Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೆಶಾಯ 1:2 - ಕನ್ನಡ ಸತ್ಯವೇದವು J.V. (BSI)

2 ಆಕಾಶಮಂಡಲವೇ, ಆಲಿಸು! ಭೂಮಂಡಲವೇ, ಕೇಳು! ಯೆಹೋವನು ಮಾತಾಡುತ್ತಿದ್ದಾನೆ; ನಾನು ಸಾಕಿ ಸಲಹಿದ ಮಕ್ಕಳೇ ನನಗೆ ದ್ರೋಹಮಾಡಿದ್ದಾರೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

2 ಆಕಾಶಮಂಡಲವೇ, ಆಲಿಸು! ಭೂಮಂಡಲವೇ ಕೇಳು! ಯೆಹೋವನು ಮಾತನಾಡುತ್ತಿದ್ದಾನೆ. ನಾನು ಸಾಕಿ ಸಲಹಿದ ಮಕ್ಕಳೇ ನನಗೆ ದ್ರೋಹ ಮಾಡಿದ್ದಾರೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

2 ಆಕಾಶಮಂಡಲವೇ, ಕೇಳು; ಭೂಮಂಡಲವೇ, ಆಲಿಸು; ಸರ್ವೇಶ್ವರಸ್ವಾಮಿ ಆಡುತ್ತಿರುವ ಮಾತುಗಳಿಗೆ ಕಿವಿಗೊಡು: “ನಾನು ಸಾಕಿ ಸಲಹಿದ ಮಕ್ಕಳೇ ನನಗೆ ದ್ರೋಹವೆಸಗಿದ್ದಾರೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

2 ಭೂಮ್ಯಾಕಾಶಗಳೇ, ಯೆಹೋವನ ಮಾತನ್ನು ಆಲಿಸಿರಿ! ಯೆಹೋವನು ಹೇಳುತ್ತಿದ್ದಾನೆ: “ನಾನು ಸಾಕಿ ಸಲಹಿದ ಮಕ್ಕಳೇ ನನಗೆ ದ್ರೋಹಮಾಡಿದ್ದಾರೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

2 ಆಕಾಶಗಳೇ, ಕೇಳಿರಿ. ಭೂಮಿಯೇ, ಕಿವಿಗೊಡು. ಏಕೆಂದರೆ ಯೆಹೋವ ದೇವರು ಮಾತನಾಡುತ್ತಿದ್ದಾರೆ: “ನಾನು ಸಾಕಿ ಸಲಹಿದ ಮಕ್ಕಳೇ ನನಗೆ ವಿರೋಧವಾಗಿ ತಿರುಗಿಬಿದ್ದಿದ್ದಾರೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೆಶಾಯ 1:2
37 ತಿಳಿವುಗಳ ಹೋಲಿಕೆ  

ಆಕಾಶಮಂಡಲವೇ, ನಾನು ಹೇಳುವದನ್ನು ಕೇಳು: ಭೂಮಂಡಲವೇ, ನನ್ನ ಮಾತುಗಳಿಗೆ ಕಿವಿಕೊಡು.


ನಾನು ಜೀವಮರಣಗಳನ್ನೂ ಆಶೀರ್ವಾದಶಾಪಗಳನ್ನೂ ಈಗ ನಿಮ್ಮ ಮುಂದೆ ಇಟ್ಟಿದ್ದೇನೆ; ಇದಕ್ಕೆ ಭೂಮ್ಯಾಕಾಶಗಳು ಸಾಕ್ಷಿಗಳಾಗಿರಲಿ. ಆದದರಿಂದ ನೀವೂ ನಿಮ್ಮ ಸಂತತಿಯವರೂ ಬದುಕಿಕೊಳ್ಳುವಂತೆ ಜೀವವನ್ನೇ ಆದುಕೊಳ್ಳಿರಿ;


ಜನಾಂಗಗಳೇ, ನೀವೆಲ್ಲರೂ ಕೇಳಿರಿ; ಭೂಮಂಡಲವೇ, ಭೂವಿುಯಲ್ಲಿರುವ ಸಮಸ್ತವೇ, ಕಿವಿಗೊಡಿರಿ! ಕರ್ತನು, ಕರ್ತನಾದ ಯೆಹೋವನು ತನ್ನ ಪವಿತ್ರಾಲಯದೊಳಗಿಂದ ನಿಮಗೆ ವಿರುದ್ಧವಾಗಿ ಸಾಕ್ಷಿ ಕೊಡುತ್ತಾನೆ.


ಆತನನ್ನು ಕೋಪಗೊಳಿಸಿದರೆ ನೀವು ಯೊರ್ದನ್ ಹೊಳೆಯನ್ನು ದಾಟಿ ಸ್ವಾಧೀನಮಾಡಿಕೊಳ್ಳುವ ಆ ದೇಶದಲ್ಲಿ ಉಳಿಯದೆ ಬೇಗನೆ ನಾಶವಾಗಿ ಹೋಗುವಿರಿ ಎಂದು ಭೂಮ್ಯಾಕಾಶಗಳನ್ನು ಸಾಕ್ಷಿಗಳಾಗಿ ಕರೆದು ಎಚ್ಚರಿಸುತ್ತೇನೆ. ನೀವು ಆ ದೇಶದಲ್ಲಿ ಬಹುದಿವಸ ಇರದೆ ನಾಶವಾಗಿಯೇ ಹೋಗುವಿರಿ.


ಆತನು ತನ್ನ ಪ್ರಜೆಗಳ ನ್ಯಾಯವಿಚಾರಣೆಯಲ್ಲಿ ಭೂಮ್ಯಾಕಾಶಗಳನ್ನು ಸಾಕ್ಷಿಗಳಾಗಿ ನೇವಿುಸುತ್ತಾನೆ.


ನನ್ನ ನಾಮವನ್ನು ಧಿಕ್ಕರಿಸುವ ಯಾಜಕರೇ, ಮಗನು ತಂದೆಗೆ ಮಾನಸಲ್ಲಿಸುತ್ತಾನಲ್ಲಾ, ಆಳು ಧಣಿಗೆ ಭಯಭಕ್ತಿತೋರಿಸುತ್ತಾನಷ್ಟೆ; ನಾನು ತಂದೆಯಾಗಿರಲು ನನಗೆ ಸಲ್ಲುವ ಮಾನವೆಲ್ಲಿ; ಧಣಿಯಾಗಿರಲು ನನಗೆ ತೋರಿಸುವ ಭಯಭಕ್ತಿಯೆಲ್ಲಿ ಎಂದು ಸೇನಾಧೀಶ್ವರ ಯೆಹೋವನು ನಿಮಗೇ ನುಡಿಯುತ್ತಾನೆ. ಆದರೆ ನೀವು - ಯಾವ ವಿಷಯದಲ್ಲಿ ನಿನ್ನ ನಾಮವನ್ನು ಧಿಕ್ಕರಿಸಿದ್ದೇವೆ ಅನ್ನುತ್ತೀರಿ.


ನಾನಾದರೋ ಯೆಹೋವನ ಆತ್ಮಾವೇಶದಿಂದ ಬಲಪರಾಕ್ರಮನ್ಯಾಯಭರಿತನಾಗಿ ಯಾಕೋಬಿಗೆ ಅದರ ದ್ರೋಹವನ್ನು ಇಸ್ರಾಯೇಲಿಗೆ ಅದರ ಪಾಪವನ್ನು ಸಾರಲು ಶಕ್ತನಾಗಿದ್ದೇನೆ.


ಇಸ್ರಾಯೇಲ್ಯರೇ, ಯೆಹೋವನು ನಿಮಗೆ ವಿರುದ್ಧವಾಗಿ, ಅಂದರೆ ತಾನು ಐಗುಪ್ತದೇಶದೊಳಗಿಂದ ಪಾರುಮಾಡಿದ ಪೂರ್ಣಕುಲಕ್ಕೆ ವಿರುದ್ಧವಾಗಿ ನುಡಿದಿರುವ ಈ ಮಾತನ್ನು ಕೇಳಿರಿ -


ಆದಕಾರಣ ಇಸ್ರಾಯೇಲಿನ ಪರ್ವತಗಳೇ, ಕರ್ತನಾದ ಯೆಹೋವನ ವಾಕ್ಯಗಳನ್ನು ಕೇಳಿರಿ - ಬೆಟ್ಟಗುಡ್ಡ ತೊರೆತಗ್ಗುಗಳಿಗೂ ಕಾಡಾದ ಹಾಳುಪ್ರದೇಶಗಳಿಗೂ ಸುತ್ತಣ ಜನಾಂಗಗಳಲ್ಲಿ ಉಳಿದವರು ಕೊಳ್ಳೆಹೊಡೆದು ಅಣಕಿಸುವ ಹಾಳು ಪಟ್ಟಣಗಳಿಗೂ ಯೆಹೋವಕರ್ತನು ಹೀಗೆ ನುಡಿಯುತ್ತಾನೆ -


ದೇಶವೇ, ದೇಶವೇ, ದೇಶವೇ, ಯೆಹೋವನ ಮಾತನ್ನು ಕೇಳು!


ಭೂಲೋಕವೇ, ಕೇಳು! ಆಹಾ, ಈ ಜನರು ನನ್ನ ಮಾತುಗಳನ್ನು ಕೇಳದೆ ನನ್ನ ಧರ್ಮಬೋಧನೆಯನ್ನು ಅಸಡ್ಡೆ ಮಾಡಿದ್ದರಿಂದ ಇವರ ಆಲೋಚನೆಗಳ ಫಲವಾದ ಕೇಡನ್ನು ಇವರ ಮೇಲೆ ಬರಮಾಡುವೆನು.


ನನ್ನನ್ನು ತೊರೆದು ಮನಸ್ಸುಬಂದ ಹಾಗೆ ದುರ್ಮಾರ್ಗದಲ್ಲಿ ನಡೆಯುವ ಜನರನ್ನು ನಾನು ದಿನವೆಲ್ಲಾ ಕೈ ಚಾಚಿ ಕರೆದೆನು.


ಇವರು ದ್ರೋಹದ ಜನಾಂಗದವರು, ಮೋಸದ ಸಂತಾನದವರು, ಯೆಹೋವನ ಉಪದೇಶವನ್ನು ಕೇಳಲೊಲ್ಲದ ಸಂತತಿಯವರಷ್ಟೆ;


ಯೆಹೋವನು ಹೀಗೆ ನುಡಿಯುತ್ತಾನೆ :- ದ್ರೋಹಿಗಳಾದ [ನನ್ನ] ಮಕ್ಕಳ ಗತಿಯನ್ನು ಏನು ಹೇಳಲಿ! ಇವರು ನನ್ನನ್ನು ಕೇಳದೆ ಒಂದು ಆಲೋಚನೆಯನ್ನು ಸಾಗಿಸಿ ನನ್ನ ಆತ್ಮಪ್ರೇರಿತರಾಗದೆ ಉಪಾಯವನ್ನು ನೆಯ್ದು ಪಾಪದ ಮೇಲೆ ಪಾಪವನ್ನು ಸೇರಿಸಿಕೊಂಡಿದ್ದಾರೆ;


ಅವರು ಅಳುತ್ತಾ ನಡೆದು ಬರುವರು, ಅವರ ವಿಜ್ಞಾಪನೆಗಳಿಂದಲೇ ಅವರನ್ನು ಮುಂದರಿಸುವೆನು; ಎಡವದ ಸಮಮಾರ್ಗದಲ್ಲಿ ನಡಿಸುತ್ತಾ ತುಂಬಿದ ತೊರೆಗಳ ಬಳಿಗೆ ಬರಮಾಡುವೆನು; ನಾನು ಇಸ್ರಾಯೇಲಿಗೆ ತಂದೆ, ಎಫ್ರಾಯೀಮು ನನ್ನ ಹಿರಿಯ ಮಗನಲ್ಲವೆ.


ಕಿವಿಗೊಟ್ಟು ಕೇಳಿರಿ, ಹೆಮ್ಮೆ ಪಡಬೇಡಿರಿ; ಯೆಹೋವನೇ ಮಾತಾಡಿದ್ದಾನೆ.


ನೀವು ಈ ಸ್ಥಳಕ್ಕೆ ಸೇರಿದ ಪರ್ಯಂತರವೂ ನಿಮ್ಮ ಪ್ರಯಾಣದಲ್ಲೆಲ್ಲಾ ಮಗನನ್ನು ತಂದೆ ಹೇಗೋ ಹಾಗೆಯೇ ನಿಮ್ಮ ದೇವರಾದ ಯೆಹೋವನು ನಿಮ್ಮನ್ನು ಹೊತ್ತನಲ್ಲವೇ ಎಂದು ನಿಮಗೆ ಹೇಳಿದೆನು.


ನಾವಂತೂ ಕಂಡು ಕೇಳಿದ್ದನ್ನು ಹೇಳದೆ ಇರಲಾರೆವು ಎಂದು ಉತ್ತರ ಕೊಟ್ಟರು.


ಸಕಲ ದೇಶಗಳವರೇ, ಕೇಳಿರಿ; ಭೂಲೋಕದ ನಿವಾಸಿಗಳಿರಾ, ಕಿವಿಗೊಡಿರಿ.


ಇಸ್ರಾಯೇಲ್ಯರೇ, ನೀವು ಯಾರಿಗೆ ಅಗಾಧ ದ್ರೋಹವನ್ನು ಮಾಡಿದಿರೋ ಆತನ ಕಡೆಗೆ ತಿರಿಗಿಕೊಳ್ಳಿರಿ.


ಜನಾಂಗಗಳೇ, ಸಮೀಪಿಸಿ ಕೇಳಿರಿ; ಜನಗಳೇ, ಕಿವಿಗೊಡಿರಿ! ಭೂವಿುಯೂ ಅದರಲ್ಲಿನ ಸಮಸ್ತವೂ, ಲೋಕವೂ ಅದರಿಂದ ಉದ್ಭವಿಸುವದೆಲ್ಲವೂ ಆಲಿಸಲಿ.


ನೀನೇ ನಮ್ಮ ಪಿತೃವಾಗಿದ್ದೀಯಲ್ಲಾ; ಅಬ್ರಹಾಮನು ನಮ್ಮನ್ನರಿಯನು, ಇಸ್ರಾಯೇಲನು ನಮ್ಮನ್ನು ಗುರುತಿಸನು; ಯೆಹೋವಾ, ನೀನೇ ನಮ್ಮ ಪಿತೃ; ಆದಿಯಿಂದಲೂ ನಮ್ಮ ವಿಮೋಚಕನು ಅನ್ನಿಸಿಕೊಂಡಿದ್ದೀ.


ಭ್ರಷ್ಟರಾದ ಮಕ್ಕಳೇ, ಹಿಂದಿರುಗಿರಿ, ನಿಮ್ಮ ಭ್ರಷ್ಟತ್ವವನ್ನು ಪರಿಹರಿಸುವೆನು [ಎಂದು ಯೆಹೋವನು ಅನ್ನುತ್ತಾನೆ. ಅದಕ್ಕೆ ಜನರು] - ಇಗೋ, ನಿನ್ನ ಬಳಿಗೆ ಬಂದೆವು. ನೀನು ಯೆಹೋವನು, ನಮ್ಮ ದೇವರು.


ಈ ದ್ರೋಹಿವಂಶಕ್ಕೆ ದೃಷ್ಟಾಂತವನ್ನೆತ್ತಿ ಹೀಗೆ ಹೇಳು - ಕರ್ತನಾದ ಯೆಹೋವನು ಇಂತೆನ್ನುತ್ತಾನೆ - ಹಂಡೆಯನ್ನು ಒಲೆಯ ಮೇಲಿಡು, ಮೇಲಿಡು, ಅದರಲ್ಲಿ ನೀರನ್ನು ಹೊಯ್ಯಿ;


ತನ್ನ ತಂದೆಯ ಮಾರ್ಗದಲ್ಲಿ ನಡೆದು ಅವನು ಪೂಜಿಸಿದ ವಿಗ್ರಹಗಳನ್ನು ತಾನೂ ಪೂಜಿಸಿ ಅವುಗಳಿಗೆ ಅಡ್ಡಬಿದ್ದನು.


ಯೆಹೂದದ ಅರಸನಾದ ಯೋಥಾಮ, ಆಹಾಜ, ಹಿಜ್ಕೀಯ, ಇವರ ಕಾಲದಲ್ಲಿ ಸಮಾರ್ಯದ ಮತ್ತು ಯೆರೂಸಲೇವಿುನ ವಿಷಯವಾಗಿ ಮೋರೆಷೆತ್ ಊರಿನವನಾದ ಮೀಕನಿಗೆ ಕಂಡುಬಂದ ಯೆಹೋವನ ವಾಕ್ಯ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು