Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೆಶಾಯ 1:14 - ಕನ್ನಡ ಸತ್ಯವೇದವು J.V. (BSI)

14 ನಿಮ್ಮ ಅಮಾವಾಸ್ಯೆಗಳನ್ನೂ ಉತ್ಸವದಿನಗಳನ್ನೂ ಹಗೆ ಮಾಡುತ್ತೇನೆ; ಇವು ನನಗೆ ಭಾರ; ಸಹಿಸಲು ಬೇಸರ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

14 ನಿಮ್ಮ ಅಮಾವಾಸ್ಯೆಗಳನ್ನೂ, ಹುಣ್ಣಿಮೆಹಬ್ಬ, ಉತ್ಸವ ದಿನಗಳನ್ನೂ ದ್ವೇಷಿಸುತ್ತೇನೆ; ಇವು ನನಗೆ ಭಾರ; ಸಹಿಸಲು ಬೇಸರ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

14 ನಿಮ್ಮ ಹಬ್ಬ ಹುಣ್ಣಿಮೆಗಳು, ಉತ್ಸವ ದಿನಗಳು ನನ್ನ ಮನಕ್ಕೆ ವಿರುದ್ಧ, ಹೊರಲಾಗದ ಭಾರ, ಸಹಿಸಲಾಗದ ಬೇಸರ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

14 ನಿಮ್ಮ ಮಾಸಿಕಕೂಟಗಳನ್ನೂ ಸಭಾಕೂಟಗಳನ್ನೂ ನಾನು ದ್ವೇಷಿಸುತ್ತೇನೆ. ಇವು ನನಗೆ ಭಾರವಾಗಿವೆ. ಈ ಭಾರದಿಂದ ನಾನು ಬೇಸತ್ತು ಹೋಗಿದ್ದೇನೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

14 ನಿಮ್ಮ ಅಮಾವಾಸ್ಯೆಗಳನ್ನೂ, ನೇಮಕವಾದ ಹಬ್ಬಗಳನ್ನೂ ನನ್ನ ಆತ್ಮವು ದ್ವೇಷಿಸುತ್ತದೆ. ಅವು ನನಗೆ ಭಾರ, ಸಹಿಸಲು ಬೇಸರ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೆಶಾಯ 1:14
13 ತಿಳಿವುಗಳ ಹೋಲಿಕೆ  

ನಿಮ್ಮ ಜಾತ್ರೆಗಳನ್ನು ಹಗೆಮಾಡುತ್ತೇನೆ, ತುಚ್ಫೀಕರಿಸುತ್ತೇನೆ; ನಿಮ್ಮ ಉತ್ಸವಗಳ ವಾಸನೆಯೇ ನನಗೆ ಬೇಡ.


ನೀನು ನನಗೋಸ್ಕರ ಹಣಕೊಟ್ಟು ಬಜೆಯನ್ನು ತರಲಿಲ್ಲ, ಯಜ್ಞಪಶುಗಳ ವಪೆಯಿಂದ ನನ್ನನ್ನು ತೃಪ್ತಿಪಡಿಸಲಿಲ್ಲ; ಆದರೆ ನಿನ್ನ ಪಾಪಗಳಿಂದ ನನ್ನನ್ನು ನೀನು ತೊಂದರೆಪಡಿಸಿದ್ದೀ, ನಿನ್ನ ದೋಷಗಳಿಂದ ನನ್ನನ್ನು ಬೇಸರಗೊಳಿಸಿದ್ದೀ.


ಇಗೋ, ನೀವು ನಿಂತಿರುವಲ್ಲಿಯೇ ನಿಮ್ಮನ್ನು ಸಿವುಡು ತುಂಬಿದ ಗಾಡಿಯಷ್ಟು ಭಾರವಾಗಿ ಅಮುಕಿಬಿಡುವೆನು.


ಯೆಹೋವನೆಂಬ ನಾನು ನ್ಯಾಯವನ್ನು ಪ್ರೀತಿಸುತ್ತೇನೆ, ಕೊಳ್ಳೆಯನ್ನೂ ಅನ್ಯಾಯವನ್ನೂ ದ್ವೇಷಿಸುತ್ತೇನೆ; ಸತ್ಯಸಂಧತೆಯನ್ನು ಅನುಸರಿಸಿ ಇವರ ನಷ್ಟಕ್ಕೆ ಪ್ರತಿಫಲವನ್ನು ಕೊಟ್ಟು ಇವರೊಂದಿಗೆ ನಿತ್ಯವಾದ ಒಡಂಬಡಿಕೆಯನ್ನು ಮಾಡಿಕೊಳ್ಳುವೆನು.


ಅದಕ್ಕೆ [ಯೆಶಾಯನು] ಹೀಗೆ ಹೇಳಿದನು - ದಾವೀದನ ಮನೆತನದವರೇ, ಕೇಳಿರಿ! ಮನುಷ್ಯರನ್ನು ಬೇಸರಗೊಳಿಸುವದು ಅಷ್ಟು ದೊಡ್ಡದಲ್ಲವೆಂದೆಣಿಸಿ ನನ್ನ ದೇವರನ್ನೂ ಬೇಸರಗೊಳಿಸುವಿರಾ?


ನೀವು ಯೆಹೋವನನ್ನು ನಿಮ್ಮ ಮಾತುಗಳಿಂದ ಬೇಸರಗೊಳಿಸಿದ್ದೀರಿ; ಯಾವ ವಿಷಯದಲ್ಲಿ ಆತನನ್ನು ಬೇಸರಗೊಳಿಸಿದ್ದೇವೆ ಅನ್ನುತ್ತೀರಾ? ಪ್ರತಿಯೊಬ್ಬ ದುರಾಚಾರಿಯು ಯೆಹೋವನ ದೃಷ್ಟಿಗೆ ಒಳ್ಳೆಯವನು, ಅವರೇ ಆತನಿಗೆ ಇಷ್ಟ, ನ್ಯಾಯತೀರಿಸುವ ದೇವರು ಎಲ್ಲಿಯೋ ಎಂದು ನೀವು ಅಂದುಕೊಳ್ಳುವದರಲ್ಲಿಯೇ.


ಒಂದೇ ತಿಂಗಳೊಳಗೆ ಮೂವರು ಕುರುಬರನ್ನು ಅಡಗಿಸಿಬಿಟ್ಟೆನು; ಅನಂತರ ನನಗೆ ಕುರಿಗಳ ವಿಷಯವಾಗಿ ತಾಳ್ಮೆತಪ್ಪಿತು; ಅವೂ ನನಗೆ ಬೇಸರಗೊಂಡವು.


ಅಯ್ಯೋ, ಅರೀಯೇಲೇ, ಅರೀಯೇಲೇ, ದಾವೀದನು ಸೈನ್ಯಸಮೇತನಾಗಿ ವಾಸಿಸಿದ ಪಟ್ಟಣವೇ, ನಿನ್ನ ಗತಿಯನ್ನು ಏನು ಹೇಳಲಿ! ಈ ವರುಷಕ್ಕೆ ಮುಂದಿನ ವರುಷವನ್ನು ಸೇರಿಸಿರಿ; ಹಬ್ಬಗಳು ಸುತ್ತಿಬರಲಿ; ಆಮೇಲೆ ನಾನು ಅರೀಯೇಲನ್ನು ಬಾಧಿಸುವೆನು; ಅರಿಚಾಟ ಕಿರಿಚಾಟವಾಗುವದು;


ನಿಯವಿುತ ಸಂಖ್ಯೆಗೆ ಸರಿಯಾಗಿ ಸಬ್ಬತ್‍ದಿನ ಅಮಾವಾಸ್ಯೆ ಜಾತ್ರೆ ಇವುಗಳಲ್ಲಿ ಯೆಹೋವನ ಮುಂದೆ ತಪ್ಪದೆ ನಡೆಯುವ ಸರ್ವಾಂಗಹೋಮ ಸಮರ್ಪಣೆಯ ಹೊತ್ತಿನಲ್ಲಿ ಯೆಹೋವನಿಗೆ ಕೃತಜ್ಞತಾಸ್ತುತಿಯನ್ನು ಸಲ್ಲಿಸುವದೂ ಇವೇ.


ಆ ಪಟ್ಟಣವು ನನಗೆ ಅರೀಯೇಲಾಗಿಯೇ ಪರಿಣವಿುಸುವದು.


ಪ್ರತಿಯೊಂದು ಅಮಾವಾಸ್ಯೆಯಲ್ಲಿಯೂ ಒಂದೊಂದು ಸಬ್ಬತ್ ದಿನದಲ್ಲಿಯೂ ಸಕಲ ನರಜನ್ಮದವರೂ ನನ್ನ ಸನ್ನಿಧಿಯಲ್ಲಿ ಎರಗುವದಕ್ಕೆ ಬರುವರು; ಇದು ಯೆಹೋವನ ನುಡಿ.


ನಾನು ಅವಳ ಉಲ್ಲಾಸ, ಹಬ್ಬ, ಅಮಾವಾಸ್ಯೆ, ಸಬ್ಬತ್ತು, ಮಹೋತ್ಸವ, ಇವುಗಳನ್ನೆಲ್ಲಾ ನಿಲ್ಲಿಸಿಬಿಡುವೆನು.


ಅವು ಯೆಹೋವನ ಮಕ್ಕಳಲ್ಲದ ಮಕ್ಕಳನ್ನು ಪಡೆದು ಆತನಿಗೆ ದ್ರೋಹಮಾಡಿವೆ; ಅವುಗಳನ್ನೂ ಅವುಗಳ ಭೂಸ್ವಾಸ್ತ್ಯಗಳನ್ನೂ ಈಗ ಈ ಮುಂದಿನ ತಿಂಗಳು ನುಂಗಿಬಿಡುವದು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು