Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೆಶಾಯ 11:3 - ಕನ್ನಡ ಸತ್ಯವೇದವು J.V. (BSI)

3 ಯೆಹೋವನ ಭಯವು ಅವನಿಗೆ ಪರಿಮಳಿಸುವದು; ಅವನು ಕಣ್ಣಿಗೆ ಕಂಡಂತೆ ತೀರ್ಪುಮಾಡುವದಿಲ್ಲ, ಕಿವಿಗೆ ಬಿದ್ದಂತೆ ನಿರ್ಣಯಿಸುವದಿಲ್ಲ;

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

3 ಆತನು ಯೆಹೋವನ ಭಯದಲ್ಲಿ ಆನಂದಿಸುವನು. ಆತನು ಕಣ್ಣಿಗೆ ಕಂಡಂತೆ ತೀರ್ಪು ಮಾಡುವುದಿಲ್ಲ. ಕಿವಿಗೆ ಬಿದ್ದಂತೆ ನಿರ್ಣಯಿಸುವುದಿಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

3 ಸರ್ವೇಶ್ವರನ ಭಯಭಕ್ತಿ ಅವಗೆ ಪರಿಮಳದಂತೆ. ತೀರ್ಪಿಡನಾತ ಕಣ್ಣಿಗೆ ತೋಚಿದಂತೆ ನಿರ್ಣಯಿಸನಾತ ಕಿವಿಗೆ ಬಿದ್ದಂತೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

3 ಆತನು ಯೆಹೋವನನ್ನು ಸನ್ಮಾನಿಸುತ್ತಾ ಸಂತೋಷಿಸುವನು. ಆತನು ಜನರಿಗೆ ನ್ಯಾಯತೀರಿಸುವುದು ಹೊರತೋರಿಕೆಯ ಆಧಾರದ ಮೇಲಲ್ಲ; ಕೇಳಿಕೊಂಡದ್ದರ ಆಧಾರದ ಮೇಲೂ ಅಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

3 ಅವರು ಯೆಹೋವ ದೇವರ ಭಯದಲ್ಲಿ ಆನಂದಿಸುವರು. ಅವರು ಕಣ್ಣಿಗೆ ಕಂಡಂತೆ ತೀರ್ಪು ಮಾಡುವುದಿಲ್ಲ, ತಮ್ಮ ಕಿವಿಗಳ ಕೇಳ್ವಿಕೆಯ ಪ್ರಕಾರವೂ ತೀರ್ಪು ಮಾಡುವುದಿಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೆಶಾಯ 11:3
20 ತಿಳಿವುಗಳ ಹೋಲಿಕೆ  

ಕಣ್ಣಿಗೆ ತೋರಿದ್ದರ ಮೇಲೆ ತೀರ್ಪುಮಾಡಬೇಡಿರಿ; ನ್ಯಾಯವಾದ ತೀರ್ಪುಮಾಡಿರಿ ಎಂದು ಹೇಳಿದನು.


ಯೇಸು ಜ್ಞಾನದಲ್ಲಿಯೂ ದೇಹಬಲದಲ್ಲಿಯೂ ವೃದ್ಧಿಯಾಗುತ್ತಾ ಬಂದನು; ಇದಲ್ಲದೆ ದೇವರ ಮತ್ತು ಮನುಷ್ಯರ ದಯೆಯು ಆತನ ಮೇಲೆ ಹೆಚ್ಚಾಗುತ್ತಾ ಬಂತು.


ಆದರೆ ಯೆಹೋವನು ಸಮುವೇಲನಿಗೆ - ನೀನು ಅವನ ಚೆಲುವಿಕೆಯನ್ನೂ ನೀಳವನ್ನೂ ನೋಡಬೇಡ; ನಾನು ಅವನನ್ನು ತಳ್ಳಿಬಿಟ್ಟಿದ್ದೇನೆ. ಯೆಹೋವನು ಮನುಷ್ಯರಂತೆ ಹೊರಗಿನ ತೋರಿಕೆಯನ್ನು ನೋಡದೆ ಹೃದಯವನ್ನೇ ನೋಡುವವನಾಗಿದ್ದಾನೆ ಅಂದನು.


ಆಗ ನೀನು ಯೆಹೋವನ ಭಯವನ್ನು ಅರಿತು ದೈವಜ್ಞಾನವನ್ನು ಪಡೆದುಕೊಳ್ಳುವಿ.


ಗಟ್ಟಿಯಾದ ಆಹಾರವು ಪ್ರಾಯಸ್ಥರಿಗೋಸ್ಕರ ಅಂದರೆ ಜ್ಞಾನೇಂದ್ರಿಯಗಳನ್ನು ಸಾಧನೆಯಿಂದ ಶಿಕ್ಷಿಸಿಕೊಂಡು ಇದು ಒಳ್ಳೇದು ಅದು ಕೆಟ್ಟದ್ದು ಎಂಬ ಭೇದವನ್ನು ತಿಳಿದವರಿಗೋಸ್ಕರವಾಗಿದೆ.


ಇಸ್ರಾಯೇಲ್ಯರೆಲ್ಲರೂ ಅರಸನ ಈ ತೀರ್ಪನ್ನು ಕೇಳಿ ನ್ಯಾಯನಿರ್ಣಯಿಸುವದಕ್ಕೆ ಈತನಲ್ಲಿ ದೇವಜ್ಞಾನವಿದೆ ಎಂದು ತಿಳಿದು ಅವನಿಗೆ ಬಹಳವಾಗಿ ಭಯಪಟ್ಟರು.


ಹೀಗಿರಲು ನೀನು ನೀತಿನ್ಯಾಯಗಳನ್ನೂ ಧರ್ಮವನ್ನೂ ಅಂದರೆ ಸಕಲ ಸನ್ಮಾರ್ಗಗಳನ್ನು ತಿಳಿದುಕೊಳ್ಳುವಿ.


ಆದದರಿಂದ ಅದನ್ನು ಆಳುವದಕ್ಕೂ ನ್ಯಾಯಾನ್ಯಾಯಗಳನ್ನು ಕಂಡುಹಿಡಿಯುವದಕ್ಕೂ ನನಗೆ ವಿವೇಕವನ್ನು ದಯಪಾಲಿಸು. ಈ ಮಹಾ ಜನಾಂಗವನ್ನು ಆಳಲು ಸಮರ್ಥರು ಯಾರು ಎಂದು ಬೇಡಿಕೊಂಡನು.


ನನ್ನ ಒಡೆಯನಾದ ಅರಸನ ಮಾತು ಸಮಾಧಾನಕ್ಕೆ ಕಾರಣವಾಗುವದೆಂದು ನೆನಸಿ ನಿನ್ನ ದಾಸಿಯಾದ ನಾನು ಬಂದೆನು. ನ್ಯಾಯಾನ್ಯಾಯಗಳನ್ನು ಕಂಡುಹಿಡಿಯುವದರಲ್ಲಿ ನನ್ನ ಒಡೆಯನಾದ ಅರಸನು ದೇವದೂತನಂತಿರುತ್ತಾನೆ; ನಿನ್ನ ದೇವರಾದ ಯೆಹೋವನು ನಿನ್ನ ಸಂಗಡ ಇರಲಿ ಅಂದಳು.


ಆತನು ಪ್ರತಿಮನುಷ್ಯನ ಆಂತರ್ಯವನ್ನು ತಿಳಿದವನಾದ ಕಾರಣ ಯಾವನೂ ಯಾವ ಮನುಷ್ಯನ ವಿಷಯದಲ್ಲಿಯೂ ಆತನಿಗೆ ಸಾಕ್ಷಿ ಕೊಡಬೇಕಾದ ಅವಶ್ಯವಿರಲಿಲ್ಲ.


ಅಂಗುಳವು ಆಹಾರವನ್ನು ರುಚಿನೋಡುವಂತೆ ಕಿವಿಯು ಮಾತುಗಳನ್ನು ವಿವೇಚಿಸುತ್ತದಲ್ಲಾ.


ಅಂಗುಳವು ಆಹಾರವನ್ನು ರುಚಿನೋಡುವ ಪ್ರಕಾರ ಕಿವಿಯು ಮಾತುಗಳನ್ನು ವಿವೇಚಿಸುತ್ತದಲ್ಲಾ.


ಜ್ಞಾನವೂ ತಿಳುವಳಿಕೆಯೂ ರಕ್ಷಣ ಕಾರ್ಯಸಮೃದ್ಧಿಯೂ ಇರುವದರಿಂದ ನಿನ್ನ ಕಾಲದಲ್ಲಿ ಸ್ಥೈರ್ಯವಿರುವದು; ಯೆಹೋವನ ಮೇಲಣ ಭಯಭಕ್ತಿಯು ನಿನಗೆ ನಿಧಿಯಾಗುವದು.


ಅದು ಅವನಿಗೆ ಇಸ್ರಾಯೇಲಿನಲ್ಲಿ ಭೂಸ್ವಾಸ್ತ್ಯವಾಗುವದು; ಇನ್ನು ಮೇಲೆ ಪ್ರಭುಗಳು ನನ್ನ ಪ್ರಜೆಗಳನ್ನು ಹಿಂಸಿಸರು; ದೇಶದ ಭೂವಿುಯನ್ನು ಇಸ್ರಾಯೇಲ್ಯರಿಗೆ ಕುಲಕುಲಕ್ಕೂ ಹಂಚುವರು.


ಆತನು ಬಹು ರಾಷ್ಟ್ರದವರ ವ್ಯಾಜ್ಯಗಳನ್ನು ವಿಚಾರಿಸುವನು, ಪ್ರಬಲ ಜನಾಂಗಗಳಿಗೆ ನ್ಯಾಯತೀರಿಸುವನು; ಅವರೋ ತಮ್ಮ ಕತ್ತಿಗಳನ್ನು ಕುಲುಮೆಗೆ ಹಾಕಿ ಗುಳಗಳನ್ನಾಗಿಯೂ ಬರ್ಜಿಗಳನ್ನು ಕುಡುಗೋಲುಗಳನ್ನಾಗಿಯೂ ಮಾಡುವರು; ಜನಾಂಗವು ಜನಾಂಗಕ್ಕೆ ವಿರುದ್ಧವಾಗಿ ಕತ್ತಿಯನ್ನೆತ್ತದು, ಇನ್ನು ಯುದ್ಧಾಭ್ಯಾಸವು ನಡೆಯುವದೇ ಇಲ್ಲ.


ಆಗ ಅರಸನು - ಮನೆಗೆ ಹೋಗು, ನಿನ್ನ ವಿಷಯದಲ್ಲಿ ಆಜ್ಞಾಪಿಸುತ್ತೇನೆ ಎಂದು ಹೇಳಿದ್ದಕ್ಕೆ


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು