Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೆರೆಮೀಯ 8:9 - ಕನ್ನಡ ಸತ್ಯವೇದವು J.V. (BSI)

9 ಜ್ಞಾನಿಗಳು ಆಶಾಭಂಗಪಟ್ಟು ಬೆಬ್ಬರಬಿದ್ದು ಸಿಕ್ಕಿಕೊಂಡಿದ್ದಾರೆ; ಇಗೋ, ಯೆಹೋವನ ಮಾತನ್ನು ನಿರಾಕರಿಸಿದರು;

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

9 ಜ್ಞಾನಿಗಳು ಆಶಾಭಂಗಪಟ್ಟು ಬೆಚ್ಚಿಬಿದ್ದು ಸಿಕ್ಕಿಕೊಂಡಿದ್ದಾರೆ. ಇಗೋ, ಯೆಹೋವನ ಮಾತನ್ನು ನಿರಾಕರಿಸಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

9 ಜ್ಞಾನಿಗಳು ನಾಚಿಕೆಪಡುವರು, ನಿಬ್ಬೆರಗಾಗಿ ಬೋನಿಗೆ ಸಿಕ್ಕಿಬೀಳುವರು. ಏಕೆಂದರೆ ಸರ್ವೇಶ್ವರನಾದ ನನ್ನ ಮಾತನ್ನು ಅವರು ನಿರಾಕರಿಸಿದ್ದಾರೆ. ಇದು ತಾನೋ ಅವರ ಜ್ಞಾನ?

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

9 ಆ “ಜ್ಞಾನಿಗಳು” ಯೆಹೋವನ ಉಪದೇಶವನ್ನು ಕೇಳಲು ಒಪ್ಪಲಿಲ್ಲ. ಆದ್ದರಿಂದ ಅವರು ನಿಜವಾದ ಜ್ಞಾನಿಗಳಲ್ಲವೇ ಅಲ್ಲ. ಆ “ಜ್ಞಾನಿಗಳು” ಸಿಕ್ಕಿಹಾಕಿಕೊಂಡಿದ್ದಾರೆ. ಅವರು ಗಾಬರಿಪಟ್ಟಿದ್ದಾರೆ ಮತ್ತು ನಾಚಿಕೆಪಟ್ಟಿದ್ದಾರೆ. ಅವರ ಜ್ಞಾನವು ಅಪ್ರಯೋಜಕವಾಗಿದೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

9 ಜ್ಞಾನಿಗಳು ನಾಚಿಕೊಂಡಿದ್ದಾರೆ. ದಿಗಿಲುಪಟ್ಟು ಸಿಕ್ಕಿಕೊಂಡಿದ್ದಾರೆ. ಇಗೋ, ಯೆಹೋವ ದೇವರ ವಾಕ್ಯವನ್ನು ನಿರಾಕರಿಸಿದ್ದಾರೆ. ಹಾಗಾದರೆ ಅವರಲ್ಲಿ ಯಾವ ಜ್ಞಾನವಿದೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೆರೆಮೀಯ 8:9
21 ತಿಳಿವುಗಳ ಹೋಲಿಕೆ  

ಅಸಹ್ಯಕಾರ್ಯಗಳನ್ನು ಮಾಡಿ ಅವಮಾನಕ್ಕೆ ಗುರಿಯಾದರೂ ಎಳ್ಳಷ್ಟೂ ನಾಚಿಕೆಪಡಲಿಲ್ಲ, ಲಜ್ಜೆಯ ಗಂಧವನ್ನೂ ತಿಳಿಯಲಿಲ್ಲ; ಆದಕಾರಣ ನಾನು ದಂಡಿಸುವ ಸಮಯದಲ್ಲಿ ಅವರು ಮುಗ್ಗರಿಸುವರು, ಬೀಳುವವರ ಸಂಗಡ ಬಿದ್ದೇ ಹೋಗುವರು ಎಂದು ಯೆಹೋವನು ಅನ್ನುತ್ತಾನೆ.


ಯುಕ್ತಿವಂತರ ಕೈಯಿಂದ ಏನೂ ಆಗದಂತೆ ಅವರ ಉಪಾಯಗಳನ್ನು ಭಂಗಪಡಿಸುತ್ತಾನೆ.


ಭೂಲೋಕವೇ, ಕೇಳು! ಆಹಾ, ಈ ಜನರು ನನ್ನ ಮಾತುಗಳನ್ನು ಕೇಳದೆ ನನ್ನ ಧರ್ಮಬೋಧನೆಯನ್ನು ಅಸಡ್ಡೆ ಮಾಡಿದ್ದರಿಂದ ಇವರ ಆಲೋಚನೆಗಳ ಫಲವಾದ ಕೇಡನ್ನು ಇವರ ಮೇಲೆ ಬರಮಾಡುವೆನು.


ಚೋಯನಿನ ಪ್ರಭುಗಳು ಕೇವಲ ಬುದ್ಧಿಹೀನರು; ಫರೋಹನ ಮಂತ್ರಿಗಳಲ್ಲಿ ಜ್ಞಾನವೃದ್ಧರ ಆಲೋಚನೆಯೂ ಹುಚ್ಚಾಟ; ನೀವು ಫರೋಹನಿಗೆ - ನಾನು ಜ್ಞಾನಿಗಳ ಸಂತಾನದವನು, ಪುರಾತನ ರಾಜವಂಶೀಯನು ಎಂದು ಹೇಗೆ ತಾನೆ ಹೇಳಿಕೊಳ್ಳುವಿರಿ? ನಿನ್ನ ಜ್ಞಾನಿಗಳು ಎಲ್ಲಿ?


ಯೆಹೋವನ ಧರ್ಮಶಾಸ್ತ್ರವು ಲೋಪವಿಲ್ಲದ್ದು; ಅದು ಪ್ರಾಣವನ್ನು ಉಜ್ಜೀವಿಸಮಾಡುವಂಥದ್ದು. ಯೆಹೋವನ ಕಟ್ಟಳೆ ನಂಬಿಕೆಗೆ ಯೋಗ್ಯವಾದದ್ದು; ಬುದ್ಧಿಹೀನರಿಗೆ ವಿವೇಕಪ್ರದವಾಗಿದೆ.


ಇವುಗಳನ್ನು ಕೈಕೊಂಡು ಅನುಸರಿಸಿರಿ. ಅನುಸರಿಸಿದರೇ ಅನ್ಯಜನಗಳು ನಿಮ್ಮನ್ನು ಜ್ಞಾನಿಗಳೂ ವಿವೇಕಿಗಳೂ ಎಂದು ತಿಳಿಯುವರು. ಅವರು ಈ ಆಜ್ಞೆಗಳ ವಿಷಯದಲ್ಲಿ ವರ್ತಮಾನವನ್ನು ಕೇಳಿ - ಈ ದೊಡ್ಡ ಜನಾಂಗವು ಜ್ಞಾನ ವಿವೇಕವುಳ್ಳ ಜನಾಂಗ ಎಂದು ಮಾತಾಡಿಕೊಳ್ಳುವರು.


ಆ ಗ್ರಂಥಗಳು ಕ್ರಿಸ್ತ ಯೇಸುವಿನಲ್ಲಿರುವ ನಂಬಿಕೆಯ ಮೂಲಕ ರಕ್ಷಣೆಹೊಂದಿಸುವ ಜ್ಞಾನವನ್ನು ಕೊಡುವದಕ್ಕೆ ಶಕ್ತವಾಗಿವೆ.


ಉಪದ್ರವದ ಮೇಲೆ ಉಪದ್ರವ, ಸುದ್ದಿಯ ಮೇಲೆ ಸುದ್ದಿ, ಬರುವವು; ದಿವ್ಯದರ್ಶನವಾಯಿತೇ ಎಂದು ಪ್ರವಾದಿಯನ್ನು ಕೇಳುತ್ತಲೇ ಇರುವರು; ಯಾಜಕರಲ್ಲಿ ಧರ್ಮೋಪದೇಶವು ಅಡಗಿಹೋಗುವದು, ಹಿರಿಯರಲ್ಲಿ ಮಂತ್ರಾಲೋಚನೆಯು ಇಲ್ಲವಾಗುವದು.


ಸೇನಾಧೀಶ್ವರನಾದ ಯೆಹೋವನು ಇಂತೆನ್ನುತ್ತಾನೆ - ತೇಮಾನ್ ಸೀಮೆಗಿದ್ದ ಬುದ್ಧಿಯು ಇನ್ನಿಲ್ಲವೋ? ವಿವೇಕಿಗಳ ಆಲೋಚನಾಶಕ್ತಿಯು ಅಳಿಯಿತೋ? ಅವರ ಜ್ಞಾನವು ಮಾಯವಾಯಿತೋ?


ದೇವರ ಉಪದೇಶವನ್ನೂ ದೇವರ ಬೋಧನೆಯನ್ನೂ ವಿಚಾರಿಸುವ ಎಂದು ಅವರು ಹೇಳದಿದ್ದರೆ ಅವರಿಗೆ ಎಂದಿಗೂ ಬೆಳಗಾಗುವದಿಲ್ಲ.


ಆತನು ತಮ್ಮ ಪಿತೃಗಳಿಗೆ ಕೊಟ್ಟ ವಿಧಿನಿಬಂಧನೆಗಳನ್ನೂ ತಮಗೆ ಹೇಳಿಸಿದ ಬುದ್ಧಿ ವಾಕ್ಯಗಳನ್ನೂ ತಿರಸ್ಕರಿಸಿ ವಿುಥ್ಯಾದೇವತೆಗಳನ್ನು ಸೇವಿಸಿ ನಿಷ್ಪ್ರಯೋಜಕರಾದರು; ಸುತ್ತಣ ಜನಾಂಗಗಳನ್ನು ಅನುಸರಿಸಬಾರದೆಂದು ಯೆಹೋವನು ಆಜ್ಞಾಪಿಸಿದರೂ ಅವರು ಕೇಳದೆ ಅವರನ್ನು ಅನುಸರಿಸಿದರು;


ಹೀಗಿರುವದರಿಂದ ನಾನು ಈ ಜನರ ಮಧ್ಯದಲ್ಲಿ ಅಧಿಕಾಶ್ಚರ್ಯವೂ ಅದ್ಭುತವೂ ಆದ ಕಾರ್ಯವನ್ನು ಇನ್ನು ಮಾಡುವೆನು; ಇವರ ಜ್ಞಾನಿಗಳ ಜ್ಞಾನವು ಅಳಿಯುವದು, ವಿವೇಕಿಗಳ ವಿವೇಕವು ಅಡಗುವದು ಎಂದು ಹೇಳಿದನು.


ಯೆಹೋವನ ಈ ಮಾತನ್ನು ಕೇಳು - ನೀನು ನನ್ನನ್ನು ಅಲ್ಲಗಳೆದು ಹಿಂದಿರುಗಿದ್ದೀ; ಆದಕಾರಣ ನಾನು ನಿನ್ನ ಮೇಲೆ ಕೈಯೆತ್ತಿ ನಿನ್ನನ್ನು ನಾಶಮಾಡುವೆನು; ಕ್ಷವಿುಸಿ ಕ್ಷವಿುಸಿ ಸಾಕಾಯಿತು.


ನಾನು ಈ ಸ್ಥಳದಲ್ಲಿ ಯೆಹೂದ್ಯರ ಮತ್ತು ಯೆರೂಸಲೇವಿುನವರ ಆಲೋಚನೆಯನ್ನು ಚೆಲ್ಲಿ ಮಣ್ಣುಪಾಲುಮಾಡಿ ಅವರ ಪ್ರಾಣವನ್ನು ಹುಡುಕುವ ಶತ್ರುಗಳ ಖಡ್ಗದಿಂದ ಅವರನ್ನು ಬೀಳಿಸಿ ಆ ಹೆಣಗಳನ್ನು ಆಕಾಶಪಕ್ಷಿಗಳಿಗೂ ಭೂಜಂತುಗಳಿಗೂ ಆಹಾರವನ್ನಾಗಿ ಮಾಡುವೆನು.


ಯೆಹೋವನು ಇಂತೆನ್ನುತ್ತಾನೆ - ಯೆಹೂದವು ಮೂರು ಹೌದು ನಾಲ್ಕು ದ್ರೋಹಗಳನ್ನು ಮಾಡಿದ್ದರಿಂದ ಅದಕ್ಕಾಗುವ ದಂಡನೆಯನ್ನು ನಾನು ತಪ್ಪಿಸುವದೇ ಇಲ್ಲ; ಯೆಹೂದ್ಯರು ಯೆಹೋವನ ಧರ್ಮೋಪದೇಶವನ್ನು ನಿರಾಕರಿಸಿ ಆತನ ವಿಧಿಗಳನ್ನು ಕೈಕೊಳ್ಳದೆ ಅವರ ಪಿತೃಗಳು ಹಿಂಬಾಲಿಸಿದ ಸುಳ್ಳುದೇವತೆಗಳ ಮೂಲಕ ಸನ್ಮಾರ್ಗವನ್ನು ತಪ್ಪಿದರಷ್ಟೆ;


ಆದಿನದಲ್ಲಿ ಯಾವ ಪ್ರವಾದಿಯೇ ಆಗಲಿ ಪ್ರವಾದನೆ ಮಾಡಬೇಕೆಂದಿರುವಾಗ ತನಗಾದ ದರ್ಶನವನ್ನು ಪ್ರಕಟಿಸಲು ನಾಚಿಕೆಪಡುವನು; ಯಾವನೂ ಮೋಸಕ್ಕಾಗಿ ಕಂಬಳಿಯನ್ನು ಹೊದ್ದುಕೊಳ್ಳನು;


ಜ್ಞಾನಿಗಳನ್ನು ಅವರ ತಂತ್ರಗಳಲ್ಲಿಯೇ ಹಿಡುಕೊಂಡು ವಕ್ರಬುದ್ಧಿಯುಳ್ಳವರ ಆಲೋಚನೆಯನ್ನು ನಿರರ್ಥಕ ಮಾಡುತ್ತಾನೆ.


ನಿನ್ನ ಮೂಲಪಿತೃವು ಪಾಪಿಷ್ಠನು, ನಿನ್ನ ಮಧ್ಯಸ್ಥರು ನನಗೆ ದ್ರೋಹಮಾಡಿದವರು.


ಯಾಜಕರಿಗೆ ಯೆಹೋವನು ಎಲ್ಲಿ ಎಂಬ ವಿಚಾರವೇ ಇರಲಿಲ್ಲ, ಧರ್ಮೋಪದೇಶಕರು ನನ್ನನ್ನು ತಿಳಿಯಲಿಲ್ಲ, ಪಾಲಕರು ನನಗೆ ದ್ರೋಹಮಾಡಿದರು, ಪ್ರವಾದಿಗಳು ಬಾಳ್‍ದೇವತೆಯ ಆವೇಶದಿಂದ ಪ್ರವಾದಿಸಿ ಕೆಲಸಕ್ಕೆ ಬಾರದವುಗಳನ್ನು ಸೇವಿಸಿದರು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು