್ತಿ ಮೊದಲುಗೊಂಡು ಆತನು ಮಾಡಿದ ಸೃಷ್ಟಿಗಳ ಮೂಲಕ ಬುದ್ಧಿಗೆ ಗೊತ್ತಾಗಿ ಕಾಣಬರುತ್ತವೆ; ಹೀಗಿರುವದರಿಂದ ಅವರು ಉತ್ತರವಿಲ್ಲದವರಾಗಿದ್ದಾರೆ.


ಕಣ್ಣಿದ್ದರೂ ಕುರುಡಾದ ಕಿವಿಯಿದ್ದರೂ ಕಿವುಡಾದ ಜನವನ್ನು ಕರೆ.


ಯಾಕೋಬ ಮನೆತನದೊಳಗೆ ಇದನ್ನು ಸಾರಿರಿ, ಯೆಹೂದದಲ್ಲಿ ಹೀಗೆ ಪ್ರಕಟಿಸಿರಿ -


[ಅದಕ್ಕೆ ನಾನು] - ಯಾರ ಸಂಗಡ ಮಾತಾಡಿ ಅವರು ಗಮನಿಸುವಂತೆ ಸಾಕ್ಷಿಕೊಡಲಿ? ಇಗೋ, ಅವರು ಕರ್ಣಶುದ್ಧಿಯಿಲ್ಲದವರು, ಕೇಳಲಾರರು; ಅಯ್ಯೋ, ಯೆಹೋವನ ಮಾತು ಅವರಿಗೆ ತಿರಸ್ಕಾರ, ಅದರಲ್ಲಿ ಅವರಿಗೆ ಆನಂದವೇ ಇಲ್ಲ.


ನಿಮ್ಮ ಪಿತೃಗಳಾದರೋ ಗಮನಿಸಲೊಲ್ಲದೆ ಹೆಗಲುಕೊಡದೆ ಹೋದರು. ಕೇಳಬಾರದೆಂದು ಕಿವಿಮಂದ ಮಾಡಿಕೊಂಡರು.


ಸಮಸ್ತ ಪ್ರಜೆಗಳಿಗೂ ಮಾಡಿದ ಮಹಾಮನಶ್ಶೋಧನೆ ಉತ್ಪಾತ ಮಹತ್ಕಾರ್ಯಗಳನ್ನು ನೀವು ನೋಡೇನೋಡಿದ್ದೀರಷ್ಟೆ.


ನಾನು ಸಾವಕಾಶ ಮಾಡದೆ ನಿಮಗೆ ನುಡಿದ ಮಾತುಗಳನ್ನು ನೀವು ಕೇಳದೆ ನಿಮ್ಮನ್ನು ಕರೆದ ನನಗೆ ಉತ್ತರಕೊಡದೆ


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು