Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೆರೆಮೀಯ 6:4 - ಕನ್ನಡ ಸತ್ಯವೇದವು J.V. (BSI)

4 [ಇವರು] - ಚೀಯೋನಿಗೆ ವಿರುದ್ಧವಾಗಿ ಸನ್ನದ್ಧರಾಗಿರಿ; ಏಳಿರಿ, ಮಧ್ಯಾಹ್ನಕ್ಕೆ ಅದರ ಮೇಲೆ ನುಗ್ಗುವ! ಅಯ್ಯೋ, ಇದೇನು! ನಮಗೆ ಹೊತ್ತು ತಿರುಗಿತಲ್ಲಾ, ಸಂಜೆಯ ನೆರಳುಗಳು ಉದ್ದವಾದವು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

4 ಇವರು, ಚೀಯೋನಿಗೆ ವಿರುದ್ಧವಾಗಿ ಸನ್ನದ್ಧರಾಗಿರಿ, ಏಳಿರಿ, ಮಧ್ಯಾಹ್ನಕ್ಕೆ ಅದರ ಮೇಲೆ ನುಗ್ಗುವ! ಅಯ್ಯೋ, ಇದೇನು! ನಮಗೆ ಹೊತ್ತು ತಿರುಗಿತಲ್ಲಾ, ಸಂಜೆಯ ನೆರಳುಗಳು ಉದ್ದವಾದವು ಅನ್ನುವರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

4 ಅವರು : “ಸಿಯೋನಿಗೆ ವಿರುದ್ಧ ಯುದ್ಧಸನ್ನದ್ಧರಾಗಿರಿ. ಏಳಿ, ನಡುಮಧ್ಯಾಹ್ನದಲ್ಲೆ ಅದರ ಮೇಲೆ ನುಗ್ಗುವ. ಅಯ್ಯೋ, ಇದೇನು ಹೊತ್ತುಮೀರಿ ಹೋಗುತ್ತಿದೆ ಅಲ್ಲಾ, ಸಂಜೆಯ ನೆರಳು ಉದ್ದುದ್ದವಾಗುತ್ತಿದೆಯಲ್ಲಾ !

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

4 “ಜೆರುಸಲೇಮಿನ ಮೇಲೆ ಧಾಳಿ ಮಾಡುವದಕ್ಕೆ ಸಿದ್ಧರಾಗಿರಿ. ಏಳಿರಿ, ನಾವು ನಗರವನ್ನು ಮಧ್ಯಾಹ್ನದಲ್ಲಿಯೇ ಮುತ್ತೋಣ. ಆದರೆ ಈಗಾಗಲೇ ಹೊತ್ತಾಗಿದೆ. ಸಾಯಂಕಾಲದ ನೆರಳುಗಳು ವಿಸ್ತಾರಗೊಳ್ಳುತ್ತಿವೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

4 “ಚೀಯೋನಿಗೆ ವಿರೋಧವಾಗಿ ಯುದ್ಧವನ್ನು ಸಿದ್ಧಮಾಡಿರಿ. ಏಳಿರಿ, ಮಧ್ಯಾಹ್ನದಲ್ಲಿ ದಾಳಿಮಾಡೋಣ. ನಮಗೆ ಕಷ್ಟ! ಏಕೆಂದರೆ ಹೊತ್ತು ಮುಳುಗುತ್ತದೆ; ಸಂಜೆಯ ನೆರಳುಗಳು ಉದ್ದವಾಗುತ್ತವೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೆರೆಮೀಯ 6:4
14 ತಿಳಿವುಗಳ ಹೋಲಿಕೆ  

ಅವರ ವಿಧವೆಯರು ನನ್ನ ಭಾಗಕ್ಕೆ ಸಮುದ್ರದ ಉಸುಬಿಗಿಂತ ಹೆಚ್ಚಾಗಿರುವರು; ಯುವಕರ ತಾಯಿಗಳ ಮೇಲೆ ಕೊಳ್ಳೆಹೊಡೆಯುವವನನ್ನು ಮಧ್ಯಾಹ್ನದಲ್ಲೇ ಬರಮಾಡುವೆನು; ಅವರ ಮೇಲೆ ಕಳವಳವನ್ನೂ ದಿಗಿಲನ್ನೂ ತಟ್ಟನೆ ಬೀಳಿಸುವೆನು.


ಗಾಜ ನಿರ್ಜನವಾಗುವದು, ಅಷ್ಕೆಲೋನ್ ಹಾಳಾಗುವದು, ಅಷ್ಡೋದನ್ನು ಮಧ್ಯಾಹ್ನದಲ್ಲಿ ಓಡಿಸಿಬಿಡುವರು, ಎಕ್ರೋನ್ ನಿರ್ಮೂಲವಾಗುವದು.


ಜನಾಂಗಗಳಲ್ಲಿ ಹೀಗೆ ಪ್ರಕಟಿಸಿರಿ - [ಜನಾಂಗಗಳೇ,] ಸನ್ನದ್ಧರಾಗಿರಿ, ಶೂರರನ್ನು ಎಚ್ಚರಪಡಿಸಿರಿ, ಯೋಧರೆಲ್ಲರೂ ಕೂಡಲಿ, ಯುದ್ಧಕ್ಕೆ ಹೊರಡಲಿ.


ಸುಗ್ಗಿ ತೀರಿತು, ಹಣ್ಣಿನ ಕಾಲ ಮುಗಿಯಿತು, ನಮಗೆ ಉದ್ಧಾರವೇ ಆಗಲಿಲ್ಲ.


ಚೀಯೋನೆಂಬ ತೋಟದ ಸಾಲುಗಿಡಗಳ ಮೇಲೆ ಬಿದ್ದು ಹಾಳುಮಾಡಿರಿ, ಆದರೆ ನಿರ್ಮೂಲಮಾಡಬೇಡಿರಿ; ಅದರ ರೆಂಬೆಗಳನ್ನು ತೆಗೆದುಹಾಕಿರಿ, ಅವು ಯೆಹೋವನವುಗಳಲ್ಲ.


ನನ್ನ ಕಾಂತನೇ, ಹೊರಡು, ಹಗಲು ತಂಪಾಗಿ ನೆರಳು ಇಳಿದು ಹೋಗುವ ತನಕ ವಿಯೋಗವೆಂಬ ಪರ್ವತಗಳಲ್ಲಿ ಜಿಂಕೆಯಂತೆಯೂ ಪ್ರಾಯದ ಎರಳೆಯಂತೆಯೂ ಇರು.


ಬಿಲ್ಲನ್ನೂ ಈಟಿಯನ್ನೂ ಹಿಡಿದುಕೊಂಡಿದ್ದಾರೆ, ಅವರು ಕ್ರೂರರು, ನಿಷ್ಕರುಣಿಗಳು; ಅವರ ಧ್ವನಿಯು ಸಮುದ್ರದಂತೆ ಮೊರೆಯುತ್ತದೆ, ಕುದುರೆ ಹತ್ತಿದ್ದಾರೆ; ಚೀಯೋನ್ ನಗರಿಯೇ, ಆ ಸೈನ್ಯವು ಶೂರನಂತೆ ನಿನ್ನ ಮೇಲೆ ಯುದ್ಧಸನ್ನದ್ಧವಾಗಿದೆ ಎಂದು ಯೆಹೋವನು ಅನ್ನುತ್ತಾನೆ.


ಏಳು ಮಂದಿ ಮಕ್ಕಳನ್ನು ಹೆತ್ತ ಭಾಗ್ಯವಂತಳೂ ಬಳಲಿ ಪ್ರಾಣಬಿಟ್ಟಂತಿದ್ದಾಳೆ, ಹಗಲಿನಲ್ಲಿಯೇ ಆಕೆಯ ಪಾಲಿಗೆ ಸೂರ್ಯನು ಮುಣುಗಿದ್ದಾನೆ, ಆಶಾಭಂಗಪಟ್ಟು ಅವಮಾನಕ್ಕೆ ಈಡಾಗಿದ್ದಾಳೆ; ಆಕೆಯ ಉಳಿದ ಸಂತಾನವನ್ನು ಶತ್ರುಗಳ ಕಣ್ಣೆದುರಿನಲ್ಲಿ ನಾನು ಖಡ್ಗಕ್ಕೆ ಗುರಿಮಾಡುವೆನು, ಇದು ಯೆಹೋವನ ನುಡಿ.


ಓಬದ್ಯನಿಗಾದ ದೈವದರ್ಶನ. ಕರ್ತನಾದ ಯೆಹೋವನು ಎದೋವಿುನ ವಿಷಯವಾಗಿ ನುಡಿದ ವಾಕ್ಯ. ಯೆಹೋವನಿಂದ ಬಂದ ಸಮಾಚಾರವನ್ನು ಕೇಳಿದ್ದೇವೆ; ಆತನು ದೂತನ ಮೂಲಕ ಜನಾಂಗಗಳಿಗೆ ಹೀಗೆ ಹೇಳಿಕಳುಹಿಸಿದ್ದಾನೆ - ಹೊರಡಿರಿ, ಯುದ್ಧಕ್ಕೆ ಹೊರಟು ಎದೋವಿುನ ಮೇಲೆ ಬೀಳೋಣ.


ನಾನು ಸಂಜೆಯನ್ನು ಬಯಸುವ ದಾಸನಂತೆಯೂ ಕೂಲಿಯನ್ನು ನಿರೀಕ್ಷಿಸುವ ಆಳಿನಂತೆಯೂ ಇದ್ದೇನೆ.


ನನ್ನ ಜನರನ್ನು ಸನ್ಮಾರ್ಗದಿಂದ ತಪ್ಪಿಸುವವರೂ ಹಲ್ಲುಗಳಿಗೆ ಕುರುಕುವದೇನಾದರೂ ಸಿಕ್ಕಿರುವ ತನಕ ಶುಭವನ್ನು ಪ್ರಕಟಿಸುವವರೂ ತಮ್ಮ ಬಾಯಿಗೆ ಕವಳಕೊಡದವನ ಮೇಲೆ ಯುದ್ಧನಿರ್ಧರಿಸುವವರೂ ಆಗಿರುವ ಪ್ರವಾದಿಗಳ ವಿಷಯವಾಗಿ ಯೆಹೋವನು ಇಂತೆನ್ನುತ್ತಾನೆ -


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು