Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೆರೆಮೀಯ 6:1 - ಕನ್ನಡ ಸತ್ಯವೇದವು J.V. (BSI)

1 ಬೆನ್ಯಾಮೀನ್ ಕುಲದವರೇ, ಯೆರೂಸಲೇವಿುನೊಳಗಿಂದ ವಲಸೆ ಹೋಗಿರಿ, ತೆಕೋವದಲ್ಲಿ ಕೊಂಬನ್ನೂದಿರಿ, ಬೇತ್‍ಹಕ್ಕೆರೆವಿುನಲ್ಲಿ ಧ್ವಜವನ್ನೆತ್ತಿರಿ; ಏಕಂದರೆ ಅತಿನಾಶಕವಾದ ವಿಪತ್ತು ಬಡಗಲಿಂದ ತಲೆದೋರುತ್ತಿದೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

1 “ಬೆನ್ಯಾಮೀನ್ ಕುಲದವರೇ, ಯೆರೂಸಲೇಮಿನೊಳಗಿಂದ ವಲಸೆ ಹೋಗಿರಿ, ತೆಕೋವದಲ್ಲಿ ಕೊಂಬನ್ನೂದಿರಿ, ಬೇತ್ ಹಕ್ಕೆರೆಮಿನಲ್ಲಿ ಧ್ವಜವನ್ನೆತ್ತಿರಿ, ಏಕೆಂದರೆ ಉತ್ತರ ದಿಕ್ಕಿನಿಂದ ಅತಿನಾಶಕರವಾದ ವಿಪತ್ತು ತಲೆದೋರುತ್ತಿದೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

1 ಬೆನ್ಯಮೀನ್ ಕುಲದವರೇ, ಜೆರುಸಲೇಮಿನಿಂದ ವಲಸೆಹೋಗಿರಿ. ತೆಕೋವದಲ್ಲಿ ಕೊಂಬನ್ನೂದಿರಿ. ಬೇತ್‍ಹಕ್ಕೆರೆಮಿನಲ್ಲಿ ಧ್ವಜವನ್ನೆತ್ತಿರಿ. ಏಕೆಂದರೆ ಅತಿ ವಿನಾಶಕರವಾದ ವಿಪತ್ತು ಉತ್ತರದಿಂದ ತಲೆದೋರುತ್ತಿದೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

1 ಬೆನ್ಯಾಮೀನನ ಕುಲದವರೇ, ನಿಮ್ಮ ಪ್ರಾಣ ರಕ್ಷಣೆಗಾಗಿ ಓಡಿಹೋಗಿರಿ; ಜೆರುಸಲೇಮ್ ನಗರದಿಂದ ಓಡಿಹೋಗಿರಿ. ತೆಕೋವ ನಗರದಲ್ಲಿ ಯುದ್ಧದ ತುತ್ತೂರಿಗಳನ್ನು ಊದಿರಿ; ಬೇತ್‌ಹಕ್ಕೆರೆಮಿನಲ್ಲಿ ಎಚ್ಚರಿಕೆಯ ಧ್ವಜಗಳನ್ನು ಹಾರಿಸಿರಿ. ಉತ್ತರದಿಕ್ಕಿನಿಂದ ವಿಪತ್ತು ಬರುತ್ತಿರುವುದರಿಂದ ಇವೆಲ್ಲವನ್ನು ಮಾಡಿರಿ. ಭಯಂಕರವಾದ ವಿನಾಶವು ನಿಮಗೆ ಬರುತ್ತಿದೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

1 “ಓ ಬೆನ್ಯಾಮೀನನ ಮಕ್ಕಳೇ! ನಿಮ್ಮ ಸುರಕ್ಷತೆಗಾಗಿ ಯೆರೂಸಲೇಮಿನಿಂದ ಓಡಿಹೋಗಿರಿ, ತೆಕೋವದಲ್ಲಿ ತುತೂರಿ ಊದಿರಿ; ಬೇತ್ ಹಕ್ಕೆರೆಮಿನಲ್ಲಿ ಧ್ವಜವನ್ನೆತ್ತಿರಿ. ಏಕೆಂದರೆ ಕೇಡೂ ದೊಡ್ಡ ನಾಶವೂ ಉತ್ತರದ ಕಡೆಯಿಂದ ತೋರುತ್ತವೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೆರೆಮೀಯ 6:1
19 ತಿಳಿವುಗಳ ಹೋಲಿಕೆ  

ತಿಪ್ಪೆಬಾಗಲನ್ನು ಜೀರ್ಣೋದ್ಧಾರಮಾಡಿದವನು ಬೇತ್‍ಹಕ್ಕೆರೆವಿುನ ನಾಡೊಡೆಯನೂ ರೇಕಾಬನ ಮಗನೂ ಆದ ಮಲ್ಕೀಯನು; ಇವನು ಅದರ ಗೋಡೆಯನ್ನು ಕಟ್ಟಿ ಅದಕ್ಕೆ ಕದ ತಿರುಗಣಿ ಅಗುಳಿಗಳನ್ನು ಹಚ್ಚಿದನು.


ಆಹಾ, ಬಡಗಲಿಂದ ಒಂದು ಜನಾಂಗವು ಬರುತ್ತದೆ, ಮಹಾ ಜನವು ಎಬ್ಬಿಸಲ್ಪಟ್ಟು ಲೋಕದ ಕಟ್ಟಕಡೆಯಿಂದ ಹೊರಡುತ್ತದೆ.


ಅವು ಯಾವವಂದರೆ - ಬೇತ್ಲೆಹೆಮ್, ಏತಾಮ್, ತೆಕೋವ,


ತೆಕೋವದಿಂದ ಒಬ್ಬ ಬುದ್ದಿವಂತೆಯಾದ ಸ್ತ್ರೀಯನ್ನು ಕರೇಕಳುಹಿಸಿ ಆಕೆಗೆ - ನೀನು ಪ್ರಿಯರನ್ನು ಕಳಕೊಂಡು ಬಹುದಿವಸಗಳಿಂದ ಶೋಕಪಡುತ್ತಿರುವ ಸ್ತ್ರೀಯೋ ಎಂಬಂತೆ ಶೋಕವಸ್ತ್ರಗಳನ್ನು ಧರಿಸಿಕೊಂಡು


ಯೆರೂಸಲೇವಿುನಲ್ಲಿದ್ದ ಯೆಬೂಸಿಯರನ್ನು ಹೊರಡಿಸುವದು ಬೆನ್ಯಾಮೀನ್ಯರಿಂದ ಆಗದೆ ಹೋಯಿತು. ಅವರು ಇಂದಿನವರೆಗೂ ಬೆನ್ಯಾಮೀನ್ಯರ ಸಂಗಡ ಯೆರೂಸಲೇವಿುನಲ್ಲಿಯೇ ವಾಸವಾಗಿದ್ದಾರೆ.


ಯೆಹೂದದ ಅರಸನಾದ ಉಜ್ಜೀಯನ ಕಾಲದಲ್ಲಿ ಅಂದರೆ ಇಸ್ರಾಯೇಲಿನ ಅರಸನೂ ಯೋವಾಷನ ಮಗನೂ ಆದ ಯಾರೊಬ್ಬಾಮನ ಕಾಲದಲ್ಲಿ ಭೂಕಂಪಕ್ಕೆ ಎರಡು ವರ್ಷಗಳ ಮುಂಚೆ ತೆಕೋವದ ಕುರುಬರಲ್ಲಿ ಒಬ್ಬನಾದ ಆಮೋಸನಿಗೆ ಇಸ್ರಾಯೇಲಿನ ವಿಷಯವಾಗಿ ಕಂಡುಬಂದ ದೈವೋಕ್ತಿಗಳು.


ಇಗೋ, ನಾನು ಬಡಗಣ ಜನಾಂಗಗಳನ್ನೆಲ್ಲಾ ಕರೆಯಿಸಿ ಬಾಬೆಲಿನ ಅರಸನೂ ನನ್ನ ಸೇವಕನೂ ಆದ ನೆಬೂಕದ್ನೆಚ್ಚರನನ್ನು ಬರಮಾಡಿ ಇವರೆಲ್ಲರನ್ನು ಈ ದೇಶದ ಮೇಲೂ ಇದರ ನಿವಾಸಿಗಳ ಮೇಲೂ ಸುತ್ತಲಿನ ಸಕಲ ಜನಾಂಗಗಳ ಮೇಲೂ ಬೀಳಿಸಿ ಅವುಗಳನ್ನು ತುಂಬಾ ಹಾಳುಗೈದು ಬೆರಗಿನ ಸಿಳ್ಳಿಗೆ ಗುರಿಪಡಿಸಿ ನಿತ್ಯನಾಶನಕ್ಕೆ ಈಡುಮಾಡುವೆನು.


ಇಗೋ, ಒಂದು ಸದ್ದು! ಆಹಾ, ಬರುತ್ತಿದೆ! ಯೆಹೂದದ ಪಟ್ಟಣಗಳನ್ನು ನಾಶಪಡಿಸಿ ನರಿಗಳ ಹಕ್ಕೆಯನ್ನಾಗಿ ಮಾಡುವದಕ್ಕೆ ಉತ್ತರದೇಶದಿಂದ ಮಹಾಕಂಪನವು ಸಂಭವಿಸುತ್ತದೆ.


ಪಟ್ಟಣದವರೆಲ್ಲರೂ ಸವಾರರ ಮತ್ತು ಬಿಲ್ಲುಗಾರರ ಆರ್ಭಟಕ್ಕೆ ಹೆದರಿ ಓಡುತ್ತಾರೆ; ಇತ್ತ ಪೊದೆಗಳಲ್ಲಿ ಅವಿತುಕೊಳ್ಳುತ್ತಾರೆ, ಅತ್ತ ಬಂಡೆಗಳನ್ನು ಹತ್ತುತ್ತಾರೆ; ಪ್ರತಿಯೊಂದು ಪಟ್ಟಣವು ಯಾವ ನಿವಾಸಿಯೂ ಇಲ್ಲದೆ ನಿರ್ಜನವಾಗುತ್ತದೆ.


ಯೆರೂಸಲೇವಿುನಲ್ಲಿ ವಾಸವಾಗಿದ್ದ ಯೆಬೂಸಿಯರನ್ನು ಹೊರಡಿಸುವದು ಯೆಹೂದಕುಲದವರಿಂದ ಆಗದೆ ಹೋಯಿತು. ಆದದರಿಂದ ಅವರು ಇಂದಿನವರೆಗೂ ಯೆಹೂದಕುಲದವರೊಡನೆ ಯೆರೂಸಲೇವಿುನಲ್ಲೇ ವಾಸವಾಗಿದ್ದಾರೆ.


ಊರಲ್ಲಿ ಕೊಂಬೂದಿದರೆ ಜನರು ಅಂಜರೋ? ಯೆಹೋವನಿಂದಲ್ಲದೆ ಊರಿಗೆ ವಿಪತ್ತು ಸಂಭವಿಸುವದೋ?


ಅನಂತರ ಕಪ್ಪು ಕುದುರೆಗಳು ಉತ್ತರದೇಶಕ್ಕೆ ಹೊರಟವು. ಬಿಳಿ ಕುದುರೆಗಳು ಅವುಗಳನ್ನು ಹಿಂಬಾಲಿಸಿದವು. ಮಚ್ಚೆ ಮಚ್ಚೆಯ ಕುದುರೆಗಳು ದಕ್ಷಿಣದೇಶಕ್ಕೆ ಹೋದವು.


ತೆಕೋವದ ಶ್ರೀಮಂತರಾದರೋ ತಮ್ಮ ಒಡೆಯರ ಸೇವೆಗಾಗಿ ಹೆಗಲನ್ನು ಕೊಡಲಿಲ್ಲ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು