Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೆಶಾಯ 23:13 - ಕನ್ನಡ ಸತ್ಯವೇದವು J.V. (BSI)

13 ಇಗೋ, ಕಸ್ದೀಯರ ದೇಶವು! ಈ ಜನಾಂಗವು ನಿರ್ನಾಮವಾಯಿತು; ಅಶ್ಶೂರ್ಯರು ಈ ದೇಶವನ್ನು ಕಾಡುಮೃಗಗಳಿಗೆ ಈಡುಮಾಡಿದರು; ಬುರುಜುಗಳನ್ನು ಕಟ್ಟಿಕೊಂಡು ಇದರ ಕೋಟೆಗಳನ್ನು ಕೆಡವಿ ಇದನ್ನು ನಾಶಪಡಿಸಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

13 ಇಗೋ, ಕಸ್ದೀಯರ ದೇಶವು! ಈ ಜನಾಂಗವು ನಿರ್ನಾಮವಾಯಿತು. ಅಶ್ಶೂರ್ಯರು ಈ ದೇಶವನ್ನು ಕಾಡುಮೃಗಗಳಿಗೆ ಈಡುಮಾಡಿದರು. ಗೋಪುರಗಳನ್ನು ಕಟ್ಟಿಕೊಂಡು ಅದರ ಕೋಟೆಗಳನ್ನು ಕೆಡವಿ ಅದನ್ನು ನಾಶಪಡಿಸಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

13 ಬಾಬಿಲೋನಿನ ನಾಡನ್ನು ನೋಡು. ಅದರ ಜನಾಂಗ ನಿರ್ನಾಮವಾಯಿತು. ಅಸ್ಸೀರಿಯದವರು ಆ ನಾಡನ್ನು ಕಾಡುಮೃಗಗಳಿಗೆ ಈಡುಮಾಡಿದರು. ಅಲ್ಲಿ ಬುರುಜುಗಳನ್ನು ಕಟ್ಟಿಕೊಂಡರು. ಇದರ ಕೋಟೆಗಳನ್ನಾದರೋ ಕೆಡವಿ ನಾಶಮಾಡಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

13 ಆಗ ತೂರಿನ ಜನರು ಹೀಗೆನ್ನುವರು: “ಬಾಬಿಲೋನಿನವರು ನಮಗೆ ಸಹಾಯಮಾಡುವರು.” ಆದರೆ ಕಸ್ದೀಯರ ದೇಶವನ್ನು ನೋಡಿ. ಬಾಬಿಲೋನ್ ಈಗ ದೇಶವಲ್ಲ. ಬಾಬಿಲೋನನ್ನು ಅಶ್ಶೂರವು ವಶಪಡಿಸಿಕೊಂಡು ಅದರ ಸುತ್ತಲೂ ಕಾವಲು ಬುರುಜುಗಳನ್ನು ಕಟ್ಟಿಸಿದೆ. ಅಲ್ಲಿದ್ದ ಸುಂದರ ಮನೆಗಳಿಂದ ಸೈನಿಕರು ಎಲ್ಲವನ್ನು ದೋಚಿರುತ್ತಾರೆ. ಅಶ್ಶೂರ ಬಾಬಿಲೋನನ್ನು ಕಾಡುಪ್ರಾಣಿಗಳ ವಾಸಸ್ಥಳವನ್ನಾಗಿ ಮಾಡಿದೆ. ಅವರು ಬಾಬಿಲೋನನ್ನು ಪಾಳುಬಿದ್ದ ಅವಶೇಷವನ್ನಾಗಿ ಮಾಡಿದ್ದಾರೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

13 ಕಸ್ದೀಯರ ದೇಶವು! ಅಸ್ಸೀರಿಯದವರು ಅದನ್ನು ಕಾಡುಮೃಗಗಳಿಗೆ ಈಡು ಮಾಡುವ ತನಕ ಈ ಜನರು ಇರಲಿಲ್ಲ. ಗೋಪುರಗಳನ್ನು ಕಟ್ಟಿಸಿಕೊಂಡು ಅವರು ಅದರ ಅರಮನೆಗಳನ್ನು ಕಟ್ಟಿಸಿಕೊಂಡು ಅದನ್ನು ನಾಶಮಾಡಿದ್ದಾರೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೆಶಾಯ 23:13
23 ತಿಳಿವುಗಳ ಹೋಲಿಕೆ  

ಆಗ ಅವನು ಕಸ್ದೀಯರ ದೇಶದಿಂದ ಹೊರಟುಹೋಗಿ ಖಾರಾನಿನಲ್ಲಿ ವಾಸವಾಗಿದ್ದನು. ಅವನ ತಂದೆ ಸತ್ತಮೇಲೆ ದೇವರು ಅವನನ್ನು ಅಲ್ಲಿಂದ ನೀವು ಈಗ ವಾಸವಾಗಿರುವ ಈ ದೇಶಕ್ಕೆ ಬರಮಾಡಿದನು.


ಇಗೋ, ತೀಕ್ಷ್ಣವೂ ತೀವ್ರವೂ ಆದ ಕಸ್ದೀಯ ಜನಾಂಗವನ್ನು ಎಬ್ಬಿಸುತ್ತಿದ್ದೇನೆ; ಆ ಜನರು ತಮ್ಮದಲ್ಲದ ಸಂಸ್ಥಾನಗಳನ್ನು ವಶಮಾಡಿಕೊಳ್ಳುವ ಹಾಗೆ ಲೋಕದಲ್ಲೆಲ್ಲಾ ಸಂಚರಿಸುವರು.


ನನ್ನ ಮಹಿಮೆಯು ಪ್ರಸಿದ್ಧಿಗೆ ಬರುವಂತೆ ನನ್ನ ಸಾಮರ್ಥ್ಯಬಲದಿಂದ ರಾಜನಿವಾಸಕ್ಕಾಗಿ ನಾನು ಕಟ್ಟಿಸಿಕೊಂಡಿರುವದು ಇಗೋ, ಮಹಾಪಟ್ಟಣವಾದ ಈ ಬಾಬೆಲ್ ಎಂದು ಕೊಚ್ಚಿಕೊಂಡನು.


ನರಪುತ್ರನೇ, ಬಾಬೆಲಿನ ಅರಸನಾದ ನೆಬೂಕದ್ನೆಚ್ಚರನು ತೂರಿಗೆ ಮುತ್ತಿಗೆಹಾಕಿ ತನ್ನ ಸೈನಿಕರಿಂದ ಬಹುಶ್ರಮದ ಸೇವೆಯನ್ನು ಮಾಡಿಸಿದ್ದಾನೆ; ಪ್ರತಿಯೊಬ್ಬನ ತಲೆ ಬೋಳಾಗಿದೆ, ಪ್ರತಿಯೊಬ್ಬನ ಹೆಗಲು ಕಾಯಿಕಟ್ಟಿದೆ; ಆದರೂ ಆ ಮುತ್ತಿಗೆಯಲ್ಲಿ ಅವನು ಪಟ್ಟ ಶ್ರಮಕ್ಕೆ ಅವನಿಗಾಗಲಿ ಅವನ ಸೈನಿಕರಿಗಾಗಲಿ ತೂರಿನಿಂದ ಸಂಬಳವೇನೂ ಸಿಕ್ಕಲಿಲ್ಲ.


ರಾಜ್ಯಗಳಿಗೆ ಶಿರೋರತ್ನವೂ ಕಸ್ದೀಯರ ಮಹಿಮೆಗೆ ಭೂಷಣವೂ ಆದ ಬಾಬೆಲಿಗೆ ದೇವರು ಕೆಡವಿದ ಸೊದೋಮ್ ಗೊಮೋರಗಳ ಗತಿಯು ಸಂಭವಿಸುವದು.


ಅದರ ಅಭಿಪ್ರಾಯವೋ ಹಾಗಲ್ಲ; ಅನೇಕಾನೇಕ ಜನಾಂಗಗಳನ್ನು ತಾನೇ ಸಂಹರಿಸಿ ನಿರ್ಮೂಲಮಾಡುವೆನೆಂಬದೇ ಹೊರತು ಈ ಯೋಚನೆಯು ಅದರ ಮನಸ್ಸಿನಲ್ಲಿ ಇಲ್ಲವೇ ಇಲ್ಲ.


ಆಹಾ, ಅಶ್ಶೂರವೇ, ನೀನು ನನ್ನ ಕೋಪವೆಂಬ ಕೋಲು, ನಿನ್ನ ಕೈಯಲ್ಲಿರುವ ದೊಣ್ಣೆಯು ನನ್ನ ರೋಷವೇ!


ಅರಣ್ಯವಾಸಿಗಳು ಅವನಿಗೆ ಅಡ್ಡ ಬೀಳಲಿ; ಅವನ ವೈರಿಗಳು ಮಣ್ಣುಮುಕ್ಕಲಿ.


ಅಷ್ಟರಲ್ಲಿ ಇನ್ನೊಬ್ಬನು ಬಂದು ಕಸ್ದೀಯರು ಮೂರು ಗುಂಪುಗಳಾಗಿ ಬಂದು ಒಂಟೆಗಳ ಮೇಲೆ ಬಿದ್ದು ಹೊಡೆದುಕೊಂಡು ಹೋದರು; ಇದಲ್ಲದೆ ಆಳುಗಳನ್ನು ಕತ್ತಿಯಿಂದ ಹತಮಾಡಿದರು; ಇದನ್ನು ತಿಳಿಸುತ್ತಿರುವ ನಾನೊಬ್ಬನೇ ತಪ್ಪಿಸಿಕೊಂಡು ಉಳಿದಿದ್ದೇನೆ ಅಂದನು.


ಆದದರಿಂದ ಆತನು ಅಶ್ಶೂರದ ಅರಸನ ಸೈನ್ಯಾಧಿಪತಿಗಳನ್ನು ಅವರ ಮೇಲೆ ಬರಮಾಡಿದನು. ಅವರು ಮನಸ್ಸೆಯನ್ನು ಹಿಡಿದು ಅವನಿಗೆ ಕೊಂಡಿಗಳನ್ನು ಸಿಕ್ಕಿಸಿ ಬೇಡಿಹಾಕಿ ಬಾಬೆಲಿಗೆ ಒಯ್ದರು.


ಅದೇ ಕಾಲದಲ್ಲಿ ಬಲದಾನನ ಮಗನೂ ಬಾಬೆಲಿನ ಅರಸನೂ ಆದ ಬೆರೋದಕಬಲದಾನನೆಂಬವನು ಹಿಜ್ಕೀಯನು ಅಸ್ವಸ್ಥನಾಗಿದ್ದನೆಂದು ಕೇಳಿ ದೂತರ ಮುಖಾಂತರವಾಗಿ ಅವನಿಗೆ ಪತ್ರವನ್ನೂ ಬಹುಮಾನವನ್ನೂ ಕಳುಹಿಸಿದನು.


ಅಶ್ಶೂರದ ಅರಸನು ಸಮಾರ್ಯಪಟ್ಟಣಗಳಲ್ಲಿ ವಾಸವಾಗಿದ್ದ ಇಸ್ರಾಯೇಲ್ಯರನ್ನು ಸೆರೆಯಾಗಿ ಒಯ್ದನಂತರ ಅವರಿಗೆ ಬದಲಾಗಿ ಆ ಪಟ್ಟಣಗಳಿಗೆ ಬಾಬೆಲ್, ಕೂತಾ, ಅವ್ವಾ, ಹಮಾತ್, ಸೆಫರ್ವಯಿಮ್ ಎಂಬ ಊರುಗಳವರನ್ನು ಕಳುಹಿಸಿದನು. ಅವರು ಸಮಾರ್ಯದೇಶವನ್ನು ಸ್ವತಂತ್ರಿಸಿಕೊಂಡು ಅದರ ಪಟ್ಟಣಗಳಲ್ಲಿ ವಾಸಿಸಿದರು.


ತೆರಹನು ತನ್ನ ಮಗನಾದ ಅಬ್ರಾಮನನ್ನೂ ತನಗೆ ಮೊಮ್ಮಗನೂ ಹಾರಾನನಿಗೂ ಮಗನೂ ಆಗಿರುವ ಲೋಟನನ್ನೂ ತನಗೆ ಸೊಸೆಯೂ ಅಬ್ರಾಮನಿಗೆ ಹೆಂಡತಿಯೂ ಆಗಿರುವ ಸಾರಯಳನ್ನೂ ಕರಕೊಂಡು ಕಾನಾನ್‍ದೇಶಕ್ಕೆ ಹೋಗಬೇಕೆಂದು ಕಲ್ದೀಯರ ಊರ್ ಎಂಬ ಪಟ್ಟಣವನ್ನು ಬಿಟ್ಟನು. ಅವರು ಹಾರಾನ್ ಪಟ್ಟಣಕ್ಕೆ ಬಂದು ಅಲ್ಲೇ ವಾಸಮಾಡಿಕೊಂಡರು.


ಹಾರಾನನು ಲೋಟನನ್ನು ಪಡೆದನು. ಹಾರಾನನು ತಾನು ಹುಟ್ಟಿದ ದೇಶದೊಳಗೆ ಕಲ್ದೀಯರ ಊರ್ ಎಂಬ ಪಟ್ಟಣದಲ್ಲಿ ತನ್ನ ತಂದೆಯಾದ ತೆರಹನ ಹತ್ತಿರವೇ ಸತ್ತನು.


ಸಮಸ್ತಲೋಕದ ಭಾಷೆಯನ್ನು ಯೆಹೋವನು ಅಲ್ಲಿ ತಾರುಮಾರುಮಾಡಿ ಅವರನ್ನು ಅಲ್ಲಿಂದ ಭೂಲೋಕದಲ್ಲೆಲ್ಲಾ ಚದರಿಸಿದ್ದರಿಂದ ಆ ಪಟ್ಟಣಕ್ಕೆ ಬಾಬೆಲ್ ಎಂಬ ಹೆಸರಾಯಿತು.


ಮೂರನೆಯ ನದಿಯ ಹೆಸರು ಹಿದ್ದೆಕೆಲ್; ಅದು ಅಶ್ಶೂರ್ ದೇಶದ ಮುಂದೆ ಹರಿಯುವದು. ನಾಲ್ಕನೆಯದು ಯೂಫ್ರೇಟೀಸ್ ನದಿ.


ಅದು ಕಾಡುಮೃಗಗಳಿಗೆ ಹಕ್ಕೆಯಾಗುವದು, ಅಲ್ಲಿನ ಮನೆಗಳಲ್ಲಿ ಗೂಬೆಗಳು ತುಂಬಿಕೊಳ್ಳುವವು, ಅಲ್ಲಿ ಉಷ್ಟ್ರಪಕ್ಷಿಗಳು ವಾಸಿಸುವವು, ದೆವ್ವಗಳು ಕುಣಿದಾಡುವವು.


ಕಡಿಯಲ್ಪಟ್ಟವರ ಶವಗಳೆಲ್ಲಾ ಬೆಟ್ಟದ ಹದ್ದುಗಳಿಗೂ ಕಾಡುಮೃಗಗಳಿಗೂ ಪಾಲಾಗಿ ಬಿದ್ದಿರುವವು, ಬೇಸಿಗೆಯಲ್ಲಿ ಹದ್ದುಗಳಿಗೂ ಹಿಮಗಾಲದಲ್ಲಿ ಕಾಡುಮೃಗಗಳಿಗೂ ಜೀವನವಾಗುವವು.


ನಿಮ್ಮ ವಿಮೋಚಕನೂ ಇಸ್ರಾಯೇಲ್ಯರ ಸದಮಲಸ್ವಾವಿುಯೂ ಆದ ಯೆಹೋವನು ಹೀಗನ್ನುತ್ತಾನೆ - ನಾನು ನಿಮಗೋಸ್ಕರ [ದೂತನನ್ನು] ಬಾಬೆಲಿಗೆ ಕಳುಹಿಸಿ ಕಸ್ದೀಯರನ್ನೆಲ್ಲಾ ತಮ್ಮ ವಿನೋದದ ಹಡಗುಗಳ ಮೇಲೆ ಪಲಾಯಿತರನ್ನಾಗಿ ಅಟ್ಟಿಬಿಡುವೆನು.


ಸಮಸ್ತ ಕಸ್ದೀಯರು, ಪೆಕೋದಿನವರು, ಷೋಯದವರು, ಕೋಯದವರು, ಇವರನ್ನೂ ಇವರೊಂದಿಗೆ ಅಶ್ಶೂರ್ಯರೆಲ್ಲರನ್ನೂ ನಾನು ನಿನಗೆ ವಿರುದ್ಧವಾಗಿ ಎಬ್ಬಿಸಿ ಎಲ್ಲಾ ಕಡೆಯಿಂದಲೂ ನಿನ್ನ ಮೇಲೆ ಬೀಳಮಾಡುವೆನು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು