Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೆಶಾಯ 10:5 - ಕನ್ನಡ ಸತ್ಯವೇದವು J.V. (BSI)

5 ಆಹಾ, ಅಶ್ಶೂರವೇ, ನೀನು ನನ್ನ ಕೋಪವೆಂಬ ಕೋಲು, ನಿನ್ನ ಕೈಯಲ್ಲಿರುವ ದೊಣ್ಣೆಯು ನನ್ನ ರೋಷವೇ!

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

5 ಅಯ್ಯೋ, ಅಶ್ಶೂರವೇ ನೀನು ನನ್ನ ಕೋಪವೆಂಬ ಕೋಲು, ನಿನ್ನ ಕೈಯಲ್ಲಿರುವ ದೊಣ್ಣೆಯು ನನ್ನ ರೌದ್ರವೇ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

5 ಆಹಾ, ಅಸ್ಸೀರಿಯ ನಾಡೇ, ನೀನು ನನ್ನ ಕೋಪದ ದಂಡಾಯುಧ, ರೋಷದ ದೊಣ್ಣೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

5 ದೇವರು ಹೀಗೆ ಹೇಳುವನು: “ನಾನು ಕೋಪಗೊಂಡಾಗ ಬೆತ್ತವನ್ನು ಹೇಗೆ ಉಪಯೋಗಿಸುವೆನೋ ಹಾಗೆಯೇ ಇಸ್ರೇಲನ್ನು ಶಿಕ್ಷಿಸಲು ಅಶ್ಶೂರವನ್ನು ಉಪಯೋಗಿಸುವೆನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

5 “ಅಯ್ಯೋ, ನನ್ನ ಕೋಪದ ಕೋಲಾದ ಅಸ್ಸೀರಿಯವೇ, ನನ್ನ ಕೈಯಲ್ಲಿರುವ ಬೆತ್ತವು ನನ್ನ ಕೋಪವೇ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೆಶಾಯ 10:5
31 ತಿಳಿವುಗಳ ಹೋಲಿಕೆ  

ಯೆಹೋವನು ಬಡಗಲಿಗೆ ಕೈಚಾಚಿ ಅಶ್ಶೂರವನ್ನು ಧ್ವಂಸಪಡಿಸುವನು; ನಿನೆವೆಯನ್ನು ಹಾಳುಮಾಡಿ ಮರುಭೂವಿುಯಂತೆ ಒಣಗಿಸಿಬಿಡುವನು.


ಆಗ ಯೆಹೋವನು ತನ್ನ ಗಂಭೀರವಾದ ಧ್ವನಿಯನ್ನು ಕೇಳಮಾಡಿ ತೀವ್ರಕೋಪ, ಕಬಳಿಸುವ ಅಗ್ನಿಜ್ವಾಲೆ, ಬಿರಿದ ಮೋಡ, ಅತಿವೃಷ್ಟಿ, ಕಲ್ಮಳೆ ಇವುಗಳಿಂದ ತನ್ನ ಶಿಕ್ಷಾಹಸ್ತವನ್ನು ತೋರ್ಪಡಿಸುವನು.


ಅಶ್ಶೂರ್ಯರನ್ನು ನನ್ನ ದೇಶದಲ್ಲಿ ಮುರಿದು ನನ್ನ ಬೆಟ್ಟಗಳ ಮೇಲೆ ತುಳಿದುಬಿಡುವೆನು; ಆಗ ಅವರು ಹೂಡಿದ ನೊಗವು ನನ್ನ ಜನರಿಂದ ತೊಲಗಿ ಹೊರಿಸಿದ ಹೊರೆಯು ನನ್ನ ಜನರ ಹೆಗಲಿಗೆ ದೂರವಾಗುವದು.


ಕೊಡಲಿಯು ಕಡಿಯುವವನಿಗೆ ವಿರುದ್ಧವಾಗಿ ಕೊಚ್ಚಿಕೊಂಡೀತೇ? ಗರಗಸವು ಆಡಿಸುವವನಿಗೆ ಪ್ರತಿಯಾಗಿ ತನ್ನನ್ನು ಹೆಚ್ಚಿಸಿಕೊಂಡೀತೇ? ಎತ್ತಿಕೊಂಡವನನ್ನು ಕೋಲು ಬೀಸಿದಂತಾಯಿತು, ಮರಕ್ಕಿಂತ ಶ್ರೇಷ್ಠನಾಗಿರುವ ಮನುಷ್ಯನನ್ನು ದೊಣ್ಣೆಯು ಎತ್ತಿಕೊಂಡ ಹಾಗಾಯಿತು.


ನೀವು ಇದನ್ನು ಕಣ್ಣಾರೆ ಕಾಣುವಿರಿ, ನಿಮ್ಮ ಹೃದಯವು ಉಲ್ಲಾಸಿಸುವದು, ನಿಮ್ಮ ಎಲುಬುಗಳು ಹಸಿಹುಲ್ಲಿನಂತೆ ರಸವತ್ತಾಗುವವು; ಆಗ ಯೆಹೋವನು ತನ್ನ ಸೇವಕರ ಮೇಲೆ ಕೃಪಾಹಸ್ತವನ್ನು ವ್ಯಕ್ತಪಡಿಸಿ ತನ್ನ ಶತ್ರುಗಳ ಮೇಲೆ ರೋಷಗೊಳ್ಳುವನು.


ಯೆಹೋವನೂ ಆತನ ರೋಷಕ್ಕೆ ಆಯುಧಗಳಾದವರೂ ದೂರ ದೇಶದಿಂದ, ಅಂದರೆ ಆಕಾಶಮಂಡಲದ ಕಟ್ಟಕಡೆಯಿಂದ, ಭೂವಿುಯನ್ನೆಲ್ಲಾ ಹಾಳುಮಾಡುವದಕ್ಕಾಗಿ ಬಂದಿದ್ದಾರೆ.


ಆ ಮಗುವು ಅಪ್ಪಾ, ಅಮ್ಮಾ, ಎಂದು ಕೂಗಬಲ್ಲದಾಗುವದರೊಳಗೆ ಅಶ್ಶೂರದ ಅರಸನು ದಮಸ್ಕದ ಆಸ್ತಿಯನ್ನೂ ಸಮಾರ್ಯದ ಸೂರೆಯನ್ನೂ ಹೊರಿಸಿಕೊಂಡು ಹೋಗುವನು ಎಂದು ಹೇಳಿದನು.


ದುಷ್ಟರ ದಂಡಾಧಿಕಾರವು ನೀತಿವಂತರ ಸ್ವಾಸ್ತ್ಯದಲ್ಲಿ ಉಳಿಯುವದೇ ಇಲ್ಲ; ಉಳಿದರೆ ನೀತಿವಂತರೂ ಅಕ್ರಮಕ್ಕೆ ಕೈ ಹಚ್ಚಾರು.


ಯೆಹೋವನೇ, ಇಹಲೋಕವೇ ತಮ್ಮ ಪಾಲೆಂದು ನಂಬಿದ ನರರಿಗೆ ಸಿಕ್ಕದಂತೆ ನಿನ್ನ ಕೈಯಿಂದ ನನ್ನನ್ನು ತಪ್ಪಿಸು; ನಿನ್ನ ಐಶ್ವರ್ಯದಿಂದ ಅವರ ಹೊಟ್ಟೆಯನ್ನು ತುಂಬಿಸಿದ್ದೀಯಲ್ಲಾ. ಅವರು ಸಂತಾನವೃದ್ಧಿಹೊಂದಿ ವಿುಕ್ಕ ಆಸ್ತಿಯನ್ನು ತನ್ನ ಮಕ್ಕಳಿಗೆ ಬಿಡುತ್ತಾರೆ.


ಅವನು ಆ ದೇಶದಿಂದ ಹೊರಟು ಅಶ್ಶೂರ್ ದೇಶಕ್ಕೆ ಬಂದು ನಿನೆವೆ, ರೆಹೋಬೋತೀರ್, ಕೆಲಹ ಎಂಬ ಪಟ್ಟಣಗಳನ್ನೂ


ಕೇಳು, ಹೀಗಾಗಬೇಕೆಂದು ಬಹುಕಾಲದ ಹಿಂದೆಯೇ ಗೊತ್ತುಮಾಡಿದೆನು; ಪೂರ್ವಕಾಲದಲ್ಲಿ ನಿರ್ಣಯಿಸಿದ್ದನ್ನು ಈಗ ನೆರವೇರಿಸಿದ್ದೇನೆ. ಆದದರಿಂದ ಕೋಟೆಕೊತ್ತಲುಗಳುಳ್ಳ ಪಟ್ಟಣಗಳನ್ನು ಹಾಳುದಿಬ್ಬಗಳನ್ನಾಗಿ ಮಾಡುವದು ನಿನಗೆ ಸಾಧ್ಯವಾಯಿತು.


ಮತ್ತು ಯೆಹೂದದಿಂದ ಎಫ್ರಾಯೀಮು ಅಗಲಿದಂದಿನಿಂದ ಈಚೆಗೆ ಸಂಭವಿಸಿದ ದುಷ್ಕಾಲವನ್ನು ಯೆಹೋವನು ನಿನ್ನ ಮೇಲೂ ನಿನ್ನ ಪ್ರಜೆಯ ಮೇಲೂ ನಿನ್ನ ತಂದೆಯ ಮನೆತನದ ಮೇಲೂ ಬರಮಾಡುವನು; ಆ ದುಷ್ಕಾಲವು ಅಶ್ಶೂರದ ಅರಸೇ.


ಆಗ ಕರ್ತನು ಯೂಫ್ರೇಟೀಸ್ ನದಿಯ ಆಚೆಗಿರುವ ಅಶ್ಶೂರದ ರಾಜನೆಂಬ ಬಾಡಿಗೆಯ ಕ್ಷೌರದ ಕತ್ತಿಯಿಂದ [ಯೆಹೂದದ] ತಲೆಯನ್ನೂ ಕಾಲಕೂದಲನ್ನೂ ಬೋಳಿಸುವನು; ಅದು ಗಡ್ಡವನ್ನು ಸಹ ತೆಗೆದುಬಿಡುವದು.


ಇಗೋ, ಕರ್ತನು ಪೂರ್ಣಪ್ರತಾಪದಿಂದ ಕೂಡಿದ ಅಶ್ಶೂರದ ಅರಸನೆಂಬ ಮಹಾನದಿಯ ರಭಸವಾದ ದೊಡ್ಡ ಪ್ರವಾಹವನ್ನು ಇವರ ಮೇಲೆ ಬರಮಾಡುವನು;


ಬಹು ಸ್ವಲ್ಪ ಕಾಲದೊಳಗೆ [ನಿಮ್ಮ ಮೇಲಿನ] ಉಗ್ರವು ತೀರಿ ನನ್ನ ಕೋಪವು ಅವರ ನಾಶನಕ್ಕಾಗುವದು.


ಸೇನಾಧೀಶ್ವರನಾದ ಯೆಹೋವನು ಆಣೆಯಿಟ್ಟು ಹೇಳುವದೇನಂದರೆ - ನಾನು ಸಂಕಲ್ಪಿಸಿದ್ದೇ ನೆರವೇರುವದು, ಉದ್ದೇಶಿಸಿದ್ದೇ ನಿಲ್ಲುವದು, ಖಂಡಿತ.


ಇಗೋ, ಕಸ್ದೀಯರ ದೇಶವು! ಈ ಜನಾಂಗವು ನಿರ್ನಾಮವಾಯಿತು; ಅಶ್ಶೂರ್ಯರು ಈ ದೇಶವನ್ನು ಕಾಡುಮೃಗಗಳಿಗೆ ಈಡುಮಾಡಿದರು; ಬುರುಜುಗಳನ್ನು ಕಟ್ಟಿಕೊಂಡು ಇದರ ಕೋಟೆಗಳನ್ನು ಕೆಡವಿ ಇದನ್ನು ನಾಶಪಡಿಸಿದರು.


ನನ್ನ ಜನರೇ, ಬನ್ನಿರಿ, ನಿಮ್ಮ ನಿಮ್ಮ ಕೋಣೆಗಳಲ್ಲಿ ಸೇರಿ ಬಾಗಿಲು ಮುಚ್ಚಿಕೊಳ್ಳಿರಿ; ದೈವರೋಷವು ತೀರುವ ತನಕ ಒಂದು ಕ್ಷಣ ಅವಿತುಕೊಳ್ಳಿರಿ.


ಇಗೋ, ಯೆಹೋವನಾಮಧೇಯನು ದೂರದಿಂದ ಬರುತ್ತಾನೆ; ಆತನ ಕೋಪವು ಉರಿಯುತ್ತಿದೆ, ಅದರಿಂದೇಳುವ ಹೊಗೆಯು ದಟ್ಟವಾಗಿದೆ; ಆತನ ತುಟಿಗಳು ರೋಷದಿಂದ ತುಂಬಿವೆ, ಆತನ ನಾಲಿಗೆಯು ನುಂಗುವ ಅಗ್ನಿ;


ಯೆಹೋವನು ಸಕಲ ಜನಾಂಗಗಳಲ್ಲಿ ಕೋಪಮಾಡಿ ಅವುಗಳ ಸೈನ್ಯದ ಮೇಲೆ ರೋಷಗೊಂಡು ಅವರನ್ನು ಕೊಲೆಗೆ ಈಡುಮಾಡಿ ನಿಶ್ಶೇಷವಾಗಿ ಸಂಹರಿಸಿದ್ದಾನಷ್ಟೆ.


ಆಹಾ, [ದಂಡನೆಯ] ದಿನವು, ಇಗೋ ಬಂತು! ನಿನಗೆ ದುರ್ಗತಿಯು ಅಂಕುರಿಸಿದೆ, ಕೋಲು ಹೂಬಿಟ್ಟಿದೆ, ಹೆಮ್ಮೆಯು ಚಿಗುರಿದೆ.


ಆದಕಾರಣ ನಾನು ನನ್ನ ಕೋಪವನ್ನು ಅವರ ಮೇಲೆ ಸುರಿಸಿ ನನ್ನ ರೋಷಾಗ್ನಿಯಿಂದ ಅವರನ್ನು ಧ್ವಂಸಮಾಡಿ ಅವರ ದುರ್ನಡತೆಯನ್ನು ಅವರ ತಲೆಗೇ ಕಟ್ಟಿದ್ದೇನೆ; ಇದು ಕರ್ತನಾದ ಯೆಹೋವನ ನುಡಿ.


ನನ್ನ ದೇವರಾದ ಯೆಹೋವನೇ, ನನ್ನ ಸದಮಲಸ್ವಾವಿುಯೇ, ನೀನು ಅನಾದಿಯಿಂದಿದ್ದೀಯಲ್ಲಾ; ನಾವು ಸಾಯೆವು. ಯೆಹೋವನೇ, [ನಮ್ಮ] ನ್ಯಾಯತೀರ್ಪಿಗಾಗಿ ಅವರನ್ನು ನೇವಿುಸಿದ್ದೀ; ಶರಣನೇ, [ನಮ್ಮ] ಶಿಕ್ಷೆಗಾಗಿ ಅವರನ್ನು ನಿಲ್ಲಿಸಿದ್ದೀ.


ಕಿತ್ತೀಮೆಂಬ ಸ್ಥಳದಿಂದ ಜನರು ಹಡಗುಗಳಲ್ಲಿ ಬಂದು ಅಶ್ಯೂರ್ಯರನ್ನೂ ಏಬೆರ್ ಜನರನ್ನೂ ಸೋಲಿಸುವರು; ಅವರಿಗೂ ನಾಶವುಂಟಾಗುವದು ಅಂದನು.


ಈ ದೇಶವನ್ನು ಹಾಳುಮಾಡುವದಕ್ಕೆ ಯೆಹೋವನ ಚಿತ್ತವಿಲ್ಲದೆ ಬಂದೆನೆಂದು ನೆನಸುತ್ತೀಯೋ? ಇಲ್ಲಿಗೆ ಬಂದು ಇದನ್ನು ಹಾಳುಮಾಡಿಬಿಡು ಎಂದು ಯೆಹೋವನೇ ನನಗೆ ಆಜ್ಞಾಪಿಸಿದನು ಅನ್ನುತ್ತಾನೆ ಎಂದನು.


ಆ ಪಟ್ಟಣವು ನನಗೆ ಅರೀಯೇಲಾಗಿಯೇ ಪರಿಣವಿುಸುವದು.


ಇವರು ದ್ರೋಹದ ಜನಾಂಗದವರು, ಮೋಸದ ಸಂತಾನದವರು, ಯೆಹೋವನ ಉಪದೇಶವನ್ನು ಕೇಳಲೊಲ್ಲದ ಸಂತತಿಯವರಷ್ಟೆ;


ರಾಜನು ಮನಸ್ಸುಬಂದ ಹಾಗೆ ನಡೆದು ತಾನು ಎಲ್ಲಾ ದೇವರುಗಳಿಗಿಂತ ದೊಡ್ಡವನೆಂದು ತನ್ನನ್ನು ಹೆಚ್ಚಿಸಿಕೊಂಡು ಉಬ್ಬಿ ದೇವಾಧಿದೇವನನ್ನು ವಿುತಿಮೀರಿ ದೂಷಿಸಿ [ನಿಮ್ಮ ಮೇಲಿನ] ದೇವೋಗ್ರವು ತೀರುವ ತನಕ ವೃದ್ಧಿಯಾಗಿರುವನು; ದೈವಸಂಕಲ್ಪವು ನೆರವೇರಲೇಬೇಕು.


ನಿನೆವೆಯ ವಿಷಯವಾದ ದೈವೋಕ್ತಿ. ಎಲ್ಕೋಷ್ ಊರಿನ ನಹೂಮನಿಗೆ ಆದ ದೈವದರ್ಶನದ ಗ್ರಂಥ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು