Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೆಶಾಯ 1:21 - ಕನ್ನಡ ಸತ್ಯವೇದವು J.V. (BSI)

21 ಅಯ್ಯೋ, ಸುವ್ರತೆಯಾಗಿದ್ದ ನಗರಿಯು ಸೂಳೆಯಾದಳಲ್ಲಾ! ನ್ಯಾಯದಿಂದ ತುಂಬಿ ಧರ್ಮಕ್ಕೆ ನೆಲೆಯಾಗಿದ್ದವಳು ಈಗ ಕೊಲೆಪಾತಕರಿಗೆ ನೆಲೆಯಾಗಿದ್ದಾಳೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

21 ಅಯ್ಯೋ, ನಂಬಿಕೆಯುಳ್ಳ ನಗರಿಯು ಸೂಳೆಯಾದಳಲ್ಲಾ! ನ್ಯಾಯದಿಂದ ತುಂಬಿ ಧರ್ಮಕ್ಕೆ ನೆಲೆಯಾಗಿದ್ದ ನಗರ ಈಗ ಕೊಲೆಪಾತಕರಿಗೆ ನೆಲೆಯಾಗಿದೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

21 ಅಯ್ಯೋ, ಸುವ್ರತೆಯಂತಿದ್ದ ನಗರಿ ಈಗ ಸೂಳೆಯಂತಿದ್ದಾಳಲ್ಲ! ನ್ಯಾಯನೀತಿವಂತರಿಗೆ ನೆಲೆಯಾಗಿದ್ದವಳು ಈಗ ಕೊಲೆಪಾತಕರಿಗೆ ಬೀಡಾಗಿದ್ದಾಳಲ್ಲಾ!

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

21 ದೇವರು ಹೇಳುವುದೇನೆಂದರೆ: “ಜೆರುಸಲೇಮಿನ ಕಡೆಗೆ ನೋಡಿರಿ. ಆಕೆ ನನ್ನ ಮೇಲೆ ನಂಬಿಕೆ ಇಟ್ಟು ಹಿಂಬಾಲಿಸಿದಂಥ ನಗರಿಯಾಗಿದ್ದಳು. ಆದರೆ ಈಗ ಆಕೆ ಸೂಳೆಯಾಗಲು ಕಾರಣವೇನು? ಈಗ ಆಕೆ ನನ್ನನ್ನು ಹಿಂಬಾಲಿಸುತ್ತಿಲ್ಲ. ಜೆರುಸಲೇಮು ನ್ಯಾಯನೀತಿಗಳಿಂದ ತುಂಬಿರಬೇಕಿತ್ತು. ಅಲ್ಲಿ ವಾಸಿಸುವ ಜನರು ದೇವರ ಇಚ್ಛೆಯಂತೆ ನಡೆಯಬೇಕಿತ್ತು. ಆದರೆ ಈಗ ಕೊಲೆಗಡುಕರು ಅಲ್ಲಿ ವಾಸಿಸುತ್ತಿದ್ದಾರೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

21 ನಂಬಿಗಸ್ತಿಕೆಯ ಪಟ್ಟಣವು ವ್ಯಭಿಚಾರದ ಪಟ್ಟಣವಾಗಿದೆಯಲ್ಲಾ! ಅದು ನ್ಯಾಯದಿಂದ ತುಂಬಿ ನೀತಿಯಲ್ಲಿ ನೆಲೆಯಾಗಿತ್ತು. ಆದರೆ ಈಗ ಕೊಲೆಗಾರರಿಂದ ತುಂಬಿದೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೆಶಾಯ 1:21
31 ತಿಳಿವುಗಳ ಹೋಲಿಕೆ  

ಈ ಸಾಕ್ಷಿಗಳ ಶವಗಳು ಮಹಾ ಪಟ್ಟಣದ ಬೀದಿಯಲ್ಲಿ ಬಿದ್ದಿರುವವು. ಆ ಪಟ್ಟಣಕ್ಕೆ ಗೂಢಾರ್ಥವಾಗಿ ಸೊದೋಮ್ ಎಂತಲೂ ಐಗುಪ್ತ ಎಂತಲೂ ಹೆಸರುಗಳುಂಟು; ಇವರ ಒಡೆಯನು ಸಹ ಅಲ್ಲಿಯೇ ಶಿಲುಬೆಗೆ ಹಾಕಲ್ಪಟ್ಟನು.


ಆಲಯಕ್ಕೆ ಹೊರಗಿರುವ ಅಂಗಳವನ್ನು ಅಳೆಯದೆ ಬಿಟ್ಟುಬಿಡು; ಅದು ಅನ್ಯಜನರಿಗಾಗಿ ಬಿಟ್ಟದೆ; ಅವರು ಪರಿಶುದ್ಧ ಪಟ್ಟಣವನ್ನು ನಾಲ್ವತ್ತೆರಡು ತಿಂಗಳು ತುಳಿದಾಡುವರು.


ಆದರೆ ನೀವು ಚೀಯೋನ್ ಪರ್ವತಕ್ಕೂ ಜೀವಸ್ವರೂಪನಾದ ದೇವರ ಪಟ್ಟಣವಾಗಿರುವ ಪರಲೋಕದ ಯೆರೂಸಲೇವಿುಗೂ ಉತ್ಸವಸಂಘದಲ್ಲಿ ಕೂಡಿರುವ ಕೋಟ್ಯಾನುಕೋಟಿ ದೇವದೂತರ ಬಳಿಗೂ


ಪ್ರವಾದಿಗಳಲ್ಲಿ ನಿಮ್ಮ ಪಿತೃಗಳು ಹಿಂಸೆಪಡಿಸದವರು ಯಾರಿದ್ದಾರೆ? ಅವರು ಆ ನೀತಿ ಸ್ವರೂಪನ ಆಗಮನದ ವಿಷಯದಲ್ಲಿ ಮುಂತಿಳಿಸಿದವರನ್ನು ಕೊಂದರು, ನೀವು ಈಗ ಆತನನ್ನು ಹಿಡುಕೊಟ್ಟು ಕೊಂದವರಾದಿರಿ.


ಯೆರೂಸಲೇಮೇ, ಯೆರೂಸಲೇಮೇ, ಪ್ರವಾದಿಗಳ ಪ್ರಾಣತೆಗೆಯುವವಳೇ, ದೇವರು ನಿನ್ನ ಬಳಿಗೆ ಕಳುಹಿಸಿಕೊಟ್ಟವರನ್ನು ಕಲ್ಲೆಸೆದು ಕೊಲ್ಲುವವಳೇ, ಕೋಳಿ ತನ್ನ ಮರಿಗಳನ್ನು ರೆಕ್ಕೆಗಳ ಕೆಳಗೆ ಕೂಡಿಸಿಕೊಳ್ಳುವಂತೆ ನಿನ್ನ ಮಕ್ಕಳನ್ನು ಕೂಡಿಸಿಕೊಳ್ಳುವದಕ್ಕೆ ನನಗೆ ಎಷ್ಟೋ ಸಾರಿ ಮನಸ್ಸಿತ್ತು; ಆದರೆ ನಿಮಗೆ ಮನಸ್ಸಿಲ್ಲದೆ ಹೋಯಿತು.


ಯೆಹೋವನು ಇಂತೆನ್ನುತ್ತಾನೆ - ನಾನು ಚೀಯೋನಿಗೆ ಹಿಂದಿರುಗಿದ್ದೇನೆ, ಯೆರೂಸಲೇವಿುನ ಮಧ್ಯದಲ್ಲಿ ವಾಸಿಸುವೆನು; ಆಗ ಯೆರೂಸಲೇಮು ಸುವ್ರತನಗರಿ ಅನ್ನಿಸಿಕೊಳ್ಳುವದು, ಸೇನಾಧೀಶ್ವರ ಯೆಹೋವನ ಪರ್ವತಕ್ಕೆ ಪರಿಶುದ್ಧ ಪರ್ವತವೆಂಬ ಹೆಸರು ಬರುವದು.


ಎಫ್ರಾಯೀಮು ಸುಳ್ಳಿನಿಂದಲೂ ಇಸ್ರಾಯೇಲ್ ವಂಶವು ಮೋಸದಿಂದಲೂ ನನ್ನನ್ನು ಮುತ್ತಿಕೊಂಡಿವೆ; ಯೆಹೂದವು ಸತ್ಯಸಂಧನೂ ಸದಮಲಸ್ವಾವಿುಯೂ ಆದ ದೇವರ ಕಡೆಯಿಂದ ಇನ್ನೂ ಅಲೆದಾಡುತ್ತಿದೆ.


ಯೆಹೋವನು ಹೀಗನ್ನುತ್ತಾನೆ - ಗಂಡನು ತ್ಯಜಿಸಿದವಳು ಅವನಿಂದ ಹೊರಟು ಮತ್ತೊಬ್ಬನವಳಾದ ಮೇಲೆ ಅವಳನ್ನು ಆ ಗಂಡನು ತಿರಿಗಿ ಸೇರಿಸಿಕೊಂಡಾನೇ? ಸೇರಿಸಿಕೊಂಡರೆ ಆ ದೇಶವು ಕೇವಲ ಅಪವಿತ್ರವಾಗಿ ಹೋಗುವದಲ್ಲವೆ! ಹೀಗಿರಲು ಬಹುಮಂದಿ ವಿುಂಡರೊಡನೆ ಸೂಳೆತನ ಮಾಡಿದ ನೀನು ನನ್ನ ಬಳಿಗೆ ತಿರಿಗಿ ಬರುತ್ತೀಯಾ?


ಇವರು ತಮ್ಮನ್ನು ಪರಿಶುದ್ಧ ಪಟ್ಟಣದವರು ಎಂದುಕೊಂಡು ದೇವರು ಇಸ್ರಾಯೇಲಿನವನೇ ಎಂದು ಆತನ ಮೇಲೆ ಭರವಸವಿಟ್ಟುಕೊಂಡಿರುತ್ತಾರೆ. ಆತನ ಹೆಸರೋ ಸಕಲ ಸೈನ್ಯಗಳ ಅಧೀಶ್ವರನಾದ ಯೆಹೋವನೆಂಬದು.


ಸೇನಾಧೀಶ್ವರನಾದ ಯೆಹೋವನ ದ್ರಾಕ್ಷೆಯ ತೋಟವು ಇಸ್ರಾಯೇಲ್ಯರ ಮನೆತನ, ಯೆಹೂದದ ಜನವೋ ಆತನ ಇಷ್ಟದ ಗಿಡವೇ; ಆತನು ನ್ಯಾಯವನ್ನು ನಿರೀಕ್ಷಿಸಿದಾಗ ಆಹಾ, ಸಿಕ್ಕಿದ್ದು ನರಹತ್ಯವೇ; ಧರ್ಮವನ್ನು ಎದುರುನೋಡಿದಾಗ ಆಹಾ, ದೊರಕಿದ್ದು ಅರಚಾಟವೇ.


ನಾವು ಕಿವಿಯಿಂದ ಕೇಳಿದಂತೆಯೇ ಈಗ ಕಣ್ಣಾರೆ ಕಂಡೆವು; ನಮ್ಮ ದೇವರೂ ಸೇನಾಧೀಶನೂ ಆಗಿರುವ ಯೆಹೋವನ ಸಂಸ್ಥಾನದಲ್ಲಿ ಆತನ ಮಹತ್ತನ್ನು ನೋಡಿದ್ದೇವೆ.


ಯೆಹೋವನು ಮಹೋನ್ನತನು; ನಮ್ಮ ದೇವರು ತನ್ನ ಪರಿಶುದ್ಧ ಪರ್ವತನಗರದಲ್ಲಿ ಸರ್ವಸ್ತುತಿಪಾತ್ರನಾಗಿದ್ದಾನೆ.


ಒಂದು ನದಿ ಅದೆ; ಅದರ ಕಾಲುವೆಗಳು ಪರಾತ್ಪರನ ಪರಿಶುದ್ಧ ನಿವಾಸಸ್ಥಾನವಾಗಿರುವ ದೇವನಗರವನ್ನು ಸಂತೋಷಪಡಿಸುತ್ತವೆ.


ಇಸ್ರಾಯೇಲ್ಯರ ಪ್ರಭುಗಳು ಮಾತ್ರ ಯೆರೂಸಲೇವಿುನಲ್ಲಿ ವಾಸಿಸುತ್ತಿದ್ದರು. ಉಳಿದ ಜನರೊಳಗೆ ಹತ್ತತ್ತು ಮಂದಿಯಲ್ಲಿ ಒಂಭತ್ತು ಮಂದಿ ತಮ್ಮ ತಮ್ಮ ಊರುಗಳಲ್ಲಿದ್ದುಕೊಂಡು ಒಬ್ಬನು ಪವಿತ್ರನಗರವಾಗಿರುವ ಯೆರೂಸಲೇವಿುನಲ್ಲಿ ವಾಸಿಸುವದಕ್ಕಾಗಿ ಅಲ್ಲಿಗೆ ಬರುವಂತೆ ಚೀಟುಹಾಕಿ ಗೊತ್ತು ಮಾಡಿದರು.


ನೀವು ಯೆಹೋವನಲ್ಲಿ ಭಯಭಕ್ತಿಯುಳ್ಳವರಾಗಿ ನಂಬಿಕೆಯಿಂದಲೂ ಯಥಾರ್ಥಮನಸ್ಸಿನಿಂದಲೂ ಮಾಡತಕ್ಕ ಕೆಲಸವು ಯಾವದಂದರೆ -


ದಾವೀದನು ಇಸ್ರಾಯೇಲ್ಯರೆಲ್ಲರ ಅರಸನಾಗಿ ಎಲ್ಲಾ ಪ್ರಜೆಗಳಿಗೂ ಧರ್ಮತಪ್ಪದೆ ನ್ಯಾಯತೀರಿಸುತ್ತಿದ್ದನು.


ಏಳು ಪಾತ್ರೆಗಳನ್ನು ಹಿಡಿದಿದ್ದ ಏಳು ಮಂದಿ ದೇವದೂತರಲ್ಲಿ ಒಬ್ಬನು ಬಂದು ನನ್ನ ಸಂಗಡ ಮಾತಾಡಿ - ಬಾ, ಬಹಳ ನೀರುಗಳ ಮೇಲೆ ವಾಸಿಸಿರುವ ಮಹಾ ಜಾರಸ್ತ್ರೀಗೆ ಬರುವ ದಂಡನೆಯನ್ನು ನಿನಗೆ ತೋರಿಸುತ್ತೇನೆ;


ನಿನ್ನ ಬೆಳ್ಳಿಯು ಕಂದಾಯಿತು, ನಿನ್ನ ದ್ರಾಕ್ಷಾರಸವು ನೀರಾಯಿತು.


ನಿಮ್ಮ ಕೈಗಳು ರಕ್ತದಿಂದ ಹೊಲಸಾಗಿವೆ, ನಿಮ್ಮ ಬೆರಳುಗಳು ಅಪರಾಧದಿಂದ ಅಶುದ್ಧವಾಗಿವೆ; ನಿಮ್ಮ ತುಟಿಗಳು ಸುಳ್ಳಾಡುತ್ತವೆ, ನಿಮ್ಮ ನಾಲಿಗೆಯು ಕೆಡುಕನ್ನು ನುಡಿಯುತ್ತದೆ.


ನ್ಯಾಯವು ಹಿಂದಕ್ಕೆ ತಳ್ಳಲ್ಪಟ್ಟಿದೆ, ಧರ್ಮವು ದೂರದಲ್ಲಿ ನಿಂತಿದೆ, ಸತ್ಯವು ಚಾವಡಿಯಲ್ಲಿ ಬಿದ್ದುಹೋಗಿದೆ, ಯಥಾರ್ಥವು ಪ್ರವೇಶಿಸಲಾರದು.


ಸತ್ಯವು ಇಲ್ಲವೇ ಇಲ್ಲ, ಕೇಡನ್ನು ಬಿಟ್ಟವನು ಸೂರೆಯಾಗುತ್ತಾನೆ.


ಅವರ ತಾಯಿಯು ಸೂಳೆತನ ಮಾಡಿದ್ದಾಳೆ, ಹೆತ್ತವಳು ನಾಚಿಕೆಗೇಡಿಯಾಗಿ ನಡೆದಿದ್ದಾಳೆ; ನನಗೆ ಬೇಕಾದ ಅನ್ನಪಾನಗಳನ್ನೂ ಉಣ್ಣೆನಾರುಗಳನ್ನೂ ತೈಲವನ್ನೂ ಪಾಯಸ ಪಾನಕಗಳನ್ನೂ ನನಗೆ ಕೊಡುವ ನನ್ನ ವಿುಂಡರ ಹಿಂದೆ ಹೋಗುವೆನು ಅಂದುಕೊಂಡಿದ್ದಾಳೆ.


ಹೀಗಿರಲು ಧರ್ಮೋಪದೇಶವು ಜಡವಾಗಿದೆ, ನ್ಯಾಯವು ಎಂದಿಗೂ ಸಾಗದು; ದುಷ್ಟನು ಶಿಷ್ಟನನ್ನು ಸುತ್ತಿಕೊಂಡಿದ್ದಾನೆ, ಆದದರಿಂದ ಸಾಗುವ ನ್ಯಾಯವು ವಕ್ರವೇ.


ದುಷ್ಟರನ್ನು ಕರುಣಿಸಿದರೂ ಅವರು ಧರ್ಮಜ್ಞಾನವನ್ನು ಪಡೆಯರು; ಯೆಹೋವನ ಮಹಿಮೆಯನ್ನು ಲಕ್ಷಿಸದೆ ಯಥಾರ್ಥವಂತರ ದೇಶದಲ್ಲಿಯೂ ಅನ್ಯಾಯವನ್ನಾಚರಿಸುವರು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು