Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೆಶಾಯ 22:12 - ಕನ್ನಡ ಸತ್ಯವೇದವು J.V. (BSI)

12 ಕಣ್ಣೀರುಸುರಿಸಿ ಅಂಗಲಾಚಿ ತಲೆಬೋಳಿಸಿಕೊಂಡು ಗೋಣಿತಟ್ಟನ್ನು ಸುತ್ತಿಕೊಳ್ಳಿರಿ ಎಂದು ಸೇನಾಧೀಶ್ವರನಾದ ಯೆಹೋವನೆಂಬ ಕರ್ತನು ಆ ದಿನದಲ್ಲಿ ನಿಮಗೆ ಆಜ್ಞಾಪಿಸಿದನು;

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

12 ಸೇನಾಧೀಶ್ವರನಾದ ಯೆಹೋವನೆಂಬ ಕರ್ತನು, ಆ ದಿನದಲ್ಲಿ ನಿಮಗೆ ಆಜ್ಞಾಪಿಸಿದನು. ಕಣ್ಣೀರು ಸುರಿಸಿ, ಗೋಳಾಡಿರಿ, ತಲೆಬೋಳಿಸಿಕೊಳ್ಳಿರಿ, ಗೋಣಿತಟ್ಟನ್ನು ಸುತ್ತಿಕೊಳ್ಳಿರಿ ಎಂಬುದೇ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

12 ಎಂದೇ ಸೇನಾಧೀಶ್ವರ ಸರ್ವೇಶ್ವರ ಸ್ವಾಮಿ ಆ ದಿನದಂದು ನಿಮಗೆ ಆಜ್ಞಾಪಿಸಿ : “ನೀವು ಅತ್ತು ಪ್ರಲಾಪಿಸಬೇಕು, ತಲೆಬೋಳಿಸಿಕೊಂಡು ಗೋಣಿತಟ್ಟನ್ನು ಉಟ್ಟುಕೊಳ್ಳಬೇಕು,” ಎಂದು ಹೇಳಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

12 ನನ್ನ ಒಡೆಯನೂ ಸರ್ವಶಕ್ತನೂ ಆಗಿರುವ ಯೆಹೋವನು ಜನರಿಗೆ, ಅವರ ಸತ್ತುಹೋದ ಸ್ನೇಹಿತರಿಗೋಸ್ಕರ ರೋಧಿಸಿ ದುಃಖಿಸಿರಿ ಎಂದು ಹೇಳುವನು. ಜನರು ತಮ್ಮ ತಲೆಗಳನ್ನು ಬೋಳಿಸಿ ಶೋಕವಸ್ತ್ರಗಳನ್ನು ಧರಿಸುವರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

12 ಆ ದಿವಸದಲ್ಲಿ ಅತ್ತು, ದುಃಖಿಸಿ, ತಲೆ ಬೋಳಿಸಿಕೊಂಡು, ಗೋಣಿತಟ್ಟನ್ನು ಸುತ್ತಿಕೊಳ್ಳಬೇಕೆಂದು ಸರ್ವಶಕ್ತ ದೇವರಾದ ಯೆಹೋವ ದೇವರು ನಿಮ್ಮನ್ನು ಕರೆದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೆಶಾಯ 22:12
31 ತಿಳಿವುಗಳ ಹೋಲಿಕೆ  

ಯೆಹೋವನ ಸೇವಕರಾದ ಯಾಜಕರು ದ್ವಾರಮಂಟಪಕ್ಕೂ ಯಜ್ಞವೇದಿಗೂ ನಡುವೆ ಅಳುತ್ತಾ - ಯೆಹೋವನೇ, ನಿನ್ನ ಜನರನ್ನು ಕರುಣಿಸು; ಅನ್ಯಜನಾಂಗಗಳು ಅವರ ಹೆಸರನ್ನು ಕಟ್ಟುಗಾದೆಯಾಗಿ ಎತ್ತುವ ನಿಂದೆಗೆ ನಿನ್ನ ಸ್ವಾಸ್ತ್ಯದವರನ್ನು ಗುರಿಮಾಡಬೇಡ; ಅವರ ದೇವರು ಎಲ್ಲಿ ಎಂಬ ಮಾತು ಮ್ಲೇಚ್ಫರಲ್ಲಿ ಏಕೆ ಸಲ್ಲಬೇಕು ಎಂದು ವಿಜ್ಞಾಪಿಸಲಿ.


ಯಾಜಕರೇ, ಗೋಣಿತಟ್ಟನ್ನು ಉಟ್ಟುಕೊಂಡು ಮೊರೆಯಿಡಿರಿ; ಯಜ್ಞವೇದಿಯ ಸೇವಕರೇ, ಗೋಳಾಡಿರಿ; ನನ್ನ ದೇವರ ದಾಸರೇ, ಬನ್ನಿರಿ, ಗೋಣಿತಟ್ಟನ್ನು ಸುತ್ತಿಕೊಂಡು ರಾತ್ರಿಯೆಲ್ಲಾ ಬಿದ್ದಿರ್ರಿ; ಧಾನ್ಯಪಾನನೈವೇದ್ಯಗಳು ನಿಮ್ಮ ದೇವರ ಆಲಯಕ್ಕೆ ಒದಗವು.


[ಯೆಹೂದವೇ,] ನಿನ್ನ ಮುದ್ದು ಮಕ್ಕಳಿಗಾಗಿ ಕ್ಷೌರಮಾಡಿಸಿಕೋ, ತಲೆಬೋಳಿಸಿಕೋ; ನಿನ್ನ ಬೋಳುತನವನ್ನು ರಣಹದ್ದಿನ ಹಾಗೆ ವಿಸ್ತರಿಸಿಕೋ; ಅವರು ನಿನ್ನ ಕಡೆಯಿಂದ ಸೆರೆಹೋಗಿದ್ದಾರಲ್ಲಾ!


ಧನಿಕರೇ, ಕೇಳಿರಿ; ನಿಮಗೆ ಬರುವ ದುರ್ದಶೆಗಳಿಗಾಗಿ ಕಣ್ಣೀರಿಡಿರಿ, ಗೋಳಾಡಿರಿ.


ನಿಮ್ಮ ಉತ್ಸವಗಳನ್ನು ದುಃಖಕ್ಕೆ ಮಾರ್ಪಡಿಸುವೆನು, ನಿಮ್ಮ ಗಾಯನಗಳನ್ನೆಲ್ಲಾ ಶೋಕಗೀತಕ್ಕೆ ತಿರುಗಿಸುವೆನು; ಎಲ್ಲರೂ ಸೊಂಟಕ್ಕೆ ಗೋಣಿತಟ್ಟನ್ನು ಸುತ್ತಿಕೊಂಡು ತಲೆಬೋಳಿಸಿಕೊಳ್ಳುವಂತೆ ಮಾಡುವೆನು; ನಿನ್ನ ಪ್ರಲಾಪವು ಏಕಪುತ್ರಶೋಕಕ್ಕೆ ಸಮಾನವಾಗುವದು, ಅದು ಆದ ಮೇಲೂ ವ್ಯಾಕುಲವು ಇದ್ದೇ ಇರುವದು.


ಯೋನನ ಪ್ರಕಟನೆಯು ನಿನೆವೆಯ ಅರಸನಿಗೆ ಮುಟ್ಟಲು ಅವನು ಸಿಂಹಾಸನದಿಂದ ಎದ್ದು ತನ್ನ ನಿಲುವಂಗಿಯನ್ನು ತೆಗೆದುಬಿಟ್ಟು ಗೋಣಿತಟ್ಟನ್ನು ಸುತ್ತಿಕೊಂಡು ಬೂದಿಯಲ್ಲಿ ಕೂತನು.


ಬಯಿತ್ ಮತ್ತು ದೀಬೋನ್ ಊರುಗಳವರು ಅಳುವದಕ್ಕಾಗಿ ಪೂಜಾಸ್ಥಾನಗಳಿಗೆ ಹತ್ತಿದ್ದಾರೆ; ನೆಬೋವಿನಲ್ಲಿಯೂ ಮೇದೆಬದಲ್ಲಿಯೂ ಮೋವಾಬ್ಯರು ಗೋಳಾಡುತ್ತಾರೆ; ಎಲ್ಲರ ತಲೆಯು ಬೋಳು, ಎಲ್ಲರ ಗಡ್ಡವು ವಿಕಾರವಾಗಿ ಕತ್ತರಿಸಿದೆ.


ಒಂದೊಂದು ವಸ್ತುವನ್ನು ಸಮಯಕ್ಕೆ ತಕ್ಕ ಹಾಗೆ ಅಂದವಾಗಿ ನಿರ್ಮಿಸಿದ್ದಾನೆ; ಇದಲ್ಲದೆ ಮನುಷ್ಯರ ಹೃದಯದಲ್ಲಿ ಅನಂತಕಾಲದ ಯೋಚನೆಯನ್ನು ಇಟ್ಟಿದ್ದಾನೆ; ಆದರೂ ದೇವರು ಆದ್ಯಂತವಾಗಿ ನಡಿಸುತ್ತಿರುವ ಕೆಲಸವನ್ನು ಅವರು ಗ್ರಹಿಸಲಾರದಂತೆ ಮಾಡಿದ್ದಾನೆ.


ಅಳುವ ಸಮಯ, ನಗುವ ಸಮಯ, ಗೋಳಾಡುವ ಸಮಯ, ಕುಣಿದಾಡುವ ಸಮಯ,


ಆಗ ಯೋಬನು ಎದ್ದು ಮೇಲಂಗಿಯನ್ನು ಹರಿದುಕೊಂಡು ತಲೆಬೋಳಿಸಿಕೊಂಡು ನೆಲದಲ್ಲಿ ಅಡ್ಡಬಿದ್ದು ನಮಸ್ಕರಿಸಿ


ಐಗುಪ್ತದೇಶದಲ್ಲಿ ನಮ್ಮ ಪಿತೃಗಳಿಗಿದ್ದ ಕಷ್ಟವನ್ನು ನೋಡಿದಿ; ಕೆಂಪುಸಮುದ್ರದ ಬಳಿಯಲ್ಲಿ ಅವರು ಮೊರೆಯಿಟ್ಟಾಗ ನೀನು ಲಾಲಿಸಿದಿ.


ಈ ವರ್ತಮಾನವನ್ನು ಕೇಳಿದೊಡನೆ ನಾನು ಬಟ್ಟೆಮೇಲಂಗಿಗಳನ್ನು ಹರಿದುಕೊಂಡು ತಲೆಯ ಮತ್ತು ಗಡ್ಡದ ಕೂದಲುಗಳನ್ನು ಕಿತ್ತುಕೊಂಡು ಸ್ತಬ್ಧನಾಗಿ ಕೂತುಕೊಂಡೆನು.


ಯೆರೆಮೀಯನು ಯೋಷೀಯನನ್ನು ಕುರಿತು ಶೋಕಗೀತವನ್ನು ರಚಿಸಿದನು. ಎಲ್ಲಾ ಗಾಯಕರೂ ಗಾಯಕಿಯರೂ ಅವನನ್ನು ಇಂದಿನವರೆಗೆ ತಮ್ಮ ಶೋಕಗೀತಗಳಲ್ಲಿ ವರ್ಣಿಸುತ್ತಿರುತ್ತಾರೆ. ಆ ಗೀತಗಳನ್ನು ಹಾಡುವದು ಇಸ್ರಾಯೇಲ್ಯರಲ್ಲಿ ಒಂದು ಪದ್ಧತಿಯಾಯಿತು.


ಮತ್ತು ಸುಗಂಧಕ್ಕೆ ಬದಲಾಗಿ ಕೊಳೆ, ನಡುಪಟ್ಟಿಯಿದ್ದಲ್ಲಿ ಹಗ್ಗ, ಅಂದವಾಗಿ ಸೆಕ್ಕಿದ ಜಡೆಯ ಸ್ಥಾನದಲ್ಲಿ ಬೋಡು, ನಡುವಿನ ಶಲ್ಯಕ್ಕೆ ಪ್ರತಿಯಾಗಿ ಗೋಣೀಪಟ್ಟಿ, ಬೆಡಗಿಗೆ ಬದಲಾಗಿ ಬರೆ, ಇವು ಆಗುವವು.


ದುಷ್ಟರನ್ನು ಕರುಣಿಸಿದರೂ ಅವರು ಧರ್ಮಜ್ಞಾನವನ್ನು ಪಡೆಯರು; ಯೆಹೋವನ ಮಹಿಮೆಯನ್ನು ಲಕ್ಷಿಸದೆ ಯಥಾರ್ಥವಂತರ ದೇಶದಲ್ಲಿಯೂ ಅನ್ಯಾಯವನ್ನಾಚರಿಸುವರು.


ಅಯ್ಯೋ, ಅರೀಯೇಲೇ, ಅರೀಯೇಲೇ, ದಾವೀದನು ಸೈನ್ಯಸಮೇತನಾಗಿ ವಾಸಿಸಿದ ಪಟ್ಟಣವೇ, ನಿನ್ನ ಗತಿಯನ್ನು ಏನು ಹೇಳಲಿ! ಈ ವರುಷಕ್ಕೆ ಮುಂದಿನ ವರುಷವನ್ನು ಸೇರಿಸಿರಿ; ಹಬ್ಬಗಳು ಸುತ್ತಿಬರಲಿ; ಆಮೇಲೆ ನಾನು ಅರೀಯೇಲನ್ನು ಬಾಧಿಸುವೆನು; ಅರಿಚಾಟ ಕಿರಿಚಾಟವಾಗುವದು;


ನಿಶ್ಚಿಂತೆಯವರೇ, ನಡುಗಿರಿ! ನಿರ್ಭೀತರೇ, ಕಳವಳಗೊಳ್ಳಿರಿ! ನಿಮ್ಮ ಬಟ್ಟೆಯನ್ನು ಕಿತ್ತುಹಾಕಿ ಬೆತ್ತಲೆಯಾಗಿ ಸೊಂಟಕ್ಕೆ [ಗೋಣಿತಟ್ಟನ್ನು] ಸುತ್ತಿಕೊಳ್ಳಿರಿ.


ನಾವು ಉಪವಾಸಮಾಡಿದ್ದೇವೆ, ನೀನು ಏಕೆ ಕಟಾಕ್ಷಿಸುವದಿಲ್ಲ; ನಮ್ಮ ಆತ್ಮವನ್ನು ಕುಂದಿಸಿಕೊಂಡಿದ್ದೇವೆ, ನೀನು ಗಮನಿಸದಿರುವದೇಕೆ ಅಂದುಕೊಳ್ಳುತ್ತಾರೆ. ಇಗೋ, ನಿಮ್ಮ ಉಪವಾಸದ ದಿನದಲ್ಲಿಯೂ ನಿಮ್ಮ ನಿತ್ಯದ ಕೆಲಸವನ್ನು ನಡಿಸಿ ನಿಮ್ಮ ಆಳುಗಳನ್ನು ದುಡಿತಕ್ಕೆಳೆಯುತ್ತೀರಿ.


ಇದರ ನಿವಿುತ್ತ ಗೋಣಿತಟ್ಟನ್ನು ಸುತ್ತಿಕೊಳ್ಳಿರಿ, ಹಲುಬಿ ಗೋಳಾಡಿರಿ; ಯೆಹೋವನ ರೋಷಾಗ್ನಿಯು ನಮ್ಮನ್ನು ಬಿಟ್ಟಿಲ್ಲವಲ್ಲಾ.


[ಯೆರೂಸಲೇಮೇ,] ತಲೆಯನ್ನು ಬೋಳಿಸಿಕೊಂಡು ಕೂದಲನ್ನು ಬಿಸಾಟುಬಿಟ್ಟು ಬೋಳುಗುಡ್ಡಗಳಲ್ಲಿ ಶೋಕಗೀತವನ್ನು ಹಾಡು; ಯೆಹೋವನು ತನ್ನ ಕೋಪಕ್ಕೆ ಗುರಿಯಾದ ಈ ವಂಶವನ್ನು ನಿರಾಕರಿಸಿ ತ್ಯಜಿಸಿದ್ದಾನೆ.


ಈ ದೇಶದಲ್ಲಿನ ದೊಡ್ಡವರೂ ಅಲ್ಪರೂ ಸಾಯುವರು; ಅವರನ್ನು ಯಾರೂ ಹೂಣಿಡರು, ಅವರಿಗಾಗಿ ಯಾರೂ ಗೋಳಾಡರು, ಗಾಯ ಮಾಡಿಕೊಳ್ಳರು, ತಲೆಬೋಳಿಸಿಕೊಳ್ಳರು;


ಔತಣದ ಮನೆಯಲ್ಲಿಯೂ ಸೇರಬೇಡ, ಅಲ್ಲಿನವರೊಂದಿಗೆ ಕೂತು ತಿಂದು ಕುಡಿಯಬೇಡ.


ನಿನಗಾಗಿ ತಲೆಬೋಳಿಸಿಕೊಂಡು ಗೋಣೀತಟ್ಟು ಸುತ್ತಿಕೊಂಡು ಮನೋವ್ಯಥೆಯಿಂದ ಗೋಳಾಡಿ ನಿನಗೋಸ್ಕರ ಬಿಕ್ಕಿಬಿಕ್ಕಿ ಅಳುವರು.


ರಾಜನಾದ ಬೇಲ್ಶಚ್ಚರನು ತನ್ನ ರಾಜ್ಯದ ಮುಖಂಡರಲ್ಲಿ ಸಾವಿರ ಮಂದಿಗೆ ಔತಣವನ್ನು ಮಾಡಿಸಿ ಆ ಸಾವಿರ ಜನರ ಕಣ್ಣೆದುರಿಗೆ ತಾನೂ ದ್ರಾಕ್ಷಾರಸವನ್ನು ಕುಡಿದನು.


ಇಸ್ರಾಯೇಲೇ, ಜನಾಂಗಗಳಂತೆ ವಿುತಿಮೀರಿ ಉಲ್ಲಾಸಿಸಬೇಡ; ನೀನು ನಿನ್ನ ದೇವರನ್ನು ಬಿಟ್ಟು ಸೂಳೆತನ ನಡಿಸಿದ್ದೀ; ಎಲ್ಲಾ ಕಣಗಳಲ್ಲಿನ ಫಲವನ್ನು ಅದರ ಪ್ರತಿಫಲವನ್ನಾಗಿ ಆಶಿಸಿದ್ದೀ.


[ದೇಶವೇ,] ತನ್ನ ಯೌವನಕಾಲದ ಪತಿಯ ವಿಯೋಗದುಃಖದಿಂದ ಗೋಣಿತಟ್ಟನ್ನುಟ್ಟುಕೊಂಡು ಗೋಳಾಡುವ ಯುವತಿಯಂತೆ ಗೋಳಾಡು.


ಆಗ ಹಿಜ್ಕೀಯನು ಬಟ್ಟೆಗಳನ್ನು ಹರಿದುಕೊಂಡು ಗೋಣೀತಟ್ಟನ್ನು ಕಟ್ಟಿಕೊಂಡು ಯೆಹೋವನ ಆಲಯಕ್ಕೆ ಹೋದನು.


ಇದಲ್ಲದೆ ಅವನು ರಾಜಗೃಹಾಧಿಪತಿಯಾದ ಎಲ್ಯಾಕೀಮ್, ಲೇಖಕನಾದ ಶೆಬ್ನ, ವೃದ್ಧಯಾಜಕರು ಇವರನ್ನು ಕರಿಸಿ - ನೀವು ಗೋಣೀತಟ್ಟನ್ನು ಕಟ್ಟಿಕೊಂಡು ಆಮೋಚನ ಮಗನೂ ಪ್ರವಾದಿಯೂ ಆಗಿರುವ ಯೆಶಾಯನ ಬಳಿಗೆ ಹೋಗಿ ಹೀಗೆ ಹೇಳಿರಿ ಎಂದು ಆಜ್ಞಾಪಿಸಿದನು.


ಯೆಹೋವನು ಇಂತೆನ್ನುತ್ತಾನೆ - ಈಗಲಾದರೋ ನೀವು ಮನಃಪೂರ್ವಕವಾಗಿ ನನ್ನ ಕಡೆಗೆ ತಿರುಗಿಕೊಂಡು ಉಪವಾಸಮಾಡಿರಿ, ಅಳಿರಿ, ಗೋಳಾಡಿರಿ;


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು