Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೆರೆಮೀಯ 9:16 - ಕನ್ನಡ ಸತ್ಯವೇದವು J.V. (BSI)

16 ಇವರಿಗಾಗಲಿ ಇವರ ಪಿತೃಗಳಿಗಾಗಲಿ ಗೊತ್ತಿಲ್ಲದ ಜನಾಂಗಗಳೊಳಗೆ ಇವರನ್ನು ಚದರಿಸಿಬಿಟ್ಟು ಇವರು ನಿರ್ಮೂಲವಾಗುವ ತನಕ ಖಡ್ಗವನ್ನು ಇವರ ಹಿಂದೆ ಕಳುಹಿಸುವೆನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

16 ಇವರಿಗಾಗಲಿ ಅಥವಾ ಇವರ ಪೂರ್ವಿಕರಿಗಾಗಲಿ ಗೊತ್ತಿಲ್ಲದ ಜನಾಂಗಗಳೊಳಗೆ ಇವರನ್ನು ಚದರಿಸಿಬಿಟ್ಟು, ಇವರು ನಿರ್ಮೂಲವಾಗುವ ತನಕ ಖಡ್ಗವನ್ನು ಇವರ ಹಿಂದೆ ಕಳುಹಿಸುವೆನು” ಎಂದು ಹೇಳುತ್ತಾನೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

16 ಇವರಿಗಾಗಲಿ ಇವರ ಪೂರ್ವಜರಿಗಾಗಲಿ ಪರಿಚಯವಿಲ್ಲದ ಜನಾಂಗಗಳ ನಡುವೆ ಇವರನ್ನು ಚದರಿಸಿಬಿಡುವೆನು. ಇವರು ಅಳಿದು ಹಾಳಾಗುವ ತನಕ ಇವರ ಹಿಂದೆ ಖಡ್ಗವನ್ನು ಕಳಿಸುವೆನು.”

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

16 ನಾನು ಯೆಹೂದದ ಜನರನ್ನು ಬೇರೆ ಜನಾಂಗಗಳಲ್ಲಿ ಚದರಿಸಿಬಿಡುತ್ತೇನೆ. ಅವರು ಮತ್ತು ಅವರ ತಂದೆಗಳು ಎಂದೂ ಅರಿಯದ ಅಪರಿಚಿತ ದೇಶಗಳಲ್ಲಿ ಅವರು ವಾಸಿಸುವರು. ನಾನು ಖಡ್ಗಧಾರಿಗಳಾದ ಜನರನ್ನು ಕಳುಹಿಸುತ್ತೇನೆ. ಅವರು ಯೆಹೂದದ ಜನರನ್ನು ನಿರ್ಮೂಲವಾಗುವವರೆಗೆ ಕೊಲ್ಲುವರು.”

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

16 ಅವರಿಗೂ, ಅವರ ತಂದೆಗಳಿಗೂ ತಿಳಿಯದ ಇತರ ಜನಾಂಗಗಳಲ್ಲಿ ಅವರನ್ನು ಚದರಿಸುವೆನು. ಅವರನ್ನು ತೀರಿಸುವವರೆಗೆ ಖಡ್ಗವನ್ನು ಅವರ ಹಿಂದೆ ಕಳುಹಿಸುವೆನು.”

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೆರೆಮೀಯ 9:16
29 ತಿಳಿವುಗಳ ಹೋಲಿಕೆ  

ನಿನ್ನಲ್ಲಿನ ಮೂರನೆಯ ಒಂದು ಭಾಗದವರು ವ್ಯಾಧಿಯಿಂದ ಸಾಯುವರು, ನಿನ್ನ ಮಧ್ಯದಲ್ಲಿ ಕ್ಷಾಮದಿಂದ ನಾಶವಾಗುವರು; ಇನ್ನೊಂದು ಭಾಗದವರು ನಿನ್ನ ಸುತ್ತಲು ಖಡ್ಗದಿಂದ ಹತರಾಗುವರು; ಮತ್ತೊಂದು ಭಾಗದವರನ್ನು ನಾನು ಎಲ್ಲಾ ಕಡೆಯ ಗಾಳಿಗೂ ತೂರಿ ಅವರ ಹಿಂದೆ ಕತ್ತಿಯನ್ನು ಬೀಸುವೆನು.


ಮುತ್ತಿಗೆಯ ದಿನಗಳು ತೀರಿದಕೂಡಲೆ ಕೂದಲಿನ ಒಂದು ಭಾಗವನ್ನು ಪಟ್ಟಣದ ಮಧ್ಯದೊಳಗೆ ಬೆಂಕಿಯಲ್ಲಿ ಸುಡು; ಇನ್ನೊಂದು ಭಾಗವನ್ನು ತೆಗೆದುಕೊಂಡು ಪಟ್ಟಣದ ಸುತ್ತಲು ಖಡ್ಗದಿಂದ ಕಡಿ; ಮತ್ತೊಂದು ಭಾಗವನ್ನು ಗಾಳಿಗೆ ತೂರು (ಹಾಗೆಯೇ ನಾನು ನನ್ನ ಜನರ ಹಿಂದೆ ಕತ್ತಿಯನ್ನು ಬೀಸುವೆನು).


ಭೂಮಂಡಲದ ಚತುರ್ದಿಕ್ಕುಗಳಲ್ಲಿರುವ ಎಲ್ಲಾ ಜನಾಂಗಗಳಲ್ಲಿಯೂ ಯೆಹೋವನು ನಿಮ್ಮನ್ನು ಚದರಿಸುವನು; ಅಲ್ಲಿ ನಿಮಗಾದರೂ ನಿಮ್ಮ ಪಿತೃಗಳಿಗಾದರೂ ಗೊತ್ತಿಲ್ಲದ ಮರದ ದೇವರುಗಳನ್ನೂ ಕಲ್ಲಿನ ದೇವರುಗಳನ್ನೂ ಪೂಜಿಸುವಿರಿ.


ನಿಮ್ಮನ್ನು ಅನ್ಯಜನಗಳಲ್ಲಿ ಚದರಿಸಿ ನಿಮ್ಮ ಹಿಂದೆ ಕತ್ತಿಯನ್ನು ಬೀಸುವೆನು. ನಿಮ್ಮ ದೇಶವು ಹಾಳಾಗುವದು, ನಿಮ್ಮ ಪಟ್ಟಣಗಳು ನಾಶವಾಗುವವು.


ಇಗೋ, ಇವರಿಗೆ ಮೇಲನ್ನಲ್ಲ, ಕೇಡನ್ನೇ ಮಾಡಬೇಕೆಂದು ಎಚ್ಚರಗೊಂಡಿದ್ದೇನೆ; ಐಗುಪ್ತದಲ್ಲಿನ ಎಲ್ಲಾ ಯೆಹೂದ್ಯರು ಖಡ್ಗಕ್ಷಾಮಗಳಿಂದ ನಾಶಹೊಂದುತ್ತಾ ನಿರ್ನಾಮವಾಗುವರು.


ಆದಕಾರಣ ಬೈಲುಗಾಳಿಯು ಬಡಿದುಕೊಂಡು ಹೋಗುವ ಒಣಹುಲ್ಲನ್ನೋ ಎಂಬಂತೆ ನಾನು ಅವರನ್ನು ಚದರಿಸಿಬಿಡುವೆನು.


ದೇವರಿಗೂ ಕರ್ತನಾದ ಯೇಸು ಕ್ರಿಸ್ತನಿಗೂ ದಾಸನಾಗಿರುವ ಯಾಕೋಬನು ಅನ್ಯದೇಶಗಳಲ್ಲಿ ಚದರಿರುವ [ಇಸ್ರಾಯೇಲ್] ಹನ್ನೆರಡು ಕುಲದವರಿಗೆ ಬರೆಯುವದು. ನಿಮಗೆ ಶುಭವಾಗಲಿ.


ಅವರು ನೋಡದ ಎಲ್ಲಾ ಜನಾಂಗಗಳ ಮಧ್ಯಕ್ಕೆ ಅವರನ್ನು ತೂರಿಬಿಡುವೆನು. ಯೆಹೋವನ ಈ ಮಾತಿನಂತೆ ಅವರು ಚದರಿದ ಮೇಲೆ ದೇಶವು ಹಾಳಾಯಿತು, ಅದರಲ್ಲಿ ಯಾರೂ ಹೋಗುತ್ತಿರಲಿಲ್ಲ, ಬರುತ್ತಿರಲಿಲ್ಲ; ಆ ರಮ್ಯದೇಶವನ್ನು ಹಾಳುಗತಿಗೆ ತಂದರಷ್ಟೆ.


ಆಮೇಲೆ ಅವರು ನನ್ನ ಆಜ್ಞೆಗಳನ್ನು ಕೈಕೊಳ್ಳದೆ ನನ್ನ ವಿಧಿಗಳನ್ನು ನಿರಾಕರಿಸಿ ನಾನು ನೇವಿುಸಿದ ಸಬ್ಬತ್‍ದಿನಗಳನ್ನು ಹೊಲೆಮಾಡಿ ತಮ್ಮ ಪಿತೃಗಳ ಬೊಂಬೆಗಳ ಮೇಲೆ ಕಣ್ಣುಹಾಕಿದ್ದರಿಂದ


ಖಡ್ಗವೇ, ದೇಶವನ್ನು ಹೊಕ್ಕು ಹೋಗು ಎಂದು ಆಜ್ಞಾಪಿಸಿ ನಾನು ಅದನ್ನು ಆ ದೇಶಕ್ಕೆ ತಂದು ಜನಪಶುಗಳನ್ನು ಅದರೊಳಗಿಂದ ನಿರ್ಮೂಲಮಾಡುವ ಪಕ್ಷದಲ್ಲಿ


ನಾನು ಅವರನ್ನು ಜನಾಂಗಗಳೊಳಗೆ ಚದರಿಸಿಬಿಟ್ಟು ಅನ್ಯದೇಶಗಳಲ್ಲಿ ಚಲ್ಲಾಪಿಲ್ಲಿಮಾಡುವಾಗ ನಾನೇ ಯೆಹೋವನು ಎಂದು ಅವರಿಗೆ ಗೊತ್ತಾಗುವದು.


ಆಮೇಲೆ ಅವರನ್ನು ಜನಾಂಗಗಳೊಳಗಿಂದ ಕೂಡಿಸುವೆನು, ಚದರಿರುವ ದೇಶಗಳಿಂದ ಅವರನ್ನು ಒಟ್ಟಿಗೆ ಬರಮಾಡಿ ಇಸ್ರಾಯೇಲ್ ದೇಶವನ್ನು ಅವರಿಗೆ ದಯಪಾಲಿಸುವೆನು.


ಆಹಾ, ನಾನು ಅವರ ಮೇಲೆ ಖಡ್ಗಕ್ಷಾಮವ್ಯಾಧಿಗಳನ್ನು ಬರಮಾಡಿ ಯಾರೂ ತಿನ್ನದ ಹಾಗೆ ಕೆಟ್ಟು ಕೇವಲ ಅಸಹ್ಯವಾದ ಅಂಜೂರದ ಹಣ್ಣುಗಳ ಗತಿಗೆ ಅವರನ್ನು ತರುವೆನು,


[ಇದಲ್ಲದೆ ಈ ಅಪ್ಪಣೆಯಾಯಿತು] - ನೀನು ಅವರಿಗೆ ನುಡಿಯತಕ್ಕದ್ದೇನಂದರೆ - ಇಸ್ರಾಯೇಲ್ಯರ ದೇವರೂ ಸೇನಾಧೀಶ್ವರನೂ ಆದ ಯೆಹೋವನು ಇಂತೆನ್ನುತ್ತಾನೆ - ನಾನು ನಿಮ್ಮಲ್ಲಿಗೆ ಖಡ್ಗವನ್ನು ಕಳುಹಿಸುವೆನು; [ಆ ನನ್ನ ರೋಷವನ್ನು] ಕುಡಿದು ಅಮಲೇರಿದವರಾಗಿ ಕಕ್ಕಿ ಬಿದ್ದು ಏಳದಿರಿ.


ನಾನು ಅವರಿಗೂ ಅವರ ಪಿತೃಗಳಿಗೂ ಅನುಗ್ರಹಿಸಿದ ದೇಶದೊಳಗಿಂದ ಅವರು ನಿರ್ಮೂಲರಾಗುವ ತನಕ ಖಡ್ಗಕ್ಷಾಮವ್ಯಾಧಿಗಳನ್ನು ಅವರ ಮೇಲೆ ಕಳುಹಿಸುವೆನು.


ಅವರ ಸಂತಾನವನ್ನು ದೇಶಾಂತರಗಳಲ್ಲಿ ಚದರಿಸಿ ಅನ್ಯಜನಾಂಗಗಳ ನಡುವೆ ನಾಶಮಾಡುವೆನೆಂದೂ ಕೈಯೆತ್ತಿದನು.


ನೀನು ಅವನ ಮುಖಾಂತರವಾಗಿ - ನೀವು ಅವಿಧೇಯರಾದರೆ ನಿಮ್ಮನ್ನು ಜನಾಂಗಗಳೊಳಗೆ ಚದರಿಸಿ ಬಿಡುವೆನು;


ಅವರನ್ನು ಸಂಪೂರ್ಣವಾಗಿ ನಾಶಮಾಡುತ್ತಿದ್ದೆನು, ಅವರು ಮನುಷ್ಯರ ಜ್ಞಾಪಕದಲ್ಲೂ ಇಲ್ಲದಂತೆ ಮಾಡುತ್ತಿದ್ದೆನು;


ನಿಮಗೂ ನಿಮ್ಮ ಪಿತೃಗಳಿಗೂ ಗೊತ್ತಿಲ್ಲದ ಜನಾಂಗದವರ ದೇಶಕ್ಕೆ ಯೆಹೋವನು ನಿಮ್ಮನ್ನೂ ನೀವು ನೇವಿುಸಿಕೊಳ್ಳುವ ಅರಸರನ್ನೂ ಒಯ್ಯಿಸುವನು; ಅಲ್ಲಿ ನೀವು ಮರದ ದೇವರುಗಳನ್ನೂ ಕಲ್ಲಿನ ದೇವರುಗಳನ್ನೂ ಸೇವಿಸುವಿರಿ.


ನೀವು ಶತ್ರುಗಳಿಂದ ಪರಾಜಯವನ್ನು ಹೊಂದುವಂತೆ ಯೆಹೋವನು ಮಾಡುವನು; ನೀವು ಒಂದೇ ದಾರಿಯಿಂದ ಅವರೆದುರಿಗೆ ಹೋಗಿ ಏಳು ದಾರಿಗಳಿಂದ ಓಡಿಹೋಗುವಿರಿ. ಲೋಕದ ಎಲ್ಲಾ ರಾಜ್ಯಗಳವರೂ ಇದನ್ನು ಕಂಡು ಬೆರಗಾಗುವರು.


ಯೆಹೋವನು ನಿಮ್ಮನ್ನು ಅನ್ಯಜನಗಳಲ್ಲಿ ಚದರಿಸುವನು; ಆತನು ನಿಮ್ಮನ್ನು ಓಡಿಸುವ ದೇಶಗಳ ಜನರ ಮಧ್ಯದಲ್ಲಿ ನೀವು ಸ್ವಲ್ಪ ಮಂದಿ ಮಾತ್ರ ಉಳಿಯುವಿರಿ.


ಆಹಾ, ನನ್ನ ಪ್ರಜೆಯೆಂಬಾಕೆಯು - ಯೆಹೋವನು ಚೀಯೋನಿನಲ್ಲಿಲ್ಲವೋ, ಅದರ ರಾಜನು ಅಲ್ಲಿ ವಾಸವಾಗಿಲ್ಲವೋ ಎಂದು ಮೊರೆಯಿಡುವ ಶಬ್ದವು ದೂರದೇಶದಿಂದ ಕೇಳಿಸುತ್ತದೆ. [ಅದಕ್ಕೆ ಯೆಹೋವನು - ] ಇವರು ತಮ್ಮ ವಿಗ್ರಹಗಳಿಂದಲೂ ಅನ್ಯದೇವತೆಗಳ ಶೂನ್ಯರೂಪಗಳಿಂದಲೂ ಏಕೆ ನನ್ನನ್ನು ಕೆಣಕಿದ್ದಾರೆ [ಅನ್ನುತ್ತಾನೆ].


ಇದಲ್ಲದೆ ಆ ದಿನಗಳಲ್ಲಿ ದಿನ್ನೆ ಕಂಡರೆ ಭಯ, ದಾರಿಯಲ್ಲಿ ಅಪಾಯ; ಬಾದಾವಿುಯ ಮರವು ಹೂಬಿಡುವದು; ವಿುಡತೆಯು ಕೂಡ ಭಾರವಾಗುವದು; ಆಶೆಯು ಕುಂದುವದು, ಮನುಷ್ಯನು ತನ್ನ ನಿತ್ಯ ಗೃಹಕ್ಕೆ ಹೊರಡುವದಕ್ಕಿದ್ದಾನಲ್ಲಾ; ಗೋಳಾಟದವರು ಬೀದಿಯಲ್ಲಿ ತಿರುಗುವರು.


[ಯೆರೂಸಲೇಮೇ,] ತಲೆಯನ್ನು ಬೋಳಿಸಿಕೊಂಡು ಕೂದಲನ್ನು ಬಿಸಾಟುಬಿಟ್ಟು ಬೋಳುಗುಡ್ಡಗಳಲ್ಲಿ ಶೋಕಗೀತವನ್ನು ಹಾಡು; ಯೆಹೋವನು ತನ್ನ ಕೋಪಕ್ಕೆ ಗುರಿಯಾದ ಈ ವಂಶವನ್ನು ನಿರಾಕರಿಸಿ ತ್ಯಜಿಸಿದ್ದಾನೆ.


ನರಪುತ್ರನೇ, ನೀನು ತೂರಿನ ವಿಷಯದಲ್ಲಿ ಶೋಕಗೀತವನ್ನೆತ್ತು, ಅದಕ್ಕೆ ಹೀಗೆ ನುಡಿ -


ಸೇನಾಧೀಶ್ವರದೇವರಾದ ಯೆಹೋವಕರ್ತನು ಇಂತೆನ್ನುತ್ತಾನೆ - ಎಲ್ಲಾ ಚೌಕಗಳಲ್ಲಿ ಕಿರಿಚಾಟವಾಗುವದು, ಸಕಲ ಬೀದಿಗಳಲ್ಲಿ ಅಯ್ಯಯ್ಯೋ ಎಂದು ಅರಚಿಕೊಳ್ಳುವರು; ರೈತರನ್ನು ಪ್ರಲಾಪಿಸುವದಕ್ಕೂ ಗೋಳಾಟದವರನ್ನು ಗೋಳಿಡುವದಕ್ಕೂ ಕರೆಯುವರು.


ಆ ದಿನದಲ್ಲಿ ಜನರು ನಿಮ್ಮ ವಿಷಯವಾಗಿ ಪದ್ಯವನ್ನೆತ್ತಿ - ಅಯ್ಯೋ, ನಾವು ತೀರಾ ಸೂರೆ ಹೋದೆವಲ್ಲಾ! [ಯೆಹೋವನು] ನಮ್ಮವರ ಸ್ವಾಸ್ತ್ಯವನ್ನು ಪರಾಧೀನಮಾಡಿದ್ದಾನೆ; ಅಕಟಾ, ಅದನ್ನು ನಮ್ಮಿಂದ ತೊಲಗಿಸಿದ್ದಾನಲ್ಲಾ! ನಮ್ಮ ಭೂವಿುಯನ್ನು ದೇವದ್ರೋಹಿಗಳಿಗೆ ಹಂಚಿಕೊಟ್ಟಿದ್ದಾನೆ ಎಂದು ಶೋಕಗೀತವಾಗಿ ಹಾಡುವರು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು