Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೆಶಾಯ 23:12 - ಕನ್ನಡ ಸತ್ಯವೇದವು J.V. (BSI)

12 ಹಿಂಸೆಗೆ ಈಡಾದ ಕನ್ಯೆಯಂತಿರುವ ಚೀದೋನ್ ನಗರಿಯೇ, ಇನ್ನು ಮೇಲೆ ನಿನಗೆ ಹರ್ಷವೇ ಇಲ್ಲ; ಎದ್ದು ಕಿತ್ತೀವಿುಗೆ ಸಮುದ್ರದ ಮೇಲೆ ಹಾದುಹೋಗು, ಅಲ್ಲಿಯೂ ನಿನಗೆ ವಿಶ್ರಾಂತಿಯಿರದು ಎಂದು ಹೇಳಿದ್ದಾನೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

12 ಆತನು, “ಹಿಂಸೆಗೆ ಈಡಾದ ಕನ್ಯೆಯಂತಿರುವ ಚೀದೋನ್ ನಗರಿಯೇ, ಇನ್ನು ಮೇಲೆ ನಿನಗೆ ಹರ್ಷವೇ ಇಲ್ಲ; ಎದ್ದು ಕಿತ್ತೀಮಿಗೆ ಸಮುದ್ರದ ಮೇಲೆ ಹಾದುಹೋಗು, ಅಲ್ಲಿಯೂ ನಿನಗೆ ವಿಶ್ರಾಂತಿ ಇರದು” ಎಂದು ಹೇಳಿದ್ದಾನೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

12 “ಹಿಂಸೆಗೆ ಈಡಾದ ಕನ್ಯೆಯಂತೆ ಇರುವ ಸಿದೋನ್ ನಗರವೇ, ಇನ್ನು ಮೇಲೆ ನಿನಗಿರದು ಸಂತೃಪ್ತಿ: ಸಮುದ್ರ ದಾಟಿ ಸೈಪ್ರಸ್ಸಿಗೆ ಹಾದುಹೋಗು, ಅಲ್ಲಿಯೂ ನಿನಗೆ ದೊರಕದು ವಿಶ್ರಾಂತಿ,” ಎಂದು ಹೇಳಿದ್ದಾರೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

12 ಯೆಹೋವನು ಹೇಳುವುದೇನೆಂದರೆ, “ಚೀದೋನ್ ಕುಮಾರಿಯೇ, ನೀನು ನಾಶವಾಗುವೆ; ಎಂದಿಗೂ ನೀನು ಹರ್ಷಿಸುವದಿಲ್ಲ. ತೂರಿನ ಜನರು, ‘ನಮಗೆ ಸೈಪ್ರಸ್‌ನವರು ಸಹಾಯ ಮಾಡುತ್ತಾರೆ’ ಎಂದು ಹೇಳುತ್ತಾರೆ. ಆದರೆ ನೀನು ಸಮುದ್ರ ಮಾರ್ಗವಾಗಿ ಸೈಪ್ರಸ್‌ಗೆ ಹೋದರೆ ಅಲ್ಲಿ ನಿನಗೆ ವಿಶ್ರಮಿಸಲು ಸ್ಥಳ ದೊರಕುವದಿಲ್ಲ.”

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

12 “ಹಿಂಸೆಗೆ ಈಡಾದ ಕನ್ಯೆಯಂತಿರುವ ಸೀದೋನ್ ನಗರಿಯೇ, ಇನ್ನು ಮೇಲೆ ನಿನಗೆ ಸಂತೃಪ್ತಿ ಇಲ್ಲ. “ಎದ್ದು, ಕಿತ್ತೀಮಿಗೆ ಸಮುದ್ರದ ಮೇಲೆ ಹಾದುಹೋಗು. ಅಲ್ಲಿಯೂ ನಿನಗೆ ವಿಶ್ರಾಂತಿ ಇರದು.”

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೆಶಾಯ 23:12
21 ತಿಳಿವುಗಳ ಹೋಲಿಕೆ  

ಬಾಬೆಲೇ, ನಿನ್ನಲ್ಲಿ ವೀಣೆಗಾರರೂ ವಾದ್ಯಗಾರರೂ ಕೊಳಲೂದುವವರೂ ತುತೂರಿಯವರೂ ಮಾಡುವ ಧ್ವನಿಯು ಇನ್ನೆಂದಿಗೂ ಕೇಳಿಸುವದಿಲ್ಲ. ಯಾವ ವಿಧವಾದ ಕೈಗಾರಿಕೆಯನ್ನು ಮಾಡುವವರು ನಿನ್ನಲ್ಲಿ ಇನ್ನೆಂದಿಗೂ ಸಿಕ್ಕುವದಿಲ್ಲ. ಬೀಸುವ ಕಲ್ಲಿನ ಶಬ್ದವು ನಿನ್ನಲ್ಲಿ ಇನ್ನೆಂದಿಗೂ ಕೇಳಿಸುವದಿಲ್ಲ.


ಯುವತಿಯೇ, ಬಾಬೆಲ್‍ಪುರಿಯೇ, ಕೆಳಕ್ಕಿಳಿದು ಧೂಳಿನಲ್ಲಿ ಕೂತುಕೋ, ಕಸ್ದೀಯರ ನಗರಿಯೇ, ಸಿಂಹಾಸನರಹಿತಳಾಗಿ ನೆಲದ ಮೇಲೆ ಕುಕ್ಕರಿಸು! ನೀನು ಇನ್ನು ಕೋಮಲೆ, ಸುಕುಮಾರಿ, ಎಂದು ಎನಿಸಿಕೊಳ್ಳೆ.


ಬಾಷಾನಿನ ಅಲ್ಲೋನ್ ಮರದಿಂದ ನಿನ್ನ ಹುಟ್ಟುಗಳನ್ನು ರೂಪಿಸಿ ಕಿತ್ತೀಮ್ ದ್ವೀಪದ ತಿಲಕದ ಹಲಿಗೆಯಿಂದ ನಿನ್ನ ಮೇಲ್ಮಾಳಿಗೆಯನ್ನು ಕಟ್ಟಿ ದಂತದಿಂದ ಕೆತ್ತಿದರು.


ಅವರನ್ನು ನೋಡುವವರು - ತೊಲಗಿರಿ, ಅಶುದ್ಧರು ನೀವು, ನಡೆಯಿರಿ, ನಡೆಯಿರಿ, ಮುಟ್ಟಬೇಡಿರಿ ಎಂದು ಕೂಗುತ್ತಾರೆ. ಅವರು ಓಡಿಹೋಗಿ ಅನ್ಯದೇಶಗಳಲ್ಲಿ ಅಲೆಯುತ್ತಿರಲು - ಇವರು ಇನ್ನು ಇಲ್ಲಿ ತಂಗಬಾರದು ಎಂದು ಆಯಾ ದೇಶಗಳವರು ಅಂದುಕೊಳ್ಳುತ್ತಾರೆ.


ಕರ್ತನು ನನ್ನ ಶೂರರನ್ನೆಲ್ಲಾ ನನ್ನ ಕಣ್ಣೆದುರಿಗೆ ತೃಣೀಕರಿಸಿದ್ದಾನೆ; ನನ್ನ ಯುವಕರನ್ನು ಭಂಗಪಡಿಸಬೇಕೆಂದು ನನ್ನ ಕೇಡಿಗಾಗಿಯೇ ಮಹೋತ್ಸವವನ್ನು ಏರ್ಪಡಿಸಿದ್ದಾನೆ; ಕರ್ತನು ಯೆಹೂದವೆಂಬ ಯುವತಿಯನ್ನು ತೊಟ್ಟಿಯಲ್ಲಿನ ದ್ರಾಕ್ಷೆಯ ಹಾಗೆ ತುಳಿದಿದ್ದಾನೆ.


ಯೆಹೂದವೆಂಬಾಕೆಯು ಘೋರ ಸೇವೆಶ್ರಮೆಗಳಿಂದ ತಪ್ಪಿಸಿಕೊಳ್ಳಬೇಕೆಂದು ವಲಸೆಹೋಗಿದ್ದಾಳೆ; ಮ್ಲೇಚ್ಫರ ಮಧ್ಯದಲ್ಲಿ ನೆಮ್ಮದಿಯಿಲ್ಲದೆ ವಾಸಮಾಡುತ್ತಾಳೆ; ಆಕೆಯು ಇಕ್ಕಟ್ಟಿಗೆ ಸಿಕ್ಕಿಕೊಂಡಿರುವಾಗಲೇ ಆಕೆಯ ಹಿಂಸಕರೆಲ್ಲಾ ಹಿಂದಟ್ಟಿ ಹಿಡಿದರು.


ಐಗುಪ್ತಕುಮಾರಿಯೇ, ಯುವತಿಯೇ, ಗಿಲ್ಯಾದಿಗೆ ಹೋಗಿ ಔಷಧವನ್ನು ಸಂಪಾದಿಸು; ನೀನು ಬಗೆಬಗೆಯ ಮದ್ದನ್ನು ಉಪಯೋಗಿಸುವದು ಪ್ರಯೋಜನವಿಲ್ಲ; ನಿನಗೆ ಗುಣವಾಗದು.


ನೀನು ಈ ಮಾತನ್ನು ಅವರಿಗೆ ಹೇಳು - ನನ್ನ ಕಣ್ಣೀರು ರಾತ್ರೀಹಗಲು ನಿರಂತರ ಸುರಿಯಲಿ; ಏಕಂದರೆ ನನ್ನ ಜನವೆಂಬ ಯುವತಿಗೆ ದೊಡ್ಡ ಗಾಯವಾಯಿತು, ಹೌದು ಗಡುಸಾದ ಪೆಟ್ಟುಬಿತ್ತು.


ಕಸ್ದೀಯರ ನಗರಿಯೇ, ಮೌನವಾಗಿ ಕೂತುಕೋ, ಕತ್ತಲೊಳಗೆ ಹೊಗು, ನೀನು ಇನ್ನು ರಾಜ್ಯಗಳ ರಾಣಿ ಎನಿಸಿಕೊಳ್ಳೆ.


ಕನ್ನಿಕೆಯಾಗಿರುವ ಚೀಯೋನ್ ಕುಮಾರ್ತೆಯು ನಿನ್ನನ್ನು ತಿರಸ್ಕರಿಸಿ ಪರಿಹಾಸ್ಯಮಾಡುತ್ತಾಳೆ; ಯೆರೂಸಲೇಮ್ ಕುಮಾರ್ತೆಯು ನಿನ್ನ ಹಿಂದೆ ತಲೆಯಾಡಿಸುತ್ತಾಳೆ.


ನಿಮ್ಮ ಉಲ್ಲಾಸದ ಪಟ್ಟಣವು ಇದೇನೋ? ಅದರ ಉತ್ಪತ್ತಿಯು ಪುರಾತನವಾದದ್ದೇ ಸರಿ; ಅದರ ಜನರು ಮುಂದೆ ನಡೆದು ಅತಿ ದೂರದಲ್ಲಿಯೂ ನಿವಾಸಮಾಡಿಕೊಂಡಿದ್ದರಲ್ಲಾ.


ಯೆಹೋವನು ಅವರನ್ನು ಇಸ್ರಾಯೇಲ್ಯರ ಕೈಗೆ ಒಪ್ಪಿಸಿದನು. ಇವರು ಅವರನ್ನು ದೊಡ್ಡ ಚೀದೋನ್, ವಿುಸ್ರೆಫೋತ್ಮಯಿಮ್ ಎಂಬ ಊರುಗಳವರೆಗೂ ಪೂರ್ವದಿಕ್ಕಿನಲ್ಲಿರುವ ವಿುಚ್ಪೆಯ ಬೈಲಿನವರೆಗೂ ಹಿಂದಟ್ಟಿ ಹೊಡೆದರು. ಒಬ್ಬನಾದರೂ ಉಳಿಯದಂತೆ ಎಲ್ಲರನ್ನೂ ಸಂಹರಿಸಿದರು.


ಕಿತ್ತೀಮೆಂಬ ಸ್ಥಳದಿಂದ ಜನರು ಹಡಗುಗಳಲ್ಲಿ ಬಂದು ಅಶ್ಯೂರ್ಯರನ್ನೂ ಏಬೆರ್ ಜನರನ್ನೂ ಸೋಲಿಸುವರು; ಅವರಿಗೂ ನಾಶವುಂಟಾಗುವದು ಅಂದನು.


ಜೆಬುಲೂನನು ಸಮುದ್ರದ ಕರಾವಳಿಯಲ್ಲಿ ವಾಸಮಾಡುವನು; ಅವನಿಗೆ ಹಡಗುಗಳು ಸೇರುವ ರೇವು ಇರುವದು. ಅವನ ಸೀಮೆಯ ಒಂದು ಮೇರೆ ಚೀದೋನಿಗೆ ಮುಟ್ಟುವದು.


ಕಿತ್ತೀಮ್ ದ್ವೀಪಗಳಿಗೆ ಹೋಗಿ ನೋಡಿರಿ, ಕೇದಾರಿಗೆ ಕಳುಹಿಸಿ ವಿಚಾರಮಾಡಿರಿ; ಇಂಥಾ ಕಾರ್ಯವು ಎಲ್ಲಿಯಾದರೂ ನಡೆಯಿತೇ ಎಂದು ಚೆನ್ನಾಗಿ ಆಲೋಚಿಸಿರಿ.


ಅವನಿಗೆ ವಿರುದ್ಧವಾಗಿ ಕಿತ್ತೀವಿುನ ಹಡಗುಗಳು ಬರಲು ಅವನು ಎದೆಗುಂದಿ ಹಿಂದಿರುಗಿ ಪರಿಶುದ್ಧ ನಿಬಂಧನೆಯ ಮೇಲೆ ಮತ್ಸರಗೊಂಡು ಮಾಡುವಷ್ಟು ಮಾಡುವನು; ಅವನು ಸ್ವದೇಶಕ್ಕೆ ಸೇರಿ ಪರಿಶುದ್ಧ ನಿಬಂಧನೆ ತೊರೆದವರನ್ನು ಕಟಾಕ್ಷಿಸುವನು.


ಯಾವಾನನ ಸಂತಾನದವರು - ಎಲೀಷಾ, ತಾರ್ಷೀಷ್, ಕಿತ್ತೀಮ್, ದೋದಾ ಎಂಬ ಸ್ಥಳಗಳವರು; ಇವರು ಸಮುದ್ರದ ರೇವುಗಳಲ್ಲಿ ಹರಡಿಕೊಂಡರು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು