Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೆಶಾಯ 2:7 - ಕನ್ನಡ ಸತ್ಯವೇದವು J.V. (BSI)

7 ಇವರ ದೇಶವು ಬೆಳ್ಳಿ ಬಂಗಾರಗಳಿಂದ ತುಂಬಿದೆ, ಇವರ ನಿಧಿ ನಿಕ್ಷೇಪಗಳಿಗೆ ವಿುತಿಯಿಲ್ಲ; ಇವರ ದೇಶವು ಅಶ್ವಬಲಭರಿತವಾಗಿದೆ, ಇವರ ರಥಗಳಿಗೆ ಪಾರವಿಲ್ಲ;

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

7 ಅವರ ದೇಶವು ಬೆಳ್ಳಿಬಂಗಾರಗಳಿಂದ ತುಂಬಿದೆ. ಅವರ ನಿಧಿನಿಕ್ಷೇಪಗಳಿಗೆ ಮಿತಿಯಿಲ್ಲ. ಅವರ ದೇಶವು ಅಶ್ವಬಲದಿಂದ ತುಂಬಿದೆ. ಅವರ ರಥಗಳಿಗೆ ಮಿತಿಯೇ ಇಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

7 ನಾಡು ಬೆಳ್ಳಿಬಂಗಾರದಿಂದ ತುಂಬಿಹೋಗಿದೆ. ಜನರ ನಿಧಿನಿಕ್ಷೇಪಗಳಿಗೆ ಮಿತಿಯಿಲ್ಲದಂತಿದೆ. ಎಲ್ಲಾ ಕಡೆ ಅಶ್ವಬಲ ಯಥೇಚ್ಛವಾಗಿದೆ. ರಥಗಳು ಅಪಾರವಾಗಿವೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

7 ನಿಮ್ಮ ದೇಶವು ಬೆಳ್ಳಿಬಂಗಾರಗಳಿಂದಲೂ ಮಿತಿಯಿಲ್ಲದ ನಿಕ್ಷೇಪಗಳಿಂದಲೂ ಕುದುರೆಗಳಿಂದಲೂ ಅಸಂಖ್ಯಾತವಾದ ರಥಗಳಿಂದಲೂ ತುಂಬಿಹೋಯಿತು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

7 ಅವರ ದೇಶವು ಬೆಳ್ಳಿ ಬಂಗಾರಗಳಿಂದ ತುಂಬಿದೆ. ಅವರ ಬೊಕ್ಕಸಗಳಿಗೆ ಮಿತಿಯಿಲ್ಲ. ಅವರ ದೇಶವು ಕುದುರೆಗಳಿಂದ ತುಂಬಿದೆ, ಅವರ ರಥಗಳಿಗೆ ಮಿತಿಯೇ ಇಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೆಶಾಯ 2:7
15 ತಿಳಿವುಗಳ ಹೋಲಿಕೆ  

ಅಯ್ಯೋ, ಸಹಾಯಕ್ಕಾಗಿ ಐಗುಪ್ತವನ್ನು ಸೇರಿ ಅಶ್ವಬಲವನ್ನು ಆಶ್ರಯಿಸುವವರ ಗತಿಯನ್ನು ಏನು ಹೇಳಲಿ! ರಥಗಳು ಬಹಳವೆಂದು ಅವುಗಳಲ್ಲಿ ನಂಬಿಕೆಯಿಟ್ಟು ಸವಾರರು ಬಹು ಬಲಿಷ್ಠರೆಂದು ಅವರ ಮೇಲೆ ಭರವಸಪಡುತ್ತಾರೆ; ಆದರೆ ಇಸ್ರಾಯೇಲ್ಯರ ಸದಮಲಸ್ವಾವಿುಯ ಕಡೆಗೆ ದೃಷ್ಟಿಯಿಡುವದಿಲ್ಲ, ಯೆಹೋವನನ್ನು ಆಶ್ರಯಿಸುವದಿಲ್ಲ;


ನೀವು - ಬೇಡವೇ ಬೇಡ, ಕುದುರೆಗಳ ಮೇಲೆ ಓಡುವೆವು ಎಂದುಕೊಂಡದರಿಂದ ಓಡೇ ಹೋಗುವಿರಿ; ನೀವು - ವೇಗವಾಗಿ ಸವಾರಿಮಾಡುವೆವು ಎಂದುಕೊಂಡದರಿಂದ ವೇಗಿಗಳೇ ನಿಮ್ಮನ್ನು ಅಟ್ಟಿ ಬಿಡುವರು;


ಕೆಲವರು ರಥಬಲದಲ್ಲಿ, ಕೆಲವರು ಅಶ್ವ ಬಲದಲ್ಲಿ ಹೆಚ್ಚಳಪಡುತ್ತಾರೆ; ನಾವಾದರೋ ನಮ್ಮ ದೇವರಾದ ಯೆಹೋವನಲ್ಲಿಯೇ.


ಯೆಹೋವನು ಇಂತೆನ್ನುತ್ತಾನೆ - ಆ ದಿನದಲ್ಲಿ ನಿನ್ನ ಕುದುರೆಗಳನ್ನು ನಿನ್ನೊಳಗಿಂದ ಕಡಿದುಬಿಡುವೆನು, ನಿನ್ನ ರಥಗಳನ್ನು ನಾಶಗೊಳಿಸುವೆನು;


ಎಲ್ಲಾ ಜನಾಂಗಗಳು ಅವಳ ಅತಿಜಾರತ್ವವೆಂಬ ದ್ರಾಕ್ಷಾರಸವನ್ನು ಕುಡಿದರು; ಅವಳೊಂದಿಗೆ ಭೂರಾಜರು ಜಾರತ್ವ ಮಾಡಿದರು; ಅವಳು ಸುಖಭೋಗಿನಿಯಾಗಿದ್ದದರಿಂದ ಭೂಲೋಕದ ವರ್ತಕರು ಐಶ್ವರ್ಯವಂತರಾದರು ಎಂದು ಹೇಳಿದನು.


ಅಶ್ಶೂರವು ನಮ್ಮನ್ನು ರಕ್ಷಿಸುವದೆಂದು ನಂಬೆವು; [ಐಗುಪ್ತದ] ಕುದುರೆಗಳನ್ನು ಹತ್ತೆವು; ನಮ್ಮ ಕೈಕೆಲಸದ ಬೊಂಬೆಗಳಿಗೆ - ನೀವು ನಮ್ಮ ದೇವರುಗಳು ಎಂದು ಇನ್ನು ಹೇಳೆವು; ನೀನೇ ಅನಾಥರನ್ನು ಕರುಣಿಸುವಿ ಎಂಬದಾಗಿ ಅರಿಕೆಮಾಡಿಕೊಳ್ಳಿರಿ.


ಸೊಲೊಮೋನನ ಲಾಯಗಳಲ್ಲಿ ನಾಲ್ವತ್ತು ಸಾವಿರ ರಥಾಶ್ವಗಳಿಗೆ ಸ್ಥಳವಿತ್ತು; ಅವನಿಗೆ ಹನ್ನೆರಡು ಸಾವಿರ ಮಂದಿ ರಾಹುತರಿದ್ದರು.


ನನ್ನ ಜನರು ಲಾಭವನ್ನು ದೋಚಿಕೊಂಡ ಅನ್ಯಾಯವನ್ನು ನಾನು ನೋಡಿ ಕೋಪಗೊಂಡು ಅವರನ್ನು ಹೊಡೆದೆನು, [ನನ್ನ ಮುಖವನ್ನು] ಮುಚ್ಚಿಕೊಂಡು ರೋಷಭರಿತನಾಗಿದ್ದೆನು; ಅವರೋ ತಿರುಗಿಕೊಂಡು ಮನಸ್ಸಿಗೆ ತೋರಿದ ಹಾಗೆಯೇ ನಡೆಯುತ್ತಾ ಬಂದಿದ್ದಾರೆ.


ಬಂಗಾರವನ್ನು ಕೂಡಿಸಿಟ್ಟು ತಮ್ಮ ಮನೆಗಳನ್ನು ಬೆಳ್ಳಿಯಿಂದ ತುಂಬಿಸಿದ ಅಧಿಪತಿಗಳ ಸಂಗಡಲೂ ವಿಶ್ರವಿುಸಿಕೊಳ್ಳುತ್ತಿದ್ದೆನು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು