Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೆರೆಮೀಯ 6:7 - ಕನ್ನಡ ಸತ್ಯವೇದವು J.V. (BSI)

7 ತೊಟ್ಟಿಯು ತನ್ನಲ್ಲಿನ ನೀರನ್ನು ತಿಳಿಯಾಗಿ ಇಟ್ಟುಕೊಳ್ಳುವಂತೆ ಈ ಪಟ್ಟಣವು ತನ್ನಲ್ಲಿನ ದುಷ್ಟತನವನ್ನು ನಿಚ್ಚಳವಾಗಿ ಇಟ್ಟುಕೊಂಡಿದೆ; ಅಲ್ಲಿ ಬಲಾತ್ಕಾರದ ಮತ್ತು ಕೊಳ್ಳೆಯ ಸುದ್ದಿಯೇ ಕೇಳಬರುತ್ತದೆ; ರೋಗಗಳೂ ವ್ರಣಗಳೂ ಸದಾ ನನ್ನ ಕಣ್ಣಿಗೆ ಬೀಳುತ್ತವೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

7 ತೊಟ್ಟಿಯು ತನ್ನಲ್ಲಿನ ನೀರನ್ನು ತಿಳಿಯಾಗಿ ಇಟ್ಟುಕೊಳ್ಳುವಂತೆ ಈ ಪಟ್ಟಣವು ತನ್ನಲ್ಲಿನ ದುಷ್ಟತನವನ್ನು ನಿಚ್ಚಳವಾಗಿ ಇಟ್ಟುಕೊಂಡಿದೆ. ಅಲ್ಲಿ ಬಲಾತ್ಕಾರದ ಮತ್ತು ಕೊಳ್ಳೆಯ ಸುದ್ದಿಯೇ ಕೇಳಿಬರುತ್ತದೆ; ರೋಗಗಳೂ, ಗಾಯಗಳೂ ಸದಾ ನನ್ನ ಕಣ್ಣಿಗೆ ಬೀಳುತ್ತವೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

7 ತೊಟ್ಟಿ ತನ್ನಲ್ಲಿನ ನೀರನ್ನು ತಿಳಿಯಾಗಿ ಇಟ್ಟುಕೊಳ್ಳುವಂತೆ ಈ ನಗರ ತನ್ನಲ್ಲಿನ ನೀಚತನವನ್ನು ನಿಚ್ಚಳವಾಗಿ ಇಟ್ಟುಕೊಂಡಿದೆ. ಇಲ್ಲಿಂದ ಕೇಳಿಬರುವುದೆಲ್ಲ ಹಿಂಸಾಚಾರದ ಹಾಗೂ ಕೊಳ್ಳೆಯ ಸುದ್ದಿಯೆ. ರೋಗ ರುಜಿನಗಳೂ ಗಾಯಹುಣ್ಣುಗಳೂ ಸದಾ ನನ್ನ ಕಣ್ಣಿಗೆ ಬೀಳುತ್ತಿವೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

7 ಬಾವಿಯಲ್ಲಿ ಹೊಸ ನೀರು ಬರುವಂತೆ ಜೆರುಸಲೇಮಿನಲ್ಲಿ ಹೊಸಹೊಸ ದುಷ್ಟತನ ಉಂಟಾಗುತ್ತದೆ. ಈ ಪಟ್ಟಣದಲ್ಲಿ ಬಲಾತ್ಕಾರ ಮತ್ತು ವಿನಾಶಗಳೇ ಕೇಳಿಬರುತ್ತವೆ. ನನಗೆ ಯಾವಾಗಲೂ ಜೆರುಸಲೇಮಿನ ರೋಗ ಮತ್ತು ಗಾಯಗಳು ಕಣ್ಣಿಗೆ ಬೀಳುತ್ತವೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

7 ಬುಗ್ಗೆಯು ನೀರನ್ನು ಹರಿಯ ಮಾಡುವಂತೆ, ಅವಳು ತನ್ನ ಕೆಟ್ಟತನವನ್ನು ಹರಿಯ ಮಾಡುತ್ತಾಳೆ. ಬಲಾತ್ಕಾರವೂ ಸುಲಿಗೆಯೂ ಅವಳಲ್ಲಿ ಕೇಳ ಬರುತ್ತದೆ. ದುಃಖವೂ ಗಾಯಗಳೂ ಯಾವಾಗಲೂ ನನ್ನ ಮುಂದೆ ಇವೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೆರೆಮೀಯ 6:7
24 ತಿಳಿವುಗಳ ಹೋಲಿಕೆ  

ಒಂದು ಸರಪಣಿಯನ್ನು ಮಾಡು; ಏಕಂದರೆ ದೇಶವು ನರಹತ್ಯಭರಿತವಾಗಿದೆ, ಪಟ್ಟಣವು ಬಲಾತ್ಕಾರಪೂರ್ಣವಾಗಿದೆ.


ಹಿಂಸೆಯು ಬೆಳೆದು ಬೆಳೆದು ಕೆಡುಕಿನ ಕೋಲಾಗಿದೆ; ನಿನ್ನವರಲ್ಲಿ ಯಾರೂ [ಉಳಿಯರು], ಆ ಜನಸಮೂಹದಲ್ಲಿಯೂ ಅವರ ಆಸ್ತಿಯಲ್ಲಿಯೂ [ಶೇಷವೇನೂ ಇರದು]. ಅವರಲ್ಲಿ ಯಾವ ಶ್ರೇಷ್ಠತೆಯೂ ನಿಲ್ಲದು.


ನಾನು ಮಾತಾಡುವದೆಲ್ಲಾ ಅರಚಾಟವೇ; ಬಲಾತ್ಕಾರ, ಕೊಳ್ಳೆ ಎಂದೇ ಕೂಗಿಕೊಳ್ಳುತ್ತೇನೆ; [ನಾನು ಸಾರುವ] ಯೆಹೋವನ ವಾಕ್ಯವು ನನ್ನನ್ನು ಜನರ ದೂಷಣೆಗೂ ಪರಿಹಾಸಕ್ಕೂ ಗುರಿಮಾಡಿದೆ.


ದುಷ್ಟರಾದರೋ ಅಲ್ಲೋಲಕಲ್ಲೋಲವಾದ ಸಮುದ್ರದಂತಿದ್ದಾರೆ; ಅದು ಸುಮ್ಮನಿರದು, ಅದರ ತೆರೆಗಳು ಕೆಸರನ್ನೂ ಬುರುದೆಯನ್ನೂ ಕಾರುತ್ತಲಿರುತ್ತವೆ.


ಯೆರೂಸಲೇಮು ಸುರಿಸಿದ ರಕ್ತವು ಅದರಲ್ಲೇ ನಿಂತಿದೆ; ದೂಳು ಮುಚ್ಚೀತೆಂದು ಆ ಪಟ್ಟಣದವರು ಅದನ್ನು ನೆಲದ ಮೇಲೆ ಹೊಯ್ಯದೆ ಬರೀ ಬಂಡೆಯ ಮೇಲೆ ನಿಲ್ಲಿಸಿರುತ್ತಾರೆ;


ನಿನ್ನ ಹೃದಯವನ್ನು ಬಹು ಜಾಗರೂಕತೆಯಿಂದ ಕಾಪಾಡಿಕೋ; ಅದರೊಳಗಿಂದ ಜೀವಧಾರೆಗಳು ಹೊರಡುವವು.


ಇವರ ಬಲೆಯ ದಾರವು ಬಟ್ಟೆಯಾಗದು, ಇವರು ನೇಯ್ದದ್ದು ಹೊದಿಕೆಯಾಗದು; ಇವರ ಕಾರ್ಯಗಳು ಅಧರ್ಮಕಾರ್ಯಗಳು, ಇವರ ಕೈಯಲ್ಲಿ ಬಲಾತ್ಕಾರವೇ.


ಯೆಹೋವನು ಇಂತೆನ್ನುತ್ತಾನೆ - ನಿನ್ನ ಗಾಯವು ಗುಣಹೊಂದದು, ನಿನ್ನ ಬಾಸುಂಡೆಯು ಘೋರವಾಗಿದೆ.


ನಿನ್ನ ಭಾಗಕ್ಕೆ ಯಾರೂ ಇಲ್ಲ, ನಿನ್ನ ವ್ರಣಕ್ಕೆ ಔಷಧವಿಲ್ಲ, ನಿನಗೆ ವಾಸಿಯಾಗದು.


ಈ ಪಟ್ಟಣವು ಕಟ್ಟಿದಂದಿನಿಂದ ಇಂದಿನವರೆಗೂ ನನ್ನ ಕೋಪ ರೋಷಗಳಿಗೆ ಆಸ್ಪದವಾಗಿದೆ.


ಕರ್ತನಾದ ಯೆಹೋವನು ಇಂತೆನ್ನುತ್ತಾನೆ - ಇಸ್ರಾಯೇಲಿನ ಪ್ರಭುಗಳೇ, ಇನ್ನು ಸಾಕು, ಸಾಕು; ಕೊಳ್ಳೆಯನ್ನೂ ಬಲಾತ್ಕಾರವನ್ನೂ ತ್ಯಜಿಸಿ ನೀತಿನ್ಯಾಯಗಳನ್ನು ನಡಿಸಿರಿ; ನನ್ನ ಜನರ ಬಾಧ್ಯತೆಗಳನ್ನು ತಪ್ಪಿಸುವ ಅನ್ಯಾಯವನ್ನು ಬಿಟ್ಟುಬಿಡಿರಿ; ಇದು ಕರ್ತನಾದ ಯೆಹೋವನ ನುಡಿ,


ಅಂಗಾಲಿನಿಂದ ನಡುನೆತ್ತಿಯ ತನಕ ಪೆಟ್ಟು ಬಾಸುಂಡೆ ಮಾಗದ ಗಾಯಗಳೇ ಹೊರತು ಏನೂ ಸೌಖ್ಯವಿಲ್ಲ; ಅವನ್ನು ಹಿಸಕಿ ಮುಚ್ಚಿಲ್ಲ, ಕಟ್ಟಿಲ್ಲ, ಎಣ್ಣೆಸವರಿ ಮೃದು ಮಾಡಿಲ್ಲ.


ಗಿಲ್ಯಾದಿನಲ್ಲಿ ಔಷಧವಿಲ್ಲವೋ? ಅಲ್ಲಿ ವೈದ್ಯನು ಸಿಕ್ಕನೋ? ನನ್ನ ಪ್ರಜೆಯೆಂಬಾಕೆಗೆ ಏಕೆ ಗುಣವಾಗಲಿಲ್ಲ?


ಅಯ್ಯೋ, ನೋವು ನಿಲ್ಲದು ಎಂದು ನಿನ್ನ ವ್ರಣಕ್ಕಾಗಿ ಏಕೆ ಅರಚಿಕೊಳ್ಳುತ್ತೀ? ನಿನ್ನ ಅಪರಾಧವು ಹೆಚ್ಚಿ ಪಾಪಗಳು ಬಹಳವಾದದರಿಂದ ನಿನಗೆ ಇದನ್ನೆಲ್ಲಾ ಮಾಡಿದೆನು.


[ಅಮ್ಮೋನೇ,] ನಿನ್ನ ಜೋಯಿಸರು ವಿುಥ್ಯೆಯನ್ನು ಸಾಕ್ಷಾತ್ಕರಿಸಿ ಸುಳ್ಳುಸುಳ್ಳಾಗಿ ಕಣಿ ಹೇಳುತ್ತಿದ್ದಾರೆ. ಸಮಯವು ಹತ್ತರಿಸಿ ಅಪರಾಧದ ಕಡೆಗಾಲವು ಸಂಭವಿಸಿ ಹತರಾಗಿ ಬಿದ್ದಿರುವ ದುಷ್ಟರ ಗತಿಯನ್ನು ನೋಡು! ಜೋಯಿಸರನ್ನು ನಂಬಿದ ನೀನೂ ಆ ದುಷ್ಟರ ಕತ್ತುಗಳ ಮೇಲೆ ಒರಗಿಹೋಗುವಿ.


ಅಯ್ಯೋ, ಅವಿಧೇಯವೂ ಮಲಿನವೂ ಆದ ಹಿಂಸಕ ನಗರಿಯ ಗತಿಯನ್ನು ಏನು ಹೇಳಲಿ!


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು