Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೆಶಾಯ 22:23 - ಕನ್ನಡ ಸತ್ಯವೇದವು J.V. (BSI)

23 ಗಟ್ಟಿಯಾದ ಸ್ಥಳದಲ್ಲಿ ಮೊಳೆಯನ್ನು ಹೊಡೆದ ಹಾಗೆ ಅವನನ್ನು ಭದ್ರಪಡಿಸುವೆನು. ಅವನು ತನ್ನ ವಂಶದವರಿಗೆ ಗೌರವಪೀಠವಾಗಿರುವನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

23 ಗಟ್ಟಿಯಾದ ಸ್ಥಳದಲ್ಲಿ ಮೊಳೆಯನ್ನು ಹೊಡೆದ ಹಾಗೆ ಅವನನ್ನು ಭದ್ರಪಡಿಸುವೆನು. ಅವನು ತನ್ನ ವಂಶದವರಿಗೆ ವೈಭವವುಳ್ಳ ಸಿಂಹಾಸನವಾಗಿರುವನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

23 ವಸ್ತುಗಳನ್ನು ತಗುಲಿಹಾಕುವ ಮೊಳೆಯಂತೆ ಗಟ್ಟಿಯಾದ ಸ್ಥಳದಲ್ಲಿ ಅವನನ್ನು ಬಿಗಿಯಾಗಿ ನಿಲ್ಲಿಸುವೆನು. ಅಲ್ಲದೆ, ಅವನು ತನ್ನ ವಂಶದವರಿಗೆ ಗೌರವಪೀಠವಾಗಿರುವನು.”

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

23 ಒಂದು ಗಟ್ಟಿಯಾದ ಹಲಗೆಯಲ್ಲಿ ಮೊಳೆಯನ್ನು ಹೊಡೆದು ಗಟ್ಟಿಯಾಗಿರಿಸುವಂತೆ ಅವನನ್ನು ನಾನು ಬಲಪಡಿಸುವೆನು. ಆ ಸೇವಕನು ತನ್ನ ಕುಟುಂಬದವರಿಗೆ ಗೌರವಪೀಠದಂತಿರುವನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

23 ಭದ್ರವಾದ ಸ್ಥಳದಲ್ಲಿ ಮೊಳೆಯನ್ನು ಹೊಡೆದ ಹಾಗೆ ಅವನನ್ನು ಭದ್ರಪಡಿಸುವೆನು. ಅವನು ತನ್ನ ತಂದೆಯ ಮನೆಗೆ ವೈಭವವುಳ್ಳ ಸಿಂಹಾಸನವಾಗಿರುವನು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೆಶಾಯ 22:23
12 ತಿಳಿವುಗಳ ಹೋಲಿಕೆ  

ನೀತಿವಂತರಿಂದ ತನ್ನ ಕಟಾಕ್ಷವನ್ನು ತಿರುಗಿಸದೆ ಅರಸರೊಂದಿಗೆ ಸಿಂಹಾಸನದ ಮೇಲೆ ಶಾಶ್ವತವಾಗಿ ಕೂತುಕೊಳ್ಳುವ ಉನ್ನತಪದವಿಗೆ ಅವರನ್ನು ತರುವನು.


ಆದರೂ ನಮ್ಮ ದೇವರಾದ ಯೆಹೋವನು ಒಂದು ಕ್ಷಣ ನಮಗೆ ಪ್ರಸನ್ನನಾಗಿ ನಮ್ಮಲ್ಲಿ ಸ್ವಲ್ಪ ಜನರನ್ನು ರಕ್ಷಣೆಗಾಗಿ ಉಳಿಸಿ ತನ್ನ ಪರಿಶುದ್ಧಸ್ಥಳದಲ್ಲಿ ಮೊಳೆಯಂತೆ ನಮ್ಮನ್ನು ನೆಲೆಗೊಳಿಸಿ ನಮ್ಮ ಕಣ್ಣುಗಳನ್ನು ಕಳೆಗೊಳಿಸಿ ನಮ್ಮ ದಾಸತ್ವದಲ್ಲಿ ನಮಗೆ ಸ್ವಲ್ಪಮಟ್ಟಿಗೆ ಉಜ್ಜೀವವನ್ನು ಅನುಗ್ರಹಿಸಿದ್ದಾನೆ.


ಆ ವಂಶದಿಂದ ಮೂಲೆಗಲ್ಲು, ಆ ವಂಶದಿಂದ ಮೊಳೆ, ಆ ವಂಶದಿಂದ ಯುದ್ಧದ ಬಿಲ್ಲು, ಅಂತು ಆ ವಂಶದೊಳಗಿಂದ ಸಕಲ ಅಧಿಕಾರಿಗಳು ಉಂಟಾಗುವರು.


ಆತನು ದೀನನನ್ನು ಧೂಳಿಯಿಂದ ಎತ್ತಿ ದರಿದ್ರನನ್ನು ತಿಪ್ಪೆಯಿಂದ ಎಬ್ಬಿಸಿ ಪ್ರಭುಗಳೊಂದಿಗೆ ಕುಳ್ಳಿರಿಸಿ ಅವನಿಗೆ ಮಹಿಮಾಸನವನ್ನು ಬಾಧ್ಯತೆಯಾಗಿ ಅನುಗ್ರಹಿಸುವವನಾಗಿದ್ದಾನೆ. ಭೂವಿುಯ ಆಧಾರಸ್ತಂಭಗಳು ಯೆಹೋವನವೇ; ಆತನೇ ಅವುಗಳ ಮೇಲೆ ಭೂಮಂಡಲವನ್ನು ಸ್ಥಾಪಿಸಿದ್ದಾನೆ.


ನಾನು ಜಯಹೊಂದಿ ನನ್ನ ತಂದೆಯೊಡನೆ ಸಿಂಹಾಸನದಲ್ಲಿ ಕೂತುಕೊಂಡೆನು; ಹಾಗೆಯೇ ಜಯಹೊಂದುವವನನ್ನು ನನ್ನೊಡನೆ ಸಿಂಹಾಸನದಲ್ಲಿ ಕೂತುಕೊಳ್ಳುವಂತೆ ಮಾಡುವೆನು.


ಜ್ಞಾನಿಗಳ ಮಾತುಗಳು ಮುಳ್ಳುಗೋಲುಗಳು; ಸಂಗ್ರಹವಾಕ್ಯಗಳು ಬಿಗಿಯಾಗಿ ಬಡಿದ ಮೊಳೆಗಳು; ಒಬ್ಬನೇ ಕರ್ತನಿಂದ ಬಂದಿವೆ.


ಯೆಹೂದ್ಯನಾದ ಆ ಮೊರ್ದೆಕೈಯಾದರೋ ರಾಜ್ಯದಲ್ಲಿ ಅರಸನಾದ ಅಹಷ್ವೇರೋಷನಿಗೆ ದ್ವಿತೀಯಸ್ಥಾನದವನೂ ಯೆಹೂದ್ಯರಲ್ಲಿ ಸನ್ಮಾನಿತನೂ ತನ್ನ ಬಂಧುಜನ ಸಮೂಹಕ್ಕೆ ಪ್ರೀತಿಪಾತ್ರನೂ ಸ್ವಜನರ ಹಿತಚಿಂತಕನೂ ಸ್ವಕುಲದವರೆಲ್ಲರಿಗೋಸ್ಕರ ಸುಖಪ್ರಾರ್ಥನಾಪರನೂ ಆಗಿದ್ದನು.


ನೀನು ಈಗ ಸುಮ್ಮನಿದ್ದು ಬಿಟ್ಟರೆ ಬೇರೆ ಕಡೆಯಿಂದ ಯೆಹೂದ್ಯರಿಗೆ ಸಹಾಯವೂ ವಿಮೋಚನೆಯೂ ಉಂಟಾದಾವು; ನೀನಾದರೋ ನಿನ್ನ ತಂದೆಯ ಮನೆಯವರೊಡನೆ ನಾಶವಾಗುವಿ. ಇದಲ್ಲದೆ ನೀನು ಇಂಥ ಸಂದರ್ಭಕ್ಕಾಗಿಯೇ ಪಟ್ಟಕ್ಕೆ ಬಂದಿರಬಹುದು, ಯಾರು ಬಲ್ಲರು ಎಂದು ಹೇಳಿ ಕಳುಹಿಸಿದನು.


ಬಟ್ಟಲು ಮೊದಲುಗೊಂಡು ಕೊಡದ ತನಕ ಸಕಲ ಸಾಧಾರಣಪಾತ್ರೆಗಳನ್ನು ಅಂದರೆ ತಂದೆಯ ಸಂತಾನ ಸಂತತಿಯಾದ ಅವನ ವಂಶದ ಭಾರವನ್ನೆಲ್ಲಾ ಅವನಿಗೆ ತಗಲುಹಾಕುವರು.


ಸೇನಾಧೀಶ್ವರನಾದ ಯೆಹೋವನು ಹೇಳುವದೇನಂದರೆ - ಗಟ್ಟಿಯಾದ ಸ್ಥಳದಲ್ಲಿ ಹೊಡೆದ ಮೊಳೆಯು ಆ ದಿನದಲ್ಲಿ ಕುಸಿದು ಹೋಗುವದು; ಅದು ಬಡಿಯಲ್ಪಟ್ಟು ಬೀಳಲಾಗಿ ಅದಕ್ಕೆ ತಗಲುಹಾಕಿದ ಭಾರವೂ ನಾಶವಾಗುವದು. ಇದೇ ಯೆಹೋವನಾದ ನನ್ನ ನುಡಿ ಎಂಬದೇ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು