Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೆರೆಮೀಯ 50:10 - ಕನ್ನಡ ಸತ್ಯವೇದವು J.V. (BSI)

10 ಕಸ್ದೀಯ ರಾಜ್ಯವು ಸೂರೆಯಾಗುವದು; ಸೂರೆಗಾರರೆಲ್ಲರೂ ತೃಪ್ತಿಗೊಳ್ಳುವರು. ಇದು ಯೆಹೋವನ ನುಡಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

10 ಕಸ್ದೀಯ ರಾಜ್ಯವು ಸೂರೆಯಾಗುವುದು; ಸೂರೆಗಾರರೆಲ್ಲರೂ ತೃಪ್ತಿಗೊಳ್ಳವರು, ಇದು ಯೆಹೋವನ ನುಡಿ” ಎಂಬುದೇ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

10 ಬಾಬಿಲೋನಿಯದ ರಾಜ್ಯ ಸೂರೆಯಾಗುವುದು. ಅದನ್ನು ಕೊಳ್ಳೆಹೊಡೆಯುವವರೆಲ್ಲರು ಸಂತೃಪ್ತಿಗೊಳ್ಳುವರು. ಇದು ಸರ್ವೇಶ್ವರನಾದ ನನ್ನ ನುಡಿ.”

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

10 ಕಸ್ದೀಯ ಸಂಪತ್ತನ್ನೆಲ್ಲ ಶತ್ರು ಕೊಳ್ಳೆಹೊಡೆಯುವನು. ಶತ್ರು ಸೈನಿಕರು ತಮಗೆ ಬೇಕಾದದ್ದೆಲ್ಲವನ್ನು ತೆಗೆದುಕೊಳ್ಳುವರು” ಇದು ಯೆಹೋವನ ನುಡಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

10 ಬಾಬಿಲೋನಿನ ದೇಶವು ಸುಲಿಗೆಯಾಗುವುದು; ಅದನ್ನು ಸುಲಿದುಕೊಳ್ಳುವವರೆಲ್ಲರಿಗೆ ತೃಪ್ತಿಯಾಗುವುದು, ಎಂದು ಯೆಹೋವ ದೇವರು ಹೇಳುತ್ತಾರೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೆರೆಮೀಯ 50:10
12 ತಿಳಿವುಗಳ ಹೋಲಿಕೆ  

ಎಪ್ಪತ್ತು ವರುಷಗಳ ತರುವಾಯ ನಾನು ಬಾಬೆಲಿನ ಅರಸನನ್ನೂ ಕಸ್ದೀಯರ ದೇಶವನ್ನೂ ಆ ಜನಾಂಗದವರನ್ನೂ ಅವರ ದ್ರೋಹಕ್ಕಾಗಿ ದಂಡಿಸಿ ಆ ದೇಶವನ್ನು ನಿತ್ಯನಾಶನಕ್ಕೆ ಗುರಿಮಾಡುವೆನು. ಇದು ಯೆಹೋವನ ನುಡಿ.


ಇದಲ್ಲದೆ ಹತ್ತು ಕೊಂಬುಗಳನ್ನೂ ಮೃಗವನ್ನೂ ಕಂಡಿಯಲ್ಲ? ಇವುಗಳಿಂದ ಸೂಚಿತರಾದವರು ಆ ಜಾರಸ್ತ್ರೀಯನ್ನು ದ್ವೇಷಿಸಿ ಅವಳನ್ನು ಗತಿಗೆಟ್ಟವಳನ್ನಾಗಿಯೂ ಬಟ್ಟೆಯಿಲ್ಲದವಳನ್ನಾಗಿಯೂ ಮಾಡಿ ಅವಳ ಮಾಂಸವನ್ನು ತಿಂದು ಅವಳನ್ನು ಬೆಂಕಿಯಿಂದ ಸುಟ್ಟುಬಿಡುವರು.


ಅವನ ದೇಶಕ್ಕೆ ಕಾಲವು ಹತ್ತರಿಸುವ ತನಕ ಸಕಲ ಜನಾಂಗಗಳು ಅವನಿಗೂ ಅವನ ಮಗನಿಗೂ ಮೊಮ್ಮಗನಿಗೂ ಅಡಿಯಾಳಾಗಿ ಬಿದ್ದಿರುವವು; ಆಮೇಲೆ ಅನೇಕ ಜನಾಂಗಗಳೂ ಮಹಾರಾಜರೂ ಅವನನ್ನೇ ಅಡಿಯಾಳನ್ನಾಗಿ ಮಾಡಿಕೊಳ್ಳುವರು.


ನಿನ್ನ ಹೆಸರುಹಿಡಿದು ಕರೆಯುವ ನಾನು ಯೆಹೋವನು, ಇಸ್ರಾಯೇಲ್ಯರ ದೇವರು ಎಂದು ನೀನು ತಿಳಿದುಕೊಳ್ಳುವ ಹಾಗೆ ಕತ್ತಲಲ್ಲಿ ಬಚ್ಚಿಟ್ಟಿರುವ ಆಸ್ತಿಪಾಸ್ತಿಯನ್ನೂ ಗುಪ್ತಸ್ಥಳಗಳಲ್ಲಿ ಮರೆಮಾಡಿದ ನಿಧಿನಿಕ್ಷೇಪವನ್ನೂ ನಿನಗೆ ಕೊಡುವೆನು.


ನಿನ್ನ ಹಗ್ಗಗಳು ಸಡಲಿ ಸ್ತಂಭದ ಪಾದವನ್ನು ಸ್ಥಿರಪಡಿಸಿಕೊಳ್ಳಲಾರದೆ ಹೋದವು, ಪಠವನ್ನು ಮುದುರದಂತೆ ಹಿಡಿದಿರಲಿಕ್ಕೂ ಆಗಲಿಲ್ಲ; ಆಗ ದೊಡ್ಡ ಸೂರೆಯು ಕೊಳ್ಳೆಯಾಗಿ ಹಂಚುವದಕ್ಕೆ ಆಸ್ಪದವಾಯಿತು. ಕುಂಟರೂ ಸುಲಿಗೆಮಾಡಿದರು.


ನೀವು ಕೊಳ್ಳೆಹೊಡೆದದ್ದನ್ನು ಇತರರು ವಿುಡತೆಗಳಂತೆ ಕೊಳ್ಳೆಮಾಡುವರು; ಶಲಭಗಳಂತೆ ಅದರ ಮೇಲೆ ಹಾರಿಬೀಳುವರು;


ಲೋಕದ ಕಟ್ಟಕಡೆಯಿಂದ ಬಾಬೆಲಿಗೆ ಬನ್ನಿರಿ, ಅದರ ಕಣಜಗಳನ್ನು ತೆರೆಯಿರಿ; ಪಟ್ಟಣವನ್ನು ಹಾಳುದಿಬ್ಬಗಳಾಗಿ ಮಾಡಿ ಪೂರ್ಣವಾಗಿ ನಾಶಪಡಿಸಿರಿ; ಏನೂ ಉಳಿಯದಿರಲಿ.


ಆದರೆ ಬಾಬೆಲಿನವರೂ ಕಸ್ದೀಯರೂ ಚೀಯೋನಿನಲ್ಲಿ ಮಾಡಿದ ಎಲ್ಲಾ ಹಾನಿಗೆ ಪ್ರತಿಯಾಗಿ ನಾನು ಅವರೆಲ್ಲರಿಗೂ ಚೀಯೋನಿನವರ ಕಣ್ಣೆದುರಿಗೆ ಮುಯ್ಯಿತೀರಿಸುವೆನು ಎಂದು ಯೆಹೋವನು ಅನ್ನುತ್ತಾನೆ.


ನಮ್ಮ ಪ್ರಾಣವನ್ನು ಹಿಂಸಿಸಿದ ದೋಷ ಬಾಬೆಲಿಗೆ ತಟ್ಟಲಿ ಎಂದು ಚೀಯೋನಿನವರು ಅನ್ನುತ್ತಾರೆ; ನಮ್ಮ ರಕ್ತವನ್ನು ಸುರಿಸಿದ ಅಪರಾಧವು ಕಸ್ದೀಯರಿಗೆ ಬಡಿಯಲಿ ಎಂದು ಯೆರೂಸಲೇವಿುನವರು ಹೇಳುತ್ತಾರೆ.


ಆಮೇಲೆ ದೇವರಾತ್ಮವು ಪರವಶನಾದ ನನ್ನನ್ನು ಎತ್ತಿ ದಿವ್ಯದರ್ಶನದ ಮುಖಾಂತರ ಕಸ್ದೀಯ ದೇಶದಲ್ಲಿ ಸೆರೆಯಾದವರ ಬಳಿಗೆ ಒಯ್ದುಕೊಂಡು ಬಂತು. ನನಗಾದ ದಿವ್ಯದರ್ಶನವು ಆಗ ಮಾಯವಾಯಿತು.


ಅವರು ಬೆಬ್ಬರಬೀಳುವರು. ಖಡ್ಗವು ಅವರ ಅಶ್ವಗಳನ್ನೂ ರಥಗಳನ್ನೂ ಬಾಬೆಲಿನಲ್ಲಿರುವ ಬಗೆಬಗೆಯ ವಿದೇಶೀಯರನ್ನೆಲ್ಲ ಹೊಡೆಯಲಿ! ಅವರು ಹೆಂಗಸರಂತೆ ಬೆದರುವರು, ಖಡ್ಗವು ಅವರ ಸಂಪತ್ತನ್ನು ನುಂಗಲಿ! ಅವರು ಸೂರೆಗೆ ಈಡಾಗುವರು.


ನೀನು ಬಹು ಜನಾಂಗಗಳನ್ನು ಕೊಳ್ಳೆಹೊಡೆದು ಮನುಷ್ಯರ ರಕ್ತವನ್ನು ಸುರಿಸಿ ದೇಶವನ್ನೂ ಪುರವನ್ನೂ ಅವುಗಳ ನಿವಾಸಿಗಳೆಲ್ಲರನ್ನೂ ಹಿಂಸಿಸಿದ ಕಾರಣ ಜನಾಂಗಗಳಲ್ಲಿ ಉಳಿದವರೆಲ್ಲರು ನಿನ್ನನ್ನು ಕೊಳ್ಳೆಹೊಡೆಯುವರು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು