Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೆರೆಮೀಯ 51:24 - ಕನ್ನಡ ಸತ್ಯವೇದವು J.V. (BSI)

24 ಆದರೆ ಬಾಬೆಲಿನವರೂ ಕಸ್ದೀಯರೂ ಚೀಯೋನಿನಲ್ಲಿ ಮಾಡಿದ ಎಲ್ಲಾ ಹಾನಿಗೆ ಪ್ರತಿಯಾಗಿ ನಾನು ಅವರೆಲ್ಲರಿಗೂ ಚೀಯೋನಿನವರ ಕಣ್ಣೆದುರಿಗೆ ಮುಯ್ಯಿತೀರಿಸುವೆನು ಎಂದು ಯೆಹೋವನು ಅನ್ನುತ್ತಾನೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

24 ಆದರೆ ಕಸ್ದೀಯರೂ ಚೀಯೋನಿನಲ್ಲಿ ಮಾಡಿದ ಎಲ್ಲಾ ಹಾನಿಗೆ ಪ್ರತಿಯಾಗಿ, ನಾನು ಅವರೆಲ್ಲರಿಗೂ ಚೀಯೋನಿನವರ ಕಣ್ಣೆದುರಿಗೆ ಬಾಬಿಲೋನಿಗೆ ಮುಯ್ಯಿತೀರಿಸುವೆನು’” ಎಂದು ಯೆಹೋವನು ಅನ್ನುತ್ತಾನೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

24 “ಆದರೆ ಬಾಬಿಲೋನಿನವರು ಹಾಗು ಅದರ ಕಸ್ದೀಯರು ಸಿಯೋನಿನಲ್ಲಿ ಮಾಡಿದ ಎಲ್ಲ ಕೇಡಿಗೆ ಪ್ರತಿಯಾಗಿ ನಾನು ಅವರೆಲ್ಲರಿಗೆ ಆ ಸಿಯೋನಿನವರ ಕಣ್ಣೆದುರಿಗೇ ಮುಯ್ಯಿ ತೀರಿಸುವೆನು,” ಎನ್ನುತ್ತಾರೆ ಸರ್ವೇಶ್ವರ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

24 ಆದರೆ ನಾನು ಬಾಬಿಲೋನಿಗೆ ಮುಯ್ಯಿತೀರಿಸುವೆನು. ನಾನು ಬಾಬಿಲೋನಿನ ಎಲ್ಲಾ ಜನರಿಗೆ ಮುಯ್ಯಿತೀರಿಸುವೆನು. ಅವರು ಚೀಯೋನಿಗೆ ಮಾಡಿದ ಎಲ್ಲಾ ದುಷ್ಕೃತ್ಯಗಳಿಗಾಗಿ ನಾನು ಮುಯ್ಯಿತೀರಿಸುವೆನು. ಯೆಹೂದವೇ, ನಿನ್ನ ಎದುರಿನಲ್ಲಿಯೇ ಅವರಿಗೆ ಮುಯ್ಯಿತೀರಿಸುವೆನು.” ಇದು ಯೆಹೋವನ ನುಡಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

24 “ಬಾಬಿಲೋನಿನವರು ಮತ್ತು ಕಸ್ದೀಯರು ಚೀಯೋನಿನಲ್ಲಿ ಮಾಡಿದ ಎಲ್ಲಾ ಕೇಡಿಗೆ ಪ್ರತಿಯಾಗಿ ನಾನು ಅವರೆಲ್ಲರಿಗೂ ಚೀಯೋನಿನವರ ಕಣ್ಣೆದುರಿಗೆ ಮುಯ್ಯಿತೀರಿಸುವೆನು” ಎಂದು ಯೆಹೋವ ದೇವರು ಹೇಳುತ್ತಾರೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೆರೆಮೀಯ 51:24
25 ತಿಳಿವುಗಳ ಹೋಲಿಕೆ  

ಅದರ ಸುತ್ತಲು ಜಯಘೋಷಮಾಡಿರಿ, ಅಧೀನವಾಯಿತು, ಅದರ ಕೊತ್ತಲಗಳು ಬಿದ್ದವು, ಅದರ ಪೌಳಿಗೋಡೆಯು ಕೆಡವಲ್ಪಟ್ಟಿತು; ಯೆಹೋವನು ಅದಕ್ಕೆ ಮುಯ್ಯಿತೀರಿಸಿದ್ದಾನೆ; ಮುಯ್ಯಿತೀರಿಸಿರಿ; ಅದು ಮಾಡಿದಂತೆಯೇ ಅದಕ್ಕೆ ಮಾಡಿರಿ.


ಪ್ರವಾದಿಗಳ ರಕ್ತವೂ ದೇವಜನರ ರಕ್ತವೂ ಭೂವಿುಯ ಮೇಲೆ ಕೊಲ್ಲಲ್ಪಟ್ಟವರೆಲ್ಲರ ರಕ್ತವೂ ನಿನ್ನಲ್ಲಿ ಸಿಕ್ಕಿತು ಎಂದು ಹೇಳಿದನು.


ಪರಲೋಕವೇ, ಆನಂದಪಡು; ದೇವಜನರೇ, ಅಪೊಸ್ತಲರೇ, ಪ್ರವಾದಿಗಳೇ, ಇವಳು ನಿಮಗೆ ಅನ್ಯಾಯಮಾಡಿದ್ದಕ್ಕಾಗಿ ದೇವರು ಇವಳಿಗೆ ಪ್ರತಿದಂಡನೆಯನ್ನು ಮಾಡಿದ್ದರಿಂದ ಆನಂದಪಡಿರಿ ಎಂದು ಆ ಶಬ್ದ ಹೇಳಿತು.


ಅವರು - ಒಡೆಯನೇ, ಪರಿಶುದ್ಧನೂ ಸತ್ಯವಂತನೂ ಆಗಿರುವಾತನೇ, ಭೂನಿವಾಸಿಗಳು ನಮ್ಮನ್ನು ಕೊಂದದ್ದಕ್ಕಾಗಿ ನೀನು ಎಷ್ಟು ಕಾಲದವರೆಗೂ ನ್ಯಾಯವಿಚಾರಿಸದೆಯೂ ಪ್ರತಿದಂಡನೆ ಮಾಡದೆಯೂ ಇರುವಿ? ಎಂದು ಮಹಾಶಬ್ದದಿಂದ ಕೂಗಿದರು.


ಹತರಾದ ಇಸ್ರಾಯೇಲ್ಯರೇ, ಬಾಬೆಲಿನ ಹಿತಕ್ಕಾಗಿ ಲೋಕದಲ್ಲೆಲ್ಲಾ ಬಹುಜನರು ಹೇಗೆ ಹತರಾದರೋ ಹಾಗೆಯೇ ಬಾಬೆಲೂ ಹತವಾಗುವದು.


ನಮ್ಮ ಪ್ರಾಣವನ್ನು ಹಿಂಸಿಸಿದ ದೋಷ ಬಾಬೆಲಿಗೆ ತಟ್ಟಲಿ ಎಂದು ಚೀಯೋನಿನವರು ಅನ್ನುತ್ತಾರೆ; ನಮ್ಮ ರಕ್ತವನ್ನು ಸುರಿಸಿದ ಅಪರಾಧವು ಕಸ್ದೀಯರಿಗೆ ಬಡಿಯಲಿ ಎಂದು ಯೆರೂಸಲೇವಿುನವರು ಹೇಳುತ್ತಾರೆ.


ಯೆಹೋವನು ಬಾಬೆಲನ್ನು ಹಾಳುಮಾಡಬೇಕೆಂದು ಉದ್ದೇಶಿಸಿ ಮೇದ್ಯರ ಅರಸರು ಅದನ್ನು ನಾಶಮಾಡುವಂತೆ ಅವರ ಮನಸ್ಸನ್ನು ಪ್ರೇರಿಸಿದ್ದಾನೆ; ಆ ನಾಶನವು ಯೆಹೋವನು ತನ್ನ ಆಲಯವನ್ನು ಕೆಡವಿದವರಿಗೆ ಮಾಡಬೇಕೆಂದಿದ್ದ ಪ್ರತೀಕಾರವೇ; [ಮೇದ್ಯರೇ,] ಬಾಣಗಳನ್ನು ಮಸೆಯಿರಿ, ಸನ್ನದ್ಧರಾಗಿರಿ!


ಇಗೋ, ಪಟ್ಟಣದ ಕಡೆಯಿಂದ ಗದ್ದಲದ ಶಬ್ದ! ದೇವಾಲಯದಲ್ಲಿ ಶಬ್ದ! ಯೆಹೋವನು ತನ್ನ ಶತ್ರುಗಳಿಗೆ ಮುಯ್ಯಿತೀರಿಸುವ ಶಬ್ದ!


ಯೆಹೋವನು ನೇವಿುಸಿರುವ ಶುಭವರುಷ, ನಮ್ಮ ದೇವರು ಮುಯ್ಯಿ ತೀರಿಸುವ ದಿನ, ಇವುಗಳನ್ನು ಪ್ರಚುರಗೊಳಿಸುವದಕ್ಕೂ


ನೀವೆಲ್ಲರು ಕೂಡಿಕೊಂಡು ಕೇಳಿರಿ! ಇವರಲ್ಲಿನ ಯಾವ ದೇವರು ಈ ಸಂಗತಿಗಳನ್ನು ಅರುಹಿದ್ದಾನೆ? ಯೆಹೋವನ ಪ್ರೀತಿಪಾತ್ರನು ಬಾಬೆಲಿನಲ್ಲಿ ಆತನ ಇಷ್ಟವನ್ನು ನೆರವೇರಿಸುವನು, ಕಸ್ದೀಯರ ಮೇಲೆ ಕೈಮಾಡುವನು.


ಅನೇಕ ಜನಾಂಗಗಳೂ ಮಹಾರಾಜರೂ ಅವರನ್ನೇ ಅಡಿಯಾಳಾಗಿ ಮಾಡಿಕೊಳ್ಳುವರು; ಅವರ ಕೃತ್ಯಗಳಿಗೂ ಕೈಕೆಲಸಗಳಿಗೂ ತಕ್ಕಂತೆ ಅವರಿಗೆ ಮುಯ್ಯಿತೀರಿಸುವೆನು.


ಕಸ್ದೀಯ ರಾಜ್ಯವು ಸೂರೆಯಾಗುವದು; ಸೂರೆಗಾರರೆಲ್ಲರೂ ತೃಪ್ತಿಗೊಳ್ಳುವರು. ಇದು ಯೆಹೋವನ ನುಡಿ.


ನಿನ್ನಿಂದ ಕುರುಬರನ್ನೂ ಹಿಂಡನ್ನೂ ಒಡೆದುಬಿಡುತ್ತೇನೆ; ನಿನ್ನಿಂದ ರೈತನನ್ನೂ ನೊಗದ ಎತ್ತುಗಳನ್ನೂ ಒಡೆದುಬಿಡುತ್ತೇನೆ; ನಿನ್ನಿಂದ ದೇಶಾಧಿಪತಿಗಳನ್ನೂ ನಾಡೊಡೆಯರನ್ನೂ ಒಡೆದುಬಿಡುತ್ತೇನೆ;


ಹಾಳುಮಾಡುವವನು ಬಾಬೆಲಿನ ಮೇಲೆ ಬಿದ್ದಿದ್ದಾನೆ, ಅದರ ಶೂರರು ಸೆರೆಯಾಗಿದ್ದಾರೆ, ಅದರ ಬಿಲ್ಲುಗಳು ಮುರಿದುಹೋಗಿವೆ; ಏಕಂದರೆ ಯೆಹೋವನು ಮುಯ್ಯಿತೀರಿಸುವ ದೇವರು, ಆತನು ಪ್ರತಿಕ್ರಿಯೆಮಾಡದೆ ಬಿಡನು.


ಯೆಹೋವನೇ, ಅವರ ದುಷ್ಕೃತ್ಯಗಳಿಗೆ ಸರಿಯಾದ ಪ್ರತಿಫಲವನ್ನು ನೀನು ಅವರಿಗೆ ಕೊಡುವಿ;


ಮ್ಲೇಚ್ಫರು - ಅವರ ದೇವರು ಎಲ್ಲಿ ಎಂದು ಅನ್ನುವದೇಕೆ? ನಿನ್ನ ಸೇವಕರ ರಕ್ತವನ್ನು ಸುರಿಸಿದವರಿಗೆ ನಮ್ಮ ಮುಂದೆಯೇ ದಂಡನೆಯಾದದ್ದು ಜನಾಂಗಗಳಿಗೆ ಗೊತ್ತಾಗಲಿ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು