Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೆರೆಮೀಯ 51:27 - ಕನ್ನಡ ಸತ್ಯವೇದವು J.V. (BSI)

27 ದೇಶದಲ್ಲಿ ಧ್ವಜವೆತ್ತಿರಿ, ರಾಜ್ಯಗಳಲ್ಲೆಲ್ಲಾ ಕೊಂಬೂದಿರಿ, ಜನಾಂಗಗಳನ್ನು ಸನ್ನಾಹಮಾಡಿರಿ, ಬಾಬೆಲಿನ ಮೇಲೆ ಬೀಳಲಿಕ್ಕೆ ಅರರಾಟ್, ವಿುನ್ನಿ, ಅಷ್ಕೆನಜ್ ಎಂಬ ರಾಷ್ಟ್ರಗಳನ್ನು ಕರೆದುಕೊಳ್ಳಿರಿ, ಸೋಲಿಸಲು ಸೇನಾಪತಿಯನ್ನು ನೇವಿುಸಿರಿ, ಅಶ್ವಬಲವನ್ನು ಬಿರುಸಾದ ವಿುಡಿತೆದಂಡಿನೋಪಾದಿಯಲ್ಲಿ ಬರಮಾಡಿರಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

27 “ದೇಶದಲ್ಲಿ ಧ್ವಜವನ್ನೆತ್ತಿರಿ, ರಾಜ್ಯಗಳಲ್ಲೆಲ್ಲಾ ಕೊಂಬೂದಿರಿ, ಜನಾಂಗಗಳನ್ನು ಸಿದ್ಧಮಾಡಿರಿ, ಬಾಬೆಲಿನ ಮೇಲೆ ಬೀಳಲಿಕ್ಕೆ ಅರರಾಟ್, ಮಿನ್ನಿ, ಅಷ್ಕೆನಜ್ ಎಂಬ ರಾಷ್ಟ್ರಗಳನ್ನು ಕರೆದುಕೊಳ್ಳಿರಿ, ಸೋಲಿಸಲು ಸೇನಾಧಿಪತಿಯನ್ನು ನೇಮಿಸಿರಿ, ಅಶ್ವಬಲವನ್ನು ಬಿರುಸಾದ ಮಿಡತೆಯ ದಂಡಿನೋಪಾದಿಯಲ್ಲಿ ಬರಮಾಡಿರಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

27 “ನಾಡಿನಲ್ಲಿ ಧ್ವಜವೆತ್ತಿರಿ, ರಾಜ್ಯಗಳಲ್ಲೆಲ್ಲ ಕೊಂಬೂದಿರಿ, ರಾಷ್ಟ್ರಗಳನ್ನು ಸಜ್ಜುಮಾಡಿರಿ. ಬಾಬಿಲೋನಿನ ಮೇಲೆ ಬೀಳಲಿಕ್ಕೆ ಅರರಾಟ್, ಮಿನ್ನಿ, ಅಷ್ಕೆನಜ್ ಎಂಬ ರಾಷ್ಟ್ರಗಳನ್ನು ಕರೆದುಕೊಳ್ಳಿ. ಸೋಲಿಸಬಲ್ಲ ಸೇನಾಪತಿಯನ್ನು ನೇಮಿಸಿರಿ. ಬಿರುಸಾದ ಅಶ್ವಬಲವನ್ನು ಮಿಡತೆಗಳ ದಂಡಿನೋಪಾದಿ ಬರಮಾಡಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

27 “ಎಲ್ಲಾ ದೇಶಗಳಲ್ಲಿ ಯುದ್ಧದ ಧ್ವಜವನ್ನು ಹಾರಿಸಿರಿ. ಎಲ್ಲಾ ರಾಷ್ಟ್ರಗಳಲ್ಲಿ ತುತ್ತೂರಿಗಳನ್ನು ಊದಿರಿ. ಬಾಬಿಲೋನಿನ ವಿರುದ್ಧ ಹೋರಾಡಲು ಎಲ್ಲಾ ಜನಾಂಗಗಳನ್ನು ಸಿದ್ಧಗೊಳಿಸಿರಿ. ಅರರಾಟ್, ಮಿನ್ನಿ, ಅಷ್ಕೆನಜ್ ಎಂಬ ರಾಜ್ಯಗಳನ್ನು ಬಾಬಿಲೋನಿನ ವಿರುದ್ಧ ಯುದ್ಧಮಾಡಲು ಕರೆಯಿರಿ. ಸೈನ್ಯದ ಮುಂದಾಳಾಗಿರಲು ಒಬ್ಬ ಸೇನಾಧಿಪತಿಯನ್ನು ಆರಿಸಿರಿ. ಮಿಡತೆಯ ದಂಡಿನಂತೆ ಅಪಾರವಾಗಿರುವ ಅಶ್ವಬಲವನ್ನು ಕಳುಹಿಸಿರಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

27 “ದೇಶದಲ್ಲಿ ಧ್ವಜವನ್ನೆತ್ತಿರಿ; ಜನಾಂಗಗಳಲ್ಲಿ ತುತೂರಿಯನ್ನೂದಿರಿ; ಅದಕ್ಕೆ ವಿರೋಧವಾಗಿ ಜನಾಂಗಗಳನ್ನು ಸಿದ್ಧಮಾಡಿರಿ; ಅರಾರಾಟ್, ಮಿನ್ನಿ, ಅಷ್ಕೆನಜ್ ರಾಜ್ಯಗಳನ್ನು ಅದಕ್ಕೆ ವಿರೋಧವಾಗಿ ಕರೆಯಿರಿ; ಅದಕ್ಕೆ ವಿರೋಧವಾಗಿ ಸೈನ್ಯಾಧಿಪತಿಯನ್ನು ನೇಮಿಸಿರಿ; ಬಿರುಸಾದ ಮಿಡತೆ ದಂಡಿನಂತೆ ಕುದುರೆಗಳನ್ನು ಬರಮಾಡಿರಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೆರೆಮೀಯ 51:27
24 ತಿಳಿವುಗಳ ಹೋಲಿಕೆ  

ಗೋಮೆರನ ಸಂತಾನದವರು - ಅಷ್ಕೆನಸ್, ರೀಫತ್, ತೋಗರ್ಮ ಎಂಬವರು.


ಗೋಮೆರನ ಸಂತಾನದವರು - ಅಷ್ಕೆನಜ್, ರೀಫತ್, ತೋಗರ್ಮ ಎಂಬವರು.


ಏಳನೆಯ ತಿಂಗಳಿನ ಹದಿನೇಳನೆಯ ದಿನದಲ್ಲಿ ನಾವೆಯು ಅರಾರಾಟ್ ಸೀಮೆಯ ಬೆಟ್ಟಗಳಲ್ಲಿ ನಿಂತಿತು.


ಬಾಬೆಲ್ ಕೋಟೆಗೆ ಎದುರಾಗಿ ಧ್ವಜವೆತ್ತಿರಿ, ಠಾಣ್ಯವನ್ನು ಬಲಪಡಿಸಿರಿ, ಕಾವಲುಗಾರರನ್ನು ನಿಲ್ಲಿಸಿರಿ, ಹೊಂಚುಗಾರರನ್ನು ಗೊತ್ತುಮಾಡಿರಿ; ಯೆಹೋವನು ಬಾಬೆಲಿನವರ ವಿಷಯದಲ್ಲಿ ನುಡಿದದ್ದನ್ನು ಚಿತ್ತಕ್ಕೆ ತಂದು ನೆರವೇರಿಸಿದ್ದಾನೆ.


ಜನಾಂಗಗಳಲ್ಲಿ ಪ್ರಚುರಪಡಿಸಿರಿ, ಧ್ವಜವೆತ್ತಿ ಪ್ರಕಟಿಸಿರಿ, ಮರೆಮಾಜದೆ ಹೀಗೆ ಸಾರಿರಿ - ಬಾಬೆಲ್ ಶತ್ರುವಾಯಿತು, ಬೇಲ್ ದೇವತೆಯು ನಾಚಿಕೆಗೊಂಡಿದೆ, ಮೆರೋದಾಕ್ ದೇವತೆಯು ಬೆಚ್ಚಿಬಿದ್ದಿದೆ, ಅದರ ಮೂರ್ತಿಗಳು ಅವಮಾನಕ್ಕೆ ಗುರಿಯಾಗಿವೆ, ಅದರ ಬೊಂಬೆಗಳು ಚೂರುಚೂರಾಗಿವೆ.


ಅನೇಕ ಜನಾಂಗಗಳೂ ಮಹಾರಾಜರೂ ಅವರನ್ನೇ ಅಡಿಯಾಳಾಗಿ ಮಾಡಿಕೊಳ್ಳುವರು; ಅವರ ಕೃತ್ಯಗಳಿಗೂ ಕೈಕೆಲಸಗಳಿಗೂ ತಕ್ಕಂತೆ ಅವರಿಗೆ ಮುಯ್ಯಿತೀರಿಸುವೆನು.


ಸೇನಾಧೀಶ್ವರನಾದ ಯೆಹೋವನು ತನ್ನ ಮೇಲೆ ಆಣೆಯಿಟ್ಟು - ಖಂಡಿತವಾಗಿ ನಾನು ನಿನ್ನನ್ನು ವಿುಡಿತೆಗಳಷ್ಟು ಅಸಂಖ್ಯಜನರಿಂದ ತುಂಬಿಸುವೆನು, ಅವರು ನಿನ್ನ ಮೇಲೆ ಆರ್ಭಟಿಸುವರು.


ಸಮಸ್ತ ಭೂನಿವಾಸಿಗಳೇ, ಲೋಕದ ಸಕಲ ಜನರೇ, ಬೆಟ್ಟಗಳಲ್ಲಿ ಧ್ವಜವನ್ನೆತ್ತುವಾಗ ನೋಡಿರಿ, ತುತೂರಿಯನ್ನೂದುವಾಗ ಕೇಳಿರಿ!


ನಾನು ಸಕಲ ಜನಾಂಗಗಳನ್ನು ಯೆರೂಸಲೇವಿುಗೆ ವಿರುದ್ಧವಾಗಿ ಕೂಡಿಸುವೆನು; ಅವು ಪಟ್ಟಣವನ್ನು ಆಕ್ರವಿುಸಿಕೊಂಡು ಮನೆಗಳನ್ನು ಸೂರೆಮಾಡಿ ಹೆಂಗಸರನ್ನು ಕೆಡಿಸುವವು; ಪಟ್ಟಣದ ಅರವಾಸಿ ಜನರು ಸೆರೆಗೆ ಹೋಗುವರು, ವಿುಕ್ಕವರೋ ಪಟ್ಟಣದಲ್ಲೇ ಉಳಿಯುವರು.


ಊರಲ್ಲಿ ಕೊಂಬೂದಿದರೆ ಜನರು ಅಂಜರೋ? ಯೆಹೋವನಿಂದಲ್ಲದೆ ಊರಿಗೆ ವಿಪತ್ತು ಸಂಭವಿಸುವದೋ?


ಅವರು ವಿುಡಿತೆಗಳಿಗಿಂತಲೂ ಅಸಂಖ್ಯಾತರಾಗಿ ದಾಟಲಾಗದ ಐಗುಪ್ತದ ದಟ್ಟವಾದ ಕಾಡನ್ನು ಕಡಿದು ಹಾಕುವರು. ಇದು ಯೆಹೋವನ ನುಡಿ.


ಬೆನ್ಯಾಮೀನ್ ಕುಲದವರೇ, ಯೆರೂಸಲೇವಿುನೊಳಗಿಂದ ವಲಸೆ ಹೋಗಿರಿ, ತೆಕೋವದಲ್ಲಿ ಕೊಂಬನ್ನೂದಿರಿ, ಬೇತ್‍ಹಕ್ಕೆರೆವಿುನಲ್ಲಿ ಧ್ವಜವನ್ನೆತ್ತಿರಿ; ಏಕಂದರೆ ಅತಿನಾಶಕವಾದ ವಿಪತ್ತು ಬಡಗಲಿಂದ ತಲೆದೋರುತ್ತಿದೆ.


ಅವನು ಒಂದು ದಿವಸ ಗುಡಿಗೆ ಹೋಗಿ ತನ್ನ ದೇವರಾದ ನಿಸ್ರೋಕನನ್ನು ಆರಾಧಿಸುತ್ತಿರುವಾಗ ಅದ್ರಮ್ಮೆಲೆಕ್, ಸರೆಚೆರ್ ಎಂಬವರು ಅವನನ್ನು ಕತ್ತಿಯಿಂದ ಕೊಂದು ಅರಾರಾಟ್ ದೇಶಕ್ಕೆ ಓಡಿಹೋದರು. ಅವನಿಗೆ ಬದಲಾಗಿ ಅವನ ಮಗನಾದ ಏಸರ್‍ಹದ್ದೋನನು ಅರಸನಾದನು.


ಆ ಶತ್ರುಗಳು ತಮ್ಮ ಕುರಿದನ ಗುಡಾರಗಳ ಸಹಿತವಾಗಿ ವಿುಡಿತೆಗಳಂತೆ ಗುಂಪುಗುಂಪಾಗಿ ಬಂದರು; ಅವರೂ ಅವರ ಒಂಟೆಗಳೂ ಅಸಂಖ್ಯ. ಆ ಗುಂಪೆಲ್ಲಾ ಬಂದು ದೇಶವನ್ನು ಹಾಳುಮಾಡುತ್ತಿತ್ತು.


ಅವನು ಒಂದು ದಿವಸ ಗುಡಿಗೆ ಹೋಗಿ ತನ್ನ ದೇವರಾದ ನಿಸ್ರೋಕನನ್ನು ಆರಾಧಿಸುತ್ತಿರುವಾಗ ಅದ್ರಮ್ಮೆಲೆಕ್, ಸರೆಚೆರ್ ಎಂಬ ಅವನ ಮಕ್ಕಳು ಅವನನ್ನು ಕತ್ತಿಯಿಂದ ಕೊಂದು ಅರರಾಟ್ ದೇಶಕ್ಕೆ ಓಡಿಹೋದರು. ಅವನಿಗೆ ಬದಲಾಗಿ ಅವನ ಮಗನಾದ ಏಸರ್‍ಹದ್ದೋನನು ಅರಸನಾದನು.


ಒಂದು ಜನಾಂಗವು ಬಡಗಲಿಂದ ಬಾಬೆಲಿನ ಮೇಲೆ ಬರುತ್ತಿದೆ, ಅದು ಬಾಬೆಲ್ ದೇಶವನ್ನು ಹಾಳುಮಾಡುವದು, ಅಲ್ಲಿ ಯಾರೂ ವಾಸಿಸರು, ಪಶುಗಳೂ ಜನರೂ ಓಡಿಹೋಗಿದ್ದಾರೆ, ತೊಲಗಿಬಿಟ್ಟಿದ್ದಾರೆ.


ಇಗೋ, ನಾನು ಮಹಾ ಜನಾಂಗಗಳ ಸಮೂಹವನ್ನು ಎಬ್ಬಿಸಿ ಬಡಗಲಿಂದ ಬಾಬೆಲಿನ ಮೇಲೆ ಬೀಳಮಾಡುವೆನು; ಅವು ಬಾಬೆಲಿಗೆ ವಿರುದ್ಧವಾಗಿ ವ್ಯೂಹ ಕಟ್ಟಿ ಅದನ್ನು ಸ್ಥಳದೊಳಗಿಂದ ಕಿತ್ತುಬಿಡುವವು; ಅವುಗಳ ಬಾಣಗಳು ಸುಮ್ಮನೆ ಹಿಂದಿರುಗದ ಯುದ್ಧಪ್ರವೀಣ ಶೂರನಂತಿರುವವು.


ಜನಾಂಗಗಳು, ಮೇದ್ಯರ ಅರಸರು, ಅಧಿಪತಿಗಳು, ಅಧಿಕಾರಿಗಳು, ಅವರ ಅಧೀನದಲ್ಲಿರುವ ಸಂಪೂರ್ಣ ದೇಶದವರು, ಇವರೆಲ್ಲರನ್ನೂ ಅದಕ್ಕೆ ವಿರುದ್ಧವಾಗಿ ಸನ್ನಾಹಮಾಡಿರಿ.


ಜನಾಂಗಗಳಲ್ಲಿ ಹೀಗೆ ಪ್ರಕಟಿಸಿರಿ - [ಜನಾಂಗಗಳೇ,] ಸನ್ನದ್ಧರಾಗಿರಿ, ಶೂರರನ್ನು ಎಚ್ಚರಪಡಿಸಿರಿ, ಯೋಧರೆಲ್ಲರೂ ಕೂಡಲಿ, ಯುದ್ಧಕ್ಕೆ ಹೊರಡಲಿ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು