Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೆಶಾಯ 19:11 - ಕನ್ನಡ ಸತ್ಯವೇದವು J.V. (BSI)

11 ಚೋಯನಿನ ಪ್ರಭುಗಳು ಕೇವಲ ಬುದ್ಧಿಹೀನರು; ಫರೋಹನ ಮಂತ್ರಿಗಳಲ್ಲಿ ಜ್ಞಾನವೃದ್ಧರ ಆಲೋಚನೆಯೂ ಹುಚ್ಚಾಟ; ನೀವು ಫರೋಹನಿಗೆ - ನಾನು ಜ್ಞಾನಿಗಳ ಸಂತಾನದವನು, ಪುರಾತನ ರಾಜವಂಶೀಯನು ಎಂದು ಹೇಗೆ ತಾನೆ ಹೇಳಿಕೊಳ್ಳುವಿರಿ? ನಿನ್ನ ಜ್ಞಾನಿಗಳು ಎಲ್ಲಿ?

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

11 ಚೋಯನಿನ ಪ್ರಭುಗಳು ಕೇವಲ ಬುದ್ಧಿಹೀನರು. ಫರೋಹನ ಮಂತ್ರಿಗಳಲ್ಲಿ ಜ್ಞಾನವುಳ್ಳ ಸಲಹೆಗಾರರ ಆಲೋಚನೆಯೂ ಜ್ಞಾನರಹಿತವಾಗಿರುತ್ತದೆ. ನೀನು ಫರೋಹನಿಗೆ, “ನಾನು ಜ್ಞಾನಿಗಳ ಸಂತಾನದವನು, ಪುರಾತನ ರಾಜನ ವಂಶದವನು? ಎಂದು ಹೇಗೆ ತಾನೆ ಹೇಳಿಕೊಳ್ಳುವಿರಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

11 “ಚೋಯನಿನ ಅಧಿಪತಿಗಳು ಮಂದಮತಿಗಳು. ಫರೋಹನ ಮುಖ್ಯಮಂತ್ರಿಗಳು ಕೊಡುವುದು ಹುಚ್ಚು ಆಲೋಚನೆಗಳನ್ನೇ. ‘ನಾವು ಪುರಾತನ ವಿದ್ವಾಂಸರ ವಂಶಜರು. ರಾಜರ್ಷಿಗಳ ಸಂತತಿಯವರು’ ಎಂದು ನೀವು ಫರೋಹನಿಗೆ ಹೇಳಲು ಸಾಧ್ಯವೇ?

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

11 ಚೋಯನಿನ ನಗರದ ಪ್ರಮುಖರು ಮೂರ್ಖರಾಗಿದ್ದಾರೆ. ಫರೋಹನ “ಜ್ಞಾನಿಗಳಾದ ಸಲಹೆಗಾರರು” ತಪ್ಪು ಸಲಹೆ ಕೊಡುತ್ತಾರೆ. ಅವರು ತಾವೇ ಬುದ್ಧಿವಂತರೆಂದೂ ರಾಜವಂಶದವರೆಂದೂ ಹೇಳಿಕೊಳ್ಳುವರು. ಆದರೆ ತಾವು ನೆನಸುವಷ್ಟರ ಮಟ್ಟಿಗೆ ಅವರು ಬುದ್ಧಿವಂತರಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

11 ಚೋವನ್ ಪಟ್ಟಣದ ಅಧಿಪತಿಗಳು ಕೇವಲ ಬುದ್ಧಿಹೀನರು; ಫರೋಹನ ಮಂತ್ರಿಗಳಲ್ಲಿ ಜ್ಞಾನವುಳ್ಳ ಸಲಹೆಗಾರರ ಆಲೋಚನೆಯೂ ಜ್ಞಾನರಹಿತವಾಗಿದೆ. ನೀವು ಫರೋಹನನಿಗೆ, “ನಾನು ಜ್ಞಾನಿಗಳ ಸಂತಾನದವನು, ಪುರಾತನ ರಾಜನ ಶಿಷ್ಯನೆಂದು ಹೇಳುವುದು ಹೇಗೆ”?

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೆಶಾಯ 19:11
31 ತಿಳಿವುಗಳ ಹೋಲಿಕೆ  

ಅವರು ಬೆಟ್ಟವನ್ನು ಹತ್ತಿ ಕಾನಾನ್‍ದೇಶದ ದಕ್ಷಿಣಪ್ರಾಂತ್ಯವನ್ನು ದಾಟಿ ಹೆಬ್ರೋನಿಗೆ ಬಂದರು. ಅಲ್ಲಿ ಅಹೀಮನ್, ಶೇಷೈ, ತಲ್ಮೈ ಎಂಬ ಉನ್ನತರಾದ ಪುರುಷರು ಇದ್ದರು. ಹೆಬ್ರೋನ್ ಪಟ್ಟಣವು ಐಗುಪ್ತದೇಶದಲ್ಲಿರುವ ಚೋವನ್ ಪಟ್ಟಣಕ್ಕಿಂತ ಏಳು ವರುಷ ಮುಂಚೆ ಕಟ್ಟಲ್ಪಟ್ಟದ್ದು.


ಮೋಶೆಯು ಐಗುಪ್ತದೇಶದವರ ಸರ್ವವಿದ್ಯೆಗಳಲ್ಲಿಯೂ ಉಪದೇಶಹೊಂದಿ ಮಾತುಗಳಲ್ಲಿಯೂ ಕಾರ್ಯಗಳಲ್ಲಿಯೂ ಸಮರ್ಥನಾದನು.


ಆ ಫರೋಹನ ಸಾಮಂತ ರಾಜರು ಚೋವನಿನಲ್ಲಿದ್ದರೂ ಅವನ ದೂತರು ಹಾನೇಸಿನ ತನಕ ಸೇರಿದರೂ


ಬಿಡಿಸುವ ಸಮಯದಲ್ಲಿ ಆತನು ಐಗುಪ್ತದಲ್ಲಿ ಮಹತ್ಕಾರ್ಯಗಳನ್ನೂ ಸೋನ್ ಸೀಮೆಯಲ್ಲಿ ಅದ್ಭುತಗಳನ್ನೂ ನಡಿಸಿದ್ದೂ ಹೇಗಂದರೆ -


ಅವನ ಜ್ಞಾನವು ಮೂಡಣದೇಶದವರೆಲ್ಲರ ಜ್ಞಾನಕ್ಕಿಂತಲೂ ಐಗುಪ್ತ್ಯರ ಜ್ಞಾನಕ್ಕಿಂತಲೂ ವಿುಗಿಲಾದದ್ದು.


ಐಗುಪ್ತ ದೇಶದ ಸೋನ್ ಸೀಮೆಯಲ್ಲಿ ಅವರ ಪೂರ್ವಿಕರ ಸಮಕ್ಷದಲ್ಲಿಯೇ ಆಶ್ಚರ್ಯ ಕ್ರಿಯೆಗಳನ್ನು ನಡಿಸಿದನು.


ನಾನು ಪತ್ರೋಸನ್ನು ಹಾಳುಮಾಡಿ ಚೋವನಿಗೆ ಬೆಂಕಿಯಿಕ್ಕಿ ನೋಪುರವನ್ನು ದಂಡಿಸಿ


ಉಪದ್ರವದ ಮೇಲೆ ಉಪದ್ರವ, ಸುದ್ದಿಯ ಮೇಲೆ ಸುದ್ದಿ, ಬರುವವು; ದಿವ್ಯದರ್ಶನವಾಯಿತೇ ಎಂದು ಪ್ರವಾದಿಯನ್ನು ಕೇಳುತ್ತಲೇ ಇರುವರು; ಯಾಜಕರಲ್ಲಿ ಧರ್ಮೋಪದೇಶವು ಅಡಗಿಹೋಗುವದು, ಹಿರಿಯರಲ್ಲಿ ಮಂತ್ರಾಲೋಚನೆಯು ಇಲ್ಲವಾಗುವದು.


ಸೇನಾಧೀಶ್ವರನಾದ ಯೆಹೋವನು ಇಂತೆನ್ನುತ್ತಾನೆ - ತೇಮಾನ್ ಸೀಮೆಗಿದ್ದ ಬುದ್ಧಿಯು ಇನ್ನಿಲ್ಲವೋ? ವಿವೇಕಿಗಳ ಆಲೋಚನಾಶಕ್ತಿಯು ಅಳಿಯಿತೋ? ಅವರ ಜ್ಞಾನವು ಮಾಯವಾಯಿತೋ?


ಏಕಂದರೆ ಪಾಲಕರು ಪಶುಪ್ರಾಯರಾಗಿ ಯೆಹೋವನ ಕಡೆಗೆ ನೋಡದೆ ಇದ್ದಾರೆ; ಆದಕಾರಣ ಅವರ ಕಾರ್ಯವು ಸಾರ್ಥಕವಾಗಲಿಲ್ಲ, ಅವರ ಹಿಂಡುಗಳು ಚದರಿಹೋದವು.


ಎಲ್ಲರೂ ತಿಳುವಳಿಕೆಯಿಲ್ಲದೆ ಪಶುಪ್ರಾಯರಾಗಿದ್ದಾರೆ; ತಾನು ಕೆತ್ತಿದ ವಿಗ್ರಹದ ನಿವಿುತ್ತ ಪ್ರತಿಯೊಬ್ಬ ಅಕ್ಕಸಾಲಿಗನೂ ಅವಮಾನಕ್ಕೆ ಗುರಿಯಾಗುವನು; ಅವನು ಎರಕ ಹೊಯ್ದ ಪುತ್ತಳಿಯು ಸುಳ್ಳು, ಅವುಗಳಲ್ಲಿ ಶ್ವಾಸವೇ ಇಲ್ಲ.


ನಾನು ಕೊಚ್ಚಿಕೊಳ್ಳುವವರ ಶಕುನಗಳನ್ನು ನಿರರ್ಥಕಪಡಿಸಿ ಕಣಿಹೇಳುವವರನ್ನು ಮರುಳುಗೊಳಿಸಿ ಜ್ಞಾನಿಗಳನ್ನು ಹಿಂದಕ್ಕೆ ತಳ್ಳಿ ಅವರ ತಿಳುವಳಿಕೆಯನ್ನು ಹುಚ್ಚುತನವಾಗಮಾಡಿ


ಹೀಗಿರುವದರಿಂದ ನಾನು ಈ ಜನರ ಮಧ್ಯದಲ್ಲಿ ಅಧಿಕಾಶ್ಚರ್ಯವೂ ಅದ್ಭುತವೂ ಆದ ಕಾರ್ಯವನ್ನು ಇನ್ನು ಮಾಡುವೆನು; ಇವರ ಜ್ಞಾನಿಗಳ ಜ್ಞಾನವು ಅಳಿಯುವದು, ವಿವೇಕಿಗಳ ವಿವೇಕವು ಅಡಗುವದು ಎಂದು ಹೇಳಿದನು.


ಚೋಯನಿನ ಪ್ರಭುಗಳು ಬುದ್ಧಿಗೆಟ್ಟಿದ್ದಾರೆ, ನೋಫಿನ ಪ್ರಧಾನರು ಮೋಸಹೋಗಿದ್ದಾರೆ, ಐಗುಪ್ತದ ಕುಲಗಳ ಪ್ರಮುಖರು ಅದನ್ನು ಭ್ರಮಗೊಳಿಸಿದ್ದಾರೆ.


ಐಗುಪ್ತದ ಅಂತರಾತ್ಮವು ಬರಿದಾಗುವದು; ಅದರ ಆಲೋಚನೆಯನ್ನು ಭಂಗಪಡಿಸುವೆನು; ಅಲ್ಲಿಯವರು ವಿಗ್ರಹಗಳನ್ನೂ ಮಂತ್ರಗಾರರನ್ನೂ ಪ್ರೇತವಿಚಾರಕರನ್ನೂ ಬೇತಾಳಿಕರನ್ನೂ ಆಶ್ರಯಿಸುವರು.


ಇವನು ಇಥಿಯೇಲನಿಗೆ, ಇಥಿಯೇಲನಿಗೂ ಉಕ್ಕಾಲನಿಗೂ ಹೀಗೆ ಹೇಳಿದನು. ಮನುಷ್ಯರಲ್ಲಿ ನನ್ನಂಥ ಪಶುಪ್ರಾಯನು ಇಲ್ಲವಷ್ಟೆ! ಮಾನುಷವಿವೇಕವು ನನಗಿಲ್ಲ.


ಪಶುಪ್ರಾಯನು ಅರಿಯನು; ಹುಚ್ಚನು ತಿಳಿಯನು.


ನಾನು ವಿವೇಕಹೀನಪಾಮರನಾಗಿ ನಿನ್ನ ದೃಷ್ಟಿಯಲ್ಲಿ ಕೇವಲ ಪಶುವೇ ಆಗಿದ್ದೆನು.


ಯೆಹೋವನು ಅನ್ಯಜನರ ಸಂಕಲ್ಪಗಳನ್ನು ವ್ಯರ್ಥಮಾಡುತ್ತಾನೆ; ಅವರ ಯೋಚನೆಗಳನ್ನು ನಿಷ್ಫಲಮಾಡುತ್ತಾನೆ.


ಮಂತ್ರಿಗಳನ್ನು ಸುಲಿಗೆಮಾಡಿ ಸಾಗಿಸಿಕೊಂಡು ಹೋಗುವನು, ನ್ಯಾಯಾಧಿಪತಿಗಳನ್ನು ಹುಚ್ಚರನ್ನಾಗಿ ಮಾಡುವನು.


ಜ್ಞಾನಿಗಳು ಆಶಾಭಂಗಪಟ್ಟು ಬೆಬ್ಬರಬಿದ್ದು ಸಿಕ್ಕಿಕೊಂಡಿದ್ದಾರೆ; ಇಗೋ, ಯೆಹೋವನ ಮಾತನ್ನು ನಿರಾಕರಿಸಿದರು;


ಐಗುಪ್ತದ ಅರಸನಾದ ಫರೋಹನು ಧಡಮ್ಮನೆ ಬಿದ್ದವನು, ಯುಕ್ತಸಮಯವನ್ನು ಉಪೇಕ್ಷಿಸಿದವನು ಎಂದು ಅಲ್ಲಿ ಕೂಗಿದರು.


ನೀನು ನಿನ್ನ ಸೊಬಗಿನ ನಿವಿುತ್ತ ಉಬ್ಬಿದ ಮನಸ್ಸುಳ್ಳವನಾಗಿ ನಿನ್ನ ಮೆರೆತದಿಂದ ನಿನ್ನ ಬುದ್ಧಿಯನ್ನು ಹಾಳುಮಾಡಿಕೊಂಡಿ; ಇದರಿಂದ ನಾನು ನಿನ್ನನ್ನು ನೆಲಕ್ಕೆ ದೊಬ್ಬಿ ನೀನು ಅರಸರಿಗೆ ನೋಟವಾಗುವಂತೆ ಅವರ ಕಣ್ಣಮುಂದೆ ಹಾಕಿದೆನು.


ನಿನ್ನ ವಿುತ್ರಮಂಡಲಿಯವರೆಲ್ಲರು ನಿನ್ನನ್ನು ನಿನ್ನ ಎಲ್ಲೆಯ ಆಚೆಗೆ ನೂಕಿಬಿಟ್ಟಿದ್ದಾರೆ; ನಿನ್ನ ಆಪ್ತರು ನಿನ್ನನ್ನು ವಂಚಿಸಿ ಸೋಲಿಸಿದ್ದಾರೆ, ನಿನ್ನ ಅನ್ನ [ತಿಂದವರು] ಅವಿವೇಕಿಯಾದ ನಿನಗೆ ಉರುಲೊಡ್ಡಿದ್ದಾರೆ;


ನಿನ್ನ ಮೇಲೆಯೂ ನಿನ್ನ ಪ್ರಜೆಗಳ ಮೇಲೆಯೂ ಪರಿವಾರದವರ ಮೇಲೆಯೂ ಕಪ್ಪೆಗಳು ಹರಡಿಕೊಳ್ಳುವವು.


ಜನರು ಅವುಗಳನ್ನು ರಾಶಿರಾಶಿಯಾಗಿ ಕೂಡಿಸಲು ದೇಶದಲ್ಲೆಲ್ಲಾ ದುರ್ವಾಸನೆ ತುಂಬಿತು.


ಹೀಗೆ ಹೀರಾಮನು ಸೊಲೊಮೋನನಿಗೆ ಬೇಕಾದಷ್ಟು ದೇವದಾರಿನ ಮರಗಳನ್ನೂ ತುರಾಯಿಮರಗಳನ್ನೂ ಕೊಡುತ್ತಿದ್ದನು.


ಯೆಹೋವನು ಇಂತೆನ್ನುತ್ತಾನೆ - ಆ ದಿನದಲ್ಲಿ ನಾನು ಎದೋವಿುನೊಳಗಿಂದ ಜ್ಞಾನಿಗಳನ್ನು ಅಳಿಸದೆ ಬಿಟ್ಟೇನೋ? ಏಸಾವಿನ ಪರ್ವತದೊಳಗಿಂದ ವಿವೇಕವನ್ನು ಕಿತ್ತುಹಾಕದೆ ಇದ್ದೇನೋ?


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು