Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೆರೆಮೀಯ 51:37 - ಕನ್ನಡ ಸತ್ಯವೇದವು J.V. (BSI)

37 ಆಗ ಬಾಬೆಲು ಹಾಳುದಿಬ್ಬಗಳೂ ನರಿಗಳ ಹಕ್ಕೆಯೂ ಆಗಿರುವದು; ಅದು ನಿರ್ಜನವಾಗಿ ಬೆರಗಿನ ಸಿಳ್ಳಿಗೆ ಗುರಿಯಾಗುವದು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

37 ಆಗ ಬಾಬೆಲ್ ಹಾಳುದಿಬ್ಬಗಳಿಂದ ತುಂಬುವುದು ಮತ್ತು ನರಿಗಳ ಬೀಡಾಗಿರುವುದು; ಅದು ನಿರ್ಜನವಾಗಿ ಪರಿಹಾಸ್ಯಕ್ಕೆ ಗುರಿಯಾಗುವುದು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

37 ಆಗ ಬಾಬಿಲೋನ್ ಹಾಳುದಿಬ್ಬ ಆಗುವುದು. ಗುಳ್ಳೆನರಿಗಳ ಬೀಡಾಗುವುದು. ಅದು ಭಯಭೀತಿಗೂ ಸೀಳು ಪರಿಹಾಸ್ಯಕ್ಕೂ ಆಸ್ಪದವಾಗುವುದು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

37 ಬಾಬಿಲೋನು ನಾಶವಾದ ಕಟ್ಟಡಗಳ ಗುಡ್ಡೆಯಾಗುವುದು. ಬಾಬಿಲೋನು ಕಾಡುನಾಯಿಗಳ ನಿವಾಸವಾಗುವುದು. ಜನರು ಕಲ್ಲುಬಂಡೆಗಳ ಗುಡ್ಡೆಯನ್ನು ನೋಡಿ ಆಶ್ಚರ್ಯಪಡುವರು. ಬಾಬಿಲೋನಿನ ಬಗ್ಗೆ ಜನರು ತಲೆಯಾಡಿಸುವರು. ಬಾಬಿಲೋನು ನಿರ್ಜನ ಪ್ರದೇಶವಾಗುವುದು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

37 ಬಾಬಿಲೋನ್ ದಿಬ್ಬಗಳಾಗುವುದು. ನಿವಾಸಿಗಳು ಇಲ್ಲದೆ ನರಿಗಳ ವಾಸಸ್ಥಳವಾಗಿ ಆಶ್ಚರ್ಯಕ್ಕೂ, ನಾಶಕ್ಕೂ, ಸಿಳ್ಳಿಡುವಿಕೆಗೂ ಒಳಗಾಗುವುದು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೆರೆಮೀಯ 51:37
24 ತಿಳಿವುಗಳ ಹೋಲಿಕೆ  

ಅವನು ಗಟ್ಟಿಯಾದ ಶಬ್ದದಿಂದ ಕೂಗುತ್ತಾ - ಬಿದ್ದಳು, ಬಿದ್ದಳು, ಬಾಬೆಲೆಂಬ ಮಹಾನಗರಿಯು ಬಿದ್ದಳು; ದೆವ್ವಗಳ ವಾಸಸ್ಥಾನವೂ ಅಶುದ್ಧಾತ್ಮಗಳ ಆಶ್ರಯವೂ ಅಪವಿತ್ರವಾಗಿಯೂ ಅಸಹ್ಯವಾಗಿಯೂ ಇರುವ ಸಕಲ ವಿಧವಾದ ಪಕ್ಷಿಗಳ ಆಶ್ರಯವೂ ಆದಳು.


ಇಗೋ, ನಾನು ಬಡಗಣ ಜನಾಂಗಗಳನ್ನೆಲ್ಲಾ ಕರೆಯಿಸಿ ಬಾಬೆಲಿನ ಅರಸನೂ ನನ್ನ ಸೇವಕನೂ ಆದ ನೆಬೂಕದ್ನೆಚ್ಚರನನ್ನು ಬರಮಾಡಿ ಇವರೆಲ್ಲರನ್ನು ಈ ದೇಶದ ಮೇಲೂ ಇದರ ನಿವಾಸಿಗಳ ಮೇಲೂ ಸುತ್ತಲಿನ ಸಕಲ ಜನಾಂಗಗಳ ಮೇಲೂ ಬೀಳಿಸಿ ಅವುಗಳನ್ನು ತುಂಬಾ ಹಾಳುಗೈದು ಬೆರಗಿನ ಸಿಳ್ಳಿಗೆ ಗುರಿಪಡಿಸಿ ನಿತ್ಯನಾಶನಕ್ಕೆ ಈಡುಮಾಡುವೆನು.


ಆದಕಾರಣ ಬೆರಗಿನ ಸಿಳ್ಳಿಗೆ ಅವರ ದೇಶವು ನಿತ್ಯವಾಗಿ ಗುರಿಯಾಗುವದು; ಹಾದುಹೋಗುವವರೆಲ್ಲರೂ ಬೆರಗಾಗಿ ತಲೆದೂಗುವರು.


ಈ ನಿನೆವೆಯು ಮೊದಲು ಉಲ್ಲಾಸದ ನಗರಿಯಾಗಿ ನೆಮ್ಮದಿಯಿಂದ ನೆಲೆಗೊಂಡಿದ್ದು ತನ್ನ ಹೃದಯದೊಳಗೆ - ನಾನೇ ಇರುವವಳು, ನನ್ನ ಹೊರತು ಇನ್ನು ಯಾರೂ ಇಲ್ಲ ಅಂದುಕೊಳ್ಳುತ್ತಿತ್ತು; ಅಯ್ಯೋ, ಎಷ್ಟೋ ಹಾಳಾಗಿ ಹೋಗಿ ಮೃಗಗಳು ತಂಗುವ ಹಕ್ಕೆಯಾಗಿದೆ! ಹಾದುಹೋಗುವವರೆಲ್ಲರೂ ಸಿಳ್ಳುಹಾಕಿ ಕೈಯಾಡಿಸುತ್ತಾರೆ.


ನಾನು ಖಡ್ಗಕ್ಷಾಮವ್ಯಾಧಿಗಳಿಂದ ಅವರನ್ನು ಹಿಂದಟ್ಟುತ್ತಾ ಲೋಕದ ಸಮಸ್ತರಾಜ್ಯಗಳಿಗೆ ಭಯಾಸ್ಪದವಾಗುವಂತೆಯೂ ನಾನು ಅವರನ್ನು ಅಟ್ಟಿಬಿಟ್ಟಿರುವ ಸಕಲ ಜನಾಂಗಗಳಲ್ಲಿ ಶಾಪ, ಬೆರಗಿನ ಸಿಳ್ಳು, ದೂಷಣೆ, ಇವುಗಳಿಗೆ ಗುರಿಯಾಗುವಂತೆಯೂ ಮಾಡುವೆನು.


ಯೆರೂಸಲೇವಿುಗೂ ಯೆಹೂದದ ಪಟ್ಟಣಗಳಿಗೂ ಅರಸರಿಗೂ ಪ್ರಧಾನರಿಗೂ ಕುಡಿಸಿದೆನು; ಇದರಿಂದ ಅವರು ಹಾಳಾಗಿ ಬೆರಗಿನ ಸಿಳ್ಳಿಗೂ ಶಾಪಕ್ಕೂ ಗುರಿಯಾಗುವದಕ್ಕೆ ಆಸ್ಪದವಾಯಿತು.


ಎಪ್ಪತ್ತು ವರುಷಗಳ ತರುವಾಯ ನಾನು ಬಾಬೆಲಿನ ಅರಸನನ್ನೂ ಕಸ್ದೀಯರ ದೇಶವನ್ನೂ ಆ ಜನಾಂಗದವರನ್ನೂ ಅವರ ದ್ರೋಹಕ್ಕಾಗಿ ದಂಡಿಸಿ ಆ ದೇಶವನ್ನು ನಿತ್ಯನಾಶನಕ್ಕೆ ಗುರಿಮಾಡುವೆನು. ಇದು ಯೆಹೋವನ ನುಡಿ.


ಈ ಪಟ್ಟಣವನ್ನು ಬೆರಗಿನ ಸಿಳ್ಳಿಗೆ ಗುರಿಮಾಡುವೆನು; ಹಾದುಹೋಗುವವರೆಲ್ಲರೂ ಅದಕ್ಕೆ ಸಂಬಂಧಿಸಿದ ವಿಪತ್ತುಗಳನ್ನು ಕಂಡು ಬೆರಗಾಗಿ ಸಿಳ್ಳುಹಾಕುವರು.


ಮತ್ತು ಆ ಪ್ರದೇಶವನ್ನು ಜವುಗುನೆಲವನ್ನಾಗಿಯೂ ಮುಳ್ಳುಹಂದಿಗೆ ಸೊತ್ತನ್ನಾಗಿಯೂ ಮಾಡಿ ನಾಶನವೆಂಬ ಬರಲಿನಿಂದ ಗುಡಿಸಿಬಿಡುವೆನು ಎಂದು ಸೇನಾಧೀಶ್ವರನಾದ ಯೆಹೋವನು ಹೇಳಿದ್ದಾನೆ.


ಆದದರಿಂದ ಯೆಹೋವನು ಯೆಹೂದದೇಶದ ಮೇಲೆಯೂ ಯೆರೂಸಲೇವಿುನ ಮೇಲೆಯೂ ಕೋಪವುಳ್ಳವನಾಗಿ ಅವುಗಳನ್ನು ಭಯವಿಸ್ಮಯ ಪರಿಹಾಸಗಳಿಗೆ ಆಸ್ಪದಮಾಡಿದ್ದಾನೆ; ಇದಕ್ಕೆ ನೀವೇ ಸಾಕ್ಷಿಗಳು.


ಒಮ್ರಿಯ ನಿಯಮಗಳೂ ಅಹಾಬನ ಮನೆತನದ ಸಕಲಾಚಾರಗಳೂ [ನಿನ್ನಲ್ಲಿ] ಸಲ್ಲುತ್ತಿವೆ, ನಿನ್ನವರು ಅವರ ದುರ್ನೀತಿಗೆ ಅನುಸಾರವಾಗಿ ನಡೆಯುತ್ತಾರೆ; ಆದಕಾರಣ ನಾನು ನಿನ್ನನ್ನು ಬೆರಗಿಗೂ ನನ್ನ ನಿವಾಸಿಗಳನ್ನು ಸಿಳ್ಳಿಗೂ ಗುರಿಮಾಡುವೆನು; ನನ್ನ ಜನರಿಗೆ ಸಂಭವಿಸಬೇಕಾದ ಅವಮಾನವನ್ನು ಅನುಭವಿಸುವಿರಿ.


ದೇಶವೆಲ್ಲಾ ನೊಂದು ನಡುಗುತ್ತದೆ; ಏಕಂದರೆ ಬಾಬೆಲ್ ದೇಶವು ಹಾಳುಬಿದ್ದು ನಿರ್ಜನವಾಗಲಿ ಎಂದು ಯೆಹೋವನು ಅದರ ವಿಷಯವಾಗಿ ಮಾಡಿಕೊಂಡಿರುವ ಸಂಕಲ್ಪಗಳು ಸ್ಥಿರವಾಗಿವೆ.


ನಾನು ಯೆರೂಸಲೇಮನ್ನು ಹಾಳುದಿಬ್ಬಗಳನ್ನಾಗಿಯೂ ನರಿಗಳ ಹಕ್ಕೆಯನ್ನಾಗಿಯೂ ಗೈದು ಯೆಹೂದದ ಪಟ್ಟಣಗಳನ್ನು ಜನವಿಲ್ಲದ ಬೀಳುಭೂವಿುಯನ್ನಾಗಿ ಮಾಡುವೆನು [ಎಂದು ಯೆಹೋವನು ಹೇಳಿದ್ದಾನಲ್ಲಾ].


ಎದೋಮು ಬೆರಗಿಗೆ ಆಸ್ಪದವಾಗುವದು; ಹಾದು ಹೋಗುವವರೆಲ್ಲರೂ ಅದಕ್ಕೆ ಸಂಭವಿಸಿದ ವಿಪತ್ತುಗಳಿಗೆ ಬೆರಗಾಗಿ ಸಿಳ್ಳುಹಾಕುವರು.


ಆಗ ಹಾಚೋರು ಸದಾ ಹಾಳುಬಿದ್ದು ನರಿಗಳಿಗೆ ಹಕ್ಕೆಯಾಗುವದು; ಅಲ್ಲಿ ಯಾರೂ ವಾಸಿಸರು, ಯಾವ ನರಮನುಷ್ಯನೂ ಇಳುಕೊಳ್ಳನು. ಇದು ಯೆಹೋವನ ನುಡಿ.


ನಿನ್ನ ಮೇಲೆ ಹೊಲಸನ್ನು ಹಾಕಿ ಮಾನಕಳೆದು ನಿನ್ನನ್ನು ನೋಟವನ್ನಾಗಿ ಮಾಡುವೆನು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು