Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೆರೆಮೀಯ 50:42 - ಕನ್ನಡ ಸತ್ಯವೇದವು J.V. (BSI)

42 ಬಿಲ್ಲನ್ನೂ ಈಟಿಯನ್ನೂ ಹಿಡಿದುಕೊಂಡಿದ್ದಾರೆ, ಅವರು ಕ್ರೂರರು, ನಿಷ್ಕರುಣಿಗಳು; ಅವರ ಧ್ವನಿಯು ಸಮುದ್ರದಂತೆ ಮೊರೆಯುತ್ತದೆ, ಕುದುರೆ ಹತ್ತಿದ್ದಾರೆ; ಬಾಬೆಲ್ ನಗರಿಯೇ, ಆ ಸೈನ್ಯವು ಶೂರನಂತೆ ನಿನ್ನ ಮೇಲೆ ಯುದ್ಧಸನ್ನದ್ಧವಾಗಿದೆ ಎಂದು ಯೆಹೋವನು ಅನ್ನುತ್ತಾನೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

42 ಬಿಲ್ಲನ್ನೂ ಮತ್ತು ಈಟಿಯನ್ನೂ ಹಿಡಿದುಕೊಂಡಿದ್ದಾರೆ, ಅವರು ಕ್ರೂರರು, ನಿಷ್ಕರುಣಿಗಳು; ಅವರ ಧ್ವನಿಯು ಸಮುದ್ರದಂತೆ ಮೊರೆಯುತ್ತದೆ, ಕುದುರೆ ಹತ್ತಿದ್ದಾರೆ; ಬಾಬೆಲ್ ನಗರಿಯೇ, ಆ ಸೈನ್ಯವು ಶೂರನಂತೆ ನಿನ್ನ ಮೇಲೆ ಯುದ್ಧಸನ್ನದ್ಧವಾಗಿದೆ” ಎಂದು ಯೆಹೋವನು ಅನ್ನುತ್ತಾನೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

42 ಆ ಕ್ರೂರಿಗಳು, ಆ ನಿಷ್ಕರುಣಿಗಳು ಹಿಡಿದುಕೊಂಡಿರುವರು ಬಿಲ್ಲನ್ನೂ ಈಟಿಯನ್ನೂ. ಅವರ ಧ್ವನಿ ಮೊರೆಯುತ್ತದೆ ಸಮುದ್ರದಂತೆ ಕುದುರೆ ಸವಾರಿ ತೊಡಗಲಿದೆ. ಬಾಬಿಲೋನ್ ನಗರಿಯೇ, ಕೇಳು, ಆ ಸೈನ್ಯ ಶೂರವೀರರಿಂದ ಕೂಡಿದೆ. ಅದು ನಿನ್ನ ಮೇಲೆ ಯುದ್ಧಸನ್ನದ್ಧವಾಗಿದೆ. ಸರ್ವೇಶ್ವರನಾದ ನನ್ನ ನುಡಿ ಇದು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

42 ಅವರ ಸೈನಿಕರ ಹತ್ತಿರ ಬಿಲ್ಲುಗಳು ಮತ್ತು ಭರ್ಜಿಗಳು ಇವೆ. ಆ ಸೈನಿಕರು ಕ್ರೂರಿಗಳಾಗಿದ್ದಾರೆ. ಅವರಿಗೆ ದಯೆದಾಕ್ಷಿಣ್ಯ ಇಲ್ಲ. ಆ ಸೈನಿಕರು ತಮ್ಮ ಕುದುರೆಗಳ ಮೇಲೆ ಬರುತ್ತಿದ್ದಾರೆ. ಅವರ ಧ್ವನಿ ಆರ್ಭಟಿಸುವ ಸಮುದ್ರದಂತಿದೆ. ಅವರು ಯುದ್ಧಕ್ಕೆ ಸಿದ್ಧರಾಗಿ ತಮ್ಮತಮ್ಮ ಸ್ಥಳಗಳಲ್ಲಿ ನಿಂತುಕೊಂಡಿದ್ದಾರೆ. ಬಾಬಿಲೋನ್ ನಗರವೇ, ಅವರು ನಿನ್ನ ಮೇಲೆ ಧಾಳಿಮಾಡಲು ಸಿದ್ಧರಾಗಿದ್ದಾರೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

42 ಅವರು ಬಿಲ್ಲನ್ನೂ, ಭಲ್ಲೆಯನ್ನೂ ಹಿಡಿದುಕೊಂಡಿದ್ದಾರೆ. ಅವರು ಕ್ರೂರರು, ಕನಿಕರ ತೋರಿಸುವುದಿಲ್ಲ. ಅವರ ಶಬ್ದವು ಸಮುದ್ರದ ಹಾಗೆ ಭೋರ್ಗರೆಯುತ್ತದೆ. ಬಾಬಿಲೋನಿನ ಮಗಳೇ, ನಿನಗೆ ವಿರೋಧವಾಗಿಯೇ ಯುದ್ಧಮಾಡುವುದಕ್ಕೆ ಸಿದ್ಧವಾಗಿರುವ ಶೂರರಂತೆ ಕುದುರೆಗಳನ್ನು ಹತ್ತಿಕೊಂಡು ಬರುತ್ತಿದ್ದಾರೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೆರೆಮೀಯ 50:42
23 ತಿಳಿವುಗಳ ಹೋಲಿಕೆ  

ಸಮುದ್ರವು ಭೋರ್ಗರೆಯುವಂತೆ ಆ ದಿನದಲ್ಲಿ ಇವರು ಯೆಹೂದ್ಯರ ಮೇಲೆ ಗುರುಗುಟ್ಟುವರು; ದೇಶದಲ್ಲಿಯೋ, ಆಹಾ, ಅಂಧಕಾರವೂ ವ್ಯಾಕುಲವೂ ತುಂಬಿರುವವು, ಮೋಡ ಕವಿದು ಬೆಳಕು ಕತ್ತಲಾಗುವದು.


ಶತ್ರುವಿನ ತುರಗಗಳ ಗೊರಸುಗಳು ನೆಲವನ್ನು ಅಪ್ಪಳಿಸುವ ಶಬ್ದಕ್ಕೂ, ರಥಗಳ ರಭಸಕ್ಕೂ, ಚಕ್ರಗಳ ಬಿರುಗುಟ್ಟುವಿಕೆಗೂ ತಂದೆಗಳು ಹೆದರುತ್ತಾ ಜೋಲುಗೈಯವರಾಗಿ ತಮ್ಮ ಮಕ್ಕಳನ್ನು ಹಿಂದಿರುಗಿ ನೋಡರು;


ವೈರಿಯ ಕುದುರೆಗಳ ಬುಸುಗಾಟವು ದಾನಿನಿಂದ ಕೇಳಬರುತ್ತದೆ; ತುರಂಗಗಳ ಕೆನೆತದ ಶಬ್ದಕ್ಕೆ ದೇಶವೆಲ್ಲಾ ಕಂಪಿಸುತ್ತದೆ; ಶತ್ರುಗಳು ಬಂದರು, ಸೀಮೆಯನ್ನೂ ಅದರಲ್ಲಿರುವ ಸಮಸ್ತವನ್ನೂ ಪಟ್ಟಣವನ್ನೂ ಪಟ್ಟಣದ ನಿವಾಸಿಗಳನ್ನೂ ನುಂಗಿಬಿಟ್ಟರು.


ನಾನು ನನ್ನ ಜನರ ಮೇಲೆ ರೋಷಗೊಂಡು ಅವರನ್ನು ನಿನ್ನ ಕೈವಶ ಮಾಡಿ ನನ್ನ ಸ್ವಾಸ್ತ್ಯವನ್ನು ಹೊಲೆಗೆಡಿಸಿದೆನು; ನೀನು ಅವರನ್ನು ಹೇಗೂ ಕರುಣಿಸದೆ ಮುದುಕರ ಮೇಲೆಯೂ ಬಹುಭಾರವಾದ ನೊಗವನ್ನು ಹೊರಿಸಿದಿ.


ಅವರು ದೇವಜನರ ಮತ್ತು ಪ್ರವಾದಿಗಳ ರಕ್ತವನ್ನು ಸುರಿಸಿದರು; ನೀನು ಅವರಿಗೆ ರಕ್ತವನ್ನೇ ಕುಡಿಯುವದಕ್ಕೆ ಕೊಟ್ಟಿದ್ದೀ; ಇದಕ್ಕೆ ಅವರು ಪಾತ್ರರು ಎಂದು ಹೇಳುವದನ್ನು ಕೇಳಿದೆನು.


ಕರುಣೆತೋರಿಸದೆ ಇರುವವನಿಗೆ ನ್ಯಾಯತೀರ್ಮಾನದಲ್ಲಿ ಕರುಣೆಯು ತೋರಿಸಲ್ಪಡುವದಿಲ್ಲ. ಕರುಣೆಯು ನ್ಯಾಯತೀರ್ಮಾನವನ್ನು ಗೆದ್ದು ಹಿಗ್ಗುತ್ತದೆ.


ಬಿಲ್ಲುಗಾರರೇ, ನೀವೆಲ್ಲರೂ ವ್ಯೂಹಕಟ್ಟಿ ಬಾಬೆಲಿಗೆ ಮುತ್ತಿಗೆ ಹಾಕಿರಿ, ಬಾಣಗಳನ್ನು ವಿುಗಿಸದೆ ಎಸೆಯಿರಿ; ಅದು ಯೆಹೋವನಿಗೆ ಪಾಪಮಾಡಿತಲ್ಲಾ.


ಆಳುತ್ತಿದ್ದ ದುಷ್ಟರ ಕೋಲನ್ನೂ ರಾಜರ ದಂಡವನ್ನೂ ಯೆಹೋವನು ಮುರಿದುಬಿಟ್ಟನು.


ಅವರ ಅಂಬುಗಳು ಮೊನೆಯಾಗಿವೆ, ಬಿಲ್ಲುಗಳು ಬಿಗಿದಿವೆ; ಕುದುರೆಗಳ ಗೊರಸೆಗಳು ಕಲ್ಲಿನಂತಿವೆ; ಚಕ್ರಗಳು ಬಿರುಗಾಳಿಯಂತೆ ರಭಸವಾಗಿವೆ;


ನಿನ್ನ ಒಡಂಬಡಿಕೆಯನ್ನು ಲಕ್ಷ್ಯಕ್ಕೆ ತಂದುಕೋ. ದೇಶದ ಅಂಧಕಾರಸ್ಥಾನಗಳಲ್ಲಿ ಬಲಾತ್ಕಾರವು ತುಂಬಿ ವಾಸಿಸುತ್ತದಲ್ಲಾ.


ಜನಾಂಗಗಳು ಕಳವಳಗೊಂಡವು; ರಾಜ್ಯಗಳು ತತ್ತರಿಸಿದವು. ಆತನು ಗರ್ಜಿಸಲು ಭೂಲೋಕವೆಲ್ಲಾ ಕರಗಿಹೋಯಿತು.


ಯುವತಿಯೇ, ಬಾಬೆಲ್‍ಪುರಿಯೇ, ಕೆಳಕ್ಕಿಳಿದು ಧೂಳಿನಲ್ಲಿ ಕೂತುಕೋ, ಕಸ್ದೀಯರ ನಗರಿಯೇ, ಸಿಂಹಾಸನರಹಿತಳಾಗಿ ನೆಲದ ಮೇಲೆ ಕುಕ್ಕರಿಸು! ನೀನು ಇನ್ನು ಕೋಮಲೆ, ಸುಕುಮಾರಿ, ಎಂದು ಎನಿಸಿಕೊಳ್ಳೆ.


ನಿನ್ನ ವಿುಂಡರಾರೂ ನಿನ್ನನ್ನು ಹುಡುಕುವದಿಲ್ಲ, ಮರೆತುಬಿಟ್ಟರು; ನಿನ್ನ ಅಪರಾಧವು ಹೆಚ್ಚಿ ಪಾಪಗಳು ಬಹಳವಾದದರಿಂದ ನಾನು ಶತ್ರುವಾಗಿ ನಿನ್ನನ್ನು ಹೊಡೆದೆನು, ಕ್ರೂರನಾಗಿ ದಂಡಿಸಿದೆನು.


ಇಗೋ, ನಾನು ಮಹಾ ಜನಾಂಗಗಳ ಸಮೂಹವನ್ನು ಎಬ್ಬಿಸಿ ಬಡಗಲಿಂದ ಬಾಬೆಲಿನ ಮೇಲೆ ಬೀಳಮಾಡುವೆನು; ಅವು ಬಾಬೆಲಿಗೆ ವಿರುದ್ಧವಾಗಿ ವ್ಯೂಹ ಕಟ್ಟಿ ಅದನ್ನು ಸ್ಥಳದೊಳಗಿಂದ ಕಿತ್ತುಬಿಡುವವು; ಅವುಗಳ ಬಾಣಗಳು ಸುಮ್ಮನೆ ಹಿಂದಿರುಗದ ಯುದ್ಧಪ್ರವೀಣ ಶೂರನಂತಿರುವವು.


ದೇಶದಲ್ಲಿ ಧ್ವಜವೆತ್ತಿರಿ, ರಾಜ್ಯಗಳಲ್ಲೆಲ್ಲಾ ಕೊಂಬೂದಿರಿ, ಜನಾಂಗಗಳನ್ನು ಸನ್ನಾಹಮಾಡಿರಿ, ಬಾಬೆಲಿನ ಮೇಲೆ ಬೀಳಲಿಕ್ಕೆ ಅರರಾಟ್, ವಿುನ್ನಿ, ಅಷ್ಕೆನಜ್ ಎಂಬ ರಾಷ್ಟ್ರಗಳನ್ನು ಕರೆದುಕೊಳ್ಳಿರಿ, ಸೋಲಿಸಲು ಸೇನಾಪತಿಯನ್ನು ನೇವಿುಸಿರಿ, ಅಶ್ವಬಲವನ್ನು ಬಿರುಸಾದ ವಿುಡಿತೆದಂಡಿನೋಪಾದಿಯಲ್ಲಿ ಬರಮಾಡಿರಿ.


ಕರ್ತನಾದ ಯೆಹೋವನು ಇಂತೆನ್ನುತಾನೆ - ಇಗೋ, ತೂರೇ, ನಿನಗೆ ವಿರುದ್ಧನಾಗಿದ್ದೇನೆ; ಸಮುದ್ರವು ತೆರೆಗಳನ್ನು ಎಬ್ಬಿಸುವಂತೆ ನಾನು ಬಹುಜನಾಂಗಗಳನ್ನು ನಿನ್ನ ಮೇಲೆ ಎಬ್ಬಿಸುವೆನು.


ಪರ್ವತಾಗ್ರಗಳಲ್ಲಿ ಅವು ಹಾರಾಡುವ ಶಬ್ದವು ರಥಗಳ ಚೀತ್ಕಾರದಂತೆಯೂ ಕೂಳೆಯನ್ನು ನುಂಗುವ ಬೆಂಕಿಯ ಚಟಪಟ ಧ್ವನಿಯ ಹಾಗೂ ಕೇಳಿಸುತ್ತದೆ; ಅವು ವ್ಯೂಹಕಟ್ಟಿಕೊಂಡ ಪ್ರಬಲವಾದ ಸೈನ್ಯವೇ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು