Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೆಶಾಯ 10:3 - ಕನ್ನಡ ಸತ್ಯವೇದವು J.V. (BSI)

3 ದಂಡನೆಯ ದಿನದಲ್ಲಿಯೂ ದೂರದಿಂದ ಬರುವ ನಾಶನದಲ್ಲಿಯೂ ಏನು ಮಾಡುವಿರಿ? ಸಹಾಯಕ್ಕಾಗಿ ಯಾರ ಬಳಿಗೆ ಓಡುವಿರಿ? ನಿಮ್ಮ ಐಶ್ವರ್ಯವನ್ನು ಯಾರ ವಶಮಾಡುವಿರಿ?

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

3 ದಂಡನೆಯ ದಿನದಲ್ಲಿಯೂ, ದೂರದಿಂದ ಬರುವ ನಾಶನದಲ್ಲಿಯೂ ನೀವು ಏನು ಮಾಡುವಿರಿ? ಸಹಾಯಕ್ಕಾಗಿ ಯಾರ ಬಳಿಗೆ ಓಡುವಿರಿ? ನಿಮ್ಮ ಐಶ್ವರ್ಯವನ್ನು ಯಾರ ವಶಮಾಡುವಿರಿ?

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

3 ದಂಡನೆಯ ದಿನದಂದು ಏನು ಮಾಡುವಿರಿ? ದೂರದಿಂದ ಬರುವ ವಿನಾಶದಿಂದ ಹೇಗೆ ಪಾರಾಗುವಿರಿ? ಸಹಾಯಕ್ಕಾಗಿ ಯಾರ ಬಳಿಗೆ ಓಡುವಿರಿ? ನಿಮ್ಮ ಆಸ್ತಿಪಾಸ್ತಿಯನ್ನು ಎಲ್ಲಿ ಅವಿತಿಡುವಿರಿ?

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

3 ನ್ಯಾಯಶಾಸ್ತ್ರಿಗಳೇ, ನಿಮ್ಮ ಕಾರ್ಯಗಳಿಗೆ ನೀವೇ ಉತ್ತರ ಕೊಡಬೇಕು. ಆಗ ನೀವು ಏನು ಮಾಡುವಿರಿ? ದೂರದೇಶದಿಂದ ನಿಮ್ಮ ನಾಶನವು ಬರುತ್ತಲಿದೆ. ಸಹಾಯಕ್ಕಾಗಿ ಎಲ್ಲಿಗೆ ಓಡುವಿರಿ? ನಿಮ್ಮ ಐಶ್ವರ್ಯವೂ ನಿಮ್ಮ ಧನರಾಶಿಯೂ ನಿಮ್ಮನ್ನು ರಕ್ಷಿಸಲಾರವು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

3 ವಿಚಾರಣೆಯ ದಿನದಲ್ಲಿಯೂ, ದೂರದಿಂದ ಬರುವ ನಾಶನದಲ್ಲಿಯೂ ನೀವು ಏನು ಮಾಡುವಿರಿ? ಸಹಾಯಕ್ಕಾಗಿ ನೀವು ಯಾರ ಬಳಿಗೆ ಓಡುವಿರಿ? ನಿಮ್ಮ ಐಶ್ವರ್ಯವನ್ನು ಎಲ್ಲಿ ಬಿಡುವಿರಿ?

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೆಶಾಯ 10:3
40 ತಿಳಿವುಗಳ ಹೋಲಿಕೆ  

ದಂಡನೆಯ ದಿನಗಳು ಹತ್ತರಿಸಿವೆ, ಮುಯ್ಯಿತೀರಿಸುವ ದಿವಸಗಳು ಸಮೀಪಿಸಿವೆ; ಇಸ್ರಾಯೇಲಿನ ಅನುಭವಕ್ಕೆ ಬಂದೇ ಬರುವವು; [ಇಸ್ರಾಯೇಲೇ,] ನಿನ್ನ ಅಧರ್ಮವು ಬಹಳವಾಗಿರುವದರಿಂದಲೂ ವಿರೋಧವು ಹೆಚ್ಚಾಗಿರುವದರಿಂದಲೂ ಪ್ರವಾದಿಯು ಮೂರ್ಖನು, ದೇವರಾತ್ಮಾವಿಷ್ಟನು ಹುಚ್ಚನು [ಅಂದುಕೊಳ್ಳುತ್ತಿ].


ದೇವರು [ನ್ಯಾಯಸ್ಥಾಪನೆಗೆ] ಏಳುವಾಗ ನಾನು ಏನು ಮಾಡೇನು? ಆತನು ವಿಚಾರಿಸುವಾಗ ಯಾವ ಉತ್ತರ ಕೊಟ್ಟೇನು?


ನಿಮ್ಮ ನಡವಳಿಕೆಯು ಅನ್ಯಜನರ ಮಧ್ಯದಲ್ಲಿ ಯೋಗ್ಯವಾಗಿರಲಿ; ಆಗ ಅವರು ಯಾವ ವಿಷಯದಲ್ಲಿ ನಿಮ್ಮನ್ನು ಅಕ್ರಮಗಾರರೆಂದು ನಿಂದಿಸುತ್ತಾರೋ ಆ ವಿಷಯದಲ್ಲಿಯೇ ನಿಮ್ಮ ಸತ್ಕ್ರಿಯೆಗಳನ್ನು ಕಣ್ಣಾರೆ ಕಂಡು ವಿಚಾರಣೆಯ ದಿನದಲ್ಲಿ ದೇವರನ್ನು ಕೊಂಡಾಡುವರು.


ಯೆಹೋವನ ರೌದ್ರದ ದಿನದಲ್ಲಿ ಅವರ ಬೆಳ್ಳಿಬಂಗಾರಗಳು ಕೂಡಾ ಅವರನ್ನು ರಕ್ಷಿಸಲಾರವು; ಆತನ ರೋಷಾಗ್ನಿಯು ದೇಶವನ್ನೆಲ್ಲಾ ನುಂಗಿಬಿಡುವದು; ಆತನು ದೇಶನಿವಾಸಿಗಳೆಲ್ಲರನ್ನೂ ಕೊನೆಗಾಣಿಸುವನು, ಹೌದು, ಘೋರವಾಗಿ ನಿರ್ಮೂಲ ಮಾಡುವನು.


ಇಗೋ, ಯೆಹೋವನು ಭೂನಿವಾಸಿಗಳಿಗೆ ಅವರ ಪಾಪಫಲವನ್ನು ತಿನ್ನಿಸಬೇಕೆಂದು ತನ್ನ ಸ್ಥಳದಿಂದ ಹೊರಡುತ್ತಾನೆ; ಭೂವಿುಯು ತನ್ನಲ್ಲಿ ಇಂಗಿದ್ದ ರಕ್ತವನ್ನು ವ್ಯಕ್ತಗೊಳಿಸುವದು, ತನ್ನ ನಿವಾಸಿಗಳಲ್ಲಿ ಹತರಾಗಿದ್ದವರನ್ನು ಇನ್ನು ಮರೆಮಾಜದು.


ಆ ದಿನದಲ್ಲಿ ಈ ಕರಾವಳಿಯಲ್ಲಿ ವಾಸಿಸುವವರು - ಹಾ, ಅಶ್ಶೂರದ ಅರಸನಿಂದ ಬಿಡುಗಡೆಯಾಗಬೇಕೆಂದು ನಾವು ಯಾರನ್ನು ಶರಣಾಗತರಾಗಿ ಆಶ್ರಯಿಸಿ ನಿರೀಕ್ಷಿಸಿದ್ದೆವೋ ಅವರಿಗೇ ಈ ಗತಿ ಬಂತಲ್ಲಾ; ನಮ್ಮಂಥವರಿಗೆ ಹೇಗೆ ರಕ್ಷಣೆಯಾದೀತು ಎಂದು ಅಂದುಕೊಳ್ಳುವರು.


ಆತನು ದೂರದ ಜನಾಂಗದವರಿಗೆ ಗುರುತಾಗಿ ಧ್ವಜವೆತ್ತಿ ಅವರನ್ನು ಭೂಲೋಕದ ಅಂಚಿನಲ್ಲಿಂದ ಸಿಳ್ಳುಹಾಕಿ ಕರೆಯುವನು; ಇಗೋ, ತ್ವರೆಪಟ್ಟು ವೇಗವಾಗಿ ಬರುತ್ತಾರೆ!


ಧನವು ಕೋಪದ ದಿನದಲ್ಲಿ ವ್ಯರ್ಥ; ಧರ್ಮವು ಮರಣವಿಮೋಚಕ.


ನಿಮಗೆ ತಿಳಿಯದ ಭಾಷೆಯನ್ನಾಡುವ ಒಂದು ಜನಾಂಗವು ರಣಹದ್ದು ಹೇಗೆ ದೂರದಿಂದ ಹಾರಿಬರುವದೋ ಹಾಗೆಯೇ ದೂರದಿಂದ ನಿಮ್ಮ ಮೇಲೆ ಬರುವಂತೆ ಯೆಹೋವನು ಮಾಡುವನು.


ಪ್ರವಾದಿಗಳು ಸುಳ್ಳಾಗಿ ಪ್ರವಾದಿಸುತ್ತಾರೆ, ಯಾಜಕರು ಅವರಿಂದ ಅಧಿಕಾರ ಹೊಂದಿ ದೊರೆತನ ಮಾಡುತ್ತಾರೆ, ನನ್ನ ಜನರು ಇದನ್ನೇ ಪ್ರೀತಿಸುತ್ತಾರೆ; ಕಟ್ಟಕಡೆಗೆ ನೀವು ಏನು ಮಾಡುವಿರಿ?


ಆಗ ಪ್ರವಾದಿಯಾದ ಯೆಶಾಯನು ಹಿಜ್ಕೀಯನ ಬಳಿಗೆ ಬಂದು ಅವನನ್ನು - ಆ ಮನುಷ್ಯರು ಎಲ್ಲಿಯವರು, ಏನು ಹೇಳಿದರು ಎಂದು ಕೇಳಲು ಅವನು - ಅವರು ಬಹುದೂರದೇಶದಿಂದ ಬಾಬೆಲಿನಿಂದ ನನ್ನ ಬಳಿಗೆ ಬಂದವರು ಎಂದು ಉತ್ತರ ಕೊಟ್ಟನು.


ಚೀಯೋನಿನ ಪಾಪಿಗಳು ಹೆದರುತ್ತಾರೆ, ಆ ಭ್ರಷ್ಟರು ನಡುಕಕ್ಕೆ ಒಳಗಾಗಿ - ನಮ್ಮಲ್ಲಿ ಯಾರು ನುಂಗುವ ಕಿಚ್ಚಿನ ಸಂಗಡ ವಾಸಿಸಬಲ್ಲರು? ನಮ್ಮಲ್ಲಿ ಯಾರು ಸದಾ ಉರಿಯುವ ಜ್ವಾಲೆಗಳೊಡನೆ ತಂಗಿಯಾರು ಅಂದುಕೊಳ್ಳುತ್ತಾರೆ.


ನೀವು - ಬೇಡವೇ ಬೇಡ, ಕುದುರೆಗಳ ಮೇಲೆ ಓಡುವೆವು ಎಂದುಕೊಂಡದರಿಂದ ಓಡೇ ಹೋಗುವಿರಿ; ನೀವು - ವೇಗವಾಗಿ ಸವಾರಿಮಾಡುವೆವು ಎಂದುಕೊಂಡದರಿಂದ ವೇಗಿಗಳೇ ನಿಮ್ಮನ್ನು ಅಟ್ಟಿ ಬಿಡುವರು;


ಮತ್ತು ಪಾತಾಳವು ಹೆಚ್ಚು ಆತುರದಿಂದ ಅಪಾರವಾಗಿ ಬಾಯಿತೆರೆಯಲು ಅವರ ಮಹಿಮೆ, ಕೋಲಾಹಲ, ಗದ್ದಲ, ಉಲ್ಲಾಸ ಇವೆಲ್ಲಾ [ಅದರೊಳಗೆ] ಬಿದ್ದುಹೋಗುವವು.


ಅವರು ಯೊರ್ದನ್‍ಹೊಳೆಯವರೆಗೂ ಹೋಗಿ ಅವಸರದಿಂದ ಓಡಿಹೋದ ಅರಾಮ್ಯರು ದಾರಿಯಲ್ಲೆಲ್ಲಾ ತಮ್ಮ ಬಟ್ಟೆಗಳನ್ನೂ ಸಾಮಾನುಗಳನ್ನೂ ಬಿಸಾಡಿದ್ದನ್ನು ಕಂಡು ಹಿಂದಿರುಗಿ ಬಂದು ಅರಸನಿಗೆ ತಿಳಿಸಿದರು.


ನಮ್ಮ ತಂದೆಯ ಆಸ್ತಿಯೆಲ್ಲಾ ಯಾಕೋಬನ ಪಾಲಾಯಿತು; ನಮ್ಮ ತಂದೆಯ ಆಸ್ತಿಯಿಂದಲೇ ಅವನಿಗೆ ಇಷ್ಟು ಐಶ್ವರ್ಯವುಂಟಾಯಿತು ಎಂಬದಾಗಿ ಲಾಬಾನನ ಮಕ್ಕಳು ಹೇಳಿಕೊಳ್ಳುವ ಮಾತುಗಳು ಯಾಕೋಬನ ಕಿವಿಗೆ ಬಿದ್ದವು.


ಹೀಗಿರಲು ಎಫ್ರಾಯೀಮು ತಾನು ರೋಗಿಯೆಂದು ತಿಳುಕೊಂಡಿತು, ಯೆಹೂದವು ತನ್ನ ವ್ರಣವನ್ನು ನೋಡಿಕೊಂಡಿತು; ಆಗ ಎಫ್ರಾಯೀಮು ಅಶ್ಶೂರದ ಕಡೆಗೆ ತಿರುಗಿಕೊಂಡು ಜಗಳಗಂಟ ಮಹಾರಾಜನ ಬಳಿಗೆ ದೂತರನ್ನು ಕಳುಹಿಸಿತು; ಆದರೆ ಅವನು ನಿಮ್ಮನ್ನು ಸ್ವಸ್ಥಮಾಡಲಾರನು, ನಿಮ್ಮ ವ್ರಣವನ್ನು ಗುಣಪಡಿಸಲಾರನು.


ಅರಚಿಕೊಳ್ಳಿರಿ, ಯೆಹೋವನ ದಿನವು ಸಮೀಪವಾಯಿತು; ಅದು ಸರ್ವಶಕ್ತನಿಂದ ನಾಶರೂಪವಾಗಿ ಬರುವದು.


ಆ ದಿನದಲ್ಲಿ ಯಾಕೋಬಿನ ಮಾಂಸದ ಕೊಬ್ಬು ಕರಗಿ ಅದರ ಮಹಿಮೆಯು ಕ್ಷೀಣವಾಗುವದು.


ನೀನು ಆ ಒಡೆಯರ ಮೇಲೆ ಕೈಮಾಡಿ ನಿರ್ಮೂಲಪಡಿಸಿ ಅವರ ಜ್ಞಾಪಕವನ್ನು ಅಳಿಸಿಬಿಟ್ಟಿದ್ದೀ; ಸತ್ತವರು ಪುನಃ ಬದುಕುವದಿಲ್ಲ, ಪ್ರೇತಗಳು ಎದ್ದು ಬರುವದಿಲ್ಲವಲ್ಲಾ.


ಸೇನಾಧೀಶ್ವರನಾದ ಯೆಹೋವನು ಗುಡುಗು, ಭೂಕಂಪ, ಮಹಾಶಬ್ದ, ಬಿರುಗಾಳಿ, ಚಂಡಮಾರುತ, ದಹಿಸುವ ಅಗ್ನಿಯ ಜ್ವಾಲೆ ಇವುಗಳ ಮೂಲಕ ಆ ನಗರಿಯನ್ನು ರಕ್ಷಿಸುವನು.


ಸಹಾಯವನ್ನೂ ಪ್ರಯೋಜನವನ್ನೂ ಮಾಡಲಾರದೆ ನಾಚಿಕೆಯನ್ನೂ ಅವಮಾನವನ್ನೂ ಉಂಟುಮಾಡುವ ವ್ಯರ್ಥವಾದ ಈ ಜನಾಂಗದ ವಿಷಯವಾಗಿ ಎಲ್ಲರೂ ಲಜ್ಜೆಪಡುವರು.


ಐಗುಪ್ತದ ಸಹಾಯವು ವ್ಯರ್ಥವೇ ವ್ಯರ್ಥ; ಆದದರಿಂದ ನಾನು ಅದಕ್ಕೆ ಸುಮ್ಮನೆ ಬಿದ್ದಿರುವ ಜಂಬದ ಮೃಗವೆಂದು ಹೆಸರಿಟ್ಟಿದ್ದೇನೆ.


ಎಲೈ, [ನಗರಿಯೇ,] ನೀನು ಸೂರೆಯಾಗುವಾಗ ಏನು ಮಾಡುವಿ? ನೀನು ರಕ್ತಾಂಬರವನ್ನು ಹೊದ್ದು ಸುವರ್ಣಾಭರಣಗಳಿಂದ ನಿನ್ನನ್ನು ಅಲಂಕರಿಸಿಕೊಂಡು ನೀಲಾಂಜನದಿಂದ ವಿಶಾಲಾಕ್ಷಿಯಾದರೇನು, ನಿನ್ನನ್ನು ಸೊಗಸು ಮಾಡಿಕೊಳ್ಳುವದು ವ್ಯರ್ಥ; ನಿನ್ನ ವಿುಂಡರು ನಿನ್ನನ್ನು ಧಿಕ್ಕರಿಸಿ ನಿನ್ನ ಪ್ರಾಣವನ್ನೇ ಹುಡುಕುತ್ತಾರೆ.


ನಾನು ಅವರನ್ನು ಇವುಗಳಿಗಾಗಿ ದಂಡಿಸಬಾರದೋ? ಇಂಥಾ ಜನಾಂಗದ ಮೇಲೆ ನನ್ನ ರೋಷವನ್ನು ತೀರಿಸದಿರುವೆನೋ?


ಆಯುಧ ಸನ್ನದ್ಧರಾದ ಸಂಹಾರಕರನ್ನು ನಿನಗೆ ವಿರುದ್ಧವಾಗಿ ಏರ್ಪಡಿಸುವೆನು;


ನೀವು ಹಬ್ಬದ ದಿನದಲ್ಲಿ, ಯೆಹೋವನ ಮಹೋತ್ಸವ ದಿವಸದಲ್ಲಿ ಏನು ಮಾಡುವಿರಿ?


ಅವರಲ್ಲಿ ಉತ್ತಮನೂ ಮುಳ್ಳುಕಂಪೆ, ಸತ್ಯವಂತನೂ ಕೂಡ ಮುಳ್ಳುಬೇಲಿಗಿಂತ ಕಡೆ; ನಿನ್ನ ಕಾವಲುಗಾರರು ಮುಂತಿಳಿಸಿದ ದಿನ, ನಿನ್ನ ದಂಡನೆಯ ದಿನ ಬಂದಿದೆ; ಈಗ ನಿನ್ನ ಜನರಿಗೆ ಭ್ರಾಂತಿಹಿಡಿಯುವದು.


ಒಬ್ಬನು ಚಾಚಿಕೊಂಡು ಮಲಗೇನಂದರೆ ಹಾಸಿಗೆಯ ಉದ್ದ ಸಾಲದು; ಮುದುರಿಕೊಂಡು ಮಲಗೇನಂದರೆ ಹೊದಿಕೆಯ ಅಗಲ ಸಾಲದು.


ಸಿಂಹದ ಕಡೆಯಿಂದ ಓಡಿದವನಿಗೆ ಕರಡಿಯು ಎದುರುಬಿದ್ದಂತಾಗುವದು; ಅವನು ಮನೆಗೆ ಓಡಿಬಂದು ಕೈಯನ್ನು ಗೋಡೆಯ ಮೇಲೆ ಊರಲು ಹಾವು ಕಚ್ಚಿದ ಹಾಗಾಗುವದು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು