Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೆರೆಮೀಯ 51:49 - ಕನ್ನಡ ಸತ್ಯವೇದವು J.V. (BSI)

49 ಹತರಾದ ಇಸ್ರಾಯೇಲ್ಯರೇ, ಬಾಬೆಲಿನ ಹಿತಕ್ಕಾಗಿ ಲೋಕದಲ್ಲೆಲ್ಲಾ ಬಹುಜನರು ಹೇಗೆ ಹತರಾದರೋ ಹಾಗೆಯೇ ಬಾಬೆಲೂ ಹತವಾಗುವದು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

49 “ಹತರಾದ ಇಸ್ರಾಯೇಲರೇ, ಬಾಬೆಲಿನ ಹಿತಕ್ಕಾಗಿ ಲೋಕದಲ್ಲೆಲ್ಲಾ ಬಹು ಜನರು ಹೇಗೆ ಹತರಾದರೋ, ಹಾಗೆಯೇ ಬಾಬೆಲೂ ಹತವಾಗುವುದು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

49 ಹತರಾದ ಇಸ್ರಯೇಲರೇ, ಬಾಬಿಲೋನಿಯದ ಹಿತಕ್ಕಾಗಿ ಬಹುಜನ ಹತರಾದರು. ಅಂತೆಯೇ ಬಾಬಿಲೋನ್ ಹತವಾಗುವುದು. ಸರ್ವೇಶ್ವರನಾದ ನನ್ನ ನುಡಿ ಇದು.”

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

49 “ಬಾಬಿಲೋನ್ ಇಸ್ರೇಲರನ್ನು ಕೊಂದಿತು. ಬಾಬಿಲೋನ್ ಭೂಮಂಡಲದ ಎಲ್ಲೆಡೆಯ ಜನರನ್ನು ಕೊಂದಿತು. ಅದಕ್ಕಾಗಿ ಬಾಬಿಲೋನ್ ಪತನವಾಗಲೇಬೇಕು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

49 “ಬಾಬಿಲೋನ್‌ನಿಂದಾಗಿ ಭೂಮಿಯಲ್ಲೆಲ್ಲಾ ಹತರಾದಂತೆಯೇ, ಇಸ್ರಾಯೇಲಿನ ಹತ್ಯೆಯಿಂದಾಗಿ ಬಾಬಿಲೋನ್ ಬೀಳಬೇಕು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೆರೆಮೀಯ 51:49
13 ತಿಳಿವುಗಳ ಹೋಲಿಕೆ  

ಆದರೆ ಬಾಬೆಲಿನವರೂ ಕಸ್ದೀಯರೂ ಚೀಯೋನಿನಲ್ಲಿ ಮಾಡಿದ ಎಲ್ಲಾ ಹಾನಿಗೆ ಪ್ರತಿಯಾಗಿ ನಾನು ಅವರೆಲ್ಲರಿಗೂ ಚೀಯೋನಿನವರ ಕಣ್ಣೆದುರಿಗೆ ಮುಯ್ಯಿತೀರಿಸುವೆನು ಎಂದು ಯೆಹೋವನು ಅನ್ನುತ್ತಾನೆ.


ಬಿಲ್ಲನ್ನು ಬೊಗ್ಗಿಸಿ ಬಾಣಬಿಡುವವರನ್ನೆಲ್ಲಾ ಬಾಬೆಲಿಗೆ ಕರೆಯಿರಿ; ಅದರ ಸುತ್ತಲು ದಂಡಿಳಿಸಿರಿ; ಅದರ ನಿವಾಸಿಗಳಲ್ಲಿ ಯಾರೂ ತಪ್ಪಿಸಿಕೊಳ್ಳದ ಹಾಗಿರಲಿ; ಅದರ ಕೃತ್ಯಕ್ಕೆ ತಕ್ಕಂತೆ ಮುಯ್ಯಿತೀರಿಸಿರಿ; ಅದು ಮಾಡಿದಂತೆಯೇ ಅದಕ್ಕೆ ಮಾಡಿರಿ; ಅದು ಸೊಕ್ಕೇರಿ ಇಸ್ರಾಯೇಲ್ಯರ ಸದಮಲಸ್ವಾವಿುಯಾದ ಯೆಹೋವನನ್ನು ಅಸಡ್ಡೆಮಾಡಿತಲ್ಲಾ.


ಕರುಣೆತೋರಿಸದೆ ಇರುವವನಿಗೆ ನ್ಯಾಯತೀರ್ಮಾನದಲ್ಲಿ ಕರುಣೆಯು ತೋರಿಸಲ್ಪಡುವದಿಲ್ಲ. ಕರುಣೆಯು ನ್ಯಾಯತೀರ್ಮಾನವನ್ನು ಗೆದ್ದು ಹಿಗ್ಗುತ್ತದೆ.


ನೀವು ಮಾಡುವ ತೀರ್ಪಿಗೆ ಸರಿಯಾಗಿ ನಿಮಗೂ ತೀರ್ಪಾಗುವದು; ನೀವು ಅಳೆಯುವ ಅಳತೆಯಿಂದಲೇ ನಿಮಗೂ ಅಳೆಯುವರು.


ನಮ್ಮ ಪ್ರಾಣವನ್ನು ಹಿಂಸಿಸಿದ ದೋಷ ಬಾಬೆಲಿಗೆ ತಟ್ಟಲಿ ಎಂದು ಚೀಯೋನಿನವರು ಅನ್ನುತ್ತಾರೆ; ನಮ್ಮ ರಕ್ತವನ್ನು ಸುರಿಸಿದ ಅಪರಾಧವು ಕಸ್ದೀಯರಿಗೆ ಬಡಿಯಲಿ ಎಂದು ಯೆರೂಸಲೇವಿುನವರು ಹೇಳುತ್ತಾರೆ.


ನನ್ನ ಸ್ವಾಸ್ತ್ಯವನ್ನು ಕೊಳ್ಳೆಹೊಡೆಯುವವರೇ, ನೀವು ಹರ್ಷಿಸಿ ಉಲ್ಲಾಸಿಸುವವರೂ ಕಣತುಳಿಯುವ ಕಡಸಿನ ಹಾಗೆ ಕುಣಿದಾಡುವವರೂ ಕೊಬ್ಬಿದ ಕುದುರೆಗಳಂತೆ ಹೇಕರಿಸುವವರೂ ಆಗಿರುವದರಿಂದ


ಆಗ ಅದೋನೀಬೆಜೆಕನು - ನಾನು ಕೈಕಾಲುಗಳ ಹೆಬ್ಬೆರಳುಗಳನ್ನು ಕತ್ತರಿಸಿ ಬಿಟ್ಟ ಎಪ್ಪತ್ತು ಮಂದಿ ಅರಸರು ನನ್ನ ಮೇಜಿನ ಕೆಳಗೆ ಬೀಳುವ ಚೂರುಗಳನ್ನು ಕೂಡಿಸಿಕೊಂಡು ತಿನ್ನುತ್ತಿದ್ದರು; ನಾನು ಅವರಿಗೆ ಮಾಡಿದಂತೆಯೇ ದೇವರು ನನಗೆ ಮಾಡಿದ್ದಾನೆ ಅಂದನು. ಅವರು ಅವನನ್ನು ಯೆರೂಸಲೇವಿುಗೆ ತೆಗೆದುಕೊಂಡು ಬರಲು ಅಲ್ಲಿ ಸತ್ತನು.


ಪ್ರವಾದಿಗಳ ರಕ್ತವೂ ದೇವಜನರ ರಕ್ತವೂ ಭೂವಿುಯ ಮೇಲೆ ಕೊಲ್ಲಲ್ಪಟ್ಟವರೆಲ್ಲರ ರಕ್ತವೂ ನಿನ್ನಲ್ಲಿ ಸಿಕ್ಕಿತು ಎಂದು ಹೇಳಿದನು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು