Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೆರೆಮೀಯ 7:30 - ಕನ್ನಡ ಸತ್ಯವೇದವು J.V. (BSI)

30 ಯೆಹೋವನು ಹೀಗನ್ನುತ್ತಾನೆ - ಯೆಹೂದ್ಯರು ನನ್ನ ಚಿತ್ತಕ್ಕೆ ವಿರುದ್ಧವಾದದ್ದನ್ನೇ ನಡಿಸಿದ್ದಾರೆ, ನನ್ನ ಹೆಸರಿನಿಂದ ಖ್ಯಾತಿಗೊಂಡ ಆಲಯದಲ್ಲಿ ತಮ್ಮ ಅಸಹ್ಯ ವಸ್ತುಗಳನ್ನು ಇಟ್ಟು ಅದನ್ನು ಹೊಲೆಮಾಡಿದ್ದಾರೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

30 ಯೆಹೋವನು ಹೀಗೆನ್ನುತ್ತಾನೆ, “ಯೆಹೂದ್ಯರು ನನ್ನ ಚಿತ್ತಕ್ಕೆ ವಿರುದ್ಧವಾದದ್ದನ್ನೇ ನಡೆಸಿದ್ದಾರೆ, ನನ್ನ ಹೆಸರಿನಿಂದ ಖ್ಯಾತಿಗೊಂಡ ಆಲಯದಲ್ಲಿ ತಮ್ಮ ಅಸಹ್ಯವಸ್ತುಗಳನ್ನು ಇಟ್ಟು ಅದನ್ನು ಹೊಲೆಮಾಡಿದ್ದಾರೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

30 ಸರ್ವೇಶ್ವರನ ನುಡಿ : “ಯೆಹೂದ್ಯರು ನನ್ನ ಚಿತ್ತಕ್ಕೆ ವಿರುದ್ಧವಾದುದನ್ನೆ ಮಾಡಿದ್ದಾರೆ. ನನ್ನ ಹೆಸರಿನಿಂದ ಪ್ರಖ್ಯಾತಗೊಂಡ ದೇವಾಲಯದಲ್ಲಿ ತಮ್ಮ ಅಸಹ್ಯವಸ್ತುಗಳನ್ನು ಇಟ್ಟು ಅದನ್ನು ಹೊಲೆಮಾಡಿದ್ದಾರೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

30 ನೀನು ಹಾಗೆ ಮಾಡಲೇಬೇಕು ಯಾಕೆಂದರೆ, ಯೆಹೂದದ ಜನರು ಮಾಡುವ ದುಷ್ಕೃತ್ಯಗಳನ್ನು ನಾನು ನೋಡಿದ್ದೇನೆ.” ಯೆಹೋವನು ಹೀಗೆನ್ನುತ್ತಾನೆ: “ಅವರು ತಮ್ಮ ವಿಗ್ರಹಗಳನ್ನು ಸ್ಥಾಪಿಸಿದ್ದಾರೆ. ನಾನು ಆ ವಿಗ್ರಹಗಳನ್ನು ದ್ವೇಷಿಸುತ್ತೇನೆ. ನನ್ನ ಹೆಸರಿನಿಂದ ಖ್ಯಾತಿಪಡೆದ ಆಲಯದಲ್ಲಿ ಅವರು ವಿಗ್ರಹಗಳನ್ನು ಸ್ಥಾಪಿಸಿದ್ದಾರೆ. ಅವರು ನನ್ನ ಆಲಯವನ್ನು ‘ಮಲಿನ’ಗೊಳಿಸಿದ್ದಾರೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

30 “ ‘ಯೆಹೂದನ ಮಕ್ಕಳು ನನ್ನ ದೃಷ್ಟಿಯಲ್ಲಿ ಕೆಟ್ಟದ್ದನ್ನು ಮಾಡಿದ್ದಾರೆಂದು ಯೆಹೋವ ದೇವರು ಹೇಳುತ್ತಾರೆ. ನನ್ನ ಹೆಸರನ್ನು ಹೊಂದಿರುವ ಆಲಯದಲ್ಲಿ ಅದನ್ನು ಅಪವಿತ್ರ ಮಾಡುವುದಕ್ಕೆ ತಮ್ಮ ಅಸಹ್ಯವಾದವುಗಳನ್ನು ಇಟ್ಟಿದ್ದಾರೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೆರೆಮೀಯ 7:30
20 ತಿಳಿವುಗಳ ಹೋಲಿಕೆ  

ಅವರ ಆಭರಣಗಳ ಚಂದವು ಅವರಿಗೆ ಗರ್ವಾಸ್ಪದವಾಯಿತು; ಇದಲ್ಲದೆ ಹೇಯವೂ ಅಸಹ್ಯವೂ ಆದ ತಮ್ಮ ದೇವತೆಗಳ ಪ್ರತಿಮೆಗಳನ್ನು ಬೆಳ್ಳಿಬಂಗಾರದಿಂದ ರೂಪಿಸುತ್ತಿದ್ದರು; ಆದಕಾರಣ ಅದನ್ನು ಅವರಿಗೆ ಅಶುದ್ಧಪದಾರ್ಥವನ್ನಾಗಿ ಮಾಡಿ


ನನ್ನ ಹೆಸರಿನಿಂದ ಖ್ಯಾತಿಗೊಂಡ ಆಲಯದಲ್ಲಿ ತಮ್ಮ ಅಸಹ್ಯವಸ್ತುಗಳನ್ನು ಇಟ್ಟು ಹೊಲೆಮಾಡಿದ್ದಾರೆ.


ಆ ಪ್ರಭುವು ಒಂದು ವಾರದ ಮಟ್ಟಿಗೆ ಬಹುಜನರೊಂದಿಗೆ ದೃಢವಾದ ಒಡಂಬಡಿಕೆಯನ್ನು ಮಾಡಿಕೊಳ್ಳುವನು; ಅರ್ಧವಾರ ಯಜ್ಞನೈವೇದ್ಯಗಳನ್ನು ನಿಲ್ಲಿಸುವನು; ಅಸಹ್ಯಗಳನ್ನು ವಾಹನಮಾಡಿಕೊಂಡು ಒಬ್ಬ ಘಾತಕನು ಹಾರಿಬಂದು ನಿಶ್ಚಿತಪ್ರಲಯವು ಅವನನ್ನು ಮುಣುಗಿಸುವ ತನಕ ಹಾಳುಮಾಡುವನು.


ತಾನು ಮಾಡಿಸಿದ ವಿಗ್ರಹಸ್ತಂಭವನ್ನು ದೇವಾಲಯದಲ್ಲಿಡಿಸಿದನು; ಯೆಹೋವನು ಆ ಆಲಯದ ವಿಷಯದಲ್ಲಿ ದಾವೀದನಿಗೂ ಅವನ ಮಗನಾದ ಸೊಲೊಮೋನನಿಗೂ - ಇಸ್ರಾಯೇಲ್ಯರು ಮೋಶೆಯ ಮುಖಾಂತರ ತಮಗೆ ಕೊಡಲ್ಪಟ್ಟ ನನ್ನ ಎಲ್ಲಾ ಧರ್ಮಶಾಸ್ತ್ರವಿಧಿ ನ್ಯಾಯಗಳನ್ನು ಅನುಸರಿಸಿ ನಡೆಯುವದಾದರೆ ನನ್ನ ನಾಮಮಹತ್ತು ಈ ದೇವಾಲಯದಲ್ಲಿಯೂ ಇಸ್ರಾಯೇಲ್ಯರ ಎಲ್ಲಾ ಊರುಗಳೊಳಗೆ ನನಗೆ ಇಷ್ಟವಾಗಿರುವ ಯೆರೂಸಲೇವಿುನಲ್ಲಿಯೂ ಸದಾಕಾಲವಿರುವದು;


ತಾನು ಮಾಡಿಸಿದ ಅಶೇರವಿಗ್ರಹಸ್ತಂಭವನ್ನು ದೇವಾಲಯದಲ್ಲಿ ಇಡಿಸಿದನು. ಯೆಹೋವನು ಆ ಆಲಯದ ವಿಷಯದಲ್ಲಿ ದಾವೀದನಿಗೂ ಅವನ ಮಗನಾದ ಸೊಲೊಮೋನನಿಗೂ - ಇಸ್ರಾಯೇಲ್ಯರು ತಮಗೆ ಮೋಶೆಯ ಮುಖಾಂತರವಾಗಿ ಕೊಡಲ್ಪಟ್ಟ ನನ್ನ ಧರ್ಮಶಾಸ್ತ್ರದ ನಿಬಂಧನೆಗಳನ್ನು ಅನುಸರಿಸಿ ನಡೆಯುವದಾದರೆ


ಯೆಹೋವನು ತನ್ನ ಹೆಸರನ್ನು ಸ್ಥಾಪಿಸುವದಕ್ಕಾಗಿ ಆರಿಸಿಕೊಂಡ ಯೆರೂಸಲೇವಿುನ ದೇವಾಲಯದ ಎರಡು ಪ್ರಾಕಾರಗಳಲ್ಲಿಯೂ


ಪ್ರವಾದಿಗಳು ಭ್ರಷ್ಟರು, ಯಾಜಕರೂ ಭ್ರಷ್ಟರು! ಹೌದು ನನ್ನ ಆಲಯದಲ್ಲಿಯೇ ಅವರ ಕೆಟ್ಟತನವನ್ನು ಕಂಡಿದ್ದೇನೆ ಎಂದು ಯೆಹೋವನು ಅನ್ನುತ್ತಾನೆ.


ಅನ್ಯದೇವತಾಪ್ರತಿಮೆಗಳನ್ನೂ ತಾನು ಮಾಡಿಸಿದ್ದ ಸ್ತಂಭವನ್ನೂ ಯೆಹೋವನ ಆಲಯದಿಂದ ತೆಗಿಸಿ ಯೆಹೋವಮಂದಿರವಿರುವ ಗುಡ್ಡದಲ್ಲಿಯೂ ಯೆರೂಸಲೇವಿುನಲ್ಲಿಯೂ ಕಟ್ಟಿಸಿದ್ದ ಎಲ್ಲಾ ಯಜ್ಞವೇದಿಗಳನ್ನು ಕೆಡವಿ ಪಟ್ಟಣದ ಹೊರಗೆ ಹಾಕಿಸಿದನು.


ಇದಲ್ಲದೆ ಯೆಹೂದ್ಯರ ಅರಸರು ದೇವಸ್ಥಾನದ ಮಾಳಿಗೆಯ ಮೇಲೆ ಆಹಾಜನ ಉಪ್ಪರಿಗೆಯ ಹತ್ತಿರ ಕಟ್ಟಿಸಿದ್ದ ಯಜ್ಞವೇದಿಗಳನ್ನೂ ಮನಸ್ಸೆಯು ಯೆಹೋವನ ಆಲಯದ ಎರಡು ಪ್ರಾಕಾರಗಳಲ್ಲಿ ಕಟ್ಟಿಸಿದ್ದ ಯಜ್ಞವೇದಿಗಳನ್ನೂ ಕೆಡವಿ ಪುಡಿಪುಡಿಮಾಡಿ ಅವುಗಳ ಧೂಳನ್ನು ಕಿದ್ರೋನ್‍ಹಳ್ಳದಲ್ಲಿ ಹಾಕಿಸಿದನು.


ತನ್ನ ತಂದೆಯಾದ ಹಿಜ್ಕೀಯನು ತೆಗೆದುಹಾಕಿದ ಪೂಜಾಸ್ಥಾನಗಳನ್ನು ತಿರಿಗಿ ಸ್ಥಾಪಿಸಿ ಇಸ್ರಾಯೇಲ್ಯರ ಅರಸನಾದ ಅಹಾಬನಂತೆ ಬಾಳನಿಗೋಸ್ಕರ ಯಜ್ಞವೇದಿಗಳನ್ನು ಕಟ್ಟಿಸಿ ಅಶೇರ ವಿಗ್ರಹಸ್ತಂಭವನ್ನು ನಿಲ್ಲಿಸಿ ನಕ್ಷತ್ರಮಂಡಲಕ್ಕೆ ಕೈಮುಗಿದು ಆರಾಧಿಸಿದನು.


ತನ್ನ ತಂದೆಯಾದ ಹಿಜ್ಕೀಯನು ತೆಗೆದುಹಾಕಿದ ಪೂಜಾಸ್ಥಳಗಳನ್ನು ತಿರಿಗಿ ಸ್ಥಾಪಿಸಿ ಬಾಳ್‍ದೇವತೆಗಳಿಗೋಸ್ಕರ ಯಜ್ಞವೇದಿಗಳನ್ನು ಕಟ್ಟಿಸಿ ಅಶೇರವಿಗ್ರಹ ಸ್ತಂಭಗಳನ್ನು ನಿಲ್ಲಿಸಿ ನಕ್ಷತ್ರಮಂಡಲಕ್ಕೆ ಕೈಮುಗಿದು ಆರಾಧಿಸಿದನು.


ಅದಕ್ಕೆ ತಕ್ಕಂತೆ ನಾನು ಇವರಿಗೋಸ್ಕರ ಕುತಂತ್ರಗಳನ್ನು ಆರಿಸಿಕೊಂಡು ಇವರು ಅಂಜುತ್ತಿದ್ದ ವಿಪತ್ತುಗಳನ್ನು ಬರಮಾಡುವೆನು; ಏಕೆಂದರೆ ನಾನು ಕೂಗಿದಾಗ ಯಾರೂ ಉತ್ತರಕೊಡಲಿಲ್ಲ, ನಾನು ಹೇಳಿದಾಗ ಇವರು ಕೇಳಲಿಲ್ಲ; ನನ್ನ ಚಿತ್ತಕ್ಕೆ ವಿರುದ್ಧವಾದದ್ದನ್ನು ನಡಿಸಿ ನನಗೆ ಇಷ್ಟವಲ್ಲದ್ದನ್ನು ಆರಿಸಿಕೊಂಡರು.


ಅವರ ಅಧರ್ಮಕ್ಕೂ ಪಾಪಕ್ಕೂ ಎರಡರಷ್ಟು ಶಿಕ್ಷೆಯನ್ನು ಮೊದಲು ಕೊಡುವೆನು; ಹೆಣಗಳಂತಿರುವ ತಮ್ಮ ಹೇಯ ವಿಗ್ರಹಗಳಿಂದ ನನ್ನ ದೇಶವನ್ನು ಹೊಲಸು ಮಾಡಿ ನನ್ನ ಸ್ವಾಸ್ತ್ಯವನ್ನು ತಮ್ಮ ಅಸಹ್ಯ ವಸ್ತುಗಳಿಂದ ತುಂಬಿಸಿದ್ದಾರಷ್ಟೆ.


ತಮ್ಮ ಗಂಡು ಹೆಣ್ಣುಮಕ್ಕಳನ್ನು ಮೋಲೆಕ್ ದೇವತೆಗಾಗಿ ಆಹುತಿಕೊಡುವದಕ್ಕೆ ಬೆನ್‍ಹಿನ್ನೋಮ್ ತಗ್ಗಿನಲ್ಲಿನ ಬಾಳನ ಪೂಜಾಸ್ಥಳಗಳನ್ನು ಕಟ್ಟಿ ಯೆಹೂದವನ್ನು ಪಾಪಕ್ಕೆ ಸಿಕ್ಕಿಸಿದ್ದಾರೆ; ನಾನು ಇಂಥ ಅಸಹ್ಯ ಕಾರ್ಯವನ್ನು ವಿಧಿಸಲಿಲ್ಲ, ಅದರ ಸಂಕಲ್ಪವೂ ನನ್ನ ಮನಸ್ಸಿನಲ್ಲಿ ಹುಟ್ಟಲಿಲ್ಲ.


ಅವನು ಕೂಡಿಸುವ ಸೈನ್ಯವು ಆಶ್ರಯದುರ್ಗವಾದ ಪವಿತ್ರಾಲಯವನ್ನು ಹೊಲೆಗೆಡಿಸಿ ನಿತ್ಯಹೋಮವನ್ನು ನೀಗಿಸಿ ಹಾಳುಮಾಡುವ ಅಸಹ್ಯ ವಸ್ತುವನ್ನು ಪ್ರತಿಷ್ಠಿಸುವದು.


ಆಗ ಆ ತೇಜೋರೂಪಿಯು ಮನುಷ್ಯಹಸ್ತದಂಥ ಹಸ್ತವನ್ನು ಚಾಚಿ ನನ್ನ ಚಂಡಿಕೆಯನ್ನು ಹಿಡಿಯಲು ದೇವರಾತ್ಮವು ನನ್ನನ್ನು ಎತ್ತಿಕೊಂಡು ಭೂಮ್ಯಾಕಾಶಗಳ ನಡುವೆ ಯೆರೂಸಲೇವಿುನವರೆಗೆ ಒಯ್ದು ಒಳಗಣ ಪ್ರಾಕಾರದ ಬಡಗಣ ಬಾಗಿಲ ಮುಂದೆ ದೇವರನ್ನು ರೋಷಗೊಳಿಸುವ ವಿಗ್ರಹವು ಮೊದಲಿದ್ದ ಸ್ಥಳದಲ್ಲಿ ನಿಲ್ಲಿಸಿದ ಹಾಗೆ ದೇವರ ದರ್ಶನದಲ್ಲಿ ಕಂಡುಬಂತು;


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು