Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೆರೆಮೀಯ 50:36 - ಕನ್ನಡ ಸತ್ಯವೇದವು J.V. (BSI)

36 ಖಡ್ಗವು ಕೊಚ್ಚಿಕೊಳ್ಳುವವರನ್ನು ಇರಿಯಲಿ! ಅವರ ಬುದ್ಧಿಹೀನತೆಯು ಬೈಲಿಗೆ ಬರುವದು. ಖಡ್ಗವು ಬಾಬೆಲಿನ ಶೂರರನ್ನು ಸಂಹರಿಸಲಿ!

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

36 ಖಡ್ಗವು ಕೊಚ್ಚಿಕೊಳ್ಳುವವರನ್ನು ಇರಿಯಲಿ! ಅವರ ಬುದ್ಧಿಹೀನತೆಯು ಬಯಲಿಗೆ ಬರುವುದು. ಖಡ್ಗವು ಬಾಬೆಲಿನ ಶೂರರನ್ನು ಸಂಹರಿಸಲಿ! ಅವರು ಬೆಚ್ಚಿಬೀಳುವರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

36 ಅದು ಇರಿಯಲಿ ಕೊಚ್ಚಿಕೊಳ್ಳುವವರನ್ನು ಬಯಲಿಗೆಳೆಯಲಿ ಅವರ ಬುದ್ಧಿಹೀನತೆಯನ್ನು ಸಂಹರಿಸಲಿ ಆ ಬಾಬಿಲೋನಿನ ಶೂರರನ್ನು ಬೆಬ್ಬರಬೀಳುವಂತಾಗಿಸಲಿ ಅವರೆಲ್ಲರನ್ನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

36 ಖಡ್ಗವೇ, ಬಾಬಿಲೋನಿನ ಯಾಜಕರನ್ನೂ ಸುಳ್ಳುಪ್ರವಾದಿಗಳನ್ನೂ ಕೊಲ್ಲು! ಅವರು ಮೂರ್ಖರಂತಾಗುವರು. ಖಡ್ಗವೇ, ಬಾಬಿಲೋನಿನ ಸೈನಿಕರನ್ನು ಕೊಲ್ಲು, ಆ ಸೈನಿಕರು ಭಯಭೀತರಾಗಿರುವರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

36 ಸುಳ್ಳು ಪ್ರವಾದಿಗಳ ವಿರೋಧವಾಗಿ ಖಡ್ಗ ಉಂಟು; ಅವರು ಮೂರ್ಖರಾಗುವರು; ಅದರ ಪರಾಕ್ರಮಶಾಲಿಗಳಿಗೆ ವಿರೋಧವಾಗಿ ಖಡ್ಗ ಉಂಟು; ಅವರು ಭಯಭ್ರಾಂತಿ ಪಡುವರು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೆರೆಮೀಯ 50:36
22 ತಿಳಿವುಗಳ ಹೋಲಿಕೆ  

ಇಗೋ, ಬೊಚ್ರದ ಮೇಲೆ ಎರಗಬೇಕೆಂದು ಶತ್ರುವು ರಣಹದ್ದಿನಂತೆ ತನ್ನ ರೆಕ್ಕೆಗಳನ್ನು ಹರಡಿ ಹಾರಿ ಏರುವನು; ಆ ದಿನದಲ್ಲಿ ಎದೋವಿುನ ಶೂರರ ಎದೆಯು ಹೆರುವ ಹೆಂಗಸಿನ ಎದೆಯಂತೆ ಅದರುವದು.


ಆಹಾ, ನಿನ್ನಲ್ಲಿನ ಜನರು ಹೆಣ್ಣಿಗರು; ನಿನ್ನ ದೇಶದ ಬಾಗಿಲುಗಳು ನಿನ್ನ ಶತ್ರುಗಳಿಗೆ ತೆರೆದು ಹಾಕಿವೆ; ಬೆಂಕಿಯು ನಿನ್ನ ಅಗುಳಿಗಳನ್ನು ನುಂಗಿಬಿಟ್ಟಿದೆ.


ನಾನು ಕೊಚ್ಚಿಕೊಳ್ಳುವವರ ಶಕುನಗಳನ್ನು ನಿರರ್ಥಕಪಡಿಸಿ ಕಣಿಹೇಳುವವರನ್ನು ಮರುಳುಗೊಳಿಸಿ ಜ್ಞಾನಿಗಳನ್ನು ಹಿಂದಕ್ಕೆ ತಳ್ಳಿ ಅವರ ತಿಳುವಳಿಕೆಯನ್ನು ಹುಚ್ಚುತನವಾಗಮಾಡಿ


ನಾಯಿಗಳಂತಿರುವವರೂ ಮಾಟಗಾರರೂ ಜಾರರೂ ಕೊಲೆಗಾರರೂ ವಿಗ್ರಹಾರಾಧಕರೂ ಸುಳ್ಳಾದದ್ದನ್ನು ಪ್ರೀತಿಸಿ ನಡಿಸುವವರೆಲ್ಲರೂ ಹೊರಗಿರುವರು ಎಂದು ಹೇಳಿದನು.


ಆದರೆ ಹೇಡಿಗಳು, ನಂಬಿಕೆಯಿಲ್ಲದವರು, ಅಸಹ್ಯವಾದದ್ದರಲ್ಲಿ ಸೇರಿದವರು, ಕೊಲೆಗಾರರು, ಜಾರರು, ಮಾಟಗಾರರು, ವಿಗ್ರಹಾರಾಧಕರು, ಎಲ್ಲಾ ಸುಳ್ಳುಗಾರರು ಇವರಿಗೆ ಸಿಕ್ಕುವ ಪಾಲು ಬೆಂಕಿ ಗಂಧಕಗಳುರಿಯುವ ಕೆರೆಯೇ; ಅದು ಎರಡನೆಯ ಮರಣವು ಎಂದು ನನಗೆ ಹೇಳಿದನು.


ಆಗ ಮೃಗವು ಸೆರೆಸಿಕ್ಕಿತು; ಇದಲ್ಲದೆ ಮೃಗದ ಮುಂದೆ ಮಹತ್ಕಾರ್ಯಗಳನ್ನು ಮಾಡಿ ಮೃಗದ ಗುರುತು ಹಾಕಿಸಿಕೊಂಡವರನ್ನೂ ಅದರ ವಿಗ್ರಹಕ್ಕೆ ನಮಸ್ಕರಿಸಿದವರನ್ನೂ ಮರುಳುಗೊಳಿಸಿದ ಆ ಸುಳ್ಳುಪ್ರವಾದಿಯೂ ಅದರ ಜೊತೆಯಲ್ಲಿ ಸೆರೆಸಿಕ್ಕಿದನು. ಇವರಿಬ್ಬರೂ ಜೀವಸಹಿತವಾಗಿ ಗಂಧಕದಿಂದ ಉರಿಯುವ ಬೆಂಕಿಯ ಕೆರೆಯಲ್ಲಿ ಹಾಕಲ್ಪಟ್ಟರು;


ಅವನು ಒಂದನ್ನೂ ತಿಳಿಯದೆ ಕುತರ್ಕ ವಾಗ್ವಾದಗಳನ್ನು ಮಾಡುವ ಭ್ರಾಂತಿಯಲ್ಲಿದ್ದು ಮದದಿಂದ ಕಣ್ಣುಗಾಣದವನಾಗಿದ್ದಾನೆ. ಇವುಗಳಿಂದ ಹೊಟ್ಟೇಕಿಚ್ಚು ಜಗಳ ದೂಷಣೆ ದುಸ್ಸಂಶಯ ಇವುಗಳು ಉಂಟಾಗುತ್ತವೆ.


ಸುಳ್ಳುಬೋಧಕರು ಬಂದು ಸ್ವಂತ ಮನಸ್ಸಿನಲ್ಲಿ ಅಪರಾಧಿಗಳೆಂಬ ಬರೆಯುಳ್ಳವರಾದರೂ ತಾವು ನೀತಿವಂತರೆಂದು ತೋರ್ಪಡಿಸಿಕೊಂಡು


ನಿನ್ನನ್ನು ನೋಡುವ ಪ್ರತಿಯೊಬ್ಬನು ನಿನ್ನ ಕಡೆಯಿಂದ ಓಡಿಹೋಗಿ - ನಿನೆವೆಯೂ ಹಾಳಾಯಿತಲ್ಲಾ, ಯಾರು ಗೋಳಾಡಾರು, ನಿನ್ನನ್ನು ಸಂತೈಸತಕ್ಕವರು ನನಗೆ ಎಲ್ಲಿ ಸಿಕ್ಕಾರು ಅಂದುಕೊಳ್ಳುವನು.


ಪುರಾತನಕಾಲದಿಂದ ನಿನೆವೆಯು ನೀರು ತುಂಬಿದ ಕೆರೆಯಂತೆ ಇರುತ್ತದೆ; ಆಹಾ, [ಒಡೆದು ಓಡುವ ನೀರಿನಂತೆ ಅದರ ನಿವಾಸಿಗಳು] ಓಡಿಹೋಗುತ್ತಾರೆ; ನಿಲ್ಲಿರಿ, ನಿಲ್ಲಿರಿ [ಎಂದು ಅಪ್ಪಣೆಯಾದರೂ] ಯಾರೂ ಹಿಂದೆ ನೋಡರು.


ಹಾಯ್ಗಡಗಳನ್ನು ಹಿಡಿದಿದ್ದಾರೆ, ಜೊಂಡುಹುಲ್ಲನ್ನು ಸುಟ್ಟುಬಿಟ್ಟಿದ್ದಾರೆ, ರಣವೀರರು ಬೆಚ್ಚಿಬಿದ್ದಿದ್ದಾರೆ ಎಂದು ತಿಳಿಸುವರು.


ಬಾಬೆಲಿನ ಶೂರರು ಯುದ್ಧಕ್ಕೆ ಹಿಂದೆಗೆದು ಹೆಂಗಸರಂತೆ ಅಬಲರಾಗಿ ತಮ್ಮ ಕೋಟೆಗಳಲ್ಲಿ ನಿಂತಿದ್ದಾರೆ; ಅದರ ಮನೆಗಳಿಗೆ ಬೆಂಕಿಯಿಕ್ಕಿದೆ, ಅದರ ಅಗುಳಿಗಳು ಮುರಿದುಹೋಗಿವೆ;


ನಿನ್ನಿಂದ ಕುರುಬರನ್ನೂ ಹಿಂಡನ್ನೂ ಒಡೆದುಬಿಡುತ್ತೇನೆ; ನಿನ್ನಿಂದ ರೈತನನ್ನೂ ನೊಗದ ಎತ್ತುಗಳನ್ನೂ ಒಡೆದುಬಿಡುತ್ತೇನೆ; ನಿನ್ನಿಂದ ದೇಶಾಧಿಪತಿಗಳನ್ನೂ ನಾಡೊಡೆಯರನ್ನೂ ಒಡೆದುಬಿಡುತ್ತೇನೆ;


ಆದಕಾರಣ ಆ ದಿನದಲ್ಲಿ ಅಲ್ಲಿನ ಯೌವನಸ್ಥರು ಚೌಕಗಳಲ್ಲಿ ಬಿದ್ದುಬಿಡುವರು, ಯುದ್ಧವೀರರೆಲ್ಲಾ ಸುಮ್ಮನಾಗುವರು; ಇದು ಯೆಹೋವನ ನುಡಿ.


ಯೆಹೋವನು ಹೇಳುವದೇನಂದರೆ - ಅವರ ಗರ್ವೋದ್ರೇಕವು ನನಗೆ ಗೊತ್ತು. ಅದು ಬರೀ ಬುರುಡೆಯೇ; ಅವರು ಕೊಚ್ಚಿಕೊಳ್ಳುವದೆಲ್ಲಾ ನಿರರ್ಥಕ ಎಂಬದೇ.


ನಿಮ್ಮ ವಿಮೋಚಕನೂ ಇಸ್ರಾಯೇಲ್ಯರ ಸದಮಲಸ್ವಾವಿುಯೂ ಆದ ಯೆಹೋವನು ಹೀಗನ್ನುತ್ತಾನೆ - ನಾನು ನಿಮಗೋಸ್ಕರ [ದೂತನನ್ನು] ಬಾಬೆಲಿಗೆ ಕಳುಹಿಸಿ ಕಸ್ದೀಯರನ್ನೆಲ್ಲಾ ತಮ್ಮ ವಿನೋದದ ಹಡಗುಗಳ ಮೇಲೆ ಪಲಾಯಿತರನ್ನಾಗಿ ಅಟ್ಟಿಬಿಡುವೆನು.


ಈ ಮಾತನ್ನು ಹೇಳಿದ ಪ್ರವಾದಿಗೆ ಅರಸನು - ನಿನ್ನನ್ನು ರಾಜಮಂತ್ರಿಯನ್ನಾಗಿ ನೇವಿುಸಿದ್ದೇವೋ? ಸುಮ್ಮನಿರು, ನಿನಗೆ ಪೆಟ್ಟು ಬೇಕೋ ಅನ್ನಲು ಅವನು - ನೀನು ನನ್ನ ಬುದ್ಧಿವಾದವನ್ನು ಲಾಲಿಸದೆ ಹೀಗೆ ಮಾಡುವದರಿಂದ ದೇವರು ನಿನ್ನನ್ನು ನಾಶಮಾಡಬೇಕೆಂದು ನಿಶ್ಚಯಿಸಿಕೊಂಡಿದ್ದಾನೆಂಬದಾಗಿ ನನಗೆ ತಿಳಿಯಬಂತು ಎಂದು ಹೇಳಿ ಸುಮ್ಮನಾದನು.


ಇದನ್ನು ಕೇಳಿ ಅಬ್ಷಾಲೋಮನೂ ಎಲ್ಲಾ ಇಸ್ರಾಯೇಲ್ಯರೂ ಅರ್ಕೀಯನಾದ ಹೂಷೈಯ ಆಲೋಚನೆಯು ಅಹೀತೋಫೆಲನ ಆಲೋಚನೆಗಿಂತ ಒಳ್ಳೇದಾಗಿದೆ ಎಂದರು. ಯೆಹೋವನು ಅಬ್ಷಾಲೋಮನಿಗೆ ಕೇಡನ್ನುಂಟು ಮಾಡಬೇಕೆಂದು ಅಹೀತೋಫೆಲನ ಆಲೋಚನೆಯನ್ನು ವ್ಯರ್ಥಮಾಡಿದನು.


ಅಬ್ಷಾಲೋಮನ ಸಂಗಡ ಒಳಸಂಚುಮಾಡಿದವರಲ್ಲಿ ಅಹೀತೋಫೆಲನೂ ಇದ್ದಾನೆಂಬ ವರ್ತಮಾನವು ದಾವೀದನಿಗೆ ಮುಟ್ಟಿದಾಗ ಅವನು - ಯೆಹೋವನೇ, ಅಹೀತೋಫೆಲನ ಆಲೋಚನೆಗಳನ್ನು ನಿರರ್ಥಕಪಡಿಸು ಎಂದು ಪ್ರಾರ್ಥಿಸಿದನು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು