Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೆರೆಮೀಯ 7:15 - ಕನ್ನಡ ಸತ್ಯವೇದವು J.V. (BSI)

15 ಮತ್ತು ನಾನು ನಿಮ್ಮ ಎಲ್ಲಾ ಸಹೋದರರನ್ನು ಅಂದರೆ ಸಮಸ್ತ ಎಫ್ರಾಯೀಮ್ ವಂಶದವರನ್ನು ಎಸೆದುಬಿಟ್ಟ ಹಾಗೆ ನಿಮ್ಮನ್ನೂ ನನ್ನ ಕಣ್ಣೆದುರಿನಿಂದ ಎಸೆದುಬಿಡುವೆನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

15 ಮತ್ತು ನಾನು ನಿಮ್ಮ ಎಲ್ಲಾ ಸಹೋದರರನ್ನು ಅಂದರೆ ಸಮಸ್ತ ಎಫ್ರಾಯೀಮ್ ವಂಶದವರನ್ನು ತೊಲಗಿಸಿಬಿಟ್ಟ ಹಾಗೆ ನಿಮ್ಮನ್ನೂ ನನ್ನ ಕಣ್ಣೆದುರಿನಿಂದ ತೊಲಗಿಸುವೆನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

15 ನಿಮ್ಮ ಬಂಧುಬಳಗದವರನ್ನು ಅಂದರೆ, ಇಡಿ ಎಫ್ರಯಿಮ್ ವಂಶದವರನ್ನು ತೊಲಗಿಸಿಬಿಟ್ಟಂತೆ, ನಿಮ್ಮನ್ನೂ ನನ್ನ ಸನ್ನಿಧಿಯಿಂದ ತೊಲಗಿಸುವೆನು.”

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

15 ನಾನು ನಿಮ್ಮ ಎಲ್ಲಾ ಸಹೋದರರನ್ನು ಅಂದರೆ ಸಮಸ್ತ ಎಫ್ರಾಯೀಮ್ ವಂಶದವರನ್ನು ಎಸೆದುಬಿಟ್ಟ ಹಾಗೆ ನಿಮ್ಮನ್ನೂ ನನ್ನಿಂದ ದೂರ ಎಸೆದುಬಿಡುವೆನು.”

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

15 ನಿಮ್ಮ ಸಹೋದರರೆಲ್ಲರನ್ನೂ, ಎಫ್ರಾಯೀಮಿನ ಎಲ್ಲಾ ಸಂತಾನವನ್ನೂ ಹೊರಗೆ ಹಾಕಿದ ಹಾಗೆ, ನಿಮ್ಮನ್ನು ನನ್ನ ಸಮ್ಮುಖದಿಂದ ಹೊರಗೆ ಹಾಕುವೆನು.’

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೆರೆಮೀಯ 7:15
25 ತಿಳಿವುಗಳ ಹೋಲಿಕೆ  

ಯೆಹೋವನು ನನಗೆ ಹೀಗೆ ಹೇಳಿದನು - ಮೋಶೆಯೂ ಸಮುವೇಲನೂ ನನಗೆ ವಿಜ್ಞಾಪಿಸಿದರೂ ನನ್ನ ಮನಸ್ಸು ಈ ಜನರ ಕಡೆಗೆ ತಿರುಗದು; ನನ್ನ ಕಣ್ಣೆದುರಿನಿಂದ ಇವರನ್ನು ನೂಕಿಬಿಡು, ತೊಲಗಿಹೋಗಲಿ! ಅವರು - ನಾವು ಎಲ್ಲಿಗೆ ಹೋಗೋಣ ಎಂದು ಕೇಳಲು


ಸಮಾರ್ಯವು ತನ್ನ ದೇವರಿಗೆ ತಿರುಗಿಬಿದ್ದದರಿಂದ ತನ್ನ ದೋಷಫಲವನ್ನು ಅನುಭವಿಸಲೇಬೇಕು; ಅದರ ಜನರು ಖಡ್ಗಹತರಾಗುವರು; ವೈರಿಗಳು ಅಲ್ಲಿನ ಮಕ್ಕಳನ್ನು ಬಂಡೆಗೆ ಅಪ್ಪಳಿಸುವರು. ಗರ್ಭಿಣಿಯರ ಹೊಟ್ಟೆಯನ್ನು ಸೀಳುವರು.


ಯೆಹೋವನು ಯೆರೂಸಲೇವಿುನವರ ಮೇಲೆಯೂ ಬೇರೆ ಎಲ್ಲಾ ಯೆಹೂದ್ಯರ ಮೇಲೆಯೂ ಇದನ್ನೆಲ್ಲಾ ಬರಮಾಡಿ ಕಡೆಯಲ್ಲಿ ಅವರನ್ನು ತನ್ನ ಸನ್ನಿಧಿಯಿಂದ ತಳ್ಳಿಬಿಡುವಷ್ಟು ರೋಷವುಳ್ಳವನಾದನು. ಚಿದ್ಕೀಯನು ಬಾಬೆಲಿನ ಅರಸನಾದ ನೆಬೂಕದ್ನೆಚ್ಚರನಿಗೆ ವಿರುದ್ಧವಾಗಿ ತಿರಿಗಿಬಿದ್ದದರಿಂದ


ದುರ್ಮಾರ್ಗದಲ್ಲಿ ನಡೆಯುವದನ್ನು ಬಿಡಲಿಲ್ಲವಾದದರಿಂದ ಯೆಹೋವನು ತನ್ನ ಸೇವಕರಾದ ಎಲ್ಲಾ ಪ್ರವಾದಿಗಳ ಮುಖಾಂತರವಾಗಿ ಮುಂತಿಳಿಸಿದಂತೆ ಅವರನ್ನು ತನ್ನ ಸನ್ನಿಧಿಯಿಂದ ತಳ್ಳಿಬಿಟ್ಟನು. ಅವರು ಸೆರೆಯವರಾಗಿ ತಮ್ಮ ದೇಶದಿಂದ ಅಶ್ಶೂರ್ ದೇಶಕ್ಕೆ ಒಯ್ಯಲ್ಪಟ್ಟು ಇಂದಿನವರೆಗೂ ಅಲ್ಲೇ ಇರುತ್ತಾರೆ.


ಎಫ್ರಾಯೀಮು ಮೇಯಿಸುವ ಮಂದೆಯು ಗಾಳಿಯೇ, ಹಿಂದಟ್ಟುವ ಬೇಟೆಯು ಮೂಡಣ ಗಾಳಿಯೇ; ಅದು ಮೋಸವನ್ನೂ ಹಿಂಸೆಯನ್ನೂ ನಿರಂತರ ಹೆಚ್ಚೆಚ್ಚಾಗಿ ನಡಿಸುತ್ತದೆ; ಅಶ್ಶೂರದೊಂದಿಗೆ ಒಪ್ಪಂದವನ್ನು ಮಾಡಿಕೊಳ್ಳುತ್ತದೆ; ಐಗುಪ್ತಕ್ಕೆ ಎಣ್ಣೆಯನ್ನು [ಕಾಣಿಕೆಯಾಗಿ] ಕಳುಹಿಸುತ್ತದೆ.


ಪೂರ್ವದಲ್ಲಿ ಗಿಬ್ಯದವರು ಕೆಡಿಸಿಕೊಂಡಂತೆ ಎಫ್ರಾಯೀಮ್ಯರು ತಮ್ಮನ್ನು ತೀರಾ ಕೆಡಿಸಿಕೊಂಡಿದ್ದಾರೆ; ದೇವರು ಅವರ ಅಧರ್ಮವನ್ನು ಜ್ಞಾಪಕಕ್ಕೆ ತಂದುಕೊಂಡು ಅವರ ಪಾಪಗಳಿಗೆ ಪ್ರತಿದಂಡನೆಮಾಡುವನು.


ಅವರು ಯೆಹೋವನ ದೇಶದಲ್ಲಿ ಇನ್ನು ವಾಸಿಸರು. ಎಫ್ರಾಯೀಮ್ಯರು ಐಗುಪ್ತಕ್ಕೆ ಹಿಂದಿರುಗುವರು, ಅಶ್ಶೂರದಲ್ಲಿ ಅವರು ತಿನ್ನುವ ಆಹಾರವು ಹೊಲಸಾಗುವದು.


ಯೆಹೋವನು ಅವನನ್ನು ಕುರಿತು - ಈ ಮಗುವಿಗೆ ಇಜ್ರೇಲ್ ಎಂಬ ಹೆಸರಿಡು; ಇಜ್ರೇಲಿನಲ್ಲಿ ಸುರಿಸಿದ ರಕ್ತಕ್ಕೆ ಪ್ರತಿಯಾಗಿ ಸ್ವಲ್ಪ ಕಾಲದೊಳಗೆ ನಾನು ಯೇಹುವಂಶದವರಿಗೆ ಮುಯ್ಯಿತೀರಿಸಿ ಇಸ್ರಾಯೇಲ್‍ಜನಾಂಗವನ್ನು ನಿರ್ನಾಮಮಾಡುವೆನು;


ಇಗೋ, ಖಂಡಿತವಾಗಿ ನಿಮ್ಮನ್ನೂ ನಾನು ನಿಮಗೆ ಮತ್ತು ನಿಮ್ಮ ಪಿತೃಗಳಿಗೆ ದಯಪಾಲಿಸಿದ ಪಟ್ಟಣವನ್ನೂ ಭಾರವೆಂದು ಎತ್ತಿ ನನ್ನೆದುರಿನಿಂದ ಎಸೆದುಬಿಟ್ಟು


ಭ್ರಷ್ಟಳಾದ ಇಸ್ರಾಯೇಲು ಹಾದರಮಾಡಿದ ಕಾರಣದಿಂದಲೇ ನಾನು ಅವಳನ್ನು ನಿರಾಕರಿಸಿ ತ್ಯಾಗಪತ್ರ ಕೊಟ್ಟದ್ದನ್ನು ಯೆಹೂದವೆಂಬ ದ್ರೋಹಿಯಾದ ಅವಳ ತಂಗಿಯು ನೋಡಿಯೂ ಅಂಜದೆ ತಾನೂ ಹೋಗಿ ಸೂಳೆತನವನ್ನು ನಡಿಸಿದಳು.


ಆಮೇಲೆ ಆಸನು ಎಲ್ಲಾ ಯೆಹೂದ ಬೆನ್ಯಾಮೀನ್ ಕುಲಗಳವರನ್ನೂ ತನ್ನ ದೇವರಾದ ಯೆಹೋವನು ತನ್ನ ಸಂಗಡ ಇರುವದನ್ನು ನೋಡಿ ತನ್ನೊಡನೆ ಗುಂಪುಗುಂಪಾಗಿ ಕೂಡಿಕೊಂಡು ಯೆಹೂದದೇಶದಲ್ಲಿ ಇಳಕೊಂಡಿದ್ದ ಎಫ್ರಾಯೀಮ್ ಮನಸ್ಸೆ ಸಿಮೆಯೋನ್ ಕುಲಗಳವರನ್ನೂ ಕರಿಸಿಕೊಂಡನು.


ಯೆಹೋವನು ಯೆರೂಸಲೇವಿುನವರ ಮೇಲೆಯೂ ಬೇರೆ ಎಲ್ಲಾ ಯೆಹೂದ್ಯರ ಮೇಲೆಯೂ ಇದನ್ನೆಲ್ಲಾ ಬರಮಾಡಿ ಕಡೆಯಲ್ಲಿ ಅವರನ್ನು ತನ್ನ ಸನ್ನಿಧಿಯಿಂದ ತಳ್ಳಿಬಿಡುವಷ್ಟು ರೋಷವುಳ್ಳವನಾದನು. ಚಿದ್ಕೀಯನು ಬಾಬೆಲಿನ ಅರಸನಾದ ನೆಬೂಕದ್ನೆಚ್ಚರನಿಗೆ ವಿರೋಧವಾಗಿ ತಿರುಗಿಬಿದ್ದದರಿಂದ ಅವನು ಚಿದ್ಕೀಯನ ಆಳಿಕೆಯ.


ಯೋಸೇಫನಿಂದ ಹುಟ್ಟಿದವರೊಳಗೆ ಎಫ್ರಾಯೀಮ್ ವಂಶದವರಲ್ಲಿ ಸೈನಿಕರಾಗಿ ಹೊರಡ ತಕ್ಕವರು ಅಂದರೆ ಇಪ್ಪತ್ತು ವರುಷ ಮೊದಲುಗೊಂಡು ಹೆಚ್ಚಾದ ವಯಸ್ಸುಳ್ಳವರು ಗೋತ್ರಕುಟುಂಬಗಳ ಪ್ರಕಾರ ಒಬ್ಬೊಬ್ಬರಾಗಿ ಹೆಸರು ಹಿಡಿದು ಲೆಕ್ಕಿಸಲ್ಪಟ್ಟ ಗಂಡಸರು … 40,500 ಮಂದಿ.


ನಿನ್ನ ಸನ್ನಿಧಿಯಿಂದ ನನ್ನನ್ನು ತಳ್ಳಬೇಡ; ನಿನ್ನ ಪರಿಶುದ್ಧಾತ್ಮವನ್ನು ನನ್ನಿಂದ ತೆಗೆಯಬೇಡ.


ಆ ಮಗುವು ಕೆಟ್ಟದ್ದು ಬೇಡ, ಒಳ್ಳೇದು ಬೇಕು ಅನ್ನುವಷ್ಟು ಬಲ್ಲವನಾಗುವದರೊಳಗೆ, ಯಾವ ಇಬ್ಬರು ರಾಜರಿಗೆ ನೀನು ಹೆದರಿ ನಡುಗುತ್ತೀಯೋ ಅವರ ದೇಶವು ನಿರ್ಜನವಾಗುವದು.


ಅಯ್ಯೋ, ಹಾಳಾದೆವು, ಭಂಗಪಟ್ಟೆವು; ನಾವು ನಮ್ಮ ದೇಶವನ್ನು ಬಿಟ್ಟೆವಲ್ಲಾ, [ಶತ್ರುಗಳು] ನಮ್ಮ ಮನೆಗಳನ್ನು ಕೆಡವಿದ್ದಾರಲ್ಲಾ ಎಂಬ ಪ್ರಲಾಪಧ್ವನಿಯು ಚೀಯೋನಿನೊಳಗಿಂದ ಕೇಳಿಸುತ್ತದೆ.


ನೀನು ನಿನ್ನ ಅಕ್ಕನ ಮಾರ್ಗದಲ್ಲಿ ನಡೆದುಕೊಂಡದ್ದರಿಂದ ಅವಳು ಕುಡಿದ ಪಾತ್ರೆಯನ್ನೇ ನಿನ್ನ ಕೈಗೆ ಕೊಡುವೆನು.


ಅವರು ನನ್ನ ಕಡೆಯಿಂದ ಅಗಲಿ ಹೋಗಿದ್ದಾರೆ, ಹಾಳಾಗಲಿ! ನನಗ ದ್ರೋಹಮಾಡಿದ್ದಾರೆ, ನಾಶವಾಗಲಿ! ನಾನು ಅವರನ್ನು ಉದ್ಧರಿಸಬೇಕೆಂದಿರುವಾಗಲೂ ನನ್ನ ವಿಷಯವಾಗಿ ಸುಳ್ಳಾಡಿದ್ದಾರೆ, ಅವರನ್ನು ಹೇಗೆ ಉದ್ಧರಿಸಲಿ!


ತೂರು ಹೇಗೆ ಕಾಣಿಸುತ್ತದೋ ಹಾಗೆಯೇ ಎಫ್ರಾಯೀಮು ಹುಲ್ಗಾವಲಿನಲ್ಲಿ ನಾಟಿರುವದಾಗಿ ಕಾಣಿಸುತ್ತದೆ; ಆದರೆ ಎಫ್ರಾಯೀಮು ತನ್ನ ಮಕ್ಕಳನ್ನು ಹತ್ಯಕ್ಕೆ ಈಡಾಗುವಂತೆ ಕಳುಹಿಸುವದು.


ನಿನ್ನ ಸಾನ್ನಿಧ್ಯದಿಂದ ಬಿಸಾಡಲ್ಪಟ್ಟಿದ್ದೇನೆ ಅಂದುಕೊಂಡೆನು; ಆದರೂ ನಿನ್ನ ಪರಿಶುದ್ಧಾಲಯವನ್ನು ಪುನಃ ದರ್ಶನಮಾಡುವೆನು.


ಪ್ರವಾದಿಯಾಗಲಿ ಯಾಜಕನಾಗಲಿ ಈ ಜನರಲ್ಲಿ ಯಾರಾಗಲಿ ಯೆಹೋವನು ದಯಪಾಲಿಸಿರುವ ವಾಕ್ಯಭಾರವೇನು ಎಂದು ನಿನ್ನನ್ನು ಕೇಳಿದರೆ ನೀನು ಅವರಿಗೆ ಹೀಗೆ ಹೇಳು - ಯೆಹೋವನು ಇಂತೆನ್ನುತ್ತಾನೆ - ನೀವೇ ನನ್ನ ಭಾರ, ನಾನು ನಿಮ್ಮನ್ನು ಎಸೆದುಬಿಡುವೆನು.


ಆದದರಿಂದ ನೀನು ಅವರಿಗೆ ಹೀಗೆ ನುಡಿ - ಕರ್ತನಾದ ಯೆಹೋವನು ಇಂತೆನ್ನುತ್ತಾನೆ - ರಕ್ತದಿಂದ ಕೂಡಿದ ಮಾಂಸವನ್ನು ತಿನ್ನುತ್ತೀರಿ, ಬೊಂಬೆಗಳ ಕಡೆಗೆ ಕಣ್ಣೆತ್ತುತ್ತೀರಿ; ರಕ್ತವನ್ನು ಸುರಿಸುತ್ತೀರಿ; ನಿಮ್ಮಂಥವರು ದೇಶವನ್ನು ಅನುಭವಿಸಬಹುದೇ?


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು