Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೆಶಾಯ 2:11 - ಕನ್ನಡ ಸತ್ಯವೇದವು J.V. (BSI)

11 ಸಾಮಾನ್ಯರ ಗರ್ವದೃಷ್ಟಿಯು ತಗ್ಗಿಹೋಗುವದು, ಮುಖಂಡರ ಅಹಂಕಾರವು ಕುಗ್ಗಿಹೋಗುವದು, ಯೆಹೋವನೊಬ್ಬನೇ ಆ ದಿನದಲ್ಲಿ ಉನ್ನತೋನ್ನತನಾಗಿರುವನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

11 ಮನುಷ್ಯನ ಗರ್ವದೃಷ್ಟಿಯು ತಗ್ಗಿಹೋಗುವುದು, ಮನುಷ್ಯರ ಅಹಂಕಾರವು ತಗ್ಗುವುದು. ಯೆಹೋವನೊಬ್ಬನೇ ಆ ದಿನದಲ್ಲಿ ಉನ್ನತೋನ್ನತನಾಗಿರುವನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

11 ಜನಸಾಮಾನ್ಯರ ಅಟ್ಟಹಾಸವನ್ನು ಅಡಗಿಸಲಾಗುವುದು, ಪ್ರಮುಖರ ಗರ್ವ ಕಮರಿಹೋಗುವುದು, ಸ್ವಾಮಿ ಮಾತ್ರ ಅಂದು ಉನ್ನತೋನ್ನತವಾಗಿರುವರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

11 ಗರ್ವಿಷ್ಠರ ಗರ್ವವು ಕುಗ್ಗಿಸಲ್ಪಡುವುದು; ಅಹಂಕಾರಿಗಳ ಅಹಂಕಾರವು ತಗ್ಗಿಸಲ್ಪಡುವುದು. ಆ ಸಮಯದಲ್ಲಿ ಯೆಹೋವನೊಬ್ಬನೇ ಉನ್ನತೋನ್ನತವಾಗಿರುವನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

11 ಮನುಷ್ಯನ ಅಹಂಭಾವದ ದೃಷ್ಟಿಯು ಕುಗ್ಗುವುದು. ಮನುಷ್ಯರ ಗರ್ವವು ತಗ್ಗುವುದು. ಆಗ ಯೆಹೋವ ದೇವರೊಬ್ಬರೇ ಆ ದಿನದಲ್ಲಿ ಉನ್ನತವಾಗಿರುವರು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೆಶಾಯ 2:11
61 ತಿಳಿವುಗಳ ಹೋಲಿಕೆ  

ದೀನರನ್ನು ಉದ್ಧರಿಸುವವನೂ ಹವ್ಮಿುನ ಕಣ್ಣುಳ್ಳವರನ್ನು ತಗ್ಗಿಸಿಬಿಡುವವನೂ ನೀನಲ್ಲವೋ?


ಸಾಮಾನ್ಯರ ಗರ್ವವು ಕುಗ್ಗುವದು, ಮುಖಂಡರ ಅಹಂಕಾರವೂ ತಗ್ಗುವದು, ಯೆಹೋವನೊಬ್ಬನೇ ಆ ದಿನದಲ್ಲಿ ಉನ್ನತೋನ್ನತನಾಗಿರುವನು.


ಇಗೋ, ಆ ದಿನವು ಬರುತ್ತಿದೆ, ಒಲೆಯಂತೆ ಉರಿಯುತ್ತಿದೆ; ಸಕಲ ಅಹಂಕಾರಿಗಳೂ ದುಷ್ಕರ್ಮಿಗಳೂ ಹೊಟ್ಟಿನಂತಿರುವರು; ಬರುತ್ತಿರುವ ಆ ದಿನವು ಅವರಿಗೆ ಅಗ್ನಿಪ್ರಲಯವಾಗುವದು; ಬುಡ ರೆಂಬೆಗಳಾವದನ್ನೂ ಉಳಿಸದು.


ಆ ದಿನದಲ್ಲಿ ಯೆಹೋವನು ಆಕಾಶಮಂಡಲದ ದೂತಸೈನ್ಯವನ್ನೂ ಭೂಮಂಡಲದ ನೆಲದೊಡೆಯರನ್ನೂ ದಂಡಿಸುವನು.


ನಾನು ಲೋಕದವರಿಗೆ ಅವರ ಪಾಪದ ಫಲವನ್ನೂ ದುಷ್ಟರಿಗೆ ಅವರ ದುಷ್ಕೃತ್ಯಗಳ ಫಲವನ್ನೂ ತಿನ್ನಿಸಿ ಸೊಕ್ಕಿದವರ ಸೊಕ್ಕನ್ನು ಅಡಗಿಸಿ ಭಯಂಕರರ ಹೆಮ್ಮೆಯನ್ನು ತಗ್ಗಿಸಿ


ಆ ದಿನದಲ್ಲಿ ನೀವು ಹೇಳುವದೇನಂದರೆ - ಯೆಹೋವನಿಗೆ ಕೃತಜ್ಞತಾಸ್ತುತಿ ಮಾಡಿರಿ, ಆತನ ನಾಮದ ಮಹತ್ವವನ್ನು ವರ್ಣಿಸಿರಿ, ಜನಾಂಗಗಳಲ್ಲಿ ಆತನ ಕೃತ್ಯಗಳನ್ನು ಪ್ರಸಿದ್ಧಪಡಿಸಿರಿ, ಆತನ ನಾಮವು ಉನ್ನತೋನ್ನತವೆಂದು ಜ್ಞಾಪಕಪಡಿಸಿರಿ.


ಯೆಹೋವನು ಇಂತೆನ್ನುತ್ತಾನೆ - ಆ ದಿನದಲ್ಲಿ ಕುಂಟುಜನಾಂಗವನ್ನು ಒಟ್ಟುಗೊಡಿಸುವೆನು, ನಾನು ಬಾಧಿಸಿ ತಳ್ಳಿದ ಪ್ರಜೆಯನ್ನು ಸೇರಿಸುವೆನು;


ಆ ಕಾಲದಲ್ಲಿ ನಾನು ನನ್ನ ಜನರಿಗಾಗಿ ಭೂಜಂತುಗಳಿಗೂ ಆಕಾಶಪಕ್ಷಿಗಳಿಗೂ ನೆಲದ ಕ್ರಿವಿುಕೀಟಗಳಿಗೂ ನಿಬಂಧನೆಮಾಡಿ ವಿಧಿಸಿ ಬಿಲ್ಲುಕತ್ತಿಕಾಳಗಗಳನ್ನು ದೇಶದಲ್ಲಿ ನಿಲ್ಲದಂತೆ ಧ್ವಂಸಪಡಿಸಿ ನನ್ನ ಜನರು ನಿರ್ಭಯವಾಗಿ ವಾಸಿಸುವಂತೆ ಮಾಡುವೆನು.


ಮತ್ತು ಇಸ್ರಾಯೇಲ್ ವಂಶದವರು ನಾನೇ ತಮ್ಮ ದೇವರಾದ ಯೆಹೋವನೆಂದು ಅಂದಿನಿಂದ ಯಾವಾಗಲೂ ತಿಳಿದುಕೊಳ್ಳುವರು.


ಯೌವನಸ್ಥರೇ, ಅದೇ ರೀತಿಯಾಗಿ ಹಿರಿಯರಿಗೆ ಅಧೀನರಾಗಿರಿ. ನೀವೆಲ್ಲರೂ ದೀನಮನಸ್ಸೆಂಬ ವಸ್ತ್ರದಿಂದ ಸೊಂಟಾಕಟ್ಟಿಕೊಂಡು ಒಬ್ಬರಿಗೊಬ್ಬರು ಸೇವೆಮಾಡಿರಿ. ದೇವರು ಅಹಂಕಾರಿಗಳನ್ನು ಎದುರಿಸುತ್ತಾನೆ, ದೀನರಿಗಾದರೋ ಕೃಪೆಯನ್ನು ಅನುಗ್ರಹಿಸುತ್ತಾನೆ.


ಹೆಚ್ಚಳಪಡುವವನು ಕರ್ತನಲ್ಲಿಯೇ ಹೆಚ್ಚಳಪಡಲಿ.


ನಾವು ವಿತರ್ಕಗಳನ್ನೂ ದೇವಜ್ಞಾನವನ್ನು ವಿರೋಧಿಸುವದಕ್ಕೆ ಏರಿಸಲ್ಪಟ್ಟಿರುವ ಉನ್ನತವಾದ ಎಲ್ಲಾ ಕೊತ್ತಲಗಳನ್ನೂ ಕೆಡವಿಹಾಕಿ ಎಲ್ಲಾ ಯೋಚನೆಗಳನ್ನು ಕ್ರಿಸ್ತನಿಗೆ ವಿಧೇಯವಾಗುವಂತೆ ಸೆರೆಹಿಡಿದು


ಇವನು ನೀತಿವಂತನೆಂದು ನಿರ್ಣಯಿಸಲ್ಪಟ್ಟವನಾಗಿ ತನ್ನ ಮನೆಗೆ ಹೋದನು, ಆ ಫರಿಸಾಯನು ಅಂಥವನಾಗಿ ಹೋಗಲಿಲ್ಲ ಎಂದು ನಿಮಗೆ ಹೇಳುತ್ತೇನೆ. ತನ್ನನ್ನು ಹೆಚ್ಚಿಸಿಕೊಳ್ಳುವ ಪ್ರತಿಯೊಬ್ಬನು ತಗ್ಗಿಸಲ್ಪಡುವನು; ತನ್ನನ್ನು ತಗ್ಗಿಸಿಕೊಳ್ಳುವವನು ಹೆಚ್ಚಿಸಲ್ಪಡುವನು ಅಂದನು.


ಆ ದಿನದಲ್ಲಿ ಅವರ ದೇವರಾದ ಯೆಹೋವನು ಅವರನ್ನು ತನ್ನ ಹಿಂಡಾಗಿರುವ ಜನರೆಂದು ರಕ್ಷಿಸುವನು; ಅವರು ಕಿರೀಟದಲ್ಲಿನ ರತ್ನಗಳಂತೆ ತಮ್ಮ ದೇಶದಲ್ಲಿ ಥಳಥಳಿಸುವರು.


ಆ ದಿನದಲ್ಲಿ ಯೆರೂಸಲೇವಿುಗೆ - ಚೀಯೋನೇ, ಭಯಪಡಬೇಡ, ನಿನ್ನ ಕೈಗಳು ಜೋಲುಬೀಳದಿರಲಿ;


ನೀನು ನನಗೆ ಮಾಡಿದ ನಾನಾ ದುಷ್ಕೃತ್ಯಗಳು ಮುಂದಿನ ಆ ಕಾಲದಲ್ಲಿ ನಿನಗೆ ನಾಚಿಕೆಗೀಡಾಗವು; ಆಗ ಅತಿಗರ್ವದಿಂದ ಮೆರೆಯುವವರನ್ನು ನಿನ್ನೊಳಗಿಂದ ತೊಲಗಿಸಿಬಿಡುವೆನು; ಅಂದಿನಿಂದ ನನ್ನ ಪವಿತ್ರಪರ್ವತದಲ್ಲಿ ಗರ್ವಪಡದೆ ಇರುವಿ.


ಯೆಹೋವನು ಇಂತೆನ್ನುತ್ತಾನೆ - ಆ ದಿನದಲ್ಲಿ ನಿನ್ನ ಕುದುರೆಗಳನ್ನು ನಿನ್ನೊಳಗಿಂದ ಕಡಿದುಬಿಡುವೆನು, ನಿನ್ನ ರಥಗಳನ್ನು ನಾಶಗೊಳಿಸುವೆನು;


ಯೆಹೋವನು ಇಂತೆನ್ನುತ್ತಾನೆ - ಆ ದಿನದಲ್ಲಿ ನಾನು ಎದೋವಿುನೊಳಗಿಂದ ಜ್ಞಾನಿಗಳನ್ನು ಅಳಿಸದೆ ಬಿಟ್ಟೇನೋ? ಏಸಾವಿನ ಪರ್ವತದೊಳಗಿಂದ ವಿವೇಕವನ್ನು ಕಿತ್ತುಹಾಕದೆ ಇದ್ದೇನೋ?


ಆ ದಿನದಲ್ಲಿ ನಾನು ದಾವೀದನ ಬಿದ್ದು ಹೋಗಿರುವ ಗುಡಿಸಲನ್ನು ಎತ್ತಿ ಅದರ ಕಂಡಿಗಳನ್ನು ಮುಚ್ಚುವೆನು;


ಆ ಕಾಲದಲ್ಲಿ ಬೆಟ್ಟಗಳಿಂದ ದ್ರಾಕ್ಷಾರಸವು ಸುರಿಯುವದು, ಗುಡ್ಡಗಳಿಂದ ಹಾಲುಹರಿಯುವದು, ಯೆಹೂದದ ತೊರೆಗಳಲ್ಲೆಲ್ಲಾ ನೀರು ತುಂಬಿರುವದು; ಯೆಹೋವನ ಆಲಯದೊಳಗಿಂದ ಬುಗ್ಗೆಯು ಉಕ್ಕಿಬಂದು ಜಾಲಿಯ ಹಳ್ಳವನ್ನು ತಂಪುಮಾಡುವದು.


ಯೆಹೋವನು ಇಂತೆನ್ನುತ್ತಾನೆ - ಆ ಕಾಲದಲ್ಲಿ ನಾನು ಒಲುಮೆ ತೋರಿಸುವೆನು; ಬೇಡುವ ಆಕಾಶಕ್ಕೆ ನಾನು ಒಲಿಯಲು ಬೇಡುವ ಭೂವಿುಗೆ ಅದು ಒಲಿಯುವದು.


ಯೆಹೋವನು ಇಂತೆನ್ನುತ್ತಾನೆ - ಆ ಕಾಲದಲ್ಲಿ ನೀನು ನನ್ನನ್ನು ಇನ್ನು ಬಾಳೀ ಅನ್ನದೆ ಈಶೀ ಅನ್ನುವಿ.


ಆ ದಿನದಲ್ಲಿ ನಾನು ಇಸ್ರಾಯೇಲಿನೊಳಗೆ ಲವಣ ಸಮುದ್ರದ ಮೂಡಣ ದಿಕ್ಕಿನಲ್ಲಿ ಪ್ರಯಾಣಿಕರ ಮಾರ್ಗವಾದ ತಗ್ಗನ್ನು ಗೋಗನಿಗೆ ಹೂಳುವ ಸ್ಥಳವನ್ನಾಗಿ ಏರ್ಪಡಿಸುವೆನು; ಅಲ್ಲಿ ಪ್ರಯಾಣಮಾಡಲು ಆಗುವದಿಲ್ಲ; ಅಲ್ಲೇ ಗೋಗನನ್ನೂ ಅವನ ಸಮೂಹವೆಲ್ಲವನ್ನೂ ಹೂಣಿಡುವರು; ಅದು ಗೋಗನ ಸಮೂಹದ ತಗ್ಗು ಅನ್ನಿಸಿಕೊಳ್ಳುವದು.


ನಾನು ರೋಷಾವಿಷ್ಟನಾಗಿ ಕೋಪದಿಂದುರಿಯುತ್ತಾ ಹೀಗೆ ನುಡಿದಿದ್ದೇನೆ - ಆಹಾ, ಆ ದಿನದಲ್ಲಿ ಇಸ್ರಾಯೇಲ್ ದೇಶದೊಳಗೆ ಅದ್ಭುತಕಂಪನವಾಗುವದು ಖಂಡಿತ;


ಹೀಗಿರಲು, ನರಪುತ್ರನೇ, ನೀನು ಗೋಗನಿಗೆ ಈ ದೈವೋಕ್ತಿಯನ್ನು ನುಡಿ - ಕರ್ತನಾದ ಯೆಹೋವನು ಇಂತೆನ್ನುತ್ತಾನೆ - ನನ್ನ ಜನರಾದ ಇಸ್ರಾಯೇಲ್ಯರು ನೆಮ್ಮದಿಯಾಗಿ ವಾಸಿಸುವ ಕಾಲದಲ್ಲಿ ಆ ನೆಮ್ಮದಿಯು ನಿನಗೆ ಗೊತ್ತಾಗುವದಲ್ಲವೆ.


ಹೆಚ್ಚಳಪಡುವವನು ತಾನು ನನ್ನನ್ನು ತಿಳಿದು ನಾನು ಲೋಕದಲ್ಲಿ ಪ್ರೀತಿನೀತಿನ್ಯಾಯಗಳನ್ನು ತೋರ್ಪಡಿಸುವ ಯೆಹೋವನಾಗಿರುವೆನು ಎಂದು ಗ್ರಹಿಸಿಕೊಂಡಿದ್ದೇನೆ ಎಂಬದಕ್ಕೇ ಹೆಚ್ಚಳಪಡಲಿ; ಪ್ರೀತಿನೀತಿನ್ಯಾಯಗಳೇ ನನಗೆ ಆನಂದವೆಂದು ಯೆಹೋವನು ಅನ್ನುತ್ತಾನೆ.


ಹೀಗಿರಲು ನನ್ನ ಜನರು ನನ್ನ ನಾಮದ ಮಹತ್ತನ್ನು ತಿಳಿದು [ತಮ್ಮ ಸಂಗಡ] ಮಾತಾಡುವವನು ನಾನೇ, ಹೌದು ನಾನೇ, ಎಂದು [ರಕ್ಷಣೆಯ] ಆ ದಿನದಲ್ಲಿ ಗ್ರಹಿಸಿಕೊಳ್ಳುವ ಹಾಗೆ ಮಾಡುವೆನು. ಇದೇ ಯೆಹೋವನ ನುಡಿ.


ನೀನು ಯಾರನ್ನು ನಿಂದಿಸಿ ಯಾರನ್ನು ದೂಷಿಸಿದಿ? ಯಾರಿಗೆ ವಿರೋಧವಾಗಿ ಬಾಯ್ದೆರೆದು ಒದರಿದಿ? ನೀನು ಸೊಕ್ಕಿನಿಂದ ನೋಡಿದ್ದು ಯಾರನ್ನು? ಇಸ್ರಾಯೇಲ್ಯರ ಸದಮಲಸ್ವಾವಿುಯನ್ನಲ್ಲವೇ!


ಆಗ ನೀವು ಹೊಲದಲ್ಲಿ ಬೀಜಬಿತ್ತುವದಕ್ಕೆ ಆತನು ಬಿತ್ತನೆಯ ಮಳೆಯನ್ನು ದಯಪಾಲಿಸುವನು; ನೆಲದ ಬೆಳೆಯಿಂದ ಸಾರವಾದ ಆಹಾರವನ್ನು ಸಮೃದ್ಧಿಯಾಗಿ ಒದಗಿಸುವನು; ಆ ದಿನದಲ್ಲಿ ನಿಮ್ಮ ಮಂದೆಗಳು ದೊಡ್ಡದೊಡ್ಡ ಕಾವಲುಗಳಲ್ಲಿ ಮೇಯುವವು.


ಆ ದಿನದಲ್ಲಿ ಕಿವುಡರು ಶಾಸ್ತ್ರದ ಮಾತುಗಳನ್ನು ಕೇಳುವರು, ಮೊಬ್ಬುಕತ್ತಲುಗಳಲ್ಲಿಯೂ ಕುರುಡರ ಕಣ್ಣು ಕಾಣುವದು.


ಆ ದಿನದಲ್ಲಿ ಸೇನಾಧೀಶ್ವರನಾದ ಯೆಹೋವನೇ ತನ್ನ ಜನರಲ್ಲಿ ಉಳಿದವರಿಗೆ ಅಂದದ ಕಿರೀಟವೂ ಸುಂದರ ಮುಕುಟವೂ ಆಗಿರುವನು;


ಆ ದಿವಸದಲ್ಲಿ ಯೆಹೂದ ದೇಶದೊಳಗೆ ಈ ಗೀತವನ್ನು ಹಾಡುವರು - ನಮಗೆ ಬಲವಾದ ಪಟ್ಟಣವಿದೆ. [ಯೆಹೋವನು ತನ್ನ] ರಕ್ಷಣೆಯನ್ನು ಕೋಟೆಯನ್ನಾಗಿಯೂ ಹೊರಪೌಳಿಯನ್ನಾಗಿಯೂ ಮಾಡಿದ್ದಾನೆ.


ಆ ದಿನದಲ್ಲಿ ಜನರು - ಆಹಾ, ಈತನೇ ನಮ್ಮ ದೇವರು, ನಮ್ಮನ್ನು ರಕ್ಷಿಸಲಿ ಎಂದು ಈತನನ್ನು ನಿರೀಕ್ಷಿಸಿಕೊಂಡಿದ್ದೇವೆ; ಈತನೇ ಯೆಹೋವನು, ಈತನನ್ನು ನಿರೀಕ್ಷಿಸಿಕೊಂಡಿದ್ದೇವೆ, ಈತನ ರಕ್ಷಣೆಯಲ್ಲಿ ಆನಂದಿಸಿ ಉಲ್ಲಾಸಪಡುವೆವು ಎಂದು ಹೇಳಿಕೊಳ್ಳುವರು.


ಆ ದಿನದಲ್ಲಿ ನೀನು ಹೇಳುವದೇನಂದರೆ - ಯೆಹೋವನೇ, ನಾನು ನಿನಗೆ ಕೃತಜ್ಞತೆಯನ್ನು ಸಲ್ಲಿಸುವೆನು; ನೀನು ನನ್ನ ಮೇಲೆ ಕೋಪಗೊಂಡಿದ್ದರೂ ಆ ನಿನ್ನ ಕೋಪವು ಪರಿಹಾರವಾಗಿ ನನ್ನನ್ನು ಸಂತೈಸುತ್ತೀಯಲ್ಲವೆ.


ಆ ದಿನದಲ್ಲಿ ಏಳು ಮಂದಿ ಹೆಂಗಸರು ಒಬ್ಬ ಗಂಡಸನ್ನು ಹಿಡಿದು ಸ್ವಂತವಾಗಿ ದುಡಿದ ಅನ್ನವನ್ನು ಉಣ್ಣುವೆವು, ನಾವೇ ಸಂಪಾದಿಸಿದ ಬಟ್ಟೆಯನ್ನು ಉಟ್ಟುಕೊಳ್ಳುವೆವು; ನಿನ್ನ ಹೆಸರು ಮಾತ್ರ ನಮಗಿದ್ದರೆ ಸಾಕು; ನಮ್ಮ ಅವಮಾನವನ್ನು ನೀಗಿಸಿಬಿಡು ಎಂದು ಕೇಳಿಕೊಳ್ಳುವರು.


ದೀನರನ್ನು ಉದ್ಧರಿಸುತ್ತೀ; ಹವ್ಮಿುನವರನ್ನು ಕಂಡುಹಿಡಿದು ತಗ್ಗಿಸಿಬಿಡುತ್ತೀ.


ಅವರು ಬಿದ್ದು ಹೋಗಿದ್ದಾರೆ; ನಾವಾದರೋ ಎದ್ದು ನಿಂತಿದ್ದೇವೆ.


ಬಿಡಿರಿ, ನಾನೇ ದೇವರು; ಲೋಕದ ಸಮಸ್ತ ಜನಗಳಿಗೂ ಸರ್ವಾಧಿಪತಿಯು ನಾನೇ ಎಂದು ತಿಳಿದುಕೊಳ್ಳಿರಿ.


ಕಣ್ಣು ರೆಪ್ಪೆಗಳನ್ನೆತ್ತಿಕೊಂಡು ಎಷ್ಟೋ ಮೇಲೆ ಮೇಲೆಯೇ ನೋಡುತ್ತಿರುವ ಇನ್ನೊಂದು ತರದವರುಂಟು.


ಗರ್ವದ ಸಕಲ ವೈಭವವನ್ನು ಹೊಲಸುಮಾಡಬೇಕೆಂತಲೂ ಲೋಕಮಾನ್ಯರೆಲ್ಲರನ್ನು ಅವಮಾನ ಪಡಿಸಬೇಕೆಂತಲೂ ಸೇನಾಧೀಶ್ವರನಾದ ಯೆಹೋವನೇ ಹೀಗೆ ಸಂಕಲ್ಪಿಸಿದ್ದಾನೆ.


ಹೀಗಿರಲು ಯೆಹೋವನು ನಿಮಗೆ ಕೃಪೆತೋರಿಸಬೇಕೆಂದು ಕಾದಿರುವನು; ನಿಮ್ಮನ್ನು ಕರುಣಿಸಬೇಕೆಂದು ಉನ್ನತೋನ್ನತನಾಗಿ ಕಾಣಿಸಿಕೊಳ್ಳುವನು; ಯೆಹೋವನು ನ್ಯಾಯಸ್ವರೂಪನಾದ ದೇವರು; ಆತನಿಗಾಗಿ ಕಾದಿರುವವರೆಲ್ಲರೂ ಧನ್ಯರು.


ಆದಕಾರಣ ಯೆಹೋವನು ಇಂತೆನ್ನುತ್ತಾನೆ - ಇಗೋ, ಈ ವಂಶಕ್ಕೆ ನಾನೇ ಕೇಡನ್ನು ಕಲ್ಪಿಸುತ್ತೇನೆ; ಅದರ ಭಾರದಿಂದ ನಿಮ್ಮ ಕುತ್ತಿಗೆಗಳನ್ನು ತಪ್ಪಿಸಿಕೊಳ್ಳಲಾರಿರಿ, ನೀವು ತಲೆಯೆತ್ತಿ ನಡೆಯುವದಕ್ಕಾಗದು; ಅದು ಕೆಟ್ಟಕಾಲವೇ ಸರಿ.


ನೀನೇ ನನ್ನ ದೀಪವನ್ನು ಹೊತ್ತಿಸುವವನಲ್ಲವೇ, ನನ್ನ ದೇವರಾದ ಯೆಹೋವನು ನನಗೆ ಬೆಳಕನ್ನು ಕೊಟ್ಟು ಕತ್ತಲನ್ನು ಪರಿಹರಿಸುವವನು.


ಸೇನಾಧೀಶ್ವರನಾದ ಯೆಹೋವನು ನಮ್ಮ ಸಂಗಡ ಇದ್ದಾನೆ; ಯಾಕೋಬವಂಶದವರ ದೇವರು ನಮಗೆ ಆಶ್ರಯದುರ್ಗವಾಗಿದ್ದಾನೆ. ಸೆಲಾ.


ಲೋಕದ ನ್ಯಾಯಾಧಿಪತಿಯೇ, ಏಳು; ಗರ್ವಿಷ್ಠರಿಗೆ ಪ್ರತಿಫಲವನ್ನು ಕೊಡು.


ಅಹಂಕಾರಿಗಳೆಲ್ಲಾ ಯೆಹೋವನಿಗೆ ಅಸಹ್ಯ; ಅವರಿಗೆ ದಂಡನೆ ಖಂಡಿತ.


ಆದಕಾರಣ ಕರ್ತನಾದ ನಾನು ಚೀಯೋನ್ ಪರ್ವತದಲ್ಲಿಯೂ ಯೆರೂಸಲೇವಿುನಲ್ಲಿಯೂ ನನ್ನ ಉದ್ದೇಶವನ್ನೆಲ್ಲಾ ನೆರವೇರಿಸಿದ ಮೇಲೆ ಅಶ್ಶೂರದ ರಾಜನ ಉಬ್ಬಟೆಯ ಕೊಚ್ಚಾಟಕ್ಕೂ ಗರ್ವದೃಷ್ಟಿಯ ಮೆರೆದಾಟಕ್ಕೂ ತಕ್ಕ ದಂಡನೆಯನ್ನು ಮಾಡುವೆನು.


ಆದರೆ ನೀನು ಪಾತಾಳಕ್ಕೆ, ಅಧೋಲೋಕದ ಅಗಾಧಸ್ಥಳಗಳಿಗೆ, ತಳ್ಳಲ್ಪಡುತ್ತಿದ್ದೀ.


ಪ್ರಭುಗಳನ್ನು ನಿರ್ನಾಮ ಮಾಡುತ್ತಾನೆ, ಭೂಪತಿಗಳನ್ನು ಶೂನ್ಯಗೊಳಿಸುತ್ತಾನೆ.


ನನ್ನ ಸ್ವಾಸ್ತ್ಯವಾದ ಜನವು ನನ್ನ ದೃಷ್ಟಿಗೆ ಚಿತ್ರವರ್ಣದ ಹದ್ದಿನಂತಿದೆಯೋ? ಹದ್ದುಗಳು ಅದರ ಸುತ್ತಲು ವಿರುದ್ಧವಾಗಿ ಕೂತಿವೆಯೋ? ಹೋಗಿರಿ, ಅದನ್ನು ತಿಂದುಬಿಡುವದಕ್ಕೆ ಎಲ್ಲಾ ಕಾಡುಮೃಗಗಳನ್ನು ಕರತನ್ನಿರಿ.


ಆ ಕಾಲವು ಕಳೆದ ಮೇಲೆ ನೆಬೂಕದ್ನೆಚ್ಚರನಾದ ನಾನು ಆಕಾಶದ ಕಡೆಗೆ ಕಣ್ಣೆತ್ತಲು ನನ್ನ ಬುದ್ಧಿಯು ಪುನಃ ನನ್ನ ಸ್ವಾಧೀನವಾಯಿತು. ಆಗ ನಾನು ಪರಾತ್ಪರನನ್ನು ಕೊಂಡಾಡಿ ಸದಾ ಜೀವಿಸುವಾತನಿಗೆ ಸ್ತುತಿಸ್ತೋತ್ರಗಳನ್ನು ಸಲ್ಲಿಸಿದೆನು; ಆತನ ಆಳಿಕೆಯು ಶಾಶ್ವತ, ಆತನ ರಾಜ್ಯವು ತಲತಲಾಂತರಕ್ಕೂ ನಿಲ್ಲುವದು;


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು