Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೆಶಾಯ 21:1 - ಕನ್ನಡ ಸತ್ಯವೇದವು J.V. (BSI)

1 ಕಡಲಡವಿಯ ವಿಷಯವಾದ ದೈವೋಕ್ತಿ. ದಕ್ಷಿಣಸೀಮೆಯಲ್ಲಿ ಬೀಸುವ ಬಿರುಗಾಳಿಯಂತೆ ಅರಣ್ಯದ ಕಡೆಯ ಭಯಂಕರ ದೇಶದಿಂದ [ದೊಡ್ಡ ಅವಾಂತರ] ಬರುತ್ತದೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

1 ಸಮುದ್ರ ಹಾಗೂ ಅಡವಿಯ ವಿಷಯವಾದ ದೈವೋಕ್ತಿ. ದಕ್ಷಿಣ ಸೀಮೆಯಲ್ಲಿ ಬೀಸುವ ಬಿರುಗಾಳಿಯಂತೆ ಅರಣ್ಯದ ಕಡೆಯ ಭಯಂಕರ ದೇಶದಿಂದ (ದೊಡ್ಡ ಅಪಾಯ) ಬರುತ್ತದೆ ಎಂಬ

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

1 ಕಡಲಡವಿಯ ಕುರಿತು ದೈವೋಕ್ತಿ : ದಕ್ಷಿಣ ಸೀಮೆಯ ನಾಡನ್ನು ಕಸದಂತೆ ಗುಡಿಸುವ ಸುಂಟರಗಾಳಿಯ ಹಾಗೆ, ಅರಣ್ಯದ ಕಡೆಯ ಭಯಂಕರ ನಾಡಿನಿಂದ ಗಂಡಾಂತರ ಬರಲಿದೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

1 ಸಮುದ್ರದ ಮರುಭೂಮಿಗೆ ದುಃಖದ ಸಂದೇಶ: ನೆಗೆವ್ ಮೂಲಕ ಬೀಸುವ ಬಿರುಗಾಳಿಯಂತೆ ಮರುಭೂಮಿಯಿಂದಲೂ ಭಯಂಕರ ದೇಶದಿಂದಲೂ ಒಬ್ಬನು ದಂಡೆತ್ತಿ ಬರುವನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

1 ಸಮುದ್ರತೀರದ ಮರುಭೂಮಿಯ ವಿಷಯವಾದ ಪ್ರವಾದನೆ: ದಕ್ಷಿಣ ಸೀಮೆಯಲ್ಲಿ ಬೀಸುವ ಬಿರುಗಾಳಿ ದಾಟಿ ಹೋಗುವಂತೆ ಆಕ್ರಮಣಕಾರರು ಮರುಭೂಮಿ ಕಡೆಯಿಂದ ಭಯಂಕರವಾದ ದೇಶದಿಂದ ಬರುತ್ತಾರೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೆಶಾಯ 21:1
21 ತಿಳಿವುಗಳ ಹೋಲಿಕೆ  

ಮತ್ತು ಆ ಪ್ರದೇಶವನ್ನು ಜವುಗುನೆಲವನ್ನಾಗಿಯೂ ಮುಳ್ಳುಹಂದಿಗೆ ಸೊತ್ತನ್ನಾಗಿಯೂ ಮಾಡಿ ನಾಶನವೆಂಬ ಬರಲಿನಿಂದ ಗುಡಿಸಿಬಿಡುವೆನು ಎಂದು ಸೇನಾಧೀಶ್ವರನಾದ ಯೆಹೋವನು ಹೇಳಿದ್ದಾನೆ.


ಬಾಬೆಲು ಜನಾಂಗಗಳ ಬೆರಗಿಗೆ ಈಡಾಗಿದೆ! ಸಮುದ್ರವು ಬಾಬೆಲಿನ ಮೇಲೆ ನುಗ್ಗಿದೆ, ಲೆಕ್ಕವಿಲ್ಲದ ತೆರೆಗಳು ಆ ರಾಜ್ಯವನ್ನು ಮುಚ್ಚಿಬಿಟ್ಟಿವೆ.


ಆಮೋಚನ ಮಗನಾದ ಯೆಶಾಯನಿಗೆ ಬಾಬೆಲಿನ ವಿಷಯವಾಗಿ ಕಂಡುಬಂದ ದೈವೋಕ್ತಿ.


ಯೆಹೋವನು ಸ್ವಜನರಿಗಾಗಿ ಅವರ ಮೇಲ್ಗಡೆ ಕಾಣಿಸಿಕೊಳ್ಳುವನು; ಆತನ ಬಾಣವು ಸಿಡಿಲಿನಂತೆ ಹಾರುವದು; ಕರ್ತನಾದ ಯೆಹೋವನು ತುತೂರಿಯನ್ನೂದಿ ದಕ್ಷಿಣಪ್ರಾಂತದ ಬಿರುಗಾಳಿಗಳೊಡನೆ ನುಗ್ಗುವನು.


ದಮಸ್ಕದ ವಿಷಯವಾದ ದೈವೋಕ್ತಿ. ಆಹಾ ದಮಸ್ಕವು ಇನ್ನು ಊರಾಗಿರದೆ ಹಾಳು ದಿಬ್ಬವಾಗುವದು.


ಅಂತ್ಯಕಾಲದಲ್ಲಿ ದಕ್ಷಿಣರಾಜನು ಉತ್ತರರಾಜನ ಮೇಲೆ ಬೀಳಲು ಅವನು ರಥಾಶ್ವಬಲಗಳಿಂದಲೂ ಬಹು ನಾವೆಗಳಿಂದಲೂ ಕೂಡಿ ದಕ್ಷಿಣರಾಜನ ಮೇಲೆ ರಭಸವಾಗಿ ಬಿದ್ದು ನಾಡುನಾಡುಗಳಲ್ಲಿ ನುಗ್ಗಿ ತುಂಬಿತುಳುಕಿ ಹರಡಿಕೊಳ್ಳುವನು.


ಅತಿಭಯಂಕರ ಜನಾಂಗದವರಾದ ಮ್ಲೇಚ್ಫರು ಅದನ್ನು ಕಡಿದುಹಾಕಿ ಹೋಗಿಬಿಟ್ಟಿದ್ದಾರೆ; ಅದರ ರೆಂಬೆಗಳು ಗುಡ್ಡಗಳಲ್ಲಿಯೂ ಎಲ್ಲಾ ಹಳ್ಳಕೊಳ್ಳಗಳಲ್ಲಿಯೂ ಬಿದ್ದಿವೆ; ಅದರ ಕೊಂಬೆಗಳು ದೇಶದ ಎಲ್ಲಾ ತೊರೆಗಳ ಹತ್ತಿರ ಮುರಿದುಹಾಕಲ್ಪಟ್ಟಿವೆ; ಲೋಕದ ಸಮಸ್ತಜನಾಂಗಗಳು ಅದರ ನೆರಳಿನಿಂದ ತೊಲಗಿ ಅದನ್ನು ಬಿಟ್ಟುಹೋಗಿವೆ.


ಆ ದೇಶವನ್ನು ನಾಶಪಡಿಸಲಿಕ್ಕೆ ಅವನನ್ನು ಅತಿಭಯಂಕರ ಜನಾಂಗದವರಾದ ಅವನ ಸೈನಿಕರೊಡನೆ ಬರಮಾಡುವೆನು; ಅವರು ಐಗುಪ್ತದ ಮೇಲೆ ಕತ್ತಿಹಿರಿದು ದೇಶವನ್ನು ಹತರಾದವರಿಂದ ತುಂಬಿಸುವರು.


ಆತನ ಭಂಡಾರದಲ್ಲಿಂದ ಬಿರುಗಾಳಿಯೂ ಉತ್ತರದಿಕ್ಕಿನಿಂದ ಚಳಿಯೂ ಬರುವವು.


ಅವರ ಅಂಬುಗಳು ಮೊನೆಯಾಗಿವೆ, ಬಿಲ್ಲುಗಳು ಬಿಗಿದಿವೆ; ಕುದುರೆಗಳ ಗೊರಸೆಗಳು ಕಲ್ಲಿನಂತಿವೆ; ಚಕ್ರಗಳು ಬಿರುಗಾಳಿಯಂತೆ ರಭಸವಾಗಿವೆ;


ಇಗೋ, ನಾನು ನೋಡಿದೆನು; ಬಡಗಲಿಂದ ಬಿರುಗಾಳಿಯು ಬೀಸಿತು, ಎಡೆಬಿಡದೆ ಝಗಝಗಿಸುವ ಜ್ವಾಲೆಯುಳ್ಳ ಮಹಾಮೇಘವು ಕಾಣಿಸಿತು. ಅದರ ಸುತ್ತಲು ವಿುಂಚು ಹೊಳೆಯಿತು, ಅದರ ನಡುವೆ, ಆ ಜ್ವಾಲೆಯ ಮಧ್ಯೆ, ಸುವರ್ಣಕಾಂತಿಯಂಥ ಕಾಂತಿಯು ಉಂಟಾಯಿತು.


ನೀನೂ ನಿನ್ನ ಎಲ್ಲಾ ಗುವ್ಮಿುಗಳೂ ನಿನ್ನೊಂದಿಗಿರುವ ಬಹುಜನಾಂಗಗಳೂ ಬಿರುಗಾಳಿಯಂತೆ ಹೊರಟುಬರುವಿರಿ; ಕಾರ್ಮುಗಿಲಿನೋಪಾದಿಯಲ್ಲಿ ದೇಶವನ್ನು ಮುಚ್ಚಿಬಿಡುವಿರಿ.


ಇದಕ್ಕಾಗಿ ಸೇನಾಧೀಶ್ವರನಾದ ಯೆಹೋವನ ಕೋಪೋದ್ರೇಕವೂ ತೀಕ್ಷ್ಣರೋಷವೂ ಮಸಗುತ್ತಿರುವ ದಿನದಲ್ಲಿ [ಯೆಹೋವನೆಂಬ] ನಾನು ಆಕಾಶಮಂಡಲವನ್ನು ನಡುಗಿಸಿ ಭೂಲೋಕವನ್ನು ಸ್ಥಳದಿಂದ ಕದಲಿಸುವೆನು.


ಯೆಹೋವನು ಯಾಕೋಬ್ಯರನ್ನು ಕನಿಕರಿಸಿ ಮತ್ತೆ ಇಸ್ರಾಯೇಲ್ಯರನ್ನು ಆರಿಸಿಕೊಂಡು ಸ್ವದೇಶದಲ್ಲಿ ತಂಗಿಸಬೇಕೆಂದಿದ್ದಾನಷ್ಟೆ; ಪರದೇಶಿಗಳು ಅವರೊಂದಿಗೆ ಕೂಡಿ ಬಂದು ಯಾಕೋಬನ ಮನೆತನಕ್ಕೆ ಸೇರಿಕೊಳ್ಳುವರು.


ಉನ್ನತ ಮೇಘಮಂಡಲದ ಮೇಲೆ ಏರಿ ಉನ್ನತೋನ್ನತನಿಗೆ ಸರಿಸಮಾನನಾಗುವೆನು ಅಂದುಕೊಂಡಿದ್ದೆಯಲ್ಲಾ!


ಯುವತಿಯೇ, ಬಾಬೆಲ್‍ಪುರಿಯೇ, ಕೆಳಕ್ಕಿಳಿದು ಧೂಳಿನಲ್ಲಿ ಕೂತುಕೋ, ಕಸ್ದೀಯರ ನಗರಿಯೇ, ಸಿಂಹಾಸನರಹಿತಳಾಗಿ ನೆಲದ ಮೇಲೆ ಕುಕ್ಕರಿಸು! ನೀನು ಇನ್ನು ಕೋಮಲೆ, ಸುಕುಮಾರಿ, ಎಂದು ಎನಿಸಿಕೊಳ್ಳೆ.


ಯೆಹೋವನು ಇಂತೆನ್ನುತ್ತಾನೆ - ಇಗೋ, ನಾನು ಬಾಬೆಲಿನ ಮೇಲೂ ಲೇಬ್‍ಕಾಮೈ ದೇಶದವರ ಮೇಲೂ ನಾಶನದ ಗಾಳಿಯನ್ನು ಬೀಸಮಾಡುವೆನು.


ನಾವು ನಿಂದೆಯನ್ನು ಕೇಳಿ ನಾಚಿಕೆಗೊಂಡೆವು, ಯೆಹೋವನ ಆಲಯದ ಪವಿತ್ರಸ್ಥಾನಗಳನ್ನು ಮ್ಲೇಚ್ಫರು ಪ್ರವೇಶಿಸಿದ್ದರಿಂದ ಅವಮಾನವು ನಮ್ಮ ಮುಖವನ್ನು ಮುಚ್ಚಿಕೊಂಡಿದೆ [ಎಂಬದಾಗಿ ಅಂದುಕೊಳ್ಳುತ್ತೀರೋ?]


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು