Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೆರೆಮೀಯ 50:16 - ಕನ್ನಡ ಸತ್ಯವೇದವು J.V. (BSI)

16 ಬೀಜಬಿತ್ತುವವನನ್ನೂ ಸುಗ್ಗಿಯಲ್ಲಿ ಕುಡುಗೋಲು ಹಿಡಿಯುವವನನ್ನೂ ಬಾಬೆಲಿನಿಂದ ನಿರ್ಮೂಲಮಾಡಿರಿ; ಪ್ರತಿಯೊಬ್ಬ ವಿದೇಶೀಯನು ಹಿಂಸೆಯ ಖಡ್ಗದ ದೆಸೆಯಿಂದ ಸ್ವಜನದ ಕಡೆಗೆ ತಿರುಗಿಕೊಂಡು ಸ್ವದೇಶಕ್ಕೆ ಓಡಿಹೋಗುವನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

16 ಬೀಜ ಬಿತ್ತುವವನನ್ನೂ ಮತ್ತು ಸುಗ್ಗಿಯಲ್ಲಿ ಕುಡುಗೋಲು ಹಿಡಿಯುವವನನ್ನೂ ಬಾಬೆಲಿನಿಂದ ನಿರ್ಮೂಲಮಾಡಿರಿ; ಪ್ರತಿಯೊಬ್ಬ ವಿದೇಶೀಯನು ಹಿಂಸೆಯ ಖಡ್ಗದ ದೆಸೆಯಿಂದ ಸ್ವಜನರ ಕಡೆಗೆ ತಿರುಗಿಕೊಂಡು ಸ್ವದೇಶಕ್ಕೆ ಓಡಿಹೋಗುವನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

16 ಬೀಜಬಿತ್ತುವವನಾಗಲಿ, ಸುಗ್ಗಿಯಲ್ಲಿ ಕುಡುಗೋಲು ಹಿಡಿಯುವವನಾಗಲಿ ಆ ಬಾಬಿಲೋನಿನಲ್ಲಿ ಇಲ್ಲದಂತೆ ಮಾಡಿ. ಪ್ರತಿಯೊಬ್ಬ ವಿದೇಶಿಯನು ಹತ್ಯಮಾಡುವ ಆ ಖಡ್ಗದ ಮುಂದೆ ನಿಲ್ಲಲಾಗದೆ ಸ್ವಜನರ ಕಡೆಗೆ ತಿರುಗಿಕೊಂಡು ಸ್ವದೇಶಕ್ಕೆ ಓಡಿಹೋಗುವನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

16 ಬಾಬಿಲೋನಿನ ಜನರಿಗೆ ಬೀಜಗಳನ್ನು ಬಿತ್ತಲು ಬಿಡಬೇಡಿ. ಸುಗ್ಗಿ ಮಾಡಲು ಅವರಿಗೆ ಬಿಡಬೇಡಿ. ಬಾಬಿಲೋನಿನ ಸೈನಿಕರು ಹಲವಾರು ಸೆರೆಯಾಳುಗಳನ್ನು ಹಿಡಿದುತಂದಿದ್ದಾರೆ. ಈಗ ಶತ್ರು ಸೈನಿಕರು ಬಂದುದರಿಂದ ಆ ಸೆರೆಯಾಳುಗಳು ತಮ್ಮ ಪ್ರದೇಶಗಳಿಗೆ ಹಿಂತಿರುಗುತ್ತಿದ್ದಾರೆ, ಆ ಸೆರೆಯಾಳುಗಳು ತಮ್ಮ ದೇಶಗಳಿಗೆ ಓಡುತ್ತಿದ್ದಾರೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

16 ಬಿತ್ತುವವನನ್ನೂ, ಸುಗ್ಗಿಕಾಲದಲ್ಲಿ ಕುಡುಗೋಲು ಹಿಡಿಯುವವನನ್ನೂ ಬಾಬಿಲೋನಿನೊಳಗಿಂದ ಕಡಿದುಬಿಡಿರಿ; ಕಷ್ಟಪಡುವ ಖಡ್ಗದ ಭಯದಿಂದ ಅವರು ತಮ್ಮ ತಮ್ಮ ಜನರ ಬಳಿಗೆ ತಿರುಗಿಕೊಳ್ಳುವರು; ತಮ್ಮ ತಮ್ಮ ದೇಶಗಳಿಗೆ ಓಡಿಹೋಗುವರು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೆರೆಮೀಯ 50:16
7 ತಿಳಿವುಗಳ ಹೋಲಿಕೆ  

ಅಟ್ಟಿದ ಜಿಂಕೆಯಂತೆಯೂ ಯಾರೂ ಕೂಡದ ಕುರಿಗಳ ಹಾಗೂ ಪ್ರತಿಯೊಬ್ಬನು ಸ್ವಜನದ ಕಡೆಗೆ ತಿರುಗಿಕೊಂಡು ಸ್ವದೇಶಕ್ಕೆ ಓಡಿಹೋಗುವನು.


ಬಾಬೆಲನ್ನು ಸ್ವಸ್ಥಮಾಡುವದಕ್ಕೆ ನಾವು ಪ್ರಯತ್ನಪಟ್ಟರೂ ಅದು ಸ್ವಸ್ಥವಾಗಲಿಲ್ಲ; ಬಾಬೆಲನ್ನು ಬಿಟ್ಟು ನಾವೆಲ್ಲರೂ ನಮ್ಮ ನಮ್ಮ ದೇಶಗಳಿಗೆ ಹೋಗೋಣ; ಅದು ಹೊಂದಬೇಕಾದ ದಂಡನೆಯು ಆಕಾಶವನ್ನು ಮುಟ್ಟುವಷ್ಟು ದೊಡ್ಡದಾಗಿದೆ, ಹೌದು, ಗಗನದವರೆಗೂ ಬೆಳೆದಿದೆ.


ಬಹು ಜನರು ಮುಗ್ಗರಿಸುವಂತೆ ಮಾಡಿದನು; ಹೌದು, ಒಬ್ಬರಿಗೊಬ್ಬರು ತಗಲಿ ಬಿದ್ದರು; ನಾವು ಎದ್ದು ಜನ್ಮಭೂವಿುಗೆ ಹೊರಟು ಸ್ವಜನರನ್ನು ಸೇರಿ ಹಿಂಸೆಯ ಖಡ್ಗದಿಂದ ತಪ್ಪಿಸಿಕೊಳ್ಳೋಣ ಎಂದುಕೊಂಡರು.


ರೈತರೇ, ಕಂಗೆಡಿರಿ! ತೋಟಗಾರರೇ, ಗೋಳಾಡಿರಿ! ಗೋದಿಯೂ ಜವೆಗೋದಿಯೂ ಹಾಳಾಗಿವೆ; ಹೊಲದ ಬೆಳೆಯು ನಾಶವಾಗಿದೆ.


ಸೇನಾಧೀಶ್ವರದೇವರಾದ ಯೆಹೋವಕರ್ತನು ಇಂತೆನ್ನುತ್ತಾನೆ - ಎಲ್ಲಾ ಚೌಕಗಳಲ್ಲಿ ಕಿರಿಚಾಟವಾಗುವದು, ಸಕಲ ಬೀದಿಗಳಲ್ಲಿ ಅಯ್ಯಯ್ಯೋ ಎಂದು ಅರಚಿಕೊಳ್ಳುವರು; ರೈತರನ್ನು ಪ್ರಲಾಪಿಸುವದಕ್ಕೂ ಗೋಳಾಟದವರನ್ನು ಗೋಳಿಡುವದಕ್ಕೂ ಕರೆಯುವರು.


ನಿನ್ನಿಂದ ಕುರುಬರನ್ನೂ ಹಿಂಡನ್ನೂ ಒಡೆದುಬಿಡುತ್ತೇನೆ; ನಿನ್ನಿಂದ ರೈತನನ್ನೂ ನೊಗದ ಎತ್ತುಗಳನ್ನೂ ಒಡೆದುಬಿಡುತ್ತೇನೆ; ನಿನ್ನಿಂದ ದೇಶಾಧಿಪತಿಗಳನ್ನೂ ನಾಡೊಡೆಯರನ್ನೂ ಒಡೆದುಬಿಡುತ್ತೇನೆ;


ಆತನು ಸಿಂಹದಂತೆ ತನ್ನ ಹಕ್ಕೆಯನ್ನು ಬಿಟ್ಟುಬಂದಿದ್ದಾನೆ; ಹಿಂಸಿಸುವ ಖಡ್ಗದಿಂದಲೂ ಆತನ ರೋಷಾಗ್ನಿಯಿಂದಲೂ ಅವರ ದೇಶವು ಬೆರಗಿಗೆ ಈಡಾಗಿದೆ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು