Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೆರೆಮೀಯ 51:21 - ಕನ್ನಡ ಸತ್ಯವೇದವು J.V. (BSI)

21 ನಿನ್ನಿಂದ ರಾಜ್ಯಗಳನ್ನು ಅಳಿಸುತ್ತೇನೆ; ನಿನ್ನಿಂದ ಕುದುರೆಯನ್ನೂ ಸವಾರನನ್ನೂ ಒಡೆದುಬಿಡುತ್ತೇನೆ; ನಿನ್ನಿಂದ ರಥವನ್ನೂ ಸಾರಥಿಯನ್ನೂ ಒಡೆದುಬಿಡುತ್ತೇನೆ; ನಿನ್ನಿಂದ ಸ್ತ್ರೀಪುರುಷರನ್ನು ಒಡೆದುಬಿಡುತ್ತೇನೆ;

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

21 ನಿನ್ನಿಂದ ರಾಜ್ಯಗಳನ್ನು ಅಳಿಸುತ್ತೇನೆ; ನಿನ್ನಿಂದ ಕುದುರೆಯನ್ನೂ ಮತ್ತು ಸವಾರನನ್ನೂ ಅಳಿಸಿಬಿಡುತ್ತೇನೆ; ನಿನ್ನಿಂದ ರಥವನ್ನೂ, ಸಾರಥಿಯನ್ನೂ ನಾಶಮಾಡುತ್ತೇನೆ;

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

21 ಈ ಗದೆಯಿಂದ ಒಡೆದುಬಿಡುವೆನು ಕುದುರೆಯನ್ನೂ ಸವಾರನನ್ನೂ,

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

21 ಕುದುರೆಗಳನ್ನೂ ಅದರ ಸವಾರರನ್ನೂ ಜಜ್ಜಿಹಾಕಲು ನಾನು ನಿನ್ನನ್ನು ಬಳಸುತ್ತೇನೆ. ರಥಗಳನ್ನೂ ಸಾರಥಿಗಳನ್ನೂ ಪುಡಿಪುಡಿ ಮಾಡಲು ನಾನು ನಿನ್ನನ್ನು ಬಳಸುತ್ತೇನೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

21 ನಿನ್ನಿಂದ ಕುದುರೆಯನ್ನೂ, ಅದರ ಮೇಲೆ ಹತ್ತಿದವನನ್ನೂ ಚೂರುಚೂರಾಗಿ ಒಡೆದು ಬಿಡುತ್ತೇನೆ; ನಿನ್ನಿಂದ ರಥವನ್ನೂ, ಅದರಲ್ಲಿ ಸವಾರಿ ಮಾಡುವವನನ್ನೂ ಚೂರುಚೂರಾಗಿ ಒಡೆದು ಬಿಡುತ್ತೇನೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೆರೆಮೀಯ 51:21
14 ತಿಳಿವುಗಳ ಹೋಲಿಕೆ  

ಆಗ ಮೋಶೆಯೂ ಇಸ್ರಾಯೇಲ್ಯರೂ ಯೆಹೋವನ ಸ್ತೋತ್ರಕ್ಕಾಗಿ ಈ ಕೀರ್ತನೆಯನ್ನು ಹಾಡಿದರು - ಯೆಹೋವನ ಸ್ತೋತ್ರವನ್ನು ಗಾನ ಮಾಡೋಣ; ಆತನು ಮಹಾ ಜಯಶಾಲಿಯಾದನು; ಕುದುರೆಗಳನ್ನೂ ರಾಹುತರನ್ನೂ ಸಮುದ್ರದಲ್ಲಿ ಕೆಡವಿನಾಶ ಮಾಡಿದ್ದಾನೆ.


ಇವರು ವೀರರಾಗಿ ರಣದೊಳಗೆ [ಶತ್ರುಗಳನ್ನು] ಬೀದಿಗಳ ಕೆಸರಿನಲ್ಲಿ ತುಳಿದುಬಿಡುವರು; ಯೆಹೋವನು ತಮ್ಮ ಸಂಗಡ ಇದ್ದಾನೆಂದು ಯುದ್ಧಮಾಡುವರು; ಎದುರಿಸುವ ಸವಾರರು ಭಂಗಪಡುವರು.


ಯೆಹೋವನು ಇಂತೆನ್ನುತ್ತಾನೆ - ಆ ದಿನದಲ್ಲಿ ನಾನು ಎಲ್ಲಾ ಕುದುರೆಗಳಿಗೆ ತಬ್ಬಿಬ್ಬನ್ನು ಉಂಟುಮಾಡುವೆನು, ಸವಾರರನ್ನು ಭ್ರಮೆಗೊಳಿಸುವೆನು; ಯೆಹೂದವಂಶವನ್ನು ಕಟಾಕ್ಷಿಸಿ ಜನಾಂಗಗಳ ಅಶ್ವಗಳನ್ನೆಲ್ಲಾ ಕುರುಡು ಮಾಡುವೆನು.


ರಾಜ್ಯಗಳ ಸಿಂಹಾಸನವನ್ನು ಕೆಡವಿ ಜನಾಂಗಗಳ ಸಂಸ್ಥಾನಬಲವನ್ನು ಧ್ವಂಸ ಮಾಡಿ ರಥಗಳನ್ನೂ ರಥಾರೂಢರನ್ನೂ ದೊಬ್ಬಿಬಿಡುವೆನು; ಕುದುರೆಗಳೂ ರಾಹುತರೂ ಬಿದ್ದು ಹೋಗುವರು, ಪ್ರತಿಯೊಬ್ಬನು ತನ್ನ ಕಡೆಯವನ ಕತ್ತಿಯಿಂದ ಹತನಾಗುವನು.


ಸೇನಾಧೀಶ್ವರನಾದ ಯೆಹೋವನು ಇಂತೆನ್ನುತ್ತಾನೆ - ಆಹಾ, ನಾನು ನಿನಗೆ ವಿರುದ್ಧನಾಗಿದ್ದೇನೆ, ನಿನ್ನ ರಥಗಳನ್ನು ಸುಟ್ಟು ಹೊಗೆಹಾಯಿಸುವೆನು, ಕತ್ತಿಯು ನಿನ್ನ ಪ್ರಾಯದ ಸಿಂಹಗಳನ್ನು ನುಂಗಿಬಿಡುವದು; ನಿನಗೆ ಸಿಕ್ಕಿದ ಬೇಟೆಯನ್ನು ಲೋಕದೊಳಗಿಂದ ನಿರ್ಮೂಲಮಾಡುವೆನು, ನಿನ್ನ ರಾಯಭಾರಿಗಳ ಧ್ವನಿಯು ಇನ್ನು ಕೇಳಿಸದು.


ಯೆಹೋವನು ಇಂತೆನ್ನುತ್ತಾನೆ - ಆ ದಿನದಲ್ಲಿ ನಿನ್ನ ಕುದುರೆಗಳನ್ನು ನಿನ್ನೊಳಗಿಂದ ಕಡಿದುಬಿಡುವೆನು, ನಿನ್ನ ರಥಗಳನ್ನು ನಾಶಗೊಳಿಸುವೆನು;


ರಾಜರ ಮಾಂಸವನ್ನೂ ಸಹಸ್ರಾಧಿಪತಿಗಳ ಮಾಂಸವನ್ನೂ ಪರಾಕ್ರಮಶಾಲಿಗಳ ಮಾಂಸವನ್ನೂ ಕುದುರೆಗಳ ಮಾಂಸವನ್ನೂ ರಾಹುತರ ಮಾಂಸವನ್ನೂ, ಸ್ವತಂತ್ರರೂ ದಾಸರೂ ದೊಡ್ಡವರೂ ಚಿಕ್ಕವರೂ ಇವರೆಲ್ಲರ ಮಾಂಸವನ್ನೂ ತಿನ್ನುವದಕ್ಕೆ ಬನ್ನಿರಿ ಎಂದು ಹೇಳಿದನು.


ಲೋಕದ ಎಲ್ಲಾ ಭಾಗದಲ್ಲೂ ಯುದ್ಧವನ್ನು ನಿಲ್ಲಿಸಿಬಿಟ್ಟಿದ್ದಾನೆ; ಬಿಲ್ಲುಗಳನ್ನೂ ಭಲ್ಲೆಯಗಳನ್ನೂ ಮುರಿದುಹಾಕಿದ್ದಾನೆ; ರಥಗಳನ್ನು ದಹಿಸಿಬಿಟ್ಟಿದ್ದಾನೆ.


ನಾನು ಸಿದ್ಧಪಡಿಸುವ ಆ ಔತಣದಲ್ಲಿ ಕುದುರೆ ರಾಹುತ ಶೂರ ಸಕಲ ವಿಧವಾದ ಸೈನಿಕ ಇವರನ್ನು ಬೇಕಾದಷ್ಟು ಭಕ್ಷಿಸುವಿರಿ; ಇದು ಕರ್ತನಾದ ಯೆಹೋವನ ನುಡಿ.


ಅವರು ಬೆಬ್ಬರಬೀಳುವರು. ಖಡ್ಗವು ಅವರ ಅಶ್ವಗಳನ್ನೂ ರಥಗಳನ್ನೂ ಬಾಬೆಲಿನಲ್ಲಿರುವ ಬಗೆಬಗೆಯ ವಿದೇಶೀಯರನ್ನೆಲ್ಲ ಹೊಡೆಯಲಿ! ಅವರು ಹೆಂಗಸರಂತೆ ಬೆದರುವರು, ಖಡ್ಗವು ಅವರ ಸಂಪತ್ತನ್ನು ನುಂಗಲಿ! ಅವರು ಸೂರೆಗೆ ಈಡಾಗುವರು.


ಯಾಕೋಬವಂಶದವರ ದೇವರೇ, ನಿನ್ನ ಗದರಿಕೆಯಿಂದ ರಥಬಲವೂ ಅಶ್ವಬಲವೂ ಮೈಮರೆತು ಬಿದ್ದವು.


ವಿುರ್ಯಾಮಳು ಅವರ ಹಾಡಿಗೆ ಹೀಗೆ ಪಲ್ಲವಿ ಹಾಡಿದಳು- ಯೆಹೋವನನ್ನು ಗಾನಮಾಡಿರಿ; ಆತನು ಮಹಾಜಯಶಾಲಿಯಾದನು; ಕುದುರೆಗಳನ್ನೂ ರಾಹುತರನ್ನೂ ಸಮುದ್ರದಲ್ಲಿ ಕೆಡವಿ ನಾಶಮಾಡಿದ್ದಾನೆ.


ಆತನು ಫರೋಹನ ರಥಗಳನ್ನೂ ಸೈನಿಕರನ್ನೂ ಸಮುದ್ರದಲ್ಲಿ ಕೆಡವಿದನು; ಅವನ ಶ್ರೇಷ್ಠವೀರರನ್ನು ಕೆಂಪುಸಮುದ್ರದಲ್ಲಿ ಮುಳುಗಿಸಿಬಿಟ್ಟನು.


ಯಾವನು ಅಶ್ವರಥಭಟಸೈನ್ಯಗಳನ್ನು ಹೊರಡಿಸಿ ಅವು ಬಿದ್ದು ಏಳಲಾರದಂತೆಯೂ ದೀಪದೋಪಾದಿಯಲ್ಲಿ ನಂದಿ ಆರಿಹೋಗುವಂತೆಯೂ ಮಾಡಿದನೋ,


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು