Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೆರೆಮೀಯ 50:2 - ಕನ್ನಡ ಸತ್ಯವೇದವು J.V. (BSI)

2 ಜನಾಂಗಗಳಲ್ಲಿ ಪ್ರಚುರಪಡಿಸಿರಿ, ಧ್ವಜವೆತ್ತಿ ಪ್ರಕಟಿಸಿರಿ, ಮರೆಮಾಜದೆ ಹೀಗೆ ಸಾರಿರಿ - ಬಾಬೆಲ್ ಶತ್ರುವಾಯಿತು, ಬೇಲ್ ದೇವತೆಯು ನಾಚಿಕೆಗೊಂಡಿದೆ, ಮೆರೋದಾಕ್ ದೇವತೆಯು ಬೆಚ್ಚಿಬಿದ್ದಿದೆ, ಅದರ ಮೂರ್ತಿಗಳು ಅವಮಾನಕ್ಕೆ ಗುರಿಯಾಗಿವೆ, ಅದರ ಬೊಂಬೆಗಳು ಚೂರುಚೂರಾಗಿವೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

2 “ಜನಾಂಗಗಳಲ್ಲಿ ಪ್ರಚುರಪಡಿಸಿರಿ, ಧ್ವಜವೆತ್ತಿ ಪ್ರಕಟಿಸಿರಿ, ಮರೆಮಾಡದೆ ಹೀಗೆ ಸಾರಿರಿ, ‘ಬಾಬೆಲ್ ಶತ್ರುವಶವಾಯಿತು, ಬೇಲ್ ದೇವತೆಯು ನಾಚಿಕೆಗೊಂಡಿದೆ, ಮೆರೋದಾಕ್ ದೇವತೆಯು ಬೆಚ್ಚಿಬಿದ್ದಿದೆ, ಅದರ ಮೂರ್ತಿಗಳು ಅವಮಾನಕ್ಕೆ ಗುರಿಯಾಗಿವೆ, ಅದರ ಬೊಂಬೆಗಳು ಚೂರುಚೂರಾಗಿವೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

2 “ರಾಷ್ಟ್ರಗಳಲ್ಲಿ ಪ್ರಚುರಪಡಿಸಿರಿ, ಧ್ವಜವೆತ್ತಿ ಪ್ರಕಟಿಸಿರಿ, ಮುಚ್ಚುಮರೆಯಿಲ್ಲದೆ ಹೀಗೆಂದು ಸಾರಿರಿ: ‘ಬಾಬಿಲೋನ್ ಶತ್ರುವಶವಾಯಿತು. ಬೇಲ್ ದೇವತೆ ನಾಚಿಕೆಗೊಂಡಿದೆ. ಮೆರೋದಾಕ್ ದೇವತೆ ಬೆಚ್ಚಿಬಿದ್ದಿದೆ. ಅದರ ಮೂರ್ತಿಗಳು ಅವಮಾನಕ್ಕೆ ಗುರಿಯಾಗಿವೆ. ಅದರ ಬೊಂಬೆಗಳು ಚೂರುಚೂರಾಗಿವೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

2 “ಎಲ್ಲಾ ಜನಾಂಗಗಳಲ್ಲಿ ಪ್ರಚಾರಪಡಿಸಿರಿ, ಒಂದು ಧ್ವಜವನ್ನು ಹಾರಿಸಿ ಈ ಸಂದೇಶವನ್ನೆಲ್ಲಾ ಸಾರಿರಿ. ‘ಬಾಬಿಲೋನ್ ಜನಾಂಗವನ್ನು ವಶಪಡಿಸಿಕೊಳ್ಳಲಾಗುವುದು. ಬೇಲ್ ದೇವತೆ ನಾಚಿಕೆಪಡುವುದು. ಮೆರೋದಾಕ್ ದೇವತೆಯು ಭಯಪಡುವುದು. ಬಾಬಿಲೋನಿನ ವಿಗ್ರಹಗಳು ನಾಚಿಕೆಪಡುವವು. ಅಲ್ಲಿಯ ದೇವತೆಗಳು ಹೆದರಿಕೊಳ್ಳುವವು.’

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

2 “ಜನಾಂಗಗಳಲ್ಲಿ ಪ್ರಚುರಪಡಿಸಿರಿ, ಧ್ವಜವನ್ನೆತ್ತಿ ಪ್ರಕಟಿಸಿರಿ; ಮರೆಮಾಡದೇ ಹೀಗೆ ಸಾರಿರಿ, ‘ಬಾಬಿಲೋನ್ ಶತ್ರುವಶವಾಯಿತು; ಬೇಲ್ ದೇವತೆಗೆ ನಾಚಿಕೆಯಾಯಿತು; ಮೆರೋದಾಕ್ ತುಂಡುತುಂಡಾಗಿ ಮುರಿದು ಹೋದನು. ಅವಳ ವಿಗ್ರಹಗಳಿಗೆ ನಾಚಿಕೆಯಾಯಿತು. ಮತ್ತು ಅವಳ ವಿಗ್ರಹಗಳು ಭಯದಿಂದ ತುಂಬಿವೆ.’

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೆರೆಮೀಯ 50:2
34 ತಿಳಿವುಗಳ ಹೋಲಿಕೆ  

ಬೇಲ್ ದೇವತೆಯು ಬೊಗ್ಗಿದೆ, ನೆಬೋದೇವತೆಯು ಕುಗ್ಗಿದೆ, ಅವುಗಳ ಬೊಂಬೆಗಳು ದನ ಮೊದಲಾದವುಗಳ ಮೇಲೆ ಹೊರಿಸಲ್ಪಟ್ಟಿವೆ, ನೀವು ಮೆರವಣಿಗೆಯಾಗಿ ಹೊರುತ್ತಿದ್ದವುಗಳು ಪಶುಗಳಿಗೆ ಭಾರವಾದ ಹೊರೆಯಾಗಿ ಅವುಗಳನ್ನು ಬಳಲಿಸಿವೆ.


ಇಗೋ, ಸವಾರರು, ಜೋಡಿ ಜೋಡಿಯಾಗಿ ಬರುತ್ತಾರೆ ಎಂದು ಕೂಗಿ ಇನ್ನೂ ಹೇಳಿದ್ದೇನಂದರೆ - ಬಾಬೆಲ್ ಬಿತ್ತು, ಬಿತ್ತು! ಅದರ ದೇವತಾವಿಗ್ರಹಗಳನ್ನು ಒಡೆದು ನೆಲಸಮಮಾಡಿಬಿಟ್ಟರು ಎಂಬದೇ.


ಇದರಿಂದ ನಾನು ಬಾಬೆಲಿನ ಬೊಂಬೆಗಳನ್ನು ದಂಡಿಸುವ ದಿನಗಳು ಬರುತ್ತವೆ ಎಂದು ತಿಳಿದುಕೊಳ್ಳಿರಿ. ಆ ದೇಶವೆಲ್ಲಾ ನಾಚಿಕೆಪಡುವದು; ಅದರ ಪ್ರಜೆಗಳು ಅದರೊಳಗೆ ಹತರಾಗಿ ಬೀಳುವರು.


ನಾನು ಬಾಬೆಲಿನಲ್ಲಿ ಬೇಲ್ ದೇವತೆಯನ್ನು ದಂಡಿಸಿ ಅದು ನುಂಗಿದ್ದನ್ನು ಅದರ ಬಾಯೊಳಗಿಂದ ಕಕ್ಕಿಸುವೆನು; ಪ್ರವಾಹ ಪ್ರವಾಹವಾಗಿ ಬಾಬೆಲಿಗೆ ಬರುತ್ತಿದ್ದ ಸಕಲದೇಶೀಯರು ಇನ್ನು ಮೇಲೆ ಬಾರರು; ಇದಲ್ಲದೆ ಬಾಬೆಲಿನ ಪೌಳಿಗೋಡೆಯು ಬಿದ್ದುಹೋಗುವದು.


ಅವನು ಗಟ್ಟಿಯಾದ ಶಬ್ದದಿಂದ ಕೂಗುತ್ತಾ - ಬಿದ್ದಳು, ಬಿದ್ದಳು, ಬಾಬೆಲೆಂಬ ಮಹಾನಗರಿಯು ಬಿದ್ದಳು; ದೆವ್ವಗಳ ವಾಸಸ್ಥಾನವೂ ಅಶುದ್ಧಾತ್ಮಗಳ ಆಶ್ರಯವೂ ಅಪವಿತ್ರವಾಗಿಯೂ ಅಸಹ್ಯವಾಗಿಯೂ ಇರುವ ಸಕಲ ವಿಧವಾದ ಪಕ್ಷಿಗಳ ಆಶ್ರಯವೂ ಆದಳು.


ಯೆಹೋವನು ಅವರಿಗೆ ಭಯಂಕರವಾಗುವನು; ಲೋಕದ ದೇವರುಗಳನ್ನೆಲ್ಲಾ ಕ್ಷಯಿಸಿಬಿಡುವನು; ಸಮಸ್ತ ಜನರು, ಅಂದರೆ ಸಮುದ್ರ ಪ್ರಾಂತದ ನಿವಾಸಿಗಳಾದ ಸಕಲ ಜನಾಂಗಗಳವರು ತಮ್ಮ ತಮ್ಮ ಸ್ಥಳಗಳಲ್ಲೇ ಆತನನ್ನು ಆರಾಧಿಸುವರು.


ಎವೀಲ್ಮೆರೋದಕನು ತಾನು ಪಟ್ಟಕ್ಕೆ ಬಂದ ಮೊದಲನೆಯ ವರುಷದಲ್ಲಿ ಅಂದರೆ ಯೆಹೂದದ ಅರಸನಾದ ಯೆಹೋಯಾಖೀನನ ಸೆರೆಯ ಮೂವತ್ತೇಳನೆಯ ವರುಷದ ಹನ್ನೆರಡನೆಯ ತಿಂಗಳಿನ ಇಪ್ಪತ್ತೈದನೆಯ ದಿನದಲ್ಲಿ ಯೆಹೋಯಾಖೀನನನ್ನು ಸೆರೆಮನೆಯಿಂದ ಬಿಡಿಸಿ ಅವನನ್ನು ಮೇಲಕ್ಕೆ ಎತ್ತಿದನು.


ಹೀಗಿರಲು ಯೆಹೋವನು ಇಂತೆನ್ನುತ್ತಾನೆ - ಇಗೋ, ನಾನು ಬಾಬೆಲಿನ ಬೊಂಬೆಗಳನ್ನು ದಂಡಿಸುವ ದಿನಗಳು ಬರುತ್ತವೆ; ಆಗ ಆ ದೇಶದಲ್ಲೆಲ್ಲಾ ಗಾಯಪಟ್ಟವರು ನರಳಾಡುವರು.


ಓಡಾಳುಗಳೂ ದೂತರೂ ಓಡಿ ಓಡಿ ಒಬ್ಬರಿಗೊಬ್ಬರು ಎದುರುಬದುರಾಗಿ ಅರಸನನ್ನು ಸೇರಿ ಅವನಿಗೆ - ರಾಜಧಾನಿಯನ್ನು ಎಲ್ಲಾ ಕಡೆಯಲ್ಲಿಯೂ ಆಕ್ರವಿುಸಿದ್ದಾರೆ,


ಬಾಬೆಲ್ ತಟ್ಟನೆ ಬಿದ್ದು ಹಾಳಾಯಿತು! ಅದಕ್ಕಾಗಿ ಅರಿಚಿರಿ; ಅದರ ನೋವನ್ನು ನೀಗಿಸುವದಕ್ಕೆ ಔಷಧವನ್ನು ಸಂಪಾದಿಸಿರಿ, ಗುಣವಾದೀತು.


ಬಾಬೆಲು ಶತ್ರುವಶವಾಯಿತೆಂಬ ಕೋಲಾಹಲಕ್ಕೆ ಭೂವಿುಯು ಕಂಪಿಸುತ್ತದೆ, ಅದರ ಮೊರೆಯು ಜನಾಂಗಗಳಲ್ಲಿ ಕೇಳಿಸುತ್ತದೆ.


ಐಗುಪ್ತದಲ್ಲಿ ಪ್ರಕಟಿಸಿರಿ, ವಿುಗ್ದೋಲ್, ತಹಪನೇಸ್, ನೋಫ್ ಎಂಬೀ ಪಟ್ಟಣಗಳಲ್ಲಿ ಪ್ರಚುರಪಡಿಸಿರಿ - [ಐಗುಪ್ತವೇ,] ಸ್ಥಿರವಾಗಿ ನಿಂತುಕೊಂಡು ಸನ್ನದ್ಧವಾಗು! ಖಡ್ಗವು ನಿನ್ನ ಸುತ್ತಲು ನುಂಗಿಬಿಟ್ಟಿದೆ ಎಂದು ಸಾರಿರಿ.


ಜನಾಂಗಗಳೇ, ಯೆಹೋವನ ವಾಕ್ಯವನ್ನು ಕೇಳಿರಿ, ದೂರದ್ವೀಪಗಳಲ್ಲಿ ಸಾರಿರಿ! ಇಸ್ರಾಯೇಲ್ಯರನ್ನು ಚದರಿಸಿದಾತನು ಕುರುಬನು ಮಂದೆಯನ್ನು ಕಾಯುವ ಕುರುಬನಂತೆ ಅವರನ್ನು ಕೂಡಿಸಿ ಕಾಪಾಡುವನು ಎಂದು ಪ್ರಕಟಿಸಿರಿ.


ಆದಕಾರಣ, ಜನಾಂಗಗಳೇ, ಕೇಳಿರಿ! ಜನಸಮೂಹವೇ, ಅವರಲ್ಲಿ ನಡೆದದ್ದನ್ನು ಮನಸ್ಸಿಗೆ ತಂದುಕೋ!


ಇಗೋ, ಜನಾಂಗಗಳಿಗೆ ಅರುಹಿರಿ, ಮುತ್ತುವವರು ದೂರದೇಶದಿಂದ ಯೆರೂಸಲೇವಿುಗೆ ಬರುತ್ತಾರೆ, ಯೆಹೂದದ ಪಟ್ಟಣಗಳಿಗೆ ವಿರುದ್ಧವಾಗಿ ದನಿಗೈಯುತ್ತಾರೆ, ಎಂದು ಪ್ರಚುರಪಡಿಸಿರಿ.


[ಆಗಲೇ] ಕೇಳಿದಿಯಲ್ಲಾ, [ಈಗ] ನಡೆದದ್ದನ್ನೆಲ್ಲಾ ನೋಡು, ನಿನ್ನವರೇ ಪ್ರಸಿದ್ಧಿಪಡಿಸಲಿ, ಇಂದಿನಿಂದ ಹೊಸ ಸಂಗತಿಗಳನ್ನು, ನೀನು ತಿಳಿಯದಿದ್ದ ಗುಪ್ತ ವಿಷಯಗಳನ್ನು, ನಿನಗೆ ಅರುಹುತ್ತೇನೆ.


ಅದೇ ಕಾಲದಲ್ಲಿ ಬಲದಾನನ ಮಗನೂ ಬಾಬೆಲಿನ ಅರಸನೂ ಆದ ಮೆರೋದಕಬಲದಾನನೆಂಬವನು ಹಿಜ್ಕೀಯನು ಅಸ್ವಸ್ಥನಾಗಿದ್ದು ಗುಣಹೊಂದಿದನು ಎಂದು ಕೇಳಿ ಅವನಿಗೆ ಪತ್ರವನ್ನೂ ಬಹುಮಾನವನ್ನೂ ಕಳುಹಿಸಿದನು.


ಅವರ ದೇವತೆಗಳನ್ನು ಬೆಂಕಿಯಲ್ಲಿ ಹಾಕಿದ್ದು ನಿಜ, ಅವು ದೇವತೆಗಳಲ್ಲ, ಮನುಷ್ಯರು ಕೆತ್ತಿದ ಕಲ್ಲು ಮರಗಳ ಬೊಂಬೆಗಳಷ್ಟೆ; ಆದದರಿಂದಲೇ ಅವು ಅವರಿಂದ ಹಾಳಾದವು.


[ಶತ್ರುಗಳು] ಬಂದು ಪ್ರಭುಗಳ ಪುರದ್ವಾರಗಳಲ್ಲಿ ನುಗ್ಗುವಂತೆ ಬೋಳುಬೆಟ್ಟದ ಮೇಲೆ ಧ್ವಜವೆತ್ತಿರಿ, ಕೂಗಿ ಅವರನ್ನು ಕರೆಯಿರಿ, ಕೈಸನ್ನೆಮಾಡಿರಿ.


ಆ ದಿನದಲ್ಲಿ ನೀವು ಹೇಳುವದೇನಂದರೆ - ಯೆಹೋವನಿಗೆ ಕೃತಜ್ಞತಾಸ್ತುತಿ ಮಾಡಿರಿ, ಆತನ ನಾಮದ ಮಹತ್ವವನ್ನು ವರ್ಣಿಸಿರಿ, ಜನಾಂಗಗಳಲ್ಲಿ ಆತನ ಕೃತ್ಯಗಳನ್ನು ಪ್ರಸಿದ್ಧಪಡಿಸಿರಿ, ಆತನ ನಾಮವು ಉನ್ನತೋನ್ನತವೆಂದು ಜ್ಞಾಪಕಪಡಿಸಿರಿ.


ಜನಾಂಗಗಳಲ್ಲಿ ಆತನ ಘನತೆಯನ್ನೂ ಎಲ್ಲಾ ಜನರಲ್ಲಿ ಆತನ ಅದ್ಭುತಕೃತ್ಯಗಳನ್ನೂ ಪ್ರಸಿದ್ಧಪಡಿಸಿರಿ.


ಎಲ್ಲಾ ಮನುಷ್ಯರು ಭಯಪಟ್ಟು ದೇವರ ಕೆಲಸವೆಂದು ಹೇಳಿ ಆತನ ಕೃತ್ಯಗಳನ್ನು ಆಲೋಚಿಸಿಕೊಳ್ಳುವರು.


ವಿಗ್ರಹಗಳಲ್ಲಿ ಹಿಗ್ಗುವ ಮೂರ್ತಿಪೂಜಕರೆಲ್ಲಾ ತಲೆಬೊಗ್ಗಿಸಲಿ; ದೇವರುಗಳಿರಾ, ನೀವೆಲ್ಲರು ಆತನಿಗೆ ಅಡ್ಡಬೀಳಿರಿ.


ಬಾಬೆಲಿನಿಂದ ಹೊರಡಿರಿ, ಕಸ್ದೀಯರ ಕಡೆಯಿಂದ ಹಾರಿಹೋಗಿರಿ; ಹರ್ಷಧ್ವನಿಯಿಂದ ಇದನ್ನು ತಿಳಿಸಿರಿ, ಪ್ರಕಟಿಸಿರಿ, ಭೂವಿುಯ ಕಟ್ಟಕಡೆಯವರೆಗೂ ಪ್ರಚಾರಪಡಿಸಿರಿ; ಯೆಹೋವನು ತನ್ನ ಸೇವಕನಾದ ಯಾಕೋಬನನ್ನು ವಿಮೋಚಿಸಿದ್ದಾನೆಂದು ಹೇಳಿರಿ.


ಚೀಯೋನಿನ ಕಡೆಗೆ ಧ್ವಜವನ್ನೆತ್ತಿರಿ, ತಡಮಾಡದೆ ವಲಸೆಹೋಗಿರಿ; ನಾನು ಬಡಗಲಿಂದ ವಿಪತ್ತನ್ನೂ ಘೋರನಾಶನವನ್ನೂ ಬರಮಾಡುವೆನು.


ಬಾಬೆಲ್ ಕೋಟೆಗೆ ಎದುರಾಗಿ ಧ್ವಜವೆತ್ತಿರಿ, ಠಾಣ್ಯವನ್ನು ಬಲಪಡಿಸಿರಿ, ಕಾವಲುಗಾರರನ್ನು ನಿಲ್ಲಿಸಿರಿ, ಹೊಂಚುಗಾರರನ್ನು ಗೊತ್ತುಮಾಡಿರಿ; ಯೆಹೋವನು ಬಾಬೆಲಿನವರ ವಿಷಯದಲ್ಲಿ ನುಡಿದದ್ದನ್ನು ಚಿತ್ತಕ್ಕೆ ತಂದು ನೆರವೇರಿಸಿದ್ದಾನೆ.


ದೇಶದಲ್ಲಿ ಧ್ವಜವೆತ್ತಿರಿ, ರಾಜ್ಯಗಳಲ್ಲೆಲ್ಲಾ ಕೊಂಬೂದಿರಿ, ಜನಾಂಗಗಳನ್ನು ಸನ್ನಾಹಮಾಡಿರಿ, ಬಾಬೆಲಿನ ಮೇಲೆ ಬೀಳಲಿಕ್ಕೆ ಅರರಾಟ್, ವಿುನ್ನಿ, ಅಷ್ಕೆನಜ್ ಎಂಬ ರಾಷ್ಟ್ರಗಳನ್ನು ಕರೆದುಕೊಳ್ಳಿರಿ, ಸೋಲಿಸಲು ಸೇನಾಪತಿಯನ್ನು ನೇವಿುಸಿರಿ, ಅಶ್ವಬಲವನ್ನು ಬಿರುಸಾದ ವಿುಡಿತೆದಂಡಿನೋಪಾದಿಯಲ್ಲಿ ಬರಮಾಡಿರಿ.


ಆಗ ಕರ್ತನು ಯೆಹೂದದ ಅರಸನಾದ ಯೆಹೋಯಾಕೀಮನನ್ನೂ ದೇವಾಲಯದ ಅನೇಕ ಪಾತ್ರೆಗಳನ್ನೂ ಅವನ ವಶಕ್ಕೆ ಕೊಡಲು ಅವನು ಅವುಗಳನ್ನು ಶಿನಾರ್ ದೇಶಕ್ಕೆ ಸಾಗಿಸಿ ತನ್ನ ದೇವರ ಮಂದಿರಕ್ಕೆ ತಂದು ಆ ದೇವರ ಭಂಡಾರದಲ್ಲಿ ಸೇರಿಸಿಬಿಟ್ಟನು.


ಹಾಗೆ ಅವರನ್ನು ಹಿಡತರಲು ನೆಬೂಕದ್ನೆಚ್ಚರನು ಅವರಿಗೆ - ಶದ್ರಕ್ ಮೇಶಕ್ ಅಬೇದ್‍ನೆಗೋ ಎಂಬವರೇ, ನೀವು ನನ್ನ ದೇವರನ್ನು ಸೇವಿಸದೆ ನಾನು ನಿಲ್ಲಿಸಿದ ಬಂಗಾರದ ಪ್ರತಿಮೆಯನ್ನು ಪೂಜಿಸದೆ ಇರುವದು ಬೇಕೆಂದೇ ಮಾಡಿದ್ದೋ?


ನೀವು ಅವುಗಳಿಗೆ - ಭೂಮ್ಯಾಕಾಶಗಳನ್ನು ಸೃಷ್ಟಿಸದಿರುವ ದೇವರುಗಳು ಭೂವಿುಯ ಮೇಲಿನಿಂದ, ಆಕಾಶದ ಕೆಳಗಿನಿಂದ, ಅಳಿದುಹೋಗುವವು ಎಂದು ಹೇಳಿರಿ.


ಅವು ವ್ಯರ್ಥ, ಹಾಸ್ಯಾಸ್ಪದವಾದ ಕೆಲಸ; ದಂಡನೆಯಾಗುವಾಗ ಅಳಿದು ಹೋಗುವವು;


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು