ಯೆರೆಮೀಯ 6:26 - ಕನ್ನಡ ಸತ್ಯವೇದವು J.V. (BSI)26 ನನ್ನ ಪ್ರಜೆಯೆಂಬ ಯುವತಿಯೇ, ಗೋಣಿತಟ್ಟನ್ನು ಸುತ್ತಿಕೊಂಡು ಬೂದಿಯಲ್ಲಿ ಬಿದ್ದು ಹೊರಳಾಡು; ಇದ್ದೊಬ್ಬ ಮಗನನ್ನು ಕಳೆದುಕೊಂಡಂತೆ ದುಃಖಪಟ್ಟು ಘೋರಪ್ರಲಾಪಮಾಡು; ಕೊಳ್ಳೆಗಾರನು ತಟ್ಟನೆ ನಮ್ಮ ಮೇಲೆ ಬೀಳುವನಷ್ಟೆ. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201926 ನನ್ನ ಪ್ರಜೆಯೆಂಬ ಯುವತಿಯೇ, ಗೋಣಿತಟ್ಟನ್ನು ಸುತ್ತಿಕೊಂಡು, ಬೂದಿಯಲ್ಲಿ ಬಿದ್ದು ಹೊರಳಾಡು. ಇದ್ದೊಬ್ಬ ಮಗನನ್ನು ಕಳೆದುಕೊಂಡಂತೆ ದುಃಖಪಟ್ಟು ಘೋರಪ್ರಲಾಪ ಮಾಡು; ಕೊಳ್ಳೆಗಾರನು ತಟ್ಟನೆ ನಮ್ಮ ಮೇಲೆ ಬೀಳುವನಷ್ಟೆ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)26 ಸರ್ವೇಶ್ವರ ಜನರಿಗೆ : “ನನ್ನ ಪ್ರಜೆಯೆಂಬ ಕುವರಿಯೇ, ಗೋಣಿತಟ್ಟನ್ನು ಸುತ್ತಿಕೊ, ಬೂದಿಯಲ್ಲಿ ಬಿದ್ದು ಹೊರಳಾಡು. ಇದ್ದ ಒಬ್ಬನೇ ಮಗನನ್ನು ಕಳೆದುಕೊಂಡವಳಂತೆ ದುಃಖಪಟ್ಟು ಘೋರವಾಗಿ ಪ್ರಲಾಪಮಾಡು. ಕೊಳ್ಳೆಗಾರ ತಟ್ಟನೆ ನಿನ್ನ ಮೇಲೆ ಬೀಳಲಿದ್ದಾನೆ ಎಂಬುದನ್ನು ಮನದಲ್ಲಿಡು.” ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್26 ಅಯ್ಯೋ ನನ್ನ ಜನರೇ, ಗೋಣಿತಟ್ಟನ್ನು ಸುತ್ತಿಕೊಂಡು ಬೂದಿಯಲ್ಲಿ ಹೊರಳಾಡಿರಿ. ಸತ್ತವರಿಗಾಗಿ ದೊಡ್ಡ ಧ್ವನಿಯಲ್ಲಿ ರೋದಿಸಿರಿ. ಇದ್ದೊಬ್ಬ ಮಗನನ್ನು ಕಳೆದುಕೊಂಡಂತೆ ಬೋರ ಪ್ರಲಾಪ ಮಾಡಿರಿ. ವಿನಾಶಕನು ತಕ್ಷಣ ನಮ್ಮ ಮೇಲೆರಗುವನು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ26 ಓ ನನ್ನ ಮಗಳೇ, ನನ್ನ ಪ್ರಜೆಗಳೇ, ಗೋಣಿತಟ್ಟನ್ನು ಕಟ್ಟಿಕೋ, ಬೂದಿಯಲ್ಲಿ ಹೊರಳಾಡು. ಒಬ್ಬನೇ ಮಗನಿಗೋಸ್ಕರ ಮಾಡುವ ದುಃಖದ ಪ್ರಕಾರ, ಬಹು ಕಠಿಣವಾದ ಗೋಳಾಟವನ್ನು ಮಾಡು. ನಾಶ ಮಾಡುವವನು ಫಕ್ಕನೆ ನಮ್ಮ ಮೇಲೆ ಬರುವನು. ಅಧ್ಯಾಯವನ್ನು ನೋಡಿ |