Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೆರೆಮೀಯ 50:17 - ಕನ್ನಡ ಸತ್ಯವೇದವು J.V. (BSI)

17 ಇಸ್ರಾಯೇಲು ಚದರಿಹೋದ ಹಿಂಡು; ಸಿಂಹಗಳು ಅದನ್ನು ಓಡಿಸಿಬಿಟ್ಟಿವೆ; ಮೊಟ್ಟಮೊದಲು ಅಶ್ಶೂರದ ಅರಸನು ಅದನ್ನು ತಿಂದನು, ಕಟ್ಟಕಡೆಗೆ ಈಗ ಬಾಬೆಲಿನ ಅರಸನಾದ ನೆಬೂಕದ್ನೆಚ್ಚರನು ಅದರ ಎಲುಬುಗಳನ್ನು ಕಡಿದುಬಿಟ್ಟನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

17 ಇಸ್ರಾಯೇಲು ಚದರಿಹೋದ ಕುರಿ ಹಿಂಡು; ಸಿಂಹಗಳು ಅದನ್ನು ಓಡಿಸಿಬಿಟ್ಟಿವೆ; ಮೊಟ್ಟಮೊದಲು ಅಶ್ಶೂರದ ಅರಸನು ಅದನ್ನು ತಿಂದನು, ಕಟ್ಟಕಡೆಗೆ ಈಗ ಬಾಬೆಲಿನ ಅರಸನಾದ ನೆಬೂಕದ್ನೆಚ್ಚರನು ಅದರ ಎಲುಬುಗಳನ್ನು ಕಡಿದುಬಿಟ್ಟನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

17 “ಇಸ್ರಯೇಲ್ ಚದರಿಹೋದ ಮಂದೆ. ಸಿಂಹಗಳು ಅದನ್ನು ಓಡಿಸಿಬಿಟ್ಟಿವೆ. ಮೊಟ್ಟಮೊದಲು ಅಸ್ಸೀರಿಯಾದ ಅರಸನು ಅದನ್ನು ಕಬಳಿಸಿದನು. ಕಟ್ಟಕಡೆಗೆ ಬಾಬಿಲೋನಿನ ಅರಸ ನೆಬೂಕದ್ನೆಚ್ಚರನು ಅದರ ಎಲುಬುಗಳನ್ನು ಕಡಿದುಬಿಟ್ಟನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

17 “ಇಸ್ರೇಲು ದೇಶಗಳಲ್ಲೆಲ್ಲಾ ಚದರಿಹೋದ ಕುರಿಹಿಂಡಿನಂತಾಗಿದೆ. ಸಿಂಹಗಳಿಗೆ ಹೆದರಿ ಓಡಿಹೋದ ಕುರಿಗಳಂತಾಗಿದೆ ಇಸ್ರೇಲು. ಅದನ್ನು ತಿಂದು ಮುಗಿಸಿದ ಮೊದಲನೆ ಸಿಂಹವೆಂದರೆ ಅಶ್ಶೂರದ ರಾಜನು. ಅದರ ಎಲುಬುಗಳನ್ನು ಜಗಿದ ಕೊನೆಯ ಸಿಂಹವೆಂದರೆ ಬಾಬಿಲೋನಿನ ರಾಜನಾದ ನೆಬೂಕದ್ನೆಚ್ಚರನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

17 “ಇಸ್ರಾಯೇಲನು ಚದರಿಹೋದ ಕುರಿಯಾಗಿದ್ದನು; ಸಿಂಹಗಳು ಅವನನ್ನು ಓಡಿಸಿಬಿಟ್ಟವು; ಮೊದಲು ಅಸ್ಸೀರಿಯನ ಅರಸನು ಅವನನ್ನು ತಿಂದುಬಿಟ್ಟನು. ಕಡೆಯಲ್ಲಿ ಬಾಬಿಲೋನಿನ ಅರಸನಾದ ಈ ನೆಬೂಕದ್ನೆಚ್ಚರನು ಅವನ ಎಲುಬುಗಳನ್ನು ಮುರಿದಿದ್ದಾನೆ.”

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೆರೆಮೀಯ 50:17
38 ತಿಳಿವುಗಳ ಹೋಲಿಕೆ  

ಪ್ರಾಯದ ಸಿಂಹಗಳು ಅವನ ಮೇಲೆ ಗರ್ಜಿಸಿ ಆರ್ಭಟಿಸುತ್ತಿವೆ, ಅವನ ದೇಶವನ್ನು ಹಾಳು ಮಾಡಿವೆ, ಅವನ ಊರುಗಳು ಸುಟ್ಟು ನಿರ್ನಿವಾಸಿಗಳಾಗಿವೆ.


ನೀವು ಕುರಿಗಳಂತೆ ದಾರಿತಪ್ಪಿ ತೊಳಲುವವರಾಗಿದ್ದಿರಿ, ಆದರೆ ಈಗ ನೀವು ತಿರುಗಿಕೊಂಡು ನಿಮ್ಮ ಆತ್ಮಗಳನ್ನು ಕಾಯುವ ಕುರುಬನೂ ಅಧ್ಯಕ್ಷನೂ ಆಗಿರುವಾತನ ಬಳಿಗೆ ಬಂದಿದ್ದೀರಿ.


ನಾನು ಸಕಲ ಜನಾಂಗಗಳನ್ನು ಕೂಡಿಸಿ ಯೆಹೋವನ ನ್ಯಾಯತೀರ್ಪಿನ ತಗ್ಗಿಗೆ ಬರಮಾಡಿ ಅಲ್ಲಿ ನನ್ನ ಜನರಿಗಾಗಿ, ನನ್ನ ಸ್ವಾಸ್ತ್ಯವಾದ ಇಸ್ರಾಯೇಲ್ ಪ್ರಜೆಗೋಸ್ಕರ ಅವುಗಳೊಂದಿಗೆ ವಿವಾದಮಾಡುವೆನು. ಅವು ನನ್ನ ಜನರನ್ನು ದೇಶದೇಶಗಳಿಗೆ ಚದರಿಸಿ ನನ್ನ ದೇಶವನ್ನು ಹಂಚಿಕೊಂಡಿವೆಯಷ್ಟೆ.


ನನ್ನ ಜನರು ತಪ್ಪಿಸಿಕೊಂಡ ಕುರಿಗಳು; ಪಾಲಕರು ಅವರನ್ನು ದಾರಿತಪ್ಪಿಸಿ ಪರ್ವತಗಳಲ್ಲಿ ಅಲೆದಾಡಿಸಿದ್ದಾರೆ; ನನ್ನ ಜನರು ತಮ್ಮ ಹಕ್ಕೆಯನ್ನು ಮರೆತು ಬೆಟ್ಟಗುಡ್ಡಗಳಲ್ಲಿ ತಿರುಗಾಡುತ್ತಲಿದ್ದಾರೆ.


ಅನಂತರ ರಾಜನು ಆಜ್ಞಾಪಿಸಲು ದಾನಿಯೇಲನ ಮೇಲೆ ದೂರುಹೊರಿಸಿದವರನ್ನು ತಂದು ಅವರನ್ನೂ ಅವರ ಹೆಂಡತಿಮಕ್ಕಳನ್ನೂ ಸಿಂಹಗಳ ಗವಿಯಲ್ಲಿ ಹಾಕಿಬಿಟ್ಟರು; ಅವರು ಗವಿಯ ಅಡಿಯನ್ನು ಮುಟ್ಟುವದರೊಳಗೆ ಸಿಂಹಗಳು ಅವರ ಮೇಲೆ ಹಾರಿ ಅವರ ಎಲ್ಲಾ ಎಲುಬುಗಳನ್ನು ಚೂರುಚೂರು ಮಾಡಿದವು.


ಮಂದೆಯ ಕುರುಬನು ಸುತ್ತುಮುತ್ತಲು ಚದರಿಹೋದ ತನ್ನ ಕುರಿಗಳನ್ನು ಹುಡುಕುವ ಹಾಗೆ ನಾನು ನನ್ನ ಕುರಿಗಳನ್ನು ಹುಡುಕುವೆನು; ಕಾರ್ಮುಗಿಲಿನ ದುರ್ದಿನದಲ್ಲಿ ಚೆಲ್ಲಾಪಿಲ್ಲಿಯಾದ ಎಲ್ಲಾ ಸ್ಥಳಗಳಿಂದ ಅವುಗಳನ್ನು ಬಿಡಿಸಿ


ಚಿದ್ಕೀಯನು ಅರಸನಾದಾಗ ಇಪ್ಪತ್ತೊಂದು ವರುಷದವನಾಗಿದ್ದನು. ಇವನು ಯೆರೂಸಲೇವಿುನಲ್ಲಿ ಹನ್ನೊಂದು ವರುಷ ಆಳಿದನು. ಲಿಬ್ನದ ಯೆರೆಮೀಯನ ಮಗಳು ಆದ ಹಮೂಟಲ್ ಎಂಬಾಕೆಯು ಅವನ ತಾಯಿ.


ಆ ದೇಶದವರು ಪ್ರಾಯದ ಸಿಂಹಗಳಂತೆ ಒಟ್ಟಿಗೆ ಗರ್ಜಿಸುತ್ತಿದ್ದಾರೆ, ಸಿಂಹದ ಮರಿಗಳ ಹಾಗೆ ಗುರುಗುಟ್ಟುತ್ತಿದ್ದಾರೆ.


ಆಹಾ, ಒಬ್ಬನು ಸಿಂಹದೋಪಾದಿಯಲ್ಲಿ ಯೊರ್ದನಿನ ದಟ್ಟಡವಿಯಿಂದ [ಎದೋಮ್ಯರಿಗೆ] ನಿತ್ಯನೆಲೆಯಾದ ಗೋಮಾಳಕ್ಕೆ ಏರಿಬರುವನು; ಕ್ಷಣಮಾತ್ರದಲ್ಲಿ ನಾನು ಅವರನ್ನು ಅಲ್ಲಿಂದ ಓಡಿಸಿಬಿಡುವೆನು; ನಾನು ಆರಿಸಿಕೊಂಡವನನ್ನೇ ಅದನ್ನು ಕಾಯುವದಕ್ಕೆ ನೇವಿುಸುವೆನು; ನನ್ನ ಸಮಾನನು ಯಾವನು? ನನ್ನನ್ನು ನ್ಯಾಯವಿಚಾರಣೆಗೆ ಯಾವನು ಕರೆದಾನು? ಮಂದೆಯನ್ನು ಕಾಯುವ ಯಾವನು ನನ್ನೆದುರಿಗೆ ನಿಲ್ಲಬಲ್ಲನು?


ಆದಕಾರಣ ಅಡವಿಯ ಸಿಂಹವು ಅವರನ್ನು ಕೊಲ್ಲುವದು, ಕಾಡಿನ ತೋಳವು ಕೊಳ್ಳೆಮಾಡುವದು, ಚಿರತೆಯು ಅವರ ಪಟ್ಟಣಗಳಿಗೆ ಹೊಂಚುಹಾಕಿ ಅಲ್ಲಿಂದ ಹೊರಡುವ ಪ್ರತಿಯೊಬ್ಬನನ್ನೂ ಸೀಳುವದು; ಅವರ ಅಪರಾಧಗಳು ಬಹಳ, ಅವರ ದ್ರೋಹಗಳು ಅಪಾರ.


ಜನಾಂಗಘಾತುಕವಾದ ಒಂದು ಸಿಂಹವು ತನ್ನ ಪೊದೆಯೊಳಗಿಂದ ಎದ್ದಿದೆ; ಹೊರಟಿದೆ, ಸ್ಥಳದಿಂದ ತೆರಳಿದೆ; ನಿನ್ನ ದೇಶವನ್ನು ಹಾಳುಮಾಡುವದು, ನಿನ್ನ ಪಟ್ಟಣಗಳು ಪಾಳುಬಿದ್ದು ನಿರ್ನಿವಾಸಿಗಳಾಗುವವು.


ನಾನು ನನ್ನ ಜನರ ಮೇಲೆ ರೋಷಗೊಂಡು ಅವರನ್ನು ನಿನ್ನ ಕೈವಶ ಮಾಡಿ ನನ್ನ ಸ್ವಾಸ್ತ್ಯವನ್ನು ಹೊಲೆಗೆಡಿಸಿದೆನು; ನೀನು ಅವರನ್ನು ಹೇಗೂ ಕರುಣಿಸದೆ ಮುದುಕರ ಮೇಲೆಯೂ ಬಹುಭಾರವಾದ ನೊಗವನ್ನು ಹೊರಿಸಿದಿ.


ಆದದರಿಂದ ಆತನು ಅಶ್ಶೂರದ ಅರಸನ ಸೈನ್ಯಾಧಿಪತಿಗಳನ್ನು ಅವರ ಮೇಲೆ ಬರಮಾಡಿದನು. ಅವರು ಮನಸ್ಸೆಯನ್ನು ಹಿಡಿದು ಅವನಿಗೆ ಕೊಂಡಿಗಳನ್ನು ಸಿಕ್ಕಿಸಿ ಬೇಡಿಹಾಕಿ ಬಾಬೆಲಿಗೆ ಒಯ್ದರು.


ಅಶ್ಶೂರದ ಅರಸನಾದ ತಿಗ್ಲತ್ಪಿಲೆಸರನು ಬಂದು ಅವನಿಗೆ ನೆರವಾಗುವದಕ್ಕೆ ಬದಲಾಗಿ ಅವನನ್ನು ಕುಗ್ಗಿಸಿದನು.


ಅವನ ಕಾಲದಲ್ಲಿ ಬಾಬೆಲಿನ ಅರಸನಾದ ನೆಬೂಕದ್ನೆಚ್ಚರನು ಬಂದನು; ಯೆಹೋಯಾಕೀಮನು ಅವನಿಗೆ ಅಧೀನನಾಗಿ ಮೂರು ವರುಷಗಳಾದನಂತರ ಅವನಿಗೆ ವಿರೋಧವಾಗಿ ತಿರುಗಿಬಿದ್ದನು.


ಇಸ್ರಾಯೇಲ್ಯರ ಅರಸನಾದ ಪೆಕಹನ ಕಾಲದಲ್ಲಿ ಅಶ್ಶೂರ್ ದೇಶದ ಅರಸನಾದ ತಿಗ್ಲತ್ಪಿಲೆಸೆರನೆಂಬವನು ಬಂದು ಇಯ್ಯೋನ್, ಆಬೇಲ್ಬೇತ್ಮಾಕಾ, ಯಾನೋಹ, ಕೆದೆಷ್, ಹಾಚೋರ್ ಮೊದಲಾದ ನಫ್ತಾಲಿಯ ಊರುಗಳನ್ನೂ ಗಿಲ್ಯಾದ್, ಗಲಿಲಾಯ ಪ್ರಾಂತಗಳನ್ನೂ ಸ್ವಾಧೀನಪಡಿಸಿಕೊಂಡು ಅವುಗಳ ನಿವಾಸಿಗಳನ್ನು ಅಶ್ಶೂರ್ ದೇಶಕ್ಕೆ ಸೆರೆಯಾಗಿ ತೆಗೆದುಕೊಂಡುಹೋದನು.


ಅಶ್ಶೂರ್‍ದೇಶದ ಅರಸನಾದ ಪೂಲನೆಂಬವನು ಇಸ್ರಾಯೇಲ್‍ದೇಶಕ್ಕೆ ವಿರೋಧವಾಗಿ ಬಂದಾಗ ಮೆನಹೇಮನು ಅವನ ಮುಖಾಂತರವಾಗಿ ತನ್ನ ಅರಸುತನವನ್ನು ದೃಢಪಡಿಸಿಕೊಳ್ಳುವದಕ್ಕೋಸ್ಕರ ಅವನಿಗೆ ಸಾವಿರ ತಲಾಂತು ಬೆಳ್ಳಿಯನ್ನು ಕೊಟ್ಟನು.


ಇವನ ಕಾಲದಲ್ಲಿ ಬಾಬೆಲಿನ ಅರಸನಾದ ನೆಬೂಕದ್ನೆಚ್ಚರನ ಸೈನ್ಯದವರು ಯೆರೂಸಲೇವಿುಗೆ ವಿರೋಧವಾಗಿ ಬಂದು ಅದಕ್ಕೆ ಮುತ್ತಿಗೆ ಹಾಕಿದರು.


ಒಂಭತ್ತನೆಯ ವರುಷದ ಹತ್ತನೆಯ ತಿಂಗಳಿನ ಹತ್ತನೆಯ ದಿನದಲ್ಲಿ ಸರ್ವಸೈನ್ಯಸಹಿತನಾಗಿ ಯೆರೂಸಲೇವಿುಗೆ ಬಂದು ಅಲ್ಲಿ ಪಾಳೆಯಮಾಡಿಕೊಂಡು ಅದರ ಸುತ್ತಲೂ ಮಣ್ಣಿನ ದಿಬ್ಬವನ್ನು ಮಾಡಿ


ದೀಮೋನಿನ ನೀರೆಲ್ಲಾ ರಕ್ತಮಯವಾಯಿತು; ಮತ್ತು ದೀಮೋನಿನ ಮೇಲೆ ಹೆಚ್ಚು ಬಾಧೆಯನ್ನು, ಅಂದರೆ ಮೋವಾಬ್ಯರಲ್ಲಿ ತಪ್ಪಿಸಿಕೊಂಡವರ ಮೇಲೆಯೂ ದೇಶದಲ್ಲಿ ಉಳಿದವರ ಮೇಲೆಯೂ ಸಿಂಹವನ್ನು, ಬರಮಾಡುವೆನು.


ಇವರು ನಿನ್ನ ಬೆಳೆಯನ್ನೂ ನಿನ್ನ ಆಹಾರವನ್ನೂ ನಿನ್ನ ಗಂಡು ಹೆಣ್ಣುಮಕ್ಕಳನ್ನೂ ನಿನ್ನ ದನಕುರಿಗಳನ್ನೂ ನಿನ್ನ ದ್ರಾಕ್ಷಾಲತೆಗಳನ್ನೂ ಅಂಜೂರದ ಗಿಡಗಳನ್ನೂ ತಿಂದುಬಿಡುವರು; ನಿನ್ನ ಭರವಸದ ಕೋಟೆಕೊತ್ತಲುಗಳ ಪಟ್ಟಣಗಳನ್ನು ಖಡ್ಗದಿಂದ ಹಾಳುಮಾಡುವರು.


ನಿನ್ನನ್ನು ಅರಿಯದ ಅನ್ಯಜನಾಂಗಗಳ ಮೇಲೆಯೂ ನಿನ್ನ ನಾಮವನ್ನು ಉಚ್ಚರಿಸದ ವಂಶಗಳ ಮೇಲೆಯೂ ನಿನ್ನ ರೌದ್ರವನ್ನು ಸುರಿದುಬಿಡು. ಅವರು ಯಾಕೋಬ್ಯರನ್ನು ನುಂಗಿ ಹೌದು, ಪೂರಾ ನುಂಗಿಬಿಟ್ಟು ಅವರ ವಾಸಸ್ಥಳವನ್ನು ಹಾಳುಮಾಡಿದ್ದಾರಲ್ಲಾ.


ತರುವಾಯ ನಾನು ಯೆಹೂದದ ಅರಸನಾದ ಚಿದ್ಕೀಯನನ್ನೂ ಅವನ ಸೇವಕರನ್ನೂ ವ್ಯಾಧಿಖಡ್ಗಕ್ಷಾಮಗಳಿಂದ ಹತಶೇಷರಾದ ಪ್ರಜೆಗಳನ್ನೂ ಬಾಬೆಲಿನ ಅರಸನಾದ ನೆಬೂಕದ್ನೆಚ್ಚರನ ಕೈಗೂ ಅವರ ಪ್ರಾಣವನ್ನು ಹುಡುಕುತ್ತಿರುವ ಅವರ ಶತ್ರುಗಳ ಕೈಗೂ ಕೊಟ್ಟುಬಿಡುವೆನು; ಅವನು ಅವರನ್ನು ಕರುಣಿಸದೆ ಕನಿಕರಪಡದೆ ಉಳಿಸದೆ ಕತ್ತಿಯಿಂದ ಸಂಹರಿಸುವನು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು