Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೆಶಾಯ 11:16 - ಕನ್ನಡ ಸತ್ಯವೇದವು J.V. (BSI)

16 ಇದಲ್ಲದೆ ಇಸ್ರಾಯೇಲ್ಯರು ಐಗುಪ್ತ ದೇಶದಿಂದ ಹೊರಟುಬಂದ ಕಾಲದಲ್ಲಿ ಅವರಿಗೆ ಮಾರ್ಗವು ಹೇಗೆ ಸಿದ್ಧವಾಯಿತೋ ಹಾಗೆಯೇ ಅಶ್ಶೂರದಿಂದ ತಪ್ಪಿಸಿಕೊಂಡು ಬರುವ ಆತನ ಜನಶೇಷಕ್ಕೆ ರಾಜಮಾರ್ಗವು ಸಿದ್ಧವಾಗುವದು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

16 ಇದಲ್ಲದೆ ಇಸ್ರಾಯೇಲರು ಐಗುಪ್ತ ದೇಶದಿಂದ ಹೊರಟುಬಂದ ಕಾಲದಲ್ಲಿ ಅವರಿಗೆ ಮಾರ್ಗವು ಹೇಗೆ ಸಿದ್ಧವಾಯಿತೋ ಹಾಗೆಯೇ ಅಶ್ಶೂರದಿಂದ, ತಪ್ಪಿಸಿಕೊಂಡು ಬರುವ ಆತನ ಉಳಿದ ಜನರಿಗೆ ಆತನ ರಾಜಮಾರ್ಗವು ಸಿದ್ಧವಾಗುವುದು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

16 ಈಜಿಪ್ಟನ್ನು ಬಿಟ್ಟು ಬಂದ ಇಸ್ರಯೇಲರಿಗೆ ಮಾರ್ಗವೊಂದು ಸಿದ್ಧವಾಯಿತು ಅಂತೆಯೆ ಸಿದ್ಧವಾಗುವುದು ರಾಜಮಾರ್ಗವೊಂದು ಅಸ್ಸೀರಿಯದಲ್ಲಿ ಅಳಿದುಳಿದ ಜನರಿಗೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

16 ಅಳಿದುಳಿದ ದೇವಜನರು ಅಶ್ಶೂರ ದೇಶವನ್ನು ಬಿಡಲು ಒಂದು ಮಾರ್ಗವಿರುವದು. ಅದು ದೇವರು ತನ್ನ ಜನರನ್ನು ಈಜಿಪ್ಟಿನಿಂದ ಬಿಡಿಸಿದ ಕಾಲದಂತಿರುವುದು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

16 ಇದಲ್ಲದೆ ಇಸ್ರಾಯೇಲರು ಈಜಿಪ್ಟ್ ದೇಶದಿಂದ ಹೊರಟು ಬಂದ ಕಾಲದಲ್ಲಿ ಅವರಿಗೆ ಹೇಗೆ ಮಾರ್ಗವು ಇತ್ತೋ ಹಾಗೆಯೇ ಅಸ್ಸೀರಿಯದಿಂದ ತಪ್ಪಿಸಿಕೊಂಡು ಬರುವ ತಮ್ಮ ಉಳಿದ ಜನರಿಗೆ ವಿಶಾಲವಾದ ಮಾರ್ಗವು ಇರುವುದು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೆಶಾಯ 11:16
18 ತಿಳಿವುಗಳ ಹೋಲಿಕೆ  

ಆ ದಿನದಲ್ಲಿ ಐಗುಪ್ತದಿಂದ ಅಶ್ಶೂರಕ್ಕೆ ಹೋಗುವ ರಾಜಮಾರ್ಗವಿರುವದು; ಅಶ್ಶೂರ್ಯರು ಐಗುಪ್ತಕ್ಕೂ ಐಗುಪ್ತ್ಯರು ಅಶ್ಶೂರಕ್ಕೂ ಹೋಗಿಬರುತ್ತಿರುವರು; ಐಗುಪ್ತ್ಯರು ಅಶ್ಶೂರ್ಯರೊಂದಿಗೆ [ಯೆಹೋವನನ್ನು] ಸೇವಿಸುವರು.


ಆ ದಿನದಲ್ಲಿ ಕರ್ತನು ತನ್ನ ಜನಶೇಷವನ್ನು ಬಿಡಿಸಿಕೊಳ್ಳುವದಕ್ಕೆ ಎರಡನೆಯ ಸಾರಿ ಕೈಹಾಕಿ ಅಶ್ಶೂರ, ಐಗುಪ್ತ, ಪತ್ರೋಸ್, ಕೂಷ್, ಏಲಾಮ್, ಶಿನಾರ್, ಹಮಾಥ್, ಸಮುದ್ರದ ಕರಾವಳಿ, ಈ ಸ್ಥಳಗಳಲ್ಲಿ ಉಳಿದವರನ್ನು ಬರಮಾಡಿಕೊಳ್ಳುವನು.


ಊರ ಬಾಗಿಲುಗಳಲ್ಲಿ ಹಾದು ಬನ್ನಿರಿ, ಹಾದು ಬನ್ನಿರಿ, ಜನರಿಗೆ ದಾರಿಯನ್ನು ಸರಿಮಾಡಿರಿ, ರಾಜಮಾರ್ಗವನ್ನು ಎತ್ತರಿಸಿರಿ, ಎತ್ತರಿಸಿರಿ, ಕಲ್ಲುಗಳನ್ನು ತೆಗೆದುಹಾಕಿರಿ, ಜನಾಂಗಗಳಿಗೆ ಧ್ವಜವನ್ನೆತ್ತಿರಿ!


ಮಣ್ಣು ಹಾಕಿರಿ, ಹಾಕಿರಿ, ಮಾರ್ಗವನ್ನು ಸರಿಮಾಡಿರಿ; ನನ್ನ ಜನರ ದಾರಿಯೊಳಗಿಂದ ಆಟಂಕವನ್ನು ಎತ್ತಿಹಾಕಿರಿ ಎಂದು ಒಂದು ವಾಣಿಯು ನುಡಿಯುತ್ತದೆ.


ಸಮುದ್ರವನ್ನೂ ಮಹಾಸಾಗರದ ಜಲರಾಶಿಯನ್ನೂ ಬತ್ತಿಸಿ ವಿಮುಕ್ತಜನರು ಹಾದುಹೋಗುವದಕ್ಕೆ ಸಮುದ್ರದ ತಳವನ್ನು ಮಾರ್ಗವನ್ನಾಗಿ ಮಾಡಿದ ಬಾಹು ನೀನೇ ಹೌದು.


ಇಗೋ, ಇವರು ದೂರದಿಂದ ಬರುತ್ತಾರೆ, ಇಗೋ, ಇವರು ಬಡಗಲಿಂದ ಮತ್ತು ಪಡುವಲಿಂದ, ಇವರು ಸೀನೀಮ್ ದೇಶದಿಂದ ಬರುತ್ತಿದ್ದಾರೆ.


ಆ ದಿನದಲ್ಲಿ ದೊಡ್ಡ ಕೊಂಬನ್ನೂದಲು ಅಶ್ಶೂರ ದೇಶದಲ್ಲಿ ಹಾಳಾದವರೂ ಐಗುಪ್ತ ಸೀಮೆಯಲ್ಲಿನ ದೇಶಭ್ರಷ್ಟರಾದವರೂ ಬಂದು ಪರಿಶುದ್ಧಪರ್ವತದ ಯೆರೂಸಲೇವಿುನಲ್ಲಿ ಯೆಹೋವನ ಮುಂದೆ ಅಡ್ಡಬೀಳುವರು.


ಸೇನಾಧೀಶ್ವರನಾದ ಯೆಹೋವನು ನಮಗೆ ಕೊಂಚ ಜನವನ್ನೂ ಉಳಿಸದೆ ಹೋಗಿದ್ದರೆ ಸೊದೋವಿುನ ಗತಿಯೇ ನಮಗಾಗುತ್ತಿತ್ತು. ಗೊಮೋರದ ದುರ್ದಶೆಯೇ ಸಂಭವಿಸುತ್ತಿತ್ತು.


ಆ ದಿನದಲ್ಲಿ ಇಸ್ರಾಯೇಲ್ಯರೊಳಗೆ ಉಳಿದವರು, ಯಾಕೋಬನ ಮನೆತನದವರಲ್ಲಿ ತಪ್ಪಿಸಿಕೊಂಡವರು ತಮ್ಮನ್ನು ಹೊಡೆದವನ ಆಧಾರವನ್ನು ಬಿಟ್ಟು ಯೆಹೋವನೆಂಬ ಇಸ್ರಾಯೇಲ್ಯರ ಸದಮಲಸ್ವಾವಿುಯನ್ನು ಯಥಾರ್ಥವಾಗಿ ಆಧಾರಮಾಡಿಕೊಳ್ಳುವರು.


ನನ್ನ ಸೃಷ್ಟಿಯ ಬೆಟ್ಟಗಳನ್ನೆಲ್ಲಾ ಸಮದಾರಿಯನ್ನಾಗಿ ಮಾಡಿ ನನ್ನ ರಾಜಮಾರ್ಗಗಳನ್ನು ಎತ್ತರಿಸುವೆನು.


ಆ ಕರಾವಳಿಯು ಯೆಹೂದವಂಶಶೇಷದವರ ಪಾಲಾಗುವದು; ದನಕುರಿಗಳನ್ನು ಅಲ್ಲೇ ಮೇಯಿಸುವರು; ಸಂಜೆಗೆ ಅಷ್ಕೆಲೋನಿನ ಮನೆಗಳಲ್ಲಿ ಮಲಗಿಕೊಳ್ಳುವರು; ಅವರ ದೇವರಾದ ಯೆಹೋವನು ಅವರನ್ನು ಪರಾಂಬರಿಸಿ ಅವರ ದುರವಸ್ಥೆಯನ್ನು ತಪ್ಪಿಸುವನು.


ಇಸ್ರಾಯೇಲ್ಯರು ಸಮುದ್ರದ ಮಧ್ಯದಲ್ಲಿ ಒಣನೆಲದಲ್ಲೇ ನಡೆದುಹೋದರು. ನೀರು ಅವರ ಎಡಗಡೆ ಬಲಗಡೆಗಳಲ್ಲಿ ಗೋಡೆಯಂತೆ ನಿಂತಿತು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು