Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೆಶಾಯ 21:9 - ಕನ್ನಡ ಸತ್ಯವೇದವು J.V. (BSI)

9 ಇಗೋ, ಸವಾರರು, ಜೋಡಿ ಜೋಡಿಯಾಗಿ ಬರುತ್ತಾರೆ ಎಂದು ಕೂಗಿ ಇನ್ನೂ ಹೇಳಿದ್ದೇನಂದರೆ - ಬಾಬೆಲ್ ಬಿತ್ತು, ಬಿತ್ತು! ಅದರ ದೇವತಾವಿಗ್ರಹಗಳನ್ನು ಒಡೆದು ನೆಲಸಮಮಾಡಿಬಿಟ್ಟರು ಎಂಬದೇ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

9 ಇಗೋ, ಸವಾರರು ಜೋಡಿ ಜೋಡಿಯಾಗಿ ಬರುತ್ತಾರೆ.” ಅವನು ಕೂಗಿ, “ಬಾಬೆಲ್ ಬಿದ್ದು ಹೋಯಿತು, ಬಾಬೆಲ್ ಬಿದ್ದು ಹೋಯಿತು! ಅದರ ದೇವತೆಗಳ ವಿಗ್ರಹಗಳನ್ನು ಒಡೆದು ನೆಲಸಮ ಮಾಡಿಬಿಟ್ಟರು” ಎಂದು ಹೇಳುವನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

9 ಇಗೋ, ಸವಾರರು ಜೋಡಿಜೋಡಿಯಾಗಿ ಬರುತಿಹರು,” ಎಂದು ಕೂಗಿ ಹೇಳುತ್ತಿದ್ದಾನೆ. ಅನಂತರ ಅವನು, “ಬಾಬಿಲೋನ್ ಬಿದ್ದುಹೋಯಿತು. ಅದರ ಪೂಜಾ ವಿಗ್ರಹಗಳೆಲ್ಲ ಒಡೆದು ಬೀದಿಪಾಲಾಗಿವೆ,” ಎಂದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

9 ನೋಡು, ಅವರು ಬರುತ್ತಿದ್ದಾರೆ. ಅಶ್ವದಳಗಳು ಸಾಲುಸಾಲಾಗಿಯೂ ಬರುತ್ತಿವೆ” ಎಂದು ಕೂಗಿಕೊಂಡನು. ಆಗ ಒಬ್ಬ ದೂತನು, “ಬಾಬಿಲೋನಿಗೆ ಸೋಲಾಯಿತು. ಬಾಬಿಲೋನು ನೆಲಕ್ಕೆ ಅಪ್ಪಳಿಸಲ್ಪಟ್ಟಿತು. ಅದರ ದೇವ ದೇವತೆಯರ ವಿಗ್ರಹಗಳೆಲ್ಲಾ ನೆಲದ ಮೇಲೆ ಚೂರುಚೂರಾಗಿ ಬಿದ್ದಿವೆ” ಎಂದು ಹೇಳಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

9 ಇಗೋ, ಎರಡು ಕುದುರೆಗಳನ್ನು ಹೊಂದಿರುವ ರಥದಲ್ಲಿ ಒಬ್ಬ ವ್ಯಕ್ತಿ ಸವಾರಿ ಮಾಡಿ ಬರುತ್ತಿದ್ದಾನೆ ಬಾಬಿಲೋನ್ ಬಿದ್ದುಹೋಯಿತು, ಬಾಬಿಲೋನ್ ಬಿದ್ದುಹೋಯಿತು! ಅದರ ಕೆತ್ತಿದ ದೇವತೆಗಳ ವಿಗ್ರಹಗಳೆಲ್ಲ ಮುರಿದು ನೆಲಸಮವಾಗಿವೆ.”

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೆಶಾಯ 21:9
22 ತಿಳಿವುಗಳ ಹೋಲಿಕೆ  

ಅವನು ಗಟ್ಟಿಯಾದ ಶಬ್ದದಿಂದ ಕೂಗುತ್ತಾ - ಬಿದ್ದಳು, ಬಿದ್ದಳು, ಬಾಬೆಲೆಂಬ ಮಹಾನಗರಿಯು ಬಿದ್ದಳು; ದೆವ್ವಗಳ ವಾಸಸ್ಥಾನವೂ ಅಶುದ್ಧಾತ್ಮಗಳ ಆಶ್ರಯವೂ ಅಪವಿತ್ರವಾಗಿಯೂ ಅಸಹ್ಯವಾಗಿಯೂ ಇರುವ ಸಕಲ ವಿಧವಾದ ಪಕ್ಷಿಗಳ ಆಶ್ರಯವೂ ಆದಳು.


ಅವನ ಹಿಂದೆ ಎರಡನೆಯವನಾದ ಒಬ್ಬ ದೇವದೂತನು ಬಂದು - ಬಿದ್ದಳು, ಬಿದ್ದಳು, ಬಾಬೆಲೆಂಬ ಮಹಾ ನಗರಿಯು ಬಿದ್ದಳು. ಆಕೆಯು ಸಕಲ ಜನಾಂಗಗಳಿಗೆ ತನ್ನ ಅತಿ ಜಾರತ್ವವೆಂಬ ದ್ರಾಕ್ಷಾರಸವನ್ನು ಕುಡಿಸಿದಳು ಎಂದು ಹೇಳಿದನು.


ಬಾಬೆಲ್ ತಟ್ಟನೆ ಬಿದ್ದು ಹಾಳಾಯಿತು! ಅದಕ್ಕಾಗಿ ಅರಿಚಿರಿ; ಅದರ ನೋವನ್ನು ನೀಗಿಸುವದಕ್ಕೆ ಔಷಧವನ್ನು ಸಂಪಾದಿಸಿರಿ, ಗುಣವಾದೀತು.


ನಾನು ಬಾಬೆಲಿನಲ್ಲಿ ಬೇಲ್ ದೇವತೆಯನ್ನು ದಂಡಿಸಿ ಅದು ನುಂಗಿದ್ದನ್ನು ಅದರ ಬಾಯೊಳಗಿಂದ ಕಕ್ಕಿಸುವೆನು; ಪ್ರವಾಹ ಪ್ರವಾಹವಾಗಿ ಬಾಬೆಲಿಗೆ ಬರುತ್ತಿದ್ದ ಸಕಲದೇಶೀಯರು ಇನ್ನು ಮೇಲೆ ಬಾರರು; ಇದಲ್ಲದೆ ಬಾಬೆಲಿನ ಪೌಳಿಗೋಡೆಯು ಬಿದ್ದುಹೋಗುವದು.


ರಾಜ್ಯಗಳಿಗೆ ಶಿರೋರತ್ನವೂ ಕಸ್ದೀಯರ ಮಹಿಮೆಗೆ ಭೂಷಣವೂ ಆದ ಬಾಬೆಲಿಗೆ ದೇವರು ಕೆಡವಿದ ಸೊದೋಮ್ ಗೊಮೋರಗಳ ಗತಿಯು ಸಂಭವಿಸುವದು.


ಆಗ ಬಲಿಷ್ಠನಾದ ಒಬ್ಬ ದೇವದೂತನು ದೊಡ್ಡ ಬೀಸುವ ಕಲ್ಲಿನಂತಿರುವ ಒಂದು ಕಲ್ಲನ್ನು ಎತ್ತಿ ಸಮುದ್ರದೊಳಗೆ ಹಾಕಿ - ಮಹಾ ಪಟ್ಟಣವಾದ ಬಾಬೆಲು ಹೀಗೆಯೇ ದಡದಡನೆ ಕೆಡವಲ್ಪಟ್ಟು ಇನ್ನೆಂದಿಗೂ ಕಾಣಿಸುವದಿಲ್ಲ.


ಯೆಹೋವನು ಬಾಬೆಲಿಗೆ ಬರಮಾಡುವ ವಿಪತ್ತಿನಿಂದ ಆ ಪಟ್ಟಣವೂ ಹೀಗೆಯೇ ಮುಣುಗುವದು, ಮತ್ತೆ ಏಳದು ಎಂದು ಹೇಳು. ಜನಗಳು ಆಯಾಸಗೊಂಡು ದುಡಿದದ್ದು [ಬೆಂಕಿಗೆ ತುತ್ತಾಗುವದು] ಎಂಬ ಮಾತಿನವರೆಗೆ ಯೆರೆಮೀಯನ ಪ್ರವಾದನೆ.


ಹೀಗಿರಲು ಯೆಹೋವನು ಇಂತೆನ್ನುತ್ತಾನೆ - ಇಗೋ, ನಾನು ಬಾಬೆಲಿನ ಬೊಂಬೆಗಳನ್ನು ದಂಡಿಸುವ ದಿನಗಳು ಬರುತ್ತವೆ; ಆಗ ಆ ದೇಶದಲ್ಲೆಲ್ಲಾ ಗಾಯಪಟ್ಟವರು ನರಳಾಡುವರು.


ಇದರಿಂದ ನಾನು ಬಾಬೆಲಿನ ಬೊಂಬೆಗಳನ್ನು ದಂಡಿಸುವ ದಿನಗಳು ಬರುತ್ತವೆ ಎಂದು ತಿಳಿದುಕೊಳ್ಳಿರಿ. ಆ ದೇಶವೆಲ್ಲಾ ನಾಚಿಕೆಪಡುವದು; ಅದರ ಪ್ರಜೆಗಳು ಅದರೊಳಗೆ ಹತರಾಗಿ ಬೀಳುವರು.


ದೇಶದಲ್ಲಿ ಧ್ವಜವೆತ್ತಿರಿ, ರಾಜ್ಯಗಳಲ್ಲೆಲ್ಲಾ ಕೊಂಬೂದಿರಿ, ಜನಾಂಗಗಳನ್ನು ಸನ್ನಾಹಮಾಡಿರಿ, ಬಾಬೆಲಿನ ಮೇಲೆ ಬೀಳಲಿಕ್ಕೆ ಅರರಾಟ್, ವಿುನ್ನಿ, ಅಷ್ಕೆನಜ್ ಎಂಬ ರಾಷ್ಟ್ರಗಳನ್ನು ಕರೆದುಕೊಳ್ಳಿರಿ, ಸೋಲಿಸಲು ಸೇನಾಪತಿಯನ್ನು ನೇವಿುಸಿರಿ, ಅಶ್ವಬಲವನ್ನು ಬಿರುಸಾದ ವಿುಡಿತೆದಂಡಿನೋಪಾದಿಯಲ್ಲಿ ಬರಮಾಡಿರಿ.


ಬಿಲ್ಲನ್ನೂ ಈಟಿಯನ್ನೂ ಹಿಡಿದುಕೊಂಡಿದ್ದಾರೆ, ಅವರು ಕ್ರೂರರು, ನಿಷ್ಕರುಣಿಗಳು; ಅವರ ಧ್ವನಿಯು ಸಮುದ್ರದಂತೆ ಮೊರೆಯುತ್ತದೆ, ಕುದುರೆ ಹತ್ತಿದ್ದಾರೆ; ಬಾಬೆಲ್ ನಗರಿಯೇ, ಆ ಸೈನ್ಯವು ಶೂರನಂತೆ ನಿನ್ನ ಮೇಲೆ ಯುದ್ಧಸನ್ನದ್ಧವಾಗಿದೆ ಎಂದು ಯೆಹೋವನು ಅನ್ನುತ್ತಾನೆ.


ಬೇಗೆಯು ಅವರ ನೀರನ್ನೆಲ್ಲಾ ಹೀರಲಿ! ಅದು ಬತ್ತಿಹೋಗುವದು. ಅದು ಬೊಂಬೆಗಳಿಂದ ತುಂಬಿದ ದೇಶ, ಅದರ ಜನರು ಅಕಟವಿಕಟ ವಿಗ್ರಹಗಳ ಪೂಜೆಯಿಂದ ಮದವೇರಿಸಿಕೊಳ್ಳುತ್ತಾರಷ್ಟೆ;


ಬಿಲ್ಲನ್ನು ಬೊಗ್ಗಿಸಿ ಬಾಣಬಿಡುವವರನ್ನೆಲ್ಲಾ ಬಾಬೆಲಿಗೆ ಕರೆಯಿರಿ; ಅದರ ಸುತ್ತಲು ದಂಡಿಳಿಸಿರಿ; ಅದರ ನಿವಾಸಿಗಳಲ್ಲಿ ಯಾರೂ ತಪ್ಪಿಸಿಕೊಳ್ಳದ ಹಾಗಿರಲಿ; ಅದರ ಕೃತ್ಯಕ್ಕೆ ತಕ್ಕಂತೆ ಮುಯ್ಯಿತೀರಿಸಿರಿ; ಅದು ಮಾಡಿದಂತೆಯೇ ಅದಕ್ಕೆ ಮಾಡಿರಿ; ಅದು ಸೊಕ್ಕೇರಿ ಇಸ್ರಾಯೇಲ್ಯರ ಸದಮಲಸ್ವಾವಿುಯಾದ ಯೆಹೋವನನ್ನು ಅಸಡ್ಡೆಮಾಡಿತಲ್ಲಾ.


ಇಗೋ, ನಾನು ಮಹಾ ಜನಾಂಗಗಳ ಸಮೂಹವನ್ನು ಎಬ್ಬಿಸಿ ಬಡಗಲಿಂದ ಬಾಬೆಲಿನ ಮೇಲೆ ಬೀಳಮಾಡುವೆನು; ಅವು ಬಾಬೆಲಿಗೆ ವಿರುದ್ಧವಾಗಿ ವ್ಯೂಹ ಕಟ್ಟಿ ಅದನ್ನು ಸ್ಥಳದೊಳಗಿಂದ ಕಿತ್ತುಬಿಡುವವು; ಅವುಗಳ ಬಾಣಗಳು ಸುಮ್ಮನೆ ಹಿಂದಿರುಗದ ಯುದ್ಧಪ್ರವೀಣ ಶೂರನಂತಿರುವವು.


ನಿಮ್ಮನ್ನು ವಿಶ್ರಾಂತಿಗೊಳಿಸುವ ದಿನದಲ್ಲಿ ಬಾಬೆಲಿನ ರಾಜನಿಗೆ ವಿರುದ್ಧವಾದ ಈ ಪದ್ಯವನ್ನು ನೀವು ಹೀಗೆ ಎತ್ತಿ ಹೇಳಬೇಕು - ಆಹಾ, ಹಿಂಸಕನು ಕೊನೆಗೊಂಡನು, ರೇಗಾಟವು ನಿಂತಿತು!


ವಿಗ್ರಹಗಳು ಸಂಪೂರ್ಣವಾಗಿ ಹೋಗಿಬಿಡುವವು.


ಅವನು ಜೋಡಿ ಜೋಡಿಯಾಗಿ ಬರುವ ಸವಾರರ ಸಾಲನ್ನೂ ಕತ್ತೆಗಳ ಮತ್ತು ಒಂಟೆಗಳ ಸಾಲುಗಳನ್ನೂ ನೋಡಿದರೆ ಬಹು ಗಮನದಿಂದ ಕಿವಿಗೊಟ್ಟು ಗಮನಿಸಲಿ ಎಂಬದೇ.


ಕಸ್ದೀಯರ ನಗರಿಯೇ, ಮೌನವಾಗಿ ಕೂತುಕೋ, ಕತ್ತಲೊಳಗೆ ಹೊಗು, ನೀನು ಇನ್ನು ರಾಜ್ಯಗಳ ರಾಣಿ ಎನಿಸಿಕೊಳ್ಳೆ.


ಒಂದೇ ದಿನದೊಳಗೆ, ಒಂದು ಕ್ಷಣದಲ್ಲಿ, ಪುತ್ರಶೋಕ, ವೈಧವ್ಯ, ಇವೆರಡೂ ನಿನಗುಂಟಾಗುವವು; ನೀನು ಎಷ್ಟು ಮಾಟಮಾಡಿದರೂ ಎಷ್ಟೇ ಮಂತ್ರತಂತ್ರಗಳನ್ನು ನಡಿಸಿದರೂ ಇವುಗಳನ್ನು ಸಂಪೂರ್ಣವಾಗಿ ಅನುಭವಿಸುವಿ.


ನೀವೆಲ್ಲರು ಕೂಡಿಕೊಂಡು ಕೇಳಿರಿ! ಇವರಲ್ಲಿನ ಯಾವ ದೇವರು ಈ ಸಂಗತಿಗಳನ್ನು ಅರುಹಿದ್ದಾನೆ? ಯೆಹೋವನ ಪ್ರೀತಿಪಾತ್ರನು ಬಾಬೆಲಿನಲ್ಲಿ ಆತನ ಇಷ್ಟವನ್ನು ನೆರವೇರಿಸುವನು, ಕಸ್ದೀಯರ ಮೇಲೆ ಕೈಮಾಡುವನು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು