Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೆರೆಮೀಯ 52:25 - ಕನ್ನಡ ಸತ್ಯವೇದವು J.V. (BSI)

25 ಸೈನ್ಯಸಂಬಂಧವಾದ ಎಲ್ಲಾ ವ್ಯವಸ್ಥೆಯನ್ನು ಮಾಡುವ ಕಂಚುಕಿ, ಪಟ್ಟಣದಲ್ಲಿ ಉಳಿದು ಅರಸನಿಗೆ ಆಪ್ತರಾಗಿದ್ದ ಏಳು ಮಂದಿ ಮಂತ್ರಿಗಳು, ಯುದ್ಧಕ್ಕೆ ಹೋಗತಕ್ಕವರ ಪಟ್ಟಿಯನ್ನು ಮಾಡುವ ಸೇನಾಪತಿಯ ಲೇಖಕನು, ಪಟ್ಟಣದಲ್ಲಿದ್ದ ಅರುವತ್ತು ಮಂದಿ ರೈತರು ಇದ್ದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

25 ಸೈನ್ಯಸಂಬಂಧವಾದ ಎಲ್ಲಾ ವ್ಯವಸ್ಥೆಯನ್ನು ಮಾಡುವ ಕಂಚುಕಿ, ಪಟ್ಟಣದಲ್ಲಿ ಉಳಿದು ಅರಸನಿಗೆ ಆಪ್ತರಾಗಿದ್ದ ಏಳು ಮಂತ್ರಿಗಳು, ಯುದ್ಧಕ್ಕೆ ಹೋಗತಕ್ಕವರ ಪಟ್ಟಿಯನ್ನು ಮಾಡುವ ಸೇನಾಧಿಪತಿಯ ಲೇಖಕನು, ಪಟ್ಟಣದಲ್ಲಿದ್ದ ಅರುವತ್ತು ರೈತರು ಇದ್ದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

25 ಅವನು ನಗರದಿಂದ ಸೈನ್ಯಸಂಬಂಧವಾದ ಎಲ್ಲ ವ್ಯವಸ್ಥೆಯನ್ನೂ ಮಾಡುವ ಕಂಚುಕಿಯನ್ನು, ಅರಸನಿಗೆ ಆಪ್ತರಾಗಿದ್ದ ಏಳು ಮಂದಿ ಮಂತ್ರಿಗಳನ್ನು, ಯುದ್ಧಕ್ಕೆ ಹೋಗತಕ್ಕವರ ಪಟ್ಟಿಮಾಡುವ ಸೇನಾಪತಿಯ ಲೇಖಕನನ್ನು ಹಾಗು ನಗರದಲ್ಲಿದ್ದ ಅರವತ್ತು ಮಂದಿ ರೈತರನ್ನು ಹಿಡಿದುಕೊಂಡುಹೋದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

25 ರಾಜನ ವಿಶೇಷ ರಕ್ಷಕದಳದ ಅಧಿಪತಿಯು ಸೈನ್ಯದ ವ್ಯವಸ್ಥಾಪಕನ ಅಧಿಕಾರಿಯನ್ನು ಬಂಧಿಸಿದನು. ಅವನು ರಾಜನ ಏಳು ಜನ ಆಪ್ತ ಮಂತ್ರಿಗಳನ್ನು ಸಹ ಸೆರೆಹಿಡಿದನು. ಅವರೆಲ್ಲ ಇನ್ನೂ ಜೆರುಸಲೇಮಿನಲ್ಲಿದ್ದರು. ಯುದ್ಧಕ್ಕೆ ಹೋಗುವವರ ಪಟ್ಟಿಯನ್ನು ಮಾಡುವ ಲಿಪಿಗಾರನನ್ನು ಸಹ ಅವನು ಸೆರೆಹಿಡಿದನು. ನಗರದಲ್ಲಿದ್ದ ಅರವತ್ತು ಮಂದಿ ಜನಸಾಮಾನ್ಯರನ್ನು ಸಹ ಅವನು ಸೆರೆಹಿಡಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

25 ಇದಲ್ಲದೆ ಪಟ್ಟಣದೊಳಗಿಂದ ಸೈನಿಕರ ಮೇಲಿದ್ದ ಒಬ್ಬ ಅಧಿಕಾರಿಯನ್ನೂ, ಅರಸನ ಏಳುಮಂದಿ ಸಲಹೆಗಾರರನ್ನೂ, ಯುದ್ಧಕ್ಕೆ ಹೋಗತಕ್ಕವರ ಪಟ್ಟಿಮಾಡುವ ಸೇನಾಧಿಪತಿಯ ಲೇಖಕನನ್ನೂ, ಪಟ್ಟಣದ ಮಧ್ಯದಲ್ಲಿ ಸಿಕ್ಕಿದ ದೇಶದ ಜನರಲ್ಲಿ ಅರವತ್ತು ಮಂದಿಯನ್ನೂ ತೆಗೆದುಕೊಂಡನು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೆರೆಮೀಯ 52:25
4 ತಿಳಿವುಗಳ ಹೋಲಿಕೆ  

ಮೂರು ಮಂದಿ ದ್ವಾರಪಾಲಕರು, ಸೈನ್ಯ ಸಂಬಂಧವಾದ ಎಲ್ಲಾ ವ್ಯವಸ್ಥೆಯನ್ನು ಮಾಡುವ ಕಂಚುಕಿ, ಪಟ್ಟಣದಲ್ಲಿ ಉಳಿದಿದ್ದ ಅರಸನಿಗೆ ಆಪ್ತರಾಗಿದ್ದ ಐದು ಮಂದಿ ಮಂತ್ರಿಗಳು, ಯುದ್ಧಕ್ಕೆ ಹೋಗತಕ್ಕವರ ಪಟ್ಟಿಯನ್ನು ಮಾಡುವ ಸೇನಾಪತಿಯ ಲೇಖಕನು, ಪಟ್ಟಣದಲ್ಲಿದ್ದ ಅರುವತ್ತು ಮಂದಿ ರೈತರು ಇದ್ದರು.


ಅರಸನಾದ ಅಹಷ್ವೇರೋಷನ ಒಡ್ಡೋಲಗದಲ್ಲಿ ರಾಜಸಾನಿಧ್ಯಸೇವಕರೂ ರಾಜಸಭಾಪ್ರಧಾನರೂ ಆಗಿದ್ದ ಕರ್ಷೆನಾ, ಶೇತಾರ್, ಅದ್ಮಾತಾ, ತರ್ಷೀಷ್, ಮೆರೆಸ್, ಮರ್ಸೆನಾ, ಮೆಮೂಕಾನ್ ಎಂಬ ಏಳು ಮಂದಿ ಪಾರಸಿಯ ಮತ್ತು ಮೇದ್ಯ ಪ್ರಭುಗಳಿದ್ದರು. ಅವನು ಸಮಯೋಚಿತಜ್ಞಾನವುಳ್ಳವರಾದ ಇವರನ್ನು -


ಈ ಚಿಕ್ಕವರಲ್ಲಿ ಒಬ್ಬನನ್ನಾದರೂ ತಾತ್ಸಾರಮಾಡಬಾರದು ನೋಡಿರಿ; ಪರಲೋಕದಲ್ಲಿ ಅವರ ದೂತರು ಪರಲೋಕದಲ್ಲಿರುವ ನನ್ನ ತಂದೆಯ ಮುಖವನ್ನು ಯಾವಾಗಲೂ ನೋಡುತ್ತಲಿದ್ದಾರೆ ಎಂದು ನಿಮಗೆ ಹೇಳುತ್ತೇನೆ.


ಆಗ ಬಾರೂಕನು ಯೆಹೋವನ ಆಲಯದೊಳಗೆ ಮೇಲಣ ಪ್ರಾಕಾರದಲ್ಲಿ ಹೊಸ ಬಾಗಿಲ ಹತ್ತಿರ ಲೇಖಕನಾದ ಶಾಫಾನನ ಮಗನಾಗಿರುವ ಗೆಮರ್ಯನ ಕೋಣೆಯಲ್ಲಿ ಸುರಳಿಯಲ್ಲಿನ ಯೆರೆಮೀಯನ ಮಾತುಗಳನ್ನು ಎಲ್ಲಾ ಜನರಿಗೂ ಕೇಳಿಸುವಂತೆ ಓದಿದನು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು