Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೆಶಾಯ 20:2 - ಕನ್ನಡ ಸತ್ಯವೇದವು J.V. (BSI)

2 ಯೆಹೋವನು ಆಮೋಚನ ಮಗನಾದ ಯೆಶಾಯನಿಗೆ - ಏಳು, ಸೊಂಟದಿಂದ ಗೋಣಿತಟ್ಟನ್ನು ಬಿಚ್ಚು, ಕಾಲಿನಿಂದ ಕೆರವನ್ನು ಕಳಚು ಎಂದು ಇತರರಿಗೆ ಸೂಚನೆಯಾಗಿ ಅಪ್ಪಣೆಕೊಟ್ಟನು. ಅವನು ಹಾಗೆಯೇ ಮಾಡಿ ಬೆತ್ತಲೆಯಾಗಿ ಕೆರವಿಲ್ಲದೆ ತಿರುಗುತ್ತಿದ್ದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

2 ಅದೇ ಸಮಯದಲ್ಲಿ ಯೆಹೋವನು ಆಮೋಚನ ಮಗನಾದ ಯೆಶಾಯನಿಗೆ, “ಹೋಗು, ನಿನ್ನ ನಡುವಿನ ಮೇಲಿರುವ ಗೋಣಿತಟ್ಟನ್ನು ಬಿಚ್ಚು. ನಿನ್ನ ಪಾದಗಳಲ್ಲಿರುವ ಪಾದರಕ್ಷೆಗಳನ್ನು ತೆಗೆದಿಡು” ಎಂದು ಹೇಳಿದನು. ಅವನು ಹಾಗೆಯೇ ಮಾಡಿ ಬೆತ್ತಲೆಯಾಗಿ ಪಾದರಕ್ಷೆಗಳಿಲ್ಲದೆ ತಿರುಗಾಡುತ್ತಿದ್ದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

2 ಅದಕ್ಕೆ ಮೂರು ವರ್ಷಗಳಿಗೆ ಮುಂಚೆಯೆ ಆಮೋಚನ ಮಗ ಯೆಶಾಯನಿಗೆ ಸರ್ವೇಶ್ವರ ಮುನ್ಸೂಚನೆಯಾಗಿ ಹೀಗೆಂದು ಹೇಳಿದ್ದರು : “ಎದ್ದೇಳು, ಸೊಂಟಕ್ಕೆ ಕಟ್ಟಿರುವ ಗೋಣಿತಟ್ಟನ್ನು ಬಿಚ್ಚು, ಕಾಲಿಗೆ ಹಾಕಿರುವ ಕೆರವನ್ನು ಕಳಚು.” ಅಂತೆಯೇ ಯೆಶಾಯನು ದಿಗಂಬರನಾಗಿ ಬರಿಗಾಲಿನಲ್ಲೇ ತಿರುಗಾಡುತ್ತಿದ್ದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

2 ಆ ಸಮಯದಲ್ಲಿ ಆಮೋಚನ ಮಗನಾದ ಯೆಶಾಯನೊಂದಿಗೆ ಯೆಹೋವನು ಮಾತನಾಡಿದನು. “ನಿನ್ನ ಶೋಕವಸ್ತ್ರಗಳನ್ನು ತೆಗೆದುಹಾಕು. ನಿನ್ನ ಕಾಲುಗಳಿಂದ ಪಾದರಕ್ಷೆಗಳನ್ನು ತೆಗೆದುಬಿಡು” ಎಂದು ಯೆಹೋವನು ಹೇಳಿದಾಗ ಯೆಶಾಯನು ಆತನಿಗೆ ವಿಧೇಯನಾದನು. ಯೆಶಾಯನು ಪಾದರಕ್ಷೆಗಳಿಲ್ಲದೆ, ಬಟ್ಟೆಗಳಿಲ್ಲದೆ ಅಡ್ಡಾಡಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

2 ಅದೇ ಸಮಯದಲ್ಲಿ ಯೆಹೋವ ದೇವರು ಆಮೋಚನ ಮಗ ಯೆಶಾಯನಿಗೆ, “ನಿನ್ನ ಸೊಂಟಕ್ಕೆ ಕಟ್ಟಿರುವ ಗೋಣಿತಟ್ಟನ್ನು ಬಿಚ್ಚು. ನಿನ್ನ ಪಾದಗಳಲ್ಲಿರುವ ಕೆರಗಳನ್ನು ತೆಗೆದಿಡು,” ಎಂದು ಹೇಳಿದರು. ಅವನು ಹಾಗೆ ಮಾಡಿ, ಬೆತ್ತಲೆಯಾಗಿ ಬರಿಗಾಲಿನಲ್ಲೇ ತಿರುಗಾಡುತ್ತಿದ್ದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೆಶಾಯ 20:2
27 ತಿಳಿವುಗಳ ಹೋಲಿಕೆ  

ಈ ಯೋಹಾನನಿಗೆ ಒಂಟೇ ಕೂದಲಿನ ಹೊದಿಕೆಯೂ ಸೊಂಟದಲ್ಲಿ ತೊಗಲಿನ ನಡುಕಟ್ಟೂ ಇದ್ದವು. ಅವನಿಗೆ ವಿುಡಿತೆ ಮತ್ತು ಕಾಡಜೇನು ಆಹಾರವಾಗಿದ್ದವು.


ಇದಕ್ಕಾಗಿ ನಾನು ಅರಿಚಾಟ ಕಿರಿಚಾಟ ಮಾಡುವೆನು; ಬರಿಗಾಲಾಗಿಯೂ ಬೆತ್ತಲೆಯಾಗಿಯೂ ನಡೆಯುವೆನು; ನರಿಗಳಂತೆ ಅರಚಿಕೊಳ್ಳುವೆನು, ಉಷ್ಟ್ರಪಕ್ಷಿಗಳ ಹಾಗೆ ಕಿರಚಿಕೊಳ್ಳುವೆನು.


ಅಲ್ಲಿಗೆ ಸೇರಿದ ಮೇಲೆ ಅವನೂ ತನ್ನ ಬಟ್ಟೆಗಳನ್ನು ತೆಗೆದು ಹಾಕಿ ಸಮುವೇಲನ ಮುಂದೆ ಪರವಶನಾಗಿ ಮಾತಾಡುತ್ತಾ ಆ ದಿನ ಹಗಲಿರುಳು ಬೆತ್ತಲೆಯಾಗಿ ಬಿದ್ದುಕೊಂಡಿದ್ದನು. ಆದದರಿಂದ - ಸೌಲನೂ ಪ್ರವಾದಿಗಳಲ್ಲಿದ್ದಾನೋ ಎಂಬ ಗಾದೆಯುಂಟಾಯಿತು.


ಆದಿನದಲ್ಲಿ ಯಾವ ಪ್ರವಾದಿಯೇ ಆಗಲಿ ಪ್ರವಾದನೆ ಮಾಡಬೇಕೆಂದಿರುವಾಗ ತನಗಾದ ದರ್ಶನವನ್ನು ಪ್ರಕಟಿಸಲು ನಾಚಿಕೆಪಡುವನು; ಯಾವನೂ ಮೋಸಕ್ಕಾಗಿ ಕಂಬಳಿಯನ್ನು ಹೊದ್ದುಕೊಳ್ಳನು;


ರುಮಾಲನ್ನು ಸುತ್ತಿಕೊಂಡು ಕೆರಗಳನ್ನು ಮೆಟ್ಟಿಕೊಂಡು ಇರುವಿರಿ; ನೀವು ಗೋಳಾಡುವದಿಲ್ಲ, ಅಳುವದಿಲ್ಲ; ನಿಮ್ಮ ಅಧರ್ಮದಿಂದ ಕ್ಷೀಣವಾಗಿ ಹೋಗುವಿರಿ, ಒಬ್ಬರೆದುರಿಗೊಬ್ಬರು ನರಳುವಿರಿ.


ವಿಯೋಗದುಃಖವನ್ನು ತೋರಿಸಬೇಡ, ರುಮಾಲನ್ನು ಸುತ್ತಿಕೊಂಡಿರು, ಕೆರಗಳನ್ನು ಮೆಟ್ಟಿಕೊಂಡಿರು, ಬಾಯನ್ನು ಬಟ್ಟೆಯಿಂದ ಮುಚ್ಚಿಕೊಳ್ಳಬೇಡ, ಗಾರಿಗೆಯನ್ನು ತಿನ್ನಬೇಡ.


ಶಾಫೀರಿನವರೇ, ಬೆತ್ತಲೆಯಾಗಿ ಅವಮಾನಪಟ್ಟು ತೊಲಗಿರಿ; ಚಾನಾನಿನವರು ಹೊರಡರು; ಬೇತೇಚೆಲಿನ ಗೋಳಾಟವು ಅದರ ಬೆಂಬಲವನ್ನು ನಿಮಗೆ ತಪ್ಪಿಸುವದು.


ಆಮೋಚನ ಮಗನಾದ ಯೆಶಾಯನಿಗೆ ಬಾಬೆಲಿನ ವಿಷಯವಾಗಿ ಕಂಡುಬಂದ ದೈವೋಕ್ತಿ.


ಇದಲ್ಲದೆ ನನ್ನ ಇಬ್ಬರು ಸಾಕ್ಷಿಗಳು ಗೋಣೀತಟ್ಟುಗಳನ್ನು ಹೊದ್ದುಕೊಂಡು ಸಾವಿರದ ಇನ್ನೂರ ಅರುವತ್ತು ದಿನಗಳ ತನಕ ಪ್ರವಾದಿಸುವ ಹಾಗೆ ಮಾಡುವೆನು.


ಮತ್ತು ದೆವ್ವಹಿಡಿದಿದ್ದ ಆ ಮನುಷ್ಯನು ಅವರ ಮೇಲೆ ಹಾರಿ ಬಿದ್ದು ಅವರಿಬ್ಬರನ್ನೂ ಸೋಲಿಸಿ ಬಲಾತ್ಕರಿಸಿದ್ದರಿಂದ ಅವರು ಬೆತ್ತಲೆಯಾಗಿಯೂ ಗಾಯವುಳ್ಳವರಾಗಿಯೂ ಆ ಮನೆಯೊಳಗಿಂದ ಓಡಿಹೋದರು.


ಆಗ ಯೇಸುವಿಗೆ ಪ್ರಿಯನಾಗಿದ್ದ ಶಿಷ್ಯನು ಪೇತ್ರನಿಗೆ - ಅವರು ಸ್ವಾವಿುಯವರು ಎಂದು ಹೇಳಿದನು. ಸ್ವಾವಿುಯವರೆಂದು ಸೀಮೋನ ಪೇತ್ರನು ಕೇಳಿ ಮೈ ಮೇಲೆ ಬಟ್ಟೆಯಿಲ್ಲದವನಾಗಿದ್ದರಿಂದ ಒಲ್ಲಿಯನ್ನು ಸುತ್ತಿಕೊಂಡು ಸಮುದ್ರದಲ್ಲಿ ದುಮುಕಿದನು.


ಮತ್ತು ಯೇಸು ತನ್ನ ಶಿಷ್ಯರಿಗೆ ಹೇಳಿದ್ದೇನಂದರೆ - ಯಾವನಿಗಾದರೂ ನನ್ನ ಹಿಂದೆ ಬರುವದಕ್ಕೆ ಮನಸ್ಸಿದ್ದರೆ ಅವನು ತನ್ನನ್ನು ನಿರಾಕರಿಸಿ ತನ್ನ ಶಿಲುಬೆಯನ್ನು ಹೊತ್ತುಕೊಂಡು ನನ್ನ ಹಿಂದೆ ಬರಲಿ.


ಅವರು ಎಷ್ಟು ವರುಷ ತಮ್ಮ ಅಧರ್ಮದ ಫಲವನ್ನು ಅನುಭವಿಸಬೇಕೋ ಅಷ್ಟು ದಿವಸ ಅಂದರೆ ಮುನ್ನೂರತೊಂಭತ್ತು ದಿವಸ ನೀನು ಮಲಗಿಕೊಂಡಿರಬೇಕೆಂದು ನಿನಗೆ ನೇವಿುಸಿದ್ದೇನೆ; ಅಷ್ಟು ದಿವಸ ಇಸ್ರಾಯೇಲ್ ವಂಶದವರ ಅಧರ್ಮವನ್ನು ನೀನು ಹೊತ್ತುಕೊಂಡಿರಬೇಕು.


ಅವನು ಕಂಬಳಿಯನ್ನು ಹೊದ್ದುಕೊಂಡಿದ್ದನು; ಅವನ ಸೊಂಟಕ್ಕೆ ತೊಗಲಿನ ನಡುಕಟ್ಟು ಇತ್ತು ಎಂದು ಉತ್ತರಕೊಟ್ಟರು. ಅದಕ್ಕೆ ಅರಸನು - ಆ ಮನುಷ್ಯನು ತಿಷ್ಬೀಯನಾದ ಎಲೀಯನೇ ಆಗಿರಬೇಕು ಅಂದನು.


ಅನಂತರ ದಾವೀದನು ತನ್ನ ಮನೆಯವರನ್ನು ಆಶೀರ್ವದಿಸುವದಕ್ಕೆ ಹೋದಾಗ ಸೌಲನ ಮಗಳಾದ ಮೀಕಲಳು ಅವನೆದುರಿಗೆ ಬಂದು - ಈ ಹೊತ್ತು ಇಸ್ರಾಯೇಲ್ಯರ ಅರಸನು ಎಂಥ ಗೌರವದಿಂದ ನಡೆದುಕೊಂಡನು! ನೀಚರಲ್ಲೊಬ್ಬನಂತೆ ತನ್ನ ಜನರ ದಾಸಿಯರ ಮುಂದೆ ಬೆತ್ತಲೆಯಾಗಿದ್ದನಲ್ಲಾ ಅಂದಳು. ಆಗ ದಾವೀದನು ಆಕೆಗೆ -


ಯೆಹೋವನ ಸೇನಾಪತಿಯು - ನಿನ್ನ ಕಾಲಿನಿಂದ ಕೆರಗಳನ್ನು ತೆಗೆದುಹಾಕು; ನೀನು ನಿಂತಿರುವ ಸ್ಥಳವು ಪರಿಶುದ್ಧವಾದದ್ದು ಎಂದು ಯೆಹೋಶುವನಿಗೆ ಹೇಳಿದನು. ಅವನು ಹಾಗೆಯೇ ಮಾಡಿದನು.


ದೇವರು ಅವನಿಗೆ - ನೀನು ಹತ್ತಿರ ಬರಬೇಡ; ನಿನ್ನ ಕಾಲಿನ ಕೆರಗಳನ್ನು ತೆಗೆದುಹಾಕು; ನೀನು ನಿಂತಿರುವ ಸ್ಥಳವು ಪರಿಶುದ್ಧ ಭೂವಿು ಎಂದು ಹೇಳಿದನು.


ಪೌಲನ ನಡುಕಟ್ಟನ್ನು ತೆಗೆದು ತನ್ನ ಕೈಕಾಲುಗಳನ್ನು ಕಟ್ಟಿಕೊಂಡು - ಈ ನಡುಕಟ್ಟು ಯಾವನದೋ ಆ ಮನುಷ್ಯನನ್ನು ಯೆಹೂದ್ಯರು ಇದೇ ರೀತಿಯಾಗಿ ಯೆರೂಸಲೇವಿುನಲ್ಲಿ ಕಟ್ಟಿ ಅನ್ಯಜನರ ಕೈಗೆ ಒಪ್ಪಿಸಿಕೊಡುವರು, ಹೀಗೆ ಪವಿತ್ರಾತ್ಮನು ಹೇಳುತ್ತಾನೆಂಬದಾಗಿ ಹೇಳಿದನು.


ದಾವೀದನು ಮೋರೆಯನ್ನು ಮುಚ್ಚಿಕೊಂಡು ಅಳುತ್ತಾ ಬರಿಗಾಲಿನಿಂದ ಎಣ್ಣೇಮರಗಳ ಗುಡ್ಡವನ್ನೇರಿದನು. ಅವನ ಜೊತೆಯಲ್ಲಿದ್ದ ಜನರೂ ಮೋರೆಮುಚ್ಚಿಕೊಂಡು ಅಳುತ್ತಾ ಏರಿದರು.


ಆಗ ನೀನು ನನ್ನ ಗೋಳಾಟವನ್ನು ತಪ್ಪಿಸಿ ಸಂತೋಷದಿಂದ ಕುಣಿದಾಡುವಂತೆ ಮಾಡಿದಿ; ನಾನು ಕಟ್ಟಿಕೊಂಡಿದ್ದ ಗೋಣಿತಟ್ಟನ್ನು ತೆಗೆದುಬಿಟ್ಟು ಹರ್ಷವಸ್ತ್ರವನ್ನು ನನಗೆ ಧಾರಣೆಮಾಡಿಸಿದಿ.


ಯೆಹೂದ ದೇಶದ ಅರಸರಾದ ಉಜ್ಜೀಯ, ಯೋಥಾಮ, ಆಹಾಜ, ಹಿಜ್ಕೀಯ, ಇವರ ಕಾಲದಲ್ಲಿ ಯೆಹೂದದ ಮತ್ತು ಯೆರೂಸಲೇವಿುನ ವಿಷಯವಾಗಿ ಆಮೋಚನ ಮಗನಾದ ಯೆಶಾಯನಿಗೆ ಆದ ದೈವದರ್ಶನ.


ಇದಲ್ಲದೆ ಅವನು ರಾಜಗೃಹಾಧಿಪತಿಯಾದ ಎಲ್ಯಾಕೀಮ್, ಲೇಖಕನಾದ ಶೆಬ್ನ, ವೃದ್ಧಯಾಜಕರು ಇವರನ್ನು ಕರಿಸಿ - ನೀವು ಗೋಣೀತಟ್ಟನ್ನು ಕಟ್ಟಿಕೊಂಡು ಆಮೋಚನ ಮಗನೂ ಪ್ರವಾದಿಯೂ ಆಗಿರುವ ಯೆಶಾಯನ ಬಳಿಗೆ ಹೋಗಿ ಹೀಗೆ ಹೇಳಿರಿ ಎಂದು ಆಜ್ಞಾಪಿಸಿದನು.


ಎಲ್ಲರ ತಲೆಯು ಬೋಳು, ಎಲ್ಲರ ಗಡ್ಡವು ವಿಕಾರ, ಎಲ್ಲರ ಕೈಯಲ್ಲಿ ಗಾಯ, ಎಲ್ಲರ ನಡುವಿನ ಮೇಲೆ ಗೋಣಿತಟ್ಟು.


ನರಪುತ್ರನೇ, ನೀನು ಒಂದು ಚದರ ಬಿಲ್ಲೆಯನ್ನು ತೆಗೆದುಕೊಂಡು ನಿನ್ನ ಮುಂದೆ ಇಟ್ಟು ಅದರಲ್ಲಿ ಪಟ್ಟಣದ ನಕ್ಷೆಯನ್ನು ಅಂದರೆ ಯೆರೂಸಲೇವಿುನ ನಕ್ಷೆಯನ್ನು ಬರೆದು


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು