Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೆರೆಮೀಯ 50:33 - ಕನ್ನಡ ಸತ್ಯವೇದವು J.V. (BSI)

33 ಸೇನಾಧೀಶ್ವರನಾದ ಯೆಹೋವನು ಇಂತೆನ್ನುತ್ತಾನೆ - ಇಸ್ರಾಯೇಲ್ಯರು ಯೆಹೂದ್ಯರು ಉಭಯರು ಹಿಂಸೆಗೆ ಗುರಿಯಾಗಿದ್ದಾರೆ; ಅವರನ್ನು ಸೆರೆ ಒಯ್ದವರೆಲ್ಲರೂ ಅವರನ್ನು ಬಿಡಿಸಲೊಲ್ಲದೆ ಬಿಗಿಹಿಡಿದಿದ್ದಾರೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

33 ಸೇನಾಧೀಶ್ವರನಾದ ಯೆಹೋವನು ಇಂತೆನ್ನುತ್ತಾನೆ, “ಇಸ್ರಾಯೇಲರು ಮತ್ತು ಯೆಹೂದ್ಯರು ಉಭಯರೂ ಹಿಂಸೆಗೆ ಗುರಿಯಾಗಿದ್ದಾರೆ; ಅವರನ್ನು ಸೆರೆ ಒಯ್ದವರೆಲ್ಲರೂ ಅವರನ್ನು ಬಿಡಿಸಲೊಲ್ಲದೆ ಬಿಗಿಹಿಡಿದಿದ್ದಾರೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

33 ಸೇನಾಧೀಶ್ವರರಾದ ಸರ್ವೇಶ್ವರ ಹೀಗೆ ಎನ್ನುತ್ತಾರೆ: “ಇಸ್ರಯೇಲಿನ ಹಾಗು ಜುದೇಯದ ಜನರಿಬ್ಬರೂ ಹಿಂಸೆಗೆ ಗುರಿಯಾಗಿದ್ದಾರೆ. ಅವರನ್ನು ಸೆರೆಗೆ ಒಯ್ದವರೆಲ್ಲರು ಅವರನ್ನು ಬಿಡುವುದಿಲ್ಲವೆಂದು ಪಟ್ಟುಹಿಡಿದಿದ್ದಾರೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

33 ಸರ್ವಶಕ್ತನಾದ ಯೆಹೋವನು ಹೀಗೆನ್ನುವನು: “ಇಸ್ರೇಲಿನ ಮತ್ತು ಯೆಹೂದದ ಜನರು ಗುಲಾಮರಾಗಿದ್ದಾರೆ. ವೈರಿಯು ಅವರನ್ನು ಹಿಡಿದುಕೊಂಡಿದ್ದಾನೆ. ಆ ವೈರಿಯು ಇಸ್ರೇಲರನ್ನು ಹೋಗಬಿಡುವದಿಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

33 ಸೇನಾಧೀಶ್ವರ ಯೆಹೋವ ದೇವರು ಹೀಗೆ ಹೇಳುತ್ತಾರೆ, “ಇಸ್ರಾಯೇಲರೂ, ಯೆಹೂದ್ಯರೂ ಕೂಡ ಹಿಂಸೆಗೆ ಗುರಿಯಾಗಿದ್ದಾರೆ; ಅವರನ್ನು ಸೆರೆಗೆ ಒಯ್ಯುವವರೆಲ್ಲರು ಅವರನ್ನು ಬಿಟ್ಟುಬಿಡುವುದಿಲ್ಲವೆಂದು, ಬಲವಾಗಿ ಪಟ್ಟುಹಿಡಿದಿದ್ದಾರೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೆರೆಮೀಯ 50:33
16 ತಿಳಿವುಗಳ ಹೋಲಿಕೆ  

ಪಟ್ಟಣಗಳನ್ನು ಕೆಡವಿ ಲೋಕವನ್ನು ಕಾಡನ್ನಾಗಿ ಮಾಡಿ ಸೆರೆಹಿಡಿದವರನ್ನು ಮನೆಗೆ ಬಿಡದೆ ಇದ್ದವನು ಇವನೋ? ಅಂದುಕೊಳ್ಳುವರು.


ನೋಡಿರಿ, ಕೇಡಿನ ಬಂಧಗಳನ್ನು ಬಿಚ್ಚುವದು, ನೊಗದ ಕಣ್ಣಿಗಳನ್ನು ಕಳಚುವದು, ಜಜ್ಜಿಹೋದವರನ್ನು ಬಿಡುಗಡೆಮಾಡುವದು, ನೊಗಗಳನ್ನೆಲ್ಲಾ ಮುರಿಯುವದು,


ನಾನು ನನ್ನ ಜನರ ಮೇಲೆ ರೋಷಗೊಂಡು ಅವರನ್ನು ನಿನ್ನ ಕೈವಶ ಮಾಡಿ ನನ್ನ ಸ್ವಾಸ್ತ್ಯವನ್ನು ಹೊಲೆಗೆಡಿಸಿದೆನು; ನೀನು ಅವರನ್ನು ಹೇಗೂ ಕರುಣಿಸದೆ ಮುದುಕರ ಮೇಲೆಯೂ ಬಹುಭಾರವಾದ ನೊಗವನ್ನು ಹೊರಿಸಿದಿ.


ನಿನ್ನನ್ನು ಬಾಧಿಸುವವರ ಕೈಗೆ ಅದನ್ನು ಕೊಡುವೆನು; ಅವರು ನಿನಗೆ - ನೀನು ಬಿದ್ದುಕೋ, ನಿನ್ನನ್ನು ತುಳಿಯುತ್ತಾ ಹೋಗುವೆವು ಎಂದು ಹೇಳಲು ನೀನು ಹಾದುಹೋಗುವ ಅವರಿಗೆ ನಿನ್ನ ಬೆನ್ನನ್ನು ನೆಲವನ್ನಾಗಿಯೂ ಬೀದಿಯ ಮಣ್ಣನ್ನಾಗಿಯೂ ಮಾಡಿಕೊಂಡಿಯಲ್ಲಾ.


ಅಪ್ಪಣೆಕೊಡದೆ ಹೋದರೆ ನಾನು ನಿನ್ನ ದೇಶಕ್ಕೆಲ್ಲಾ ಕಪ್ಪೆಗಳಿಂದ ಉಪದ್ರವ ಕೊಡುವೆನು.


ಅದಕ್ಕೆ ಫರೋಹನು - ಯೆಹೋವನೆಂಬವನು ಯಾರು? ನಾನು ಅವನ ಮಾತನ್ನು ಕೇಳಿ ಇಸ್ರಾಯೇಲ್ಯರನ್ನು ಹೋಗಗೊಡಿಸುವದೇಕೆ? ಯೆಹೋವನು ಯಾರೋ ನನಗೆ ಗೊತ್ತಿಲ್ಲ. ಇದು ಮಾತ್ರವಲ್ಲದೆ ಇಸ್ರಾಯೇಲ್ಯರು ಹೊರಟುಹೋಗುವದಕ್ಕೆ ನಾನು ಒಪ್ಪುವದೇ ಇಲ್ಲ ಅಂದನು.


ಕಂಡಕಂಡವರೆಲ್ಲರೂ ಅವರನ್ನು ನುಂಗಿಬಿಟ್ಟಿದ್ದಾರೆ; ಅವರ ವಿರೋಧಿಗಳು - ನಾವು ಅವರನ್ನು ನುಂಗಿದ್ದು ದೋಷವಲ್ಲ, ಅವರು ನ್ಯಾಯನಿವಾಸವೆನಿಸಿಕೊಂಡ ಯೆಹೋವನಿಗೆ, ಹೌದು, ತಮ್ಮ ಪಿತೃಗಳ ನಿರೀಕ್ಷೆಯಾದ ಯೆಹೋವನಿಗೆ ಪಾಪಮಾಡಿದರಲ್ಲಾ ಅಂದುಕೊಂಡರು.


ಅವರ ಸಂತಾನವು ಪೂರ್ವದ ಸ್ಥಿತಿಯನ್ನು ಹೊಂದುವದು, ಅವರ ಸಮಾಜವು ನನ್ನ ಮುಂದೆ ನೆಲೆಯಾಗಿರುವದು, ಅವರನ್ನು ಬಾಧಿಸುವವರನ್ನೆಲ್ಲಾ ದಂಡಿಸುವೆನು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು