Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೆರೆಮೀಯ 5:23 - ಕನ್ನಡ ಸತ್ಯವೇದವು J.V. (BSI)

23 ಈ ಜನರ ಹೃದಯವೋ [ನನ್ನ] ಅಧೀನ ತಪ್ಪಿ ತಿರುಗಿಬಿದ್ದಿದೆ; ಇವರು ನನ್ನ ಅಧೀನವನ್ನು ಮೀರಿ ಬಿಟ್ಟುಹೋಗಿದ್ದಾರೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

23 ಈ ಜನರ ಹೃದಯವೋ ನನ್ನ ಅಧೀನ ತಪ್ಪಿ ತಿರುಗಿಬಿದ್ದಿದೆ; ಇವರು ನನ್ನ ಅಧೀನವನ್ನು ಮೀರಿ ಬಿಟ್ಟುಹೋಗಿದ್ದಾರೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

23 ನೀವಾದರೋ ನನ್ನ ಅಧೀನದಿಂದ ತಪ್ಪಿಸಿಕೊಂಡು ಎದುರಿಬೀಳುವ ಹೃದಯವುಳ್ಳವರಾಗಿ ಇದ್ದೀರಿ. ಹದ್ದುಮೀರಿ ನನ್ನನ್ನು ಬಿಟ್ಟುಹೋಗಿ ಇದ್ದೀರಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

23 ಯೆಹೂದದ ಜನರು ಹಟಮಾರಿಗಳಾಗಿದ್ದಾರೆ. ಅವರು ನನ್ನ ವಿರುದ್ಧ ಹೋಗುವದಕ್ಕೆ ಮಾರ್ಗಗಳನ್ನು ಹುಡುಕುತ್ತಿದ್ದಾರೆ. ಅವರು ನನ್ನಿಂದ ತಿರುಗಿ ಬಹಳ ದೂರ ಹೋಗಿಬಿಟ್ಟಿದ್ದಾರೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

23 ಆದರೆ ಈ ಜನರಿಗೆ ತಿರುಗಿ ಬೀಳುವಂಥ, ಪ್ರತಿಭಟಿಸುವಂಥ ಹೃದಯ ಉಂಟು. ಅವರು ತಿರುಗಿಬಿದ್ದು ಹೋಗಿಬಿಟ್ಟಿದ್ದಾರೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೆರೆಮೀಯ 5:23
14 ತಿಳಿವುಗಳ ಹೋಲಿಕೆ  

ಅವರೆಲ್ಲರೂ ಕೇವಲ ದ್ರೋಹಿಗಳು, ಚಾಡಿಹೇಳುತ್ತಾ ತಿರುಗಾಡುವವರು; ಅವರು [ಬೆಳ್ಳಿಯಲ್ಲಾ,] ತಾಮ್ರ, ಕಬ್ಬಿಣ; ಎಲ್ಲರೂ ಕೇಡಿಗರು.


ನನ್ನ ಕಡೆಯಿಂದ ತಿರಿಗಿಕೊಳ್ಳುವದು ನನ್ನ ಜನರ ಗುಣವೇ; ಅವರನ್ನು ಮೇಲಕ್ಕೆ ಕರೆಯುವವರು ಇದ್ದರೂ ಮೇಲಕ್ಕೆತ್ತುವವರು ಯಾರೂ ಇಲ್ಲ.


ನಾನು ನಾಲ್ವತ್ತು ವರುಷ ಆ ಸಂತತಿಯವರ ವಿಷಯದಲ್ಲಿ ಬೇಸರಗೊಂಡೆನು; ಈ ಜನರು ಹೃದಯದಲ್ಲಿ ತಪ್ಪಿಹೋಗುವವರು, ನನ್ನ ಮಾರ್ಗವನ್ನು ತಿಳಿಯದವರು, ಎಂದು ಹೇಳಿದೆನು.


ಒಬ್ಬ ಮಗನು ತಂದೆತಾಯಿಗಳ ಆಜ್ಞೆಗೆ ಒಳಗಾಗದೆ ಶಿಕ್ಷಿಸಲ್ಪಟ್ಟರೂ ಮೊಂಡನೂ ಅವಿಧೇಯನೂ ಆಗಿ


ಸಹೋದರರೇ, ನೋಡಿಕೊಳ್ಳಿರಿ, ಜೀವಸ್ವರೂಪನಾದ ದೇವರನ್ನು ಬಿಟ್ಟುಹೋಗುವ ಅಪನಂಬಿಕೆಯುಳ್ಳ ಕೆಟ್ಟ ಹೃದಯವು ನಿಮ್ಮೊಳಗೆ ಯಾವನಲ್ಲಿಯೂ ಇರಬಾರದು.


ನನ್ನ ಜನರ ಪಾಪವೇ ಅವರಿಗೆ ಜೀವನ; ಅವರು ಅಧರ್ಮವನ್ನು ಆಶಿಸುತ್ತಾರೆ.


ಹೃದಯವು ಎಲ್ಲಕ್ಕಿಂತಲೂ ವಂಚಕ; ಗುಣವಾಗದ ರೋಗಕ್ಕೆ ಒಳಗಾಗಿದೆ; ಅದನ್ನು ಯಾರು ತಿಳಿದಾರು?


ನಾನು ದೊಡ್ಡ ಮನುಷ್ಯರ ಬಳಿಗೆ ಹೋಗಿ ಅವರ ಸಂಗಡ ಮಾತಾಡುವೆನು; ಯೆಹೋವನ ಮಾರ್ಗವೂ ಅವರ ದೇವರ ನ್ಯಾಯವಿಧಿಗಳೂ ಅವರಿಗೆ ಗೊತ್ತು ಅಂದುಕೊಂಡೆನು. ಆದರೆ ಈ ದೊಡ್ಡ ಮನುಷ್ಯರು ಒಮ್ಮನವಾಗಿ [ತಮ್ಮ ಹೆಗಲ] ನೊಗವನ್ನು ಮುರಿದು ಕಣ್ಣಿಗಳನ್ನು ಕಿತ್ತುಬಿಟ್ಟಿದ್ದಾರೆ.


ಇಸ್ರಾಯೇಲ್ಯರೇ, ನೀವು ಯಾರಿಗೆ ಅಗಾಧ ದ್ರೋಹವನ್ನು ಮಾಡಿದಿರೋ ಆತನ ಕಡೆಗೆ ತಿರಿಗಿಕೊಳ್ಳಿರಿ.


ಏಕೆ ದ್ರೋಹವನ್ನು ಹೆಚ್ಚಿಸಿ ಹೆಚ್ಚಿಸಿ ಪೆಟ್ಟಿಗೆ ಗುರಿಯಾಗುತ್ತೀರಿ? ತಲೆಯೆಲ್ಲಾ ರೋಗ, ಹೃದಯವೆಲ್ಲಾ ದುರ್ಬಲ.


ನನ್ನ ಮಹತ್ಕೃತ್ಯಗಳನ್ನು ಮರೆಯದೆ ನನ್ನಲ್ಲಿಯೇ ಭರವಸವಿಟ್ಟು ನನ್ನ ಆಜ್ಞೆಗಳನ್ನು ಕೈಕೊಂಡಾರು ಎಂಬದೇ.


ಆ ನಗರಿಯು ನನಗೆ ತಿರುಗಿಬಿದ್ದ ಕಾರಣ ಅದನ್ನು ಹೊಲಕಾಯುವವರಂತೆ ಸುತ್ತಿಕೊಂಡಿದ್ದಾರೆ ಎಂದು ಯೆಹೋವನು ಅನ್ನುತ್ತಾನೆ.


ಅಯ್ಯೋ, ಅವಿಧೇಯವೂ ಮಲಿನವೂ ಆದ ಹಿಂಸಕ ನಗರಿಯ ಗತಿಯನ್ನು ಏನು ಹೇಳಲಿ!


ಯಾಕಂದರೆ ನೀವು ಹಟಹಿಡಿದು ಆಜ್ಞೆಗೆ ಒಳಗಾಗದವರೆಂಬದು ನನಗೆ ತಿಳಿದೇ ಇದೆ. ನಾನು ಇನ್ನೂ ಜೀವದಿಂದಿರುವಾಗಲೇ ನೀವು ಯೆಹೋವನಿಗೆ ವಿರೋಧವಾಗಿ ತಿರುಗಿ ಬಿದ್ದಿದ್ದೀರಿ; ನಾನು ಹೋದ ತರುವಾಯ ನೀವು ತಿರುಗಿ ಬೀಳುವದು ಮತ್ತಷ್ಟು ನಿಶ್ಚಯ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು