Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೆಶಾಯ 13:22 - ಕನ್ನಡ ಸತ್ಯವೇದವು J.V. (BSI)

22 ಅರಮನೆಗಳಲ್ಲಿ ತೋಳಗಳೂ, ವಿಲಾಸಮಂದಿರಗಳಲ್ಲಿ ನರಿಗಳೂ ಎದುರುಬದುರಾಗಿ ಕೂಗುವವು; ಅದಕ್ಕೆ ಹೊತ್ತು ಸಮೀಪಿಸಿದೆ, ಇನ್ನು ದಿನ ಹೆಚ್ಚದು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

22 ಅವರ ಕೋಟೆಗಳಲ್ಲಿ ತೋಳಗಳೂ, ಅರಮನೆಗಳಲ್ಲಿ ನರಿಗಳೂ ಕೂಗುವವು. ಸಮಯವು ಹತ್ತಿರವಾಗಿದೆ. ಇನ್ನು ಆ ದಿನಗಳು ಬರುವುದಕ್ಕೆ ತಡವಾಗುವುದಿಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

22 ಅದರ ಅರಮನೆಗಳಲ್ಲಿ ನರಿಗಳು, ಮೋಜಿನ ಮಹಲುಗಳಲ್ಲಿ ತೋಳಗಳು ಕೂಗಾಡುವುವು. ಬಾಬಿಲೋನಿಗೆ ಕಾಲ ಬಂದಿದೆ. ಅದರ ದಿನಗಳು ಮುಗಿಯುತ್ತಿವೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

22 ಕಾಡುನಾಯಿ ಮತ್ತು ತೋಳಗಳು ಬಾಬಿಲೋನಿನ ಭವ್ಯಭವನಗಳೊಳಗಿಂದ ಅರಚುವವು. ಬಾಬಿಲೋನ್ ಕೊನೆಗೊಳ್ಳುವುದು. ಅದರ ಅಂತ್ಯವು ಸಮೀಪದಲ್ಲಿಯೇ ಇದೆ. ಅದರ ಪೂರ್ಣ ನಾಶನಕ್ಕಾಗಿ ನಾನು ಇನ್ನು ಹೆಚ್ಚು ಹೊತ್ತು ಕಾಯುವದಿಲ್ಲ.”

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

22 ಅವರ ಕೋಣೆಗಳಲ್ಲಿ ತೋಳಗಳು ಕೂಗುವುವು, ಅವರ ಮೆಚ್ಚಿಕೆಯಾದ ಅರಮನೆಗಳಲ್ಲಿ ನರಿಗಳು ವಾಸಿಸುವುವು. ಬಾಬಿಲೋನಿಗೆ ಕಾಲವು ಸಮೀಪಿಸಿತು. ಇನ್ನು ಅದರ ದಿನಗಳು ಮುಂದುವರಿಯುವುದಿಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೆಶಾಯ 13:22
19 ತಿಳಿವುಗಳ ಹೋಲಿಕೆ  

ಇಸ್ರಾಯೇಲ್ಯರ ದೇವರೂ ಸೇನಾಧೀಶ್ವರನೂ ಆದ ಯೆಹೋವನು ಇಂತೆನ್ನುತ್ತಾನೆ - ಬಾಬೆಲ್ ಪುರಿಯು ತುಳಿದು ತುಳಿದು ಸರಿಮಾಡುತ್ತಿರುವ ಕಣದಂತಿದೆ; ಸ್ವಲ್ಪ ಕಾಲವಾದ ಮೇಲೆ ಒಕ್ಕುವ ಸಮಯವು ಅದಕ್ಕೆ ಸಂಭವಿಸುವದು.


ಬೆಂಗಾಡು ಸರೋವರವಾಗುವದು; ಒಣನೆಲದಲ್ಲಿ ಬುಗ್ಗೆಗಳುಕ್ಕುವವು; ನರಿಗಳು ಮಲಗುತ್ತಿದ್ದ ಹಕ್ಕೆಯು ಆಪುಜಂಬುಗಳ ಪ್ರದೇಶವಾಗುವದು.


ನೀನು ದುರ್ಗವನ್ನು ನಾಶಪಡಿಸಿ ಪಟ್ಟಣವನ್ನು ಹಾಳು ದಿಬ್ಬವನ್ನಾಗಿಯೂ ಅನ್ಯರ ಕೋಟೆಯನ್ನು ಯಾರೂ ಎಂದಿಗೂ ಕಟ್ಟಬಾರದ ಹಾಳೂರನ್ನಾಗಿಯೂ ಮಾಡಿದ್ದೀ.


ಅವರು ದ್ರವ್ಯಾಶೆಯುಳ್ಳವರಾಗಿ ಕಲ್ಪನೆಯ ಮಾತುಗಳನ್ನು ಹೇಳುತ್ತಾ ನಿಮ್ಮಿಂದ ಲಾಭವನ್ನು ಸಂಪಾದಿಸಬೇಕೆಂದಿರುವರು. ಲೋಕಾದಿಯಿಂದ ಅಂಥವರಿಗೆ ದಂಡನೆಯ ತೀರ್ಪು ತಪ್ಪದೆ ಬರುತ್ತಿರುವದು, ಅವರ ನಾಶವು ತೂಕಡಿಸುವದಿಲ್ಲ.


ಅದು ಕ್ಲುಪ್ತಕಾಲದಲ್ಲಿ ನೆರವೇರತಕ್ಕದ್ದು, ಆದರೆ ಪರಿಣಾಮಕ್ಕೆ ತ್ವರೆಪಡುತ್ತದೆ, ಮೋಸಮಾಡದು; ತಡವಾದರೂ ಅದಕ್ಕೆ ಕಾದಿರು; ಅದು ಬಂದೇ ಬರುವದು, ತಾಮಸವಾಗದು.


ಅಲ್ಲಿನ ಅರಮನೆಗಳಲ್ಲಿ ದಬ್ಬೆಗಳ್ಳಿಗಳೂ ಕೋಟೆಗಳಲ್ಲಿ ಮುಳ್ಳುಗಿಳ್ಳುಗಳೂ ಹಬ್ಬಿಕೊಳ್ಳುವವು; ಅದು ನರಿಗಳಿಗೆ ಹಕ್ಕೆಯಾಗಿಯೂ ಉಷ್ಟ್ರಪಕ್ಷಿಗಳಿಗೆ ಎಡೆಯಾಗಿಯೂ ಇರುವದು.


ಪ್ರತೀಕಾರಮಾಡಿ ಮುಯ್ಯಿಗೆ ಮುಯ್ಯಿ ತೀರಿಸುವದು ನನ್ನ ಕೆಲಸ; ಅವರು ಜಾರಿಬೀಳುವ ಸಮಯ ಬರುವದು. ಅವರಿಗೆ ಆಪತ್ಕಾಲವು ಸಮೀಪಿಸಿತು; ಅವರಿಗೋಸ್ಕರ ಸಿದ್ಧವಾಗಿರುವ ದುರ್ಗತಿ ಬೇಗ ಬರುವದು.


ನೀನು ನಮ್ಮನ್ನು ಪರಾಜಯಪಡಿಸಿ ನಮ್ಮ ದೇಶವನ್ನು ನರಿಗಳಿರುವ ಕಾಡನ್ನಾಗಿ ಮಾಡಿದ್ದೇಕೆ? ಕಾರ್ಗತ್ತಲು ನಮ್ಮನ್ನು ಕವಿಯುವಂತೆ ಮಾಡಿದ್ದೇಕೆ?


ಅರಮನೆಯು ಬಿಕೋ ಎನ್ನುವದು, ಗಿಜಿಗುಟ್ಟುವ ಪಟ್ಟಣವು ನಿರ್ಜನವಾಗುವದು, ಓಫೆಲ್ ಗುಡ್ಡವೂ ಕೋವರವೂ ಯಾವಾಗಲೂ ಗುಹೆಗಳಾಗಿಯೂ ಕಾಡುಕತ್ತೆಗಳಿಗೆ ಉಲ್ಲಾಸಕರವಾಗಿಯೂ ದನಕುರಿಗಳಿಗೆ ಕಾವಲಾಗಿಯೂ ಇರುವವು.


ನನ್ನ ಸ್ತೋತ್ರವನ್ನು ಪ್ರಚಾರಪಡಿಸಲಿ ಎಂದು ನಾನು ಸೃಷ್ಟಿಸಿಕೊಂಡ ಆಪ್ತಜನರ ಜಲಪಾನಕ್ಕಾಗಿ


ನಾನು ಯೆರೂಸಲೇಮನ್ನು ಹಾಳುದಿಬ್ಬಗಳನ್ನಾಗಿಯೂ ನರಿಗಳ ಹಕ್ಕೆಯನ್ನಾಗಿಯೂ ಗೈದು ಯೆಹೂದದ ಪಟ್ಟಣಗಳನ್ನು ಜನವಿಲ್ಲದ ಬೀಳುಭೂವಿುಯನ್ನಾಗಿ ಮಾಡುವೆನು [ಎಂದು ಯೆಹೋವನು ಹೇಳಿದ್ದಾನಲ್ಲಾ].


ಮೋವಾಬಿಗೆ ದುರ್ಗತಿ ಸಮೀಪಿಸಿದೆ, ವಿಪತ್ತು ಬೇಗ ಬರುವದು.


ನರಿಗಳು ಕೂಡಾ ಮರಿಗಳಿಗೆ ಮೊಲೆಗೊಟ್ಟು ಊಡಿಸುವವಷ್ಟೆ; ನನ್ನ ಜನವೆಂಬಾಕೆಯೋ ಕಾಡಿನ ಉಷ್ಟ್ರಪಕ್ಷಿಯಷ್ಟು ಕ್ರೂರಳಾಗಿದ್ದಾಳೆ.


ಇದಕ್ಕಾಗಿ ನಾನು ಅರಿಚಾಟ ಕಿರಿಚಾಟ ಮಾಡುವೆನು; ಬರಿಗಾಲಾಗಿಯೂ ಬೆತ್ತಲೆಯಾಗಿಯೂ ನಡೆಯುವೆನು; ನರಿಗಳಂತೆ ಅರಚಿಕೊಳ್ಳುವೆನು, ಉಷ್ಟ್ರಪಕ್ಷಿಗಳ ಹಾಗೆ ಕಿರಚಿಕೊಳ್ಳುವೆನು.


ಮತ್ತು ಆ ಪ್ರದೇಶವನ್ನು ಜವುಗುನೆಲವನ್ನಾಗಿಯೂ ಮುಳ್ಳುಹಂದಿಗೆ ಸೊತ್ತನ್ನಾಗಿಯೂ ಮಾಡಿ ನಾಶನವೆಂಬ ಬರಲಿನಿಂದ ಗುಡಿಸಿಬಿಡುವೆನು ಎಂದು ಸೇನಾಧೀಶ್ವರನಾದ ಯೆಹೋವನು ಹೇಳಿದ್ದಾನೆ.


ಕಾಡು ನಾಯಿ ತೋಳಗಳು ಅಲ್ಲಿ ಸಂಧಿಸುವವು, ದೆವ್ವವು ತನ್ನ ಜೊತೆಯನ್ನು ಕೂಗುವದು, ಬೇತಾಳವು ಅಲ್ಲಿ ಹಾಯಾಗಿ ಆಸರೆಗೊಳ್ಳುವದು.


ಜನಾಂಗಗಳ ಪಶುಗಳೆಲ್ಲಾ ಮಂದೆಮಂದೆಯಾಗಿ ಅದರ ಮಧ್ಯದಲ್ಲಿ ಮಲಗಿಕೊಳ್ಳುವವು; ಕೊಕ್ಕರೆಯೂ ಮುಳ್ಳುಹಂದಿಯೂ ಅದರ ಬೋದಿಗೆಗಳಲ್ಲಿ ವಾಸಮಾಡಿಕೊಳ್ಳುವವು; ಕಿಟಕಿಗಳಲ್ಲಿ ಚಿಲಿಪಿಲಿಗಾನವು ಕೇಳಿಸುವದು; ಹೊಸ್ತಿಲುಗಳಲ್ಲಿ ಹಾಳುಬಡಿಯುವದು; ದೇವದಾರು ಹಲಿಗೆಯ ಹೊದಿಕೆಯು ಕೀಳಲ್ಪಡುವದು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು