Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೆಶಾಯ 23:1 - ಕನ್ನಡ ಸತ್ಯವೇದವು J.V. (BSI)

1 ತೂರಿನ ವಿಷಯವಾದ ದೈವೋಕ್ತಿ. ತಾರ್ಷೀಷಿನ ಹಡಗುಗಳೇ, ಅಂಗಲಾಚಿರಿ! [ನಿಮ್ಮ ಆಶ್ರಯವು] ಹಾಳಾಯಿತು, ನಿಮಗೆ ನೆಲೆಯಿಲ್ಲ, ರೇವಿಲ್ಲ. (ಕಿತ್ತೀಮ್ ದೇಶೀಯರಿಂದ ಅವುಗಳಿಗೆ ತಿಳಿಯಿತು).

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

1 ತೂರಿನ ವಿಷಯವಾದ ದೈವೋಕ್ತಿ. ತಾರ್ಷೀಷಿನ ಹಡಗುಗಳೇ, ಗೋಳಾಡಿರಿ! ಏಕೆಂದರೆ ನಿಮ್ಮ ಆಶ್ರಯವು ಹಾಳಾಯಿತು, ನಿಮಗೆ ನೆಲೆಯಿಲ್ಲ, ರೇವಿಲ್ಲ. ಕಿತ್ತೀಮ್ ದೇಶದವರಿಂದ ಅವರಿಗೆ ತಿಳಿಯಿತು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

1 ಟೈರ್ ನಗರವನ್ನು ಕುರಿತ ದೈವೋಕ್ತಿ : “ಗೋಳಾಡಿರಿ ತಾರ್ಷಿಷಿನ ನಾವಿಕರೆಲ್ಲ, ಹಾಳಾಗಿವೆ ನಿಮ್ಮ ಬಂದರುಗಳೆಲ್ಲ; ಹಡಗುಗಳಿಗೆ ರೇವಿಲ್ಲ, ನೆಲೆಯಿಲ್ಲ, ಸೈಪ್ರಸ್ಸಿನಿಂದ ಬಂದ ನಾವಿಕರಿಂದ ಈ ಸುದ್ದಿ ನಿಮಗೆ ತಿಳಿಯುವುದು.”

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

1 ತೂರಿನ ವಿಷಯವಾಗಿ ದುಃಖಕರವಾದ ಸಂದೇಶ: “ತಾರ್ಷೀಷಿನ ಹಡಗುಗಳೇ, ದುಃಖಿಸಿರಿ! ನಿಮ್ಮ ರೇವು ಕೆಡವಲ್ಪಟ್ಟಿದೆ.” ಕಿತ್ತಿಮಿನಿಂದ ಹೊರಟ ಹಡಗುಗಳಿಗೆ ಈ ವಾರ್ತೆಯು ತಲುಪಿತು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

1 ಟೈರಿನ ವಿಷಯವಾದ ಪ್ರವಾದನೆ: ತಾರ್ಷೀಷಿನ ಹಡಗುಗಳೇ, ಗೋಳಾಡಿರಿ, ಏಕೆಂದರೆ ಟೈರ್ ಹಾಳಾಗಿರುವುದರಿಂದ ನಿಮಗೆ ಮನೆಯಿಲ್ಲ ಮತ್ತು ಬಂದರವೂ ಇಲ್ಲ. ಇದು ಕಿತ್ತೀಮ್ ದೇಶದವರಿಂದ ಅವರಿಗೆ ತಿಳಿಯಿತು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೆಶಾಯ 23:1
32 ತಿಳಿವುಗಳ ಹೋಲಿಕೆ  

ಯಾವಾನನ ಸಂತಾನದವರು - ಎಲೀಷಾ, ತಾರ್ಷೀಷ್, ಕಿತ್ತೀಮ್, ದೋದಾ ಎಂಬ ಸ್ಥಳಗಳವರು; ಇವರು ಸಮುದ್ರದ ರೇವುಗಳಲ್ಲಿ ಹರಡಿಕೊಂಡರು.


ಏಕಂದರೆ ಆ ದಿನದಲ್ಲಿ ಫಿಲಿಷ್ಟಿಯರೆಲ್ಲರೂ ಸೂರೆಯಾಗುವರು, ತೂರಿನ ಮತ್ತು ಚೀದೋನಿನ ಸಹಾಯಕರಲ್ಲಿ ಕಳೆದುಳಿದವರೆಲ್ಲಾ ನಿರ್ಮೂಲವಾಗುವರು; ಕಫ್ತೋರ್ ದ್ವೀಪದವರಿಂದ ಉತ್ಪನ್ನರಾದ ಫಿಲಿಷ್ಟಿಯರನ್ನು ಯೆಹೋವನೇ ಸೂರೆಮಾಡುವನು.


ಅಮ್ಮೋನ್ಯರು, ತೂರಿನ ಎಲ್ಲಾ ಅರಸರು, ಚೀದೋನಿನ ಎಲ್ಲಾ ಅರಸರು,


ಎಲ್ಲಾ ದೊಡ್ಡ ದೊಡ್ಡ ಹಡಗುಗಳು, ಅಂತೂ ನೋಡತಕ್ಕ ಮನೋಹರವಾದ ಪ್ರತಿಯೊಂದು ವಸ್ತುವಿಗೂ ಆ ದಿನವು ತಪ್ಪದೆ ಬರುವದು.


ಕಿತ್ತೀಮ್ ದ್ವೀಪಗಳಿಗೆ ಹೋಗಿ ನೋಡಿರಿ, ಕೇದಾರಿಗೆ ಕಳುಹಿಸಿ ವಿಚಾರಮಾಡಿರಿ; ಇಂಥಾ ಕಾರ್ಯವು ಎಲ್ಲಿಯಾದರೂ ನಡೆಯಿತೇ ಎಂದು ಚೆನ್ನಾಗಿ ಆಲೋಚಿಸಿರಿ.


ಹಿಂಸೆಗೆ ಈಡಾದ ಕನ್ಯೆಯಂತಿರುವ ಚೀದೋನ್ ನಗರಿಯೇ, ಇನ್ನು ಮೇಲೆ ನಿನಗೆ ಹರ್ಷವೇ ಇಲ್ಲ; ಎದ್ದು ಕಿತ್ತೀವಿುಗೆ ಸಮುದ್ರದ ಮೇಲೆ ಹಾದುಹೋಗು, ಅಲ್ಲಿಯೂ ನಿನಗೆ ವಿಶ್ರಾಂತಿಯಿರದು ಎಂದು ಹೇಳಿದ್ದಾನೆ.


ಇದಲ್ಲದೆ ಯೆಹೋಷಾಫಾಟನು ಓಫೀರಿನಿಂದ ಬಂಗಾರ ತರುವದಕ್ಕಾಗಿ ತಾರ್ಷೀಷ್ ಹಡಗುಗಳನ್ನು ಮಾಡಿಸಿದನು.


ಹೀರಾಮನ ನಾವೆಗಳ ಜೊತೆಯಲ್ಲಿ ಸೊಲೊಮೋನನ ತಾರ್ಷೀಷ್ ಹಡಗುಗಳು ಹೋಗಿ ಮೂರು ವರುಷಕ್ಕೊಮ್ಮೆ ಬಂಗಾರ, ಬೆಳ್ಳಿ, ದಂತ, ಕಪಿ, ನವಿಲು ಇವುಗಳನ್ನು ತರುತ್ತಿದ್ದವು.


ಅವನಿಗೆ ವಿರುದ್ಧವಾಗಿ ಕಿತ್ತೀವಿುನ ಹಡಗುಗಳು ಬರಲು ಅವನು ಎದೆಗುಂದಿ ಹಿಂದಿರುಗಿ ಪರಿಶುದ್ಧ ನಿಬಂಧನೆಯ ಮೇಲೆ ಮತ್ಸರಗೊಂಡು ಮಾಡುವಷ್ಟು ಮಾಡುವನು; ಅವನು ಸ್ವದೇಶಕ್ಕೆ ಸೇರಿ ಪರಿಶುದ್ಧ ನಿಬಂಧನೆ ತೊರೆದವರನ್ನು ಕಟಾಕ್ಷಿಸುವನು.


[ಯೆಹೋಯಾಖೀನನು ಸೆರೆಯಾದ] ಹನ್ನೊಂದನೆಯ ವರುಷದ [ಒಂದಾನೊಂದು] ತಿಂಗಳಿನ ಮೊದಲನೆಯ ದಿನದಲ್ಲಿ ಯೆಹೋವನು ಈ ವಾಕ್ಯವನ್ನು ನನಗೆ ದಯಪಾಲಿಸಿದನು -


ಇಸ್ರಾಯೇಲ್ಯರ ದೇವರಾದ ಯೆಹೋವನು ನನಗೆ - ರೋಷರೂಪಮದ್ಯದ ಈ ಪಾತ್ರೆಯನ್ನು ನೀನು ನನ್ನ ಕೈಯಿಂದ ತೆಗೆದುಕೊಂಡು ಯಾವ ಜನಾಂಗಗಳ ಬಳಿಗೆ ನಿನ್ನನ್ನು ಕಳುಹಿಸುತ್ತೇನೋ ಆ ಸಕಲ ಜನಾಂಗಗಳು ಇದರಲ್ಲಿ ಕುಡಿಯುವಂತೆ ಮಾಡು.


ಯೆಹೋವನು ನಿನ್ನನ್ನು ವೈಭವಪಡಿಸಿರುವದನ್ನು ಕೇಳಿ ತಾರ್ಷೀಷಿನ ಹಡಗುಗಳು ನಿನ್ನ ದೇವರಾದ ಯೆಹೋವನ ನಾಮಮಹತ್ತಿನ ವಿಧಿಯೂ ಇಸ್ರಾಯೇಲಿನ ಸದಮಲಸ್ವಾವಿುಯ ಸನ್ನಿಧಿಯೂ ಆದ ಸ್ಥಾನಕ್ಕೆ ನಿನ್ನ ಮಕ್ಕಳನ್ನು ಅವರ ಬೆಳ್ಳಿ ಬಂಗಾರಗಳ ಸಮೇತ ದೂರದಿಂದ ತರುವದರಲ್ಲಿ ಮುಂದಾಗುತ್ತಿವೆ.


ಹಾಳುಪಟ್ಟಣವು ಬಿದ್ದುಹೋಗಿದೆ, ಯಾರೂ ಹೊಗದಂತೆ ಪ್ರತಿಯೊಂದು ಮನೆಯೂ ಮುಚ್ಚಿದೆ.


ಪ್ರಲಾಪವು ಮೋವಾಬಿನ ಎಲ್ಲೆಗಳ ತನಕ ಹಬ್ಬಿದೆ, ಅದರ ಅರಚಾಟವು ಎಗ್ಲಯಿವಿುನವರೆಗೂ ಬೆಯೇರ್ ಏಲೀವಿುನ ಪರ್ಯಂತವೂ ವ್ಯಾಪಿಸಿದೆ.


ದೇವರೇ, ನೀನು ಬಿರುಗಾಳಿಯಿಂದ ತಾರ್ಷಿಷ್ ದೇಶದ ದೊಡ್ಡ ದೊಡ್ಡ ಹಡಗುಗಳನ್ನು ಒಡೆದುಬಿಟ್ಟಂತಾಯಿತು.


ಅರಸನ ಹಡಗುಗಳು ಹೂರಾಮನ ನಾವಿಕರ ಜೊತೆಯಲ್ಲಿ ತಾರ್ಷೀಷಿಗೆ ಹೋಗಿ ಮೂರು ವರುಷಕ್ಕೊಮ್ಮೆ ಬಂಗಾರ ಬೆಳ್ಳಿ ದಂತ ಕಪಿ ನವಿಲು ಇವುಗಳನ್ನು ತರುತ್ತಿದ್ದವು.


ದಾವೀದನ ಜೀವಮಾನದಲ್ಲೆಲ್ಲಾ ಅವನ ವಿುತ್ರನಾಗಿದ್ದ ತೂರಿನ ಅರಸನಾದ ಹೀರಾಮನು ಸೊಲೊಮೋನನು ತಂದೆಗೆ ಬದಲಾಗಿ ಅಭಿಷೇಕಿಸಲ್ಪಟ್ಟನೆಂದು ಕೇಳಿದಾಗ ಅವನ ಬಳಿಗೆ ತನ್ನ ಸೇವಕರನ್ನು ಕಳುಹಿಸಿದನು.


ಅಲ್ಲಿಂದ ಅದು ತಿರುಗಿಕೊಂಡು ರಾಮಾ, ತೂರ್ ಕೋಟೆ, ಹೋಸಾ ಇವುಗಳ ಮೇಲೆ ಅಕ್ಜೀಬ್ ಪ್ರಾಂತಕ್ಕೆ ಹೋಗಿ ಸಮುದ್ರತೀರದಲ್ಲಿ ಮುಗಿಯುತ್ತದೆ.


ಕಿತ್ತೀಮೆಂಬ ಸ್ಥಳದಿಂದ ಜನರು ಹಡಗುಗಳಲ್ಲಿ ಬಂದು ಅಶ್ಯೂರ್ಯರನ್ನೂ ಏಬೆರ್ ಜನರನ್ನೂ ಸೋಲಿಸುವರು; ಅವರಿಗೂ ನಾಶವುಂಟಾಗುವದು ಅಂದನು.


ಅಯ್ಯೋ ಖೊರಾಜಿನೇ, ಅಯ್ಯೋ ಬೇತ್ಸಾಯಿದವೇ, ನಿಮ್ಮಲ್ಲಿ ನಡೆದ ಮಹತ್ಕಾರ್ಯಗಳು ತೂರ್ ಮತ್ತು ಸೀದೋನ್ ಪಟ್ಟಣಗಳಲ್ಲಿ ನಡೆದಿದ್ದರೆ ಅಲ್ಲಿಯವರು ಆಗಲೇ ಗೋಣೀತಟ್ಟು ಹೊದ್ದುಕೊಂಡು ಬೂದಿಯಲ್ಲಿ ಕೂತುಕೊಂಡು ದೇವರ ಕಡೆಗೆ ತಿರುಗಿಕೊಳ್ಳುತ್ತಿದ್ದರು.


ತಾರ್ಷೀಷಿಗೆ ಸಮುದ್ರದ ಮೇಲೆ ಹಾದುಹೋಗಿರಿ, ಕರಾವಳಿಯ ನಿವಾಸಿಗಳೇ, ಅಂಗಲಾಚಿರಿ!


ನರಪುತ್ರನೇ, ತೂರು ಯೆರೂಸಲೇವಿುನ ವಿಷಯವಾಗಿ - ಅಹಹ, ಜನಾಂಗಗಳಿಗೆ ಅಡ್ಡಿಯಾಗಿದ್ದ ಬಾಗಿಲು ಮುರಿದುಹೋಗಿದೆ, ನನ್ನ ಕಡೆಗೆ ತೆರೆದುಬಿಟ್ಟಿದೆ ; ಯೆರೂಸಲೇಮು ಹಾಳಾದ ಕಾರಣ ನಾನು ತುಂಬಿಕೊಳ್ಳುವೆನು ಅಂದುಕೊಂಡದರಿಂದ


ಬಾಷಾನಿನ ಅಲ್ಲೋನ್ ಮರದಿಂದ ನಿನ್ನ ಹುಟ್ಟುಗಳನ್ನು ರೂಪಿಸಿ ಕಿತ್ತೀಮ್ ದ್ವೀಪದ ತಿಲಕದ ಹಲಿಗೆಯಿಂದ ನಿನ್ನ ಮೇಲ್ಮಾಳಿಗೆಯನ್ನು ಕಟ್ಟಿ ದಂತದಿಂದ ಕೆತ್ತಿದರು.


ನಿನ್ನ ನಿವಿುತ್ತ ದನಿಗೈದು ದುಃಖದಿಂದರಚಿ ತಲೆಗೆ ದೂಳೆರಚಿಕೊಂಡು ಬೂದಿಯಲ್ಲಿ ಬಿದ್ದು ಹೊರಳಾಡಿ


ಆದರೆ ಯೋನನು ಯೆಹೋವನ ಸನ್ನಿಧಿಗೆ ತಪ್ಪಿಸಿಕೊಳ್ಳುವ ಹಾಗೆ ತಾರ್ಷೀಷಿಗೆ ಓಡಿಹೋಗಬೇಕೆಂದು ಹೊರಟು ಯೊಪ್ಪಕ್ಕೆ ಇಳಿದು ಅಲ್ಲಿ ತಾರ್ಷೀಷಿಗೆ ತೆರಳುವ ಹಡಗನ್ನು ಕಂಡು ಬಾಡಿಗೆಕೊಟ್ಟು ಯೆಹೋವನ ಸನ್ನಿಧಿಯಿಂದ ತಾರ್ಷೀಷಿಗೆ ಪ್ರಯಾಣಮಾಡಬೇಕೆಂದು ಹಡಗಿನವರೊಡನೆ ಅದನ್ನು ಹತ್ತಿದನು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು