Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೆಶಾಯ 21:2 - ಕನ್ನಡ ಸತ್ಯವೇದವು J.V. (BSI)

2 ಘೋರದರ್ಶನವು ನನಗೆ ತಿಳಿಯ ಬಂದಿದೆ; ಬಾಧಕನು ಬಾಧಿಸುತ್ತಿದ್ದಾನೆ; ಸೂರೆಗಾರನು ಸೂರೆಮಾಡುತ್ತಿದ್ದಾನೆ. ಏಲಾಮೇ, ಏಳು! ಮೇದ್ಯವೇ, ಮುತ್ತು! ನಿಮ್ಮ ನಿಟ್ಟುಸುರನ್ನು ನಿಲ್ಲಿಸಿಬಿಟ್ಟಿದ್ದೇನೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

2 ಘೋರದರ್ಶನವು ನನಗೆ ತಿಳಿಯ ಬಂದಿದೆ; ಬಾಧಕನು ಬಾಧಿಸುತ್ತಿದ್ದಾನೆ, ಸೂರೆಗಾರನು ಸೂರೆಮಾಡುತ್ತಿದ್ದಾನೆ. ಏಲಾಮೇ, ಏಳು! ಮೇದ್ಯವೇ, ಮುತ್ತಿಗೆ ಹಾಕು! ನಿಮ್ಮ ನಿಟ್ಟುಸಿರನ್ನೆಲ್ಲಾ ನಿಲ್ಲಿಸಿಬಿಟ್ಟಿದ್ದೇನೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

2 ಘೋರ ದರ್ಶನವೊಂದು ನನಗೆ ಕಂಡುಬಂತು: ದ್ರೋಹಿ ದ್ರೋಹವೆಸಗುತ್ತಿದ್ದಾನೆ. ಕೊಳ್ಳೆಗಾರ ಕೊಳ್ಳೆಹೊಡೆಯುತ್ತಿದ್ದಾನೆ. ಏಲಾಮೇ ಮುನ್ನುಗ್ಗು ! ಮೇದ್ಯವೇ, ಮುತ್ತಿಗೆ ಹಾಕು ! ಬಾಬಿಲೋನಿನಿಂದ ನಿನಗೊದಗಿದ ಗೋಳಾಟವನ್ನು ನಿಲ್ಲಿಸುತ್ತೇನೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

2 ನಡೆಯಲಿರುವ ಒಂದು ಭಯಂಕರ ಘಟನೆಯನ್ನು ನಾನು ದರ್ಶನದಲ್ಲಿ ನೋಡಿದ್ದೇನೆ. ನಿನಗೆ ವಿರುದ್ಧವಾಗಿ ದ್ರೋಹಿಗಳು ಏಳುತ್ತಿದ್ದಾರೆ. ನಿನ್ನ ಧನೈಶ್ವರ್ಯಗಳನ್ನು ಜನರು ಕಿತ್ತುಕೊಳ್ಳುತ್ತಿದ್ದಾರೆ. ಏಲಾಮೇ, ಹೋಗಿ ಆ ಜನರೊಂದಿಗೆ ಹೋರಾಡು. ಮೇದ್ಯವೇ, ಆ ಪಟ್ಟಣವನ್ನು ನಿನ್ನ ಸೈನ್ಯದಿಂದ ಸೋಲಿಸು. ಆ ನಗರದ ಎಲ್ಲಾ ದುಷ್ಟತನವನ್ನು ನಾನು ಕೊನೆಗಾಣಿಸುವೆನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

2 ಘೋರ ದರ್ಶನವು ನನಗೆ ತಿಳಿಯಬಂದಿದೆ: ಬಾಧಕನು ಬಾಧಿಸುತ್ತಿದ್ದಾನೆ. ಸೂರೆಗಾರನು ಸೂರೆಮಾಡುತ್ತಿದ್ದಾನೆ. ಏಲಾಮೇ, ಏಳು! ಮೇದ್ಯವೇ ಮುತ್ತಿಗೆ ಹಾಕು, ಅದರ ನಿಟ್ಟುಸಿರನ್ನೆಲ್ಲಾ ನಿಲ್ಲಿಸಿಬಿಟ್ಟಿದ್ದೇನೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೆಶಾಯ 21:2
44 ತಿಳಿವುಗಳ ಹೋಲಿಕೆ  

ಯೆಹೂದದ ಅರಸನಾದ ಚಿದ್ಕೀಯನ ಆಳಿಕೆಯ ಪ್ರಾರಂಭದಲ್ಲಿ ಯೆಹೋವನು ಏಲಾವಿುನ ವಿಷಯವಾದ ಈ ವಾಕ್ಯವನ್ನು ಪ್ರವಾದಿಯಾದ ಯೆರೆಮೀಯನಿಗೆ ದಯಪಾಲಿಸಿದನು -


ಸೂರೆಯಾಗದಿದ್ದರೂ ಸೂರೆಮಾಡಿದಿ, ಬಾಧೆಪಡದಿದ್ದರೂ ಬಾಧಿಸಿದಿ; ನಿನ್ನ ಗತಿಯನ್ನು ಏನು ಹೇಳಲಿ; ನೀನು ಸೂರೆಮಾಡಿ ಬಿಟ್ಟ ಮೇಲೆ ನೀನೂ ಸೂರೆಯಾಗುವಿ! ಬಾಧಿಸಿ ಬಿಟ್ಟ ಮೇಲೆ ನಿನ್ನನ್ನೂ ಬಾಧಿಸುವರು.


ಸದ್ಧರ್ಮಿಗಳಿಗೆ ಮಾನವಾಗಲೆಂಬ ಗೀತಗಳು ಭೂಮಂಡಲದ ಕಟ್ಟಕಡೆಯಿಂದ ನಮಗೆ ಕೇಳಬಂದಿವೆ. ನಾನಾದರೋ - ಕ್ಷಯಿಸೇ ಕ್ಷಯಿಸುತ್ತೇನೆ, ನನ್ನ ಗತಿಯನ್ನು ಏನು ಹೇಳಲಿ! ಬಾಧಕರು ಬಾಧಿಸುತ್ತಾರೆ, ಹೌದು, ಬಾಧಕರು ಬಾಧಿಸೇ ಬಾಧಿಸುತ್ತಾರೆ ಎಂದುಕೊಂಡೆನು.


ನಿನ್ನ ಜನರನ್ನು ಸಂಕಟಕ್ಕೆ ಗುರಿಪಡಿಸಿದ್ದೀ; ನೀನು ನಮಗೆ ಭ್ರಮಣಮದ್ಯವನ್ನು ಕುಡಿಸಿದ್ದೀ.


ಫೆರೇಸ್ ಅಂದರೆ ನಿನ್ನ ರಾಜ್ಯವು ಭಿನ್ನವಾಗಿ ಮೇದ್ಯಯರಿಗೂ ಪಾರಸಿಯರಿಗೂ ಕೊಡಲ್ಪಟ್ಟಿದೆ ಎಂದು ಅರಿಕೆಮಾಡಿದನು.


ನೀನು ನೋಡಿದ ಎರಡು ಕೊಂಬಿನ ಟಗರು ಮೇದ್ಯಯ ಮತ್ತು ಪಾರಸಿಯ ರಾಜ್ಯ.


ಅವರು ಮಾಡಿದ ಕೆಡುಕೆಲ್ಲಾ ನಿನ್ನ ಚಿತ್ತಕ್ಕೆ ಮುಟ್ಟಲಿ; ನೀನು ನನ್ನ ಎಲ್ಲಾ ದ್ರೋಹಗಳಿಗೆ ಪ್ರತಿಯಾಗಿ ನನಗೆ ಮಾಡಿದಂತೆ ಅವರಿಗೂ ಮಾಡು; ನನ್ನ ನರಳಾಟವು ಬಹಳವಾಗಿದೆ, ನನ್ನ ಎದೆಯು ಕುಂದಿದೆ.


ಬಾಬೆಲು ಆಕಾಶದ ತನಕ ಬೆಳೆದು ಎತ್ತರವಾಗಿಯೂ ಬಲವಾಗಿಯೂ ಇರುವ ತನ್ನ ಕೋಟೆಕೊತ್ತಲಗಳನ್ನು ಭದ್ರಪಡಿಸಿದರೂ ಹಾಳುಮಾಡುವವರು ನನ್ನ ಅಪ್ಪಣೆಯಿಂದ ಅದರ ಮೇಲೆ ಬೀಳುವರು. ಇದು ಯೆಹೋವನ ನುಡಿ.


ನಾನು ಬಾಬೆಲಿನಲ್ಲಿ ಬೇಲ್ ದೇವತೆಯನ್ನು ದಂಡಿಸಿ ಅದು ನುಂಗಿದ್ದನ್ನು ಅದರ ಬಾಯೊಳಗಿಂದ ಕಕ್ಕಿಸುವೆನು; ಪ್ರವಾಹ ಪ್ರವಾಹವಾಗಿ ಬಾಬೆಲಿಗೆ ಬರುತ್ತಿದ್ದ ಸಕಲದೇಶೀಯರು ಇನ್ನು ಮೇಲೆ ಬಾರರು; ಇದಲ್ಲದೆ ಬಾಬೆಲಿನ ಪೌಳಿಗೋಡೆಯು ಬಿದ್ದುಹೋಗುವದು.


ಯೆಹೋವನು ಬಾಬೆಲನ್ನು ಹಾಳುಮಾಡಬೇಕೆಂದು ಉದ್ದೇಶಿಸಿ ಮೇದ್ಯರ ಅರಸರು ಅದನ್ನು ನಾಶಮಾಡುವಂತೆ ಅವರ ಮನಸ್ಸನ್ನು ಪ್ರೇರಿಸಿದ್ದಾನೆ; ಆ ನಾಶನವು ಯೆಹೋವನು ತನ್ನ ಆಲಯವನ್ನು ಕೆಡವಿದವರಿಗೆ ಮಾಡಬೇಕೆಂದಿದ್ದ ಪ್ರತೀಕಾರವೇ; [ಮೇದ್ಯರೇ,] ಬಾಣಗಳನ್ನು ಮಸೆಯಿರಿ, ಸನ್ನದ್ಧರಾಗಿರಿ!


ಅವರ ರಕ್ಷಕನು ಬಲಿಷ್ಠ. ಸೇನಾಧೀಶ್ವರನಾದ ಯೆಹೋವನೆಂಬದೇ ಆತನ ನಾಮಧೇಯ; ಆತನು ಅವರ ವ್ಯಾಜ್ಯವನ್ನು ಜಯಿಸಿ ಲೋಕವನ್ನು ವಿಶ್ರಾಂತಿಗೊಳಿಸಿ ಬಾಬೆಲಿನವರನ್ನು ಕಳವಳಪಡಿಸುವನು.


ಬಿಲ್ಲುಗಾರರೇ, ನೀವೆಲ್ಲರೂ ವ್ಯೂಹಕಟ್ಟಿ ಬಾಬೆಲಿಗೆ ಮುತ್ತಿಗೆ ಹಾಕಿರಿ, ಬಾಣಗಳನ್ನು ವಿುಗಿಸದೆ ಎಸೆಯಿರಿ; ಅದು ಯೆಹೋವನಿಗೆ ಪಾಪಮಾಡಿತಲ್ಲಾ.


ವ್ಯಥೆಪಡುತ್ತಿದ್ದ ನನ್ನನ್ನು ಯೆಹೋವನು ಹೆಚ್ಚೆಚ್ಚಾಗಿ ದುಃಖಪಡಿಸಿದ್ದಾನೆ; ನಾನು ನರಳಿ ನರಳಿ ದಣಿದಿದ್ದೇನೆ, ನನಗೆ ಯಾವ ವಿಶ್ರಾಂತಿಯೂ ದೊರಕದು ಎಂದು ಹೇಳಿದಿಯಲ್ಲಾ.


ನಾನು ಬಳಲಿದವರನ್ನು ತಂಪುಗೊಳಿಸಿ ಕುಂದಿದವರೆಲ್ಲರನ್ನೂ ತೃಪ್ತಿಪಡಿಸುವೆನಷ್ಟೆ.


ಯೆಹೋವನು ಇಂತೆನ್ನುತ್ತಾನೆ - ಎಫ್ರಾಯೀಮು ನನಗೆ ಪ್ರಿಯಪುತ್ರನೋ, ಮುದ್ದುಮಗುವೋ, ಏನೋ? ಅವನ ಹೆಸರೆತ್ತಿದಾಗೆಲ್ಲಾ ಅವನನ್ನು ಜ್ಞಾಪಿಸಿಕೊಳ್ಳುತ್ತಲೇ ಬರುತ್ತೇನೆ; ಇದರಿಂದ ನನ್ನ ಕರುಳು ಅವನಿಗಾಗಿ ಮರುಗುತ್ತದಲ್ಲಾ; ಅವನನ್ನು ಕರುಣಿಸೇ ಕರುಣಿಸುವೆನು.


ನಾನು ನನ್ನ ಜನರ ಮೇಲೆ ರೋಷಗೊಂಡು ಅವರನ್ನು ನಿನ್ನ ಕೈವಶ ಮಾಡಿ ನನ್ನ ಸ್ವಾಸ್ತ್ಯವನ್ನು ಹೊಲೆಗೆಡಿಸಿದೆನು; ನೀನು ಅವರನ್ನು ಹೇಗೂ ಕರುಣಿಸದೆ ಮುದುಕರ ಮೇಲೆಯೂ ಬಹುಭಾರವಾದ ನೊಗವನ್ನು ಹೊರಿಸಿದಿ.


ಯೆಹೋವನು ವಿಮೋಚಿಸಿದವರು ಹಿಂದಿರುಗಿ ಶಾಶ್ವತಸಂತೋಷವೆಂಬ ಕಿರೀಟವನ್ನು ಧರಿಸಿಕೊಂಡು ಉತ್ಸಾಹಧ್ವನಿಯೊಡನೆ ಚೀಯೋನಿಗೆ ಸೇರುವರು; ಹರ್ಷಾನಂದಗಳನ್ನು ಅನುಭವಿಸುವರು, ಮೊರೆಯೂ ಕರಕರೆಯೂ ತೊಲಗಿಹೋಗುವವು.


ಏಲಾಮು ರಥಾಶ್ವಪದಾತಿಗಳಿಂದ ಬತ್ತಳಿಕೆಯನ್ನು ಧರಿಸಿತು; ಕೀರಿನವರು ಗುರಾಣಿಯ ಗೌಸಣಿಗೆಯನ್ನು ತೆರೆದರು.


ಸುಬುದ್ಧಿಯು ದಯಾಸ್ಪದವು; ದ್ರೋಹಿಯ ಮಾರ್ಗವು ನಾಶಕರ.


ಸೆರೆಹೋದವರ ನರಳುವಿಕೆಯು ನಿನ್ನ ಲಕ್ಷ್ಯಕ್ಕೆ ಬರಲಿ; ಸಾಯಲಿರುವವರನ್ನು ನಿನ್ನ ಭುಜಮಹತ್ತಿನಿಂದ ಉಳಿಸು.


ಯೆಹೋವನು - ಕುಗ್ಗಿದವರ ಬಾಧೆಯನ್ನು ನೋಡಿದ್ದೇನೆ; ಗತಿಯಿಲ್ಲದವರ ನರಳುವಿಕೆಯು ನನಗೆ ಕೇಳಿಸಿತು. ಈಗ ಎದ್ದು ಬಂದು ಅವರ ಇಷ್ಟಾರ್ಥವನ್ನು ನೆರವೇರಿಸಿ ಅವರನ್ನು ಸುರಕ್ಷಿತವಾಗಿ ಇರಿಸುವೆನು ಎಂದು ಹೇಳುತ್ತಾನೆ.


ಕೆಟ್ಟವರಿಂದಲೇ ಕೇಡು ಎಂಬದಾಗಿ ಹಿರಿಯರ ಗಾದೆಯುಂಟಷ್ಟೆ; ನಾನು ನಿನಗೆ ವಿರೋಧವಾಗಿ ಕೈಯೆತ್ತುವದಿಲ್ಲ.


ಅದು ಹೋಶೇಯನ ಆಳಿಕೆಯ ಒಂಭತ್ತನೆಯ ವರುಷದಲ್ಲಿ ಅವನ ಸ್ವಾಧೀನವಾಗಲು ಅವನು ಎಲ್ಲಾ ಇಸ್ರಾಯೇಲ್ಯರನ್ನು ಅಶ್ಶೂರ್‍ದೇಶಕ್ಕೆ ಒಯ್ದು ಹಲಹು ಪ್ರಾಂತದಲ್ಲಿಯೂ ಹಾಬೋರ್ ಹೊಳೆಯಿರುವ ಗೋಜಾನ್ ಪ್ರಾಂತದಲ್ಲಿಯೂ ಮೇದ್ಯರ ಪಟ್ಟಣಗಳಲ್ಲಿಯೂ ಇರಿಸಿದನು.


ವೃಥಾದ್ರೋಹಿಗಳಿಗೆ ಆಶಾಭಂಗವಾಗಬೇಕೇ ಹೊರತು ನಿನ್ನನ್ನು ನಿರೀಕ್ಷಿಸಿದವರಿಗೆ ಎಂದಿಗೂ ಆಗಬಾರದು.


ನಿನ್ನ ನುಡಿಯನ್ನು ಕೈಕೊಳ್ಳದ ಧರ್ಮಭ್ರಷ್ಟರನ್ನು ನೋಡಿ ಅಸಹ್ಯಪಟ್ಟಿದ್ದೇನೆ.


ಆಗ ರಾಜನಾದ ಬೇಲ್ಶಚ್ಚರನು ಬಹಳ ಕಳವಳಗೊಂಡು ಕಳೆಗುಂದಿದನು, ಅವನ ಮುಖಂಡರೂ ಬೆಪ್ಪಾದರು.


ಶೇಮನ ಸಂತಾನದವರು - ಏಲಾಮ್, ಅಶ್ಶೂರ್, ಅರ್ಪಕ್ಷದ್, ಲೂದ್, ಅರಾಮ್ ಎಂಬವರೇ.


ಆ ದಿನದಲ್ಲಿ ಕರ್ತನು ತನ್ನ ಜನಶೇಷವನ್ನು ಬಿಡಿಸಿಕೊಳ್ಳುವದಕ್ಕೆ ಎರಡನೆಯ ಸಾರಿ ಕೈಹಾಕಿ ಅಶ್ಶೂರ, ಐಗುಪ್ತ, ಪತ್ರೋಸ್, ಕೂಷ್, ಏಲಾಮ್, ಶಿನಾರ್, ಹಮಾಥ್, ಸಮುದ್ರದ ಕರಾವಳಿ, ಈ ಸ್ಥಳಗಳಲ್ಲಿ ಉಳಿದವರನ್ನು ಬರಮಾಡಿಕೊಳ್ಳುವನು.


ನಿಮ್ಮನ್ನು ವಿಶ್ರಾಂತಿಗೊಳಿಸುವ ದಿನದಲ್ಲಿ ಬಾಬೆಲಿನ ರಾಜನಿಗೆ ವಿರುದ್ಧವಾದ ಈ ಪದ್ಯವನ್ನು ನೀವು ಹೀಗೆ ಎತ್ತಿ ಹೇಳಬೇಕು - ಆಹಾ, ಹಿಂಸಕನು ಕೊನೆಗೊಂಡನು, ರೇಗಾಟವು ನಿಂತಿತು!


ಭೂಲೋಕವೆಲ್ಲಾ ಶಾಂತವಾಗಿ ವಿಶ್ರಾಂತಿಗೊಂಡಿದೆ, ಹರ್ಷಧ್ವನಿಗೈಯುತ್ತಾರೆ.


ಜಿಮ್ರಿಯ ಎಲ್ಲಾ ಅರಸರು, ಏಲಾವಿುನ ಎಲ್ಲಾ ಅರಸರು,


ಸೇನಾಧೀಶ್ವರನಾದ ಯೆಹೋವನು ಇಂತೆನ್ನುತ್ತಾನೆ - ಇಗೋ, ನಾನು ಏಲಾವಿುನ ಮುಖ್ಯ ಬಲವಾದ ಬಿಲ್ಲನ್ನು ಮುರಿದುಬಿಡುವೆನು.


ನಾನು ಕಂಡ ಕನಸಿನಲ್ಲಿ ಏಲಾಮ್ ಸಂಸ್ಥಾನದ ಶೂಷನ್ ಕೋಟೆಯಲ್ಲಿದ್ದೆನು; ಕನಸಿನಲ್ಲಿ ಊಲಾ ಕಾಲುವೆಯ ದಡದ ಮೇಲೆ ನಿಂತುಕೊಂಡಿದ್ದ ಹಾಗೆ ತೋರಿತು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು