Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೆಶಾಯ 18:2 - ಕನ್ನಡ ಸತ್ಯವೇದವು J.V. (BSI)

2 ವೇಗವುಳ್ಳ ದೂತರೇ, ಉನ್ನತವಾದ ನುಣುಪಿನ ಮೈಯವರೂ ಸರ್ವದಾ ಭಯಂಕರರೂ ಮಹಾಬಲದಿಂದ [ಶತ್ರುಗಳನ್ನು] ತುಳಿಯುವವರೂ ನದಿಗಳಿಂದ ವಿಂಗಡವಾಗಿರುವ ದೇಶದ ನಿವಾಸಿಗಳೂ ಆದ ಜನಾಂಗದವರ ಬಳಿಗೆ ಹೋಗಿರಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

2 ರಾಯಭಾರಿಗಳನ್ನು ನೀರಿನ ಮೇಲೆ ಬೆಂಡಿನ ದೋಣಿಗಳಲ್ಲಿ ನದಿಯ ಮಾರ್ಗವಾಗಿ ಕಳುಹಿಸುವ ದೇಶ, ವೇಗವಾಗಿ ಬರುತ್ತಿರುವ ದೂತರೇ, ಎತ್ತರವಾದವರೂ, ನಯವಾದ ಚರ್ಮವುಳ್ಳವರೂ, ಸರ್ವ ಭಯಂಕರರೂ, ಮಹಾ ಬಲದಿಂದ ಶತ್ರುಗಳನ್ನು ತುಳಿಯುವವರೂ, ನದಿಗಳಿಂದ ವಿಭಾಗವಾಗಿರುವ ದೇಶದ ನಿವಾಸಿಗಳೂ ಆದ ಜನಾಂಗದವರ ಬಳಿಗೆ ಹೋಗಿರಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

2 ಜೊಂಡು ಮರದ ದೋಣಿಗಳಲ್ಲಿ ನೈಲುನದಿಯ ಮಾರ್ಗವಾಗಿ, ರಾಯಭಾರಿಗಳನ್ನು ಕಳುಹಿಸುವ ಆ ದೇಶಕ್ಕೆ ಧಿಕ್ಕಾರ ! ಶೀಘ್ರವಾಗಿ ಬರುತ್ತಿರುವ ದೂತರೇ, ಹಿಂದಕ್ಕೆ ಹೋಗಿ, ಎತ್ತರವಾದ ನುಣುಪಾದ ಮೈಕಟ್ಟುಳ್ಳ, ಸರ್ವರಿಗೂ ಭಯಪ್ರದರಾಗಿರುವ, ಪ್ರಬಲ ಆಕ್ರಮಣಕಾರಿಗಳೂ ಆದ, ನದಿಗಳಿಂದ ಸೀಳಿಹೋಗಿರುವ ರಾಷ್ಟ್ರದವರ ಬಳಿಗೆ ತೆರಳಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

2 ಆ ದೇಶದವರು ಬೆಂಡಿನ ದೋಣಿಗಳಲ್ಲಿ ಜನರನ್ನು ಸಮುದ್ರದಾಚೆ ಕಳುಹಿಸುವರು. ವೇಗವುಳ್ಳ ದೂತರೇ, ಉನ್ನತವಾಗಿಯೂ ಬಲಶಾಲಿಗಳಾಗಿಯೂ ಇರುವ ಜನರ ಬಳಿಗೆ ಹೋಗಿರಿ. ಎಲ್ಲಾ ದೇಶಗಳವರು ಉನ್ನತರಾದ ಬಲಶಾಲಿಗಳಾದ ಜನರಿಗೆ ಭಯಪಡುತ್ತಾರೆ. ಅವರು ಬಲಾಢ್ಯ ಜನಾಂಗ. ಅವರ ಜನಾಂಗವು ಬೇರೆ ಜನಾಂಗಗಳನ್ನು ಸೋಲಿಸಿಬಿಡುತ್ತದೆ. ಅವರ ದೇಶವು ನದಿಯ ಶಾಖೆಗಳಿಂದ ತುಂಬಿರುತ್ತದೆ. ಆ ಜನರಿಗೆ ಕೇಡು ಸಂಭವಿಸಲಿದೆ ಎಂಬ ಎಚ್ಚರಿಕೆಯನ್ನು ಕೊಡು. ಪ್ರಪಂಚದ ಎಲ್ಲಾ ಜನರು ಆ ದೇಶಕ್ಕೆ ಸಂಭವಿಸುವದನ್ನು ನೋಡುವರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

2 ಇದು ಆಪಿನ ದೋಣಿಗಳಲ್ಲಿ ಸಮುದ್ರ ಮಾರ್ಗದಿಂದ ರಾಯಭಾರಿಗಳನ್ನು ನೀರಿನ ಮೇಲೆ ಕಳುಹಿಸುತ್ತದೆ. ಶೀಘ್ರವಾಗಿ ಬರುತ್ತಿರುವ ದೂತರೇ, ಎತ್ತರವಾದವರೂ, ನುಣುಪಾದ ಚರ್ಮವುಳ್ಳ ಜನರ ಬಳಿಗೂ, ಸರ್ವರಿಗೂ ಭಯಪ್ರಧರಾಗಿರುವ ಜನರ ಬಳಿಗೂ, ವಿಚಿತ್ರ ಭಾಷೆಯಿರುವ ಹಾಗೂ ನದಿಗಳಿಂದ ವಿಂಗಡವಾಗಿರುವ ಆಕ್ರಮಣಕಾರಿ ರಾಷ್ಟ್ರದವರ ಬಳಿಗೂ ಹೋಗಿರಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೆಶಾಯ 18:2
14 ತಿಳಿವುಗಳ ಹೋಲಿಕೆ  

ಆ ಕಾಲದಲ್ಲಿ ಉನ್ನತರಾದ ನುಣುಪಿನ ಮೈಯವರೂ ಸರ್ವದಾ ಭಯಂಕರರೂ ಮಹಾಬಲದಿಂದ [ಶತ್ರುಗಳನ್ನು] ತುಳಿಯುವವರೂ ನದಿಗಳಿಂದ ವಿಂಗಡವಾಗಿರುವ ದೇಶದ ನಿವಾಸಿಗಳೂ ಆದ ಜನಾಂಗದವರು ಸೇನಾಧೀಶ್ವರನಾದ ಯೆಹೋವನ ನಾಮಮಹತ್ತಿರುವ ಚೀಯೋನ್ ಪರ್ವತಕ್ಕೆ ಆತನಿಗೋಸ್ಕರ ಕಾಣಿಕೆಯನ್ನು ತರುವರು.


ಕೂಷ್ಯಲೂಬ್ಯರ ಸೈನ್ಯವು ಅಪರಿವಿುತ ರಥಾಶ್ವಬಲಗಳುಳ್ಳ ಮಹಾಸೈನ್ಯವಲ್ಲವೋ! ನೀನು ಯೆಹೋವನ ಮೇಲೆ ಆತುಕೊಂಡದರಿಂದ ಆತನು ಅದನ್ನು ನಿನ್ನ ಕೈಗೆ ಒಪ್ಪಿಸಿಕೊಟ್ಟನು.


ಕೂಷ್ಯನಾದ ಜೆರಹನು ಹತ್ತು ಲಕ್ಷ ಸೈನ್ಯವನ್ನೂ ಮುನ್ನೂರು ರಥಗಳನ್ನೂ ತೆಗೆದುಕೊಂಡು ಇಸ್ರಾಯೇಲ್ಯರಿಗೆ ವಿರುದ್ಧವಾಗಿ ಯುದ್ಧಕ್ಕೆ ಹೊರಟು ಮಾರೇಷಕ್ಕೆ ಬಂದನು.


ಆ ದಿನದಲ್ಲಿ ದೂತರು ನನ್ನ ಸನ್ನಿಧಾನದಿಂದ ಹೊರಟು ಹಡಗುಗಳಲ್ಲಿ ಪ್ರಯಾಣಮಾಡಿ ನಿಶ್ಚಿಂತರಾದ ಕೂಷ್ಯರನ್ನು ಹೆದರಿಸುವರು; ಐಗುಪ್ತದ ನಾಶನದಿನದಲ್ಲಿ ಕೂಷ್ಯರಿಗೂ ಸಂಕಟವಾಗುವದು; ಇಗೋ ಬಂತು.


ಆಕೆ ಅದನ್ನು ಇನ್ನು ಹೆಚ್ಚು ಕಾಲ ಮರೆಮಾಡಲಾರದೆ ಆಪಿನ ಪೆಟ್ಟಿಗೆಯನ್ನು ತೆಗೆದುಕೊಂಡು ಜೇಡಿಮಣ್ಣನ್ನೂ ರಾಳವನ್ನೂ ಹಚ್ಚಿ ಕೂಸನ್ನು ಅದರಲ್ಲಿ ಮಲಗಿಸಿ ನೈಲ್ ನದಿಯ ಅಂಚಿನಲ್ಲಿರುವ ಜಂಬುಹುಲ್ಲಿನಲ್ಲಿಟ್ಟಳು.


ನೋಡಿರಿ, ಹಾವುಗಳನ್ನೂ ಚೇಳುಗಳನ್ನೂ ವೈರಿಯ ಸಮಸ್ತ ಬಲವನ್ನೂ ತುಳಿಯುವದಕ್ಕೆ ನಿಮಗೆ ಅಧಿಕಾರ ಕೊಟ್ಟಿದ್ದೇನೆ. ಯಾವದೂ ನಿಮಗೆ ಕೇಡುಮಾಡುವದೇ ಇಲ್ಲ.


ಬೆಂಡಿನ ದೋಣಿಗಳು ದಾಟಿ ಹೋಗುವಂತೆಯೂ ಹದ್ದು ತನ್ನ ಬೇಟೆಯ ಮೇಲೆ ಎರಗುವಂತೆಯೂ ವೇಗವಾಗಿ ಗತಿಸಿ ಹೋಗುತ್ತವೆ.


ಯೆಹೋವನಿಂದ ಬಂದ ಸಮಾಚಾರವನ್ನು ಕೇಳಿದ್ದೇನೆ; ದೂತನ ಮೂಲಕ ಜನಾಂಗಗಳಿಗೆ ಹೀಗೆ ಹೇಳಿ ಕಳುಹಿಸಿದ್ದಾನೆ - ನೀವು ಕೂಡಿಕೊಂಡು ಯುದ್ಧಕ್ಕೆ ಹೊರಟು ಎದೋವಿುನ ಮೇಲೆ ಬೀಳಿರಿ.


ಓಬದ್ಯನಿಗಾದ ದೈವದರ್ಶನ. ಕರ್ತನಾದ ಯೆಹೋವನು ಎದೋವಿುನ ವಿಷಯವಾಗಿ ನುಡಿದ ವಾಕ್ಯ. ಯೆಹೋವನಿಂದ ಬಂದ ಸಮಾಚಾರವನ್ನು ಕೇಳಿದ್ದೇವೆ; ಆತನು ದೂತನ ಮೂಲಕ ಜನಾಂಗಗಳಿಗೆ ಹೀಗೆ ಹೇಳಿಕಳುಹಿಸಿದ್ದಾನೆ - ಹೊರಡಿರಿ, ಯುದ್ಧಕ್ಕೆ ಹೊರಟು ಎದೋವಿುನ ಮೇಲೆ ಬೀಳೋಣ.


ಅವರು ಕ್ರೂರರು, ಭಯಂಕರರು; ಅವರ ಅಧಿಕಾರವೂ ಗೌರವವೂ ಅವರಿಂದಲೇ ಹೊರಡುವವು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು